Homeಮುಖಪುಟಚುನಾವಣಾ ಬಾಂಡ್‌ ಮಾಹಿತಿ ಒದಗಿಸಲು ಗಡುವು ವಿಸ್ತರಿಸಿ: ಸುಪ್ರೀಂ ಕೋರ್ಟ್‌ಗೆ ಎಸ್‌ಬಿಐ ಮನವಿ

ಚುನಾವಣಾ ಬಾಂಡ್‌ ಮಾಹಿತಿ ಒದಗಿಸಲು ಗಡುವು ವಿಸ್ತರಿಸಿ: ಸುಪ್ರೀಂ ಕೋರ್ಟ್‌ಗೆ ಎಸ್‌ಬಿಐ ಮನವಿ

ಚುನಾವಣೆಗೂ ಮುನ್ನ ಮೋದಿಯ ನಿಜಮುಖ ಮರೆ ಮಾಚಲು ಕೊನೆಯ ಪ್ರಯತ್ನ ಎಂದ ರಾಹುಲ್ ಗಾಂಧಿ

- Advertisement -
- Advertisement -

ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ಗಳ ಬಗ್ಗೆ ಮಾಹಿತಿ ನೀಡಲು ಜೂನ್ 30ರವರೆಗೆ ಗಡುವನ್ನು ವಿಸ್ತರಿಸುವಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ.

ಕಳೆದ ತಿಂಗಳು ಐತಿಹಾಸಿಕ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್‌ ಯೋಜನೆಯನ್ನು ರದ್ದುಗೊಳಿಸಿತ್ತು ಮತ್ತು ಮಾರ್ಚ್ 6 ರೊಳಗೆ ಚುನಾವಣಾ ಆಯೋಗಕ್ಕೆ (ಇಸಿ) ಬಾಂಡ್‌ಗಳ ಕುರಿತು ಮಾಹಿತಿ ನೀಡುವಂತೆ ಎಸ್‌ಬಿಐಗೆ ಸೂಚಿಸಿತ್ತು.

ಚುನಾವಣಾ ಬಾಂಡ್ ಅಸಂವಿಧಾನಿಕ. ಅನಾಮಧೇಯ ಬಾಂಡ್‌ಗಳು ಸಂವಿಧಾನದ 19(1)(ಎ) ವಿಧಿಯ ಅಡಿಯಲ್ಲಿ ಮಾಹಿತಿಯ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಸುಪ್ರೀಂ ಕೋರ್ಟ್‌ ಅಭಿಪ್ರಾಯಪಟ್ಟಿತ್ತು. ರಾಜಕೀಯ ಪಕ್ಷಗಳಿಗೆ ಆರ್ಥಿಕ ಬೆಂಬಲ ನೀಡುವುದು ಖ್ವಿಡ್‌ ಪ್ರೊ ಪ್ರೊಗೆ (ಅಂದರೆ ಒಂದು ಸಹಾಯ ಮಾಡಿದ್ದಕ್ಕಾಗಿ ಇನ್ನೊಂದು ಪ್ರಯೋಜನ ಪಡೆಯುವುದು) ಕಾರಣವಾಗಬಹುದೆಂದೂ ಸುಪ್ರೀಂ ಕೋರ್ಟ್‌ ಹೇಳಿತ್ತು.

ತೀರ್ಪು ಪ್ರಕಟಿಸುವ ವೇಳೆ, ಚುನಾವಣಾ ಬಾಂಡ್‌ ನೀಡುವುದನ್ನು ನಿಲ್ಲಿಸುವಂತೆ ಮತ್ತು ಈ ರೀತಿಯಲ್ಲಿ ನೀಡಿದ ದೇಣಿಗೆಗಳ ವಿವರಗಳನ್ನು ಮಾರ್ಚ್‌ 6ರೊಳಗೆ ಚುನಾವಣಾ ಆಯೋಗಕ್ಕೆ ನೀಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಎಸ್‌ಬಿಐ ನೀಡಿದ ಮಾಹಿತಿಗಳನ್ನು ಮಾರ್ಚ್ 13 ರೊಳಗೆ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಲು ಚುನಾವಣಾ ಆಯೋಗಕ್ಕೆ ಕೋರ್ಟ್‌ ಸೂಚಿಸಿತ್ತು.

ಐವರು ನ್ಯಾಯಾಧೀಶರ ಸಂವಿಧಾನ ಪೀಠ, ಕಾಳಧನ ನಿಯಂತ್ರಣಕ್ಕೆ ಚುನಾವಣಾ ಬಾಂಡ್‌ ಯೋಜನೆ ಒಂದೇ ಆಯ್ಕೆಯಲ್ಲ ಎಂದಿತ್ತು. ಕಾಳಧನ ನಿಯಂತ್ರಣವೆಂದು ಹೇಳಿಕೊಂಡು ಆರ್‌ಟಿಐ ಉಲ್ಲಂಘನೆಯಾಗಬಾರದು. ಕಾಳಧನ ನಿಯಂತ್ರಣಕ್ಕೆ ಇತರ ಪರ್ಯಾಯಗಳಿವೆ ಎಂದು ಹೇಳಿತ್ತು.

ಮೋದಿಯ ನಿಜಮುಖ ಮರೆ ಮಾಚಲು ಕೊನೆಯ ಪ್ರಯತ್ನ: ರಾಹುಲ್ ಗಾಂಧಿ

ಎಸ್‌ಬಿಐಯ ಅರ್ಜಿ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ “ನರೇಂದ್ರ ಮೋದಿಯವರು ದೇಣಿಗೆ ವ್ಯವಹಾರವನ್ನು ಮರೆಮಾಚಲು ತಮ್ಮ ಕೈಲಾದಷ್ಟು ಪ್ರಯತ್ನ ನಡೆಸುತ್ತಿದ್ದಾರೆ” ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

“ಚುನಾವಣಾ ಬಾಂಡ್‌ಗಳ ಬಗ್ಗೆ ಸತ್ಯವನ್ನು ತಿಳಿದುಕೊಳ್ಳುವುದು ದೇಶವಾಸಿಗಳ ಹಕ್ಕು ಎಂದು ಸುಪ್ರೀಂ ಕೋರ್ಟ್ ಹೇಳಿರುವಾಗ, ಎಸ್‌ಬಿಐ ಈ ಮಾಹಿತಿಯನ್ನು ಚುನಾವಣೆಯ ಮೊದಲು ಸಾರ್ವಜನಿಕಗೊಳಿಸಬಾರದು ಎಂದು ಏಕೆ ಬಯಸುತ್ತಿದೆ?” ಎಂದು ರಾಹುಲ್ ಪ್ರಶ್ನಿಸಿದ್ದಾರೆ.

“ಒಂದೇ ಕ್ಲಿಕ್‌ನಲ್ಲಿ ಪಡೆಯಬಹುದಾದ ಮಾಹಿತಿಯನ್ನು ನೀಡಲು ಜೂನ್ 30ರವರೆಗೆ ಸಮಯ ಕೇಳುವುದು, ಅದರ ಹಿಂದಿನ ಉದ್ದೇಶವನ್ನು ತೋರಿಸುತ್ತದೆ. ದೇಶದ ಪ್ರತಿಯೊಂದು ಸ್ವತಂತ್ರ ಸಂಸ್ಥೆಗಳು ತಮ್ಮ ಭ್ರಷ್ಟಾಚಾರವನ್ನು ಮುಚ್ಚಿ ಹಾಕಲು ‘ಮೋದಾನಿ’ ಕುಟುಂಬದ ಭಾಗವಾಗುತ್ತಿದೆ. ಚುನಾವಣೆಗೂ ಮುನ್ನ ಮೋದಿಯ ನಿಜಮುಖವನ್ನು ಮರೆ ಮಾಚಲು ಇದು ಕೊನೆಯ ಪ್ರಯತ್ನ” ಎಂದಿದ್ದಾರೆ.

ಏನಿದು ಚುನಾವಣಾ ಬಾಂಡ್ ?

ಜನ ಸಾಮಾನ್ಯರು, ಕಾರ್ಪೊರೇಟ್ ಸಂಸ್ಥೆಗಳು ರಾಜಕೀಯ ಪಕ್ಷಗಳಿಗೆ ನೀಡುವ ಒಂದು ವಿಧದ ದೇಣಿಗೆ ಕ್ರಮವಾಗಿದೆ ಚುನಾವಣಾ ಬಾಂಡ್. ಜನರು 1,000 ರೂ, 10,000 ರೂ, 1 ಲಕ್ಷ ರೂ, 10 ಲಕ್ಷ ರೂ, 1 ಕೋಟಿ ರೂ ಇತ್ಯಾದಿ ಮುಖಬೆಲೆಗಳಲ್ಲಿ ಬಾಂಡ್​ಗಳನ್ನು ಖರೀದಿಸಬಹುದಿತ್ತು. ಈ ಬಾಂಡ್​ಗಳು ಅನಾಮಧೇಯವಾಗಿತ್ತು. ಅಂದರೆ, ಇದನ್ನು ಖರೀದಿಸಿದ ವ್ಯಕ್ತಿ ಅಥವಾ ಸಂಸ್ಥೆಯ ಹೆಸರು ಬಹಿರಂಗಗೊಳ್ಳುತ್ತಿರಲಿಲ್ಲ. ಯಾವ ರಾಜಕೀಯ ಪಕ್ಷಕ್ಕೆ ದೇಣಿಗೆ ಕೊಡಲಾಗಿದೆ ಆ ಪಕ್ಷ ಹೆಸರೂ ಬಹಿರಂಗವಾಗುತ್ತಿರಲಿಲ್ಲ.

ಜನವರಿ 2,2018ರಂದು ಅಂದಿನ ಮೋದಿ ಸರ್ಕಾರ ಚುನಾವಣಾ ಬಾಂಡ್ ಯೋಜನೆಗೆ ಅಧಿಸೂಚನೆ ಹೊರಡಿಸಿತ್ತು. ಚುನಾವಣಾ ಬಾಂಡ್​ಗಳನ್ನು ಹಣಕಾಸು ಕಾಯ್ದೆ 2017ರ ತಿದ್ದುಪಡಿ ಮೂಲಕ ಜಾರಿಗೆ ತರಲಾಗಿತ್ತು. ಈ ಬಾಂಡ್​ಗಳನ್ನು ವರ್ಷಕ್ಕೆ ನಾಲ್ಕು ಬಾರಿ, ಅಂದರೆ ಜನವರಿ, ಏಪ್ರಿಲ್, ಜುಲೈ ಹಾಗೂ ಅಕ್ಟೋಬರ್​ನಲ್ಲಿ ನೀಡಲಾಗುತ್ತಿತ್ತು. ಜನರು ಬ್ಯಾಂಕ್ ಶಾಖೆಗೆ ಭೇಟಿ ನೀಡುವ ಮೂಲಕ ಅಥವಾ ವೆಬ್​ಸೈಟ್​ನಲ್ಲಿ ಆನ್​ಲೈನ್​ನಲ್ಲಿ ಇದನ್ನು ಖರೀದಿಸಬಹುದಿತ್ತು.

ಇದನ್ನೂ ಓದಿ: ಸಂಸದ, ಶಾಸಕರ ಭ್ರಷ್ಟಾಚಾರ ಸಂಸದೀಯ ಪ್ರಜಾಪ್ರಭುತ್ವದ ಅಡಿಪಾಯವನ್ನೇ ನಾಶಪಡಿಸುತ್ತದೆ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...