Homeಮುಖಪುಟಚುನಾವಣಾ ಬಾಂಡ್ ಸಂಖ್ಯೆಗಳು ಸೇರಿದಂತೆ ಎಲ್ಲಾ ವಿವರಗಳನ್ನು ಚು. ಆಯೋಗಕ್ಕೆ ಸಲ್ಲಿಸಿದ ಎಸ್‌ಬಿಐ

ಚುನಾವಣಾ ಬಾಂಡ್ ಸಂಖ್ಯೆಗಳು ಸೇರಿದಂತೆ ಎಲ್ಲಾ ವಿವರಗಳನ್ನು ಚು. ಆಯೋಗಕ್ಕೆ ಸಲ್ಲಿಸಿದ ಎಸ್‌ಬಿಐ

- Advertisement -
- Advertisement -

ವಿಶಿಷ್ಟ ಸಂಖ್ಯೆಗಳು ಅಥವಾ ಸೀರಿಯಲ್ ನಂಬರ್‌ಗಳು ಸೇರಿದಂತೆ ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿದೆ ಎಂದು ಭಾರತೀಯ ಸ್ಟೇಟ್ ಬ್ಯಾಂಕ್(ಎಸ್‌ಬಿಐ) ಅಧ್ಯಕ್ಷ ದಿನೇಶ್ ಕುಮಾರ್ ಖಾರಾ ಅವರು ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದಾರೆ.

‘ಆಲ್ಪಾ ನ್ಯೂಮರಿಕ್’ ಎಂಬ ವಿಶೇಷ ಸಂಖ್ಯೆಗಳು ಚುನಾವಣಾ ಬಾಂಡ್‌ಗಳ ಖರೀದಿದಾರರು ಮತ್ತು ಬಾಂಡ್‌ಗಳನ್ನು ನಗದೀಕರಿಸಿಕೊಂಡ ರಾಜಕೀಯ ಪಕ್ಷಗಳನ್ನು ಹೊಂದಾಣಿಕೆ ಮಾಡಲು ಅನುವು ಮಾಡಿಕೊಡುತ್ತದೆ.

ಅಫಿಡವಿಟ್ ಪ್ರಕಾರ, ಎಸ್‌ಬಿಐ ತನ್ನ ಬಳಿ ಇರುವ ಚುನಾವಣಾ ಬಾಂಡ್‌ಗಳ ಎಲ್ಲಾ ವಿವರಗಳನ್ನು ಮಾರ್ಚ್ 21 ರಂದು ಭಾರತೀಯ ಚುನಾವಣಾ ಆಯೋಗಕ್ಕೆ ಒದಗಿಸಿದೆ.

https://x.com/LiveLawIndia/status/1770764128392556871?s=20

ಬಾಂಡ್‌ ಖರೀದಿದಾರರ ವಿವರಗಳು : ಸೀರಿಯಲ್ ನಂಬರ್ ಯುಆರ್‌ಎನ್ ನಂಬರ್, ಜರ್ನಲ್ ದಿನಾಂಕ, ಖರೀದಿಯ ದಿನಾಂಕ, ಮುಕ್ತಾಯ ದಿನಾಂಕ, ಖರೀದಿದಾರರ ಹೆಸರು, ಪ್ರಿಫಿಕ್ಸ್, ಬಾಂಡ್ ಸಂಖ್ಯೆ, ಮುಖಬೆಲೆ, ಬಾಂಡ್ ನೀಡಿದ ಎಸ್‌ಬಿಐ ಶಾಖೆಯ ಕೋಡ್, ಬಾಂಡ್‌ನ ಟೆಲ್ಲರ್, ಸ್ಟೇಟಸ್.

ಬಾಂಡ್‌ ನಗದೀಕರಿಸಿದ ರಾಜಕೀಯ ಪಕ್ಷಗಳ ವಿವರಗಳು : ಕ್ರಮಸಂಖ್ಯೆ, ನಗದೀಕರಣದ ದಿನಾಂಕ, ರಾಜಕೀಯ ಪಕ್ಷದ ಹೆಸರು, ಖಾತೆ ಸಂಖ್ಯೆಯ ಕೊನೆಯ ನಾಲ್ಕು ಅಂಕೆಗಳು, ಪ್ರಿಫಿಕ್ಸ್‌, ಬಾಂಡ್ ಸಂಖ್ಯೆ, ಮುಖಬೆಲೆ, ಪಾವತಿ ಶಾಖೆ, ಕೋಡ್ ಮತ್ತು ಪಾವತಿ ಟೆಲ್ಲರ್.

ರಾಜಕೀಯ ಪಕ್ಷಗಳ ಸಂಪೂರ್ಣ ಬ್ಯಾಂಕ್ ಖಾತೆ ಸಂಖ್ಯೆಗಳು ಮತ್ತು ಕೆವೈಸಿ ವಿವರಗಳನ್ನು ಸಾರ್ವಜನಿಕಗೊಳಿಸುತ್ತಿಲ್ಲ ಇದು ಖಾತೆಯ ಭದ್ರತೆಗೆ ಸಮಸ್ಯೆ ಉಂಟು ಮಾಡಬಹುದು ಎಂದು ಅಫಿಡವಿಟ್‌ನಲ್ಲಿ ಎಸ್‌ಬಿಐ ಹೇಳಿದೆ. ಅದೇ ರೀತಿ, ಖರೀದಿದಾರರ ಕೆವೈಸಿ ವಿವರಗಳನ್ನು ಕೂಡ ಸಾರ್ವಜನಿಕಗೊಳಿಸುತ್ತಿಲ್ಲ. ದೇಣಿಗೆ ಪಡೆದ ರಾಜಕೀಯ ಪಕ್ಷಗಳನ್ನು ಗುರುತಿಸಲು ಅವುಗಳ ಅಗತ್ಯವಿಲ್ಲ ಎಂದು ಅಫಿಡವಿಟ್‌ನಲ್ಲಿ ತಿಳಿಸಿದೆ.

ಫೆ.15ರಂದು ಚುನಾವಣಾ ಬಾಂಡ್‌ ಯೋಜನೆಯನ್ನು ಅಸಂವಿಧಾನಿಕ ಎಂದಿದ್ದ ಸುಪ್ರೀಂ ಕೋರ್ಟ್ ಅದನ್ನು ರದ್ದುಗೊಳಿಸಿತ್ತು. ಆ ಬಳಿಕ ತನ್ನ ಬಳಿ ಇರುವ ಬಾಂಡ್‌ಗಳ ಕುರಿತ ಎಲ್ಲಾ ಮಾಹಿತಿಗಳನ್ನು ಚುನಾವಣಾ ಆಯೋಗಕ್ಕೆ ನೀಡುವಂತೆ ಎಸ್‌ಬಿಐಗೆ ಸೂಚಿಸಿತ್ತು. ಆರಂಭದಲ್ಲಿ ಸಮಯ ವಿಸ್ತರಣೆ ಕೋರಿದ್ದ ಎಸ್‌ಬಿಐ, ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ ಬಳಿಕ ಮಾಹಿತಿ ಒದಗಿಸಿತ್ತು. ಆ ಮಾಹಿತಿಯನ್ನು ಚುನಾವಣಾ ಆಯೋಗ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಆದರೆ, ಎಸ್‌ಬಿಐ ಯಾವ ಕಂಪನಿಗಳು ಮತ್ತು ವ್ಯಕ್ತಿಗಳು ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದೆ ಮತ್ತು ರಾಜಕೀಯ ಪಕ್ಷಗಳು ಪಡೆದ ಒಟ್ಟು ದೇಣಿಗೆ ಎಷ್ಟು ಎಂಬುವುದನ್ನು ಮಾತ್ರ ಬಹಿರಂಗಪಡಿಸಿತ್ತು. ಯಾವ ಕಂಪನಿ ಅಥವಾ ವ್ಯಕ್ತಿಗಳು ಯಾವ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದ್ದಾರೆ ಎಂದು ತಿಳಿಯಲು ಸಹಕಾರಿಯಾಗುವ ಆಲ್ಫಾ ನ್ಯೂಮರಿಕ್ ನಂಬರ್ ಅಥವಾ ಸೀರಿಯಲ್ ನಂಬರ್‌ಗಳನ್ನು ಕೊಟ್ಟಿರಲಿಲ್ಲ. ಈ ಕಾರಣಕ್ಕೆ ಮತ್ತೊಮ್ಮೆ ಎಸ್‌ಬಿ ಅನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಈ ಬೆನ್ನಲ್ಲೇ ಎಲ್ಲಾ ಮಾಹಿತಿಗಳನ್ನು ಒದಗಿಸಿರುವುದಾಗಿ ಎಸ್‌ಬಿಐ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ.

ಇದನ್ನೂ ಓದಿ : ಚುನಾವಣಾ ಬಾಂಡ್‌ಗಳಲ್ಲದೆ 7,726 ಕೋಟಿ ರೂ.ದೇಣಿಗೆ: 65% ದೇಣಿಗೆ ಬಿಜೆಪಿ ಪಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...