Homeಮುಖಪುಟಚುನಾವಣಾ ಬಾಂಡ್ ಸಂಖ್ಯೆಗಳು ಸೇರಿದಂತೆ ಎಲ್ಲಾ ವಿವರಗಳನ್ನು ಚು. ಆಯೋಗಕ್ಕೆ ಸಲ್ಲಿಸಿದ ಎಸ್‌ಬಿಐ

ಚುನಾವಣಾ ಬಾಂಡ್ ಸಂಖ್ಯೆಗಳು ಸೇರಿದಂತೆ ಎಲ್ಲಾ ವಿವರಗಳನ್ನು ಚು. ಆಯೋಗಕ್ಕೆ ಸಲ್ಲಿಸಿದ ಎಸ್‌ಬಿಐ

- Advertisement -
- Advertisement -

ವಿಶಿಷ್ಟ ಸಂಖ್ಯೆಗಳು ಅಥವಾ ಸೀರಿಯಲ್ ನಂಬರ್‌ಗಳು ಸೇರಿದಂತೆ ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿದೆ ಎಂದು ಭಾರತೀಯ ಸ್ಟೇಟ್ ಬ್ಯಾಂಕ್(ಎಸ್‌ಬಿಐ) ಅಧ್ಯಕ್ಷ ದಿನೇಶ್ ಕುಮಾರ್ ಖಾರಾ ಅವರು ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದಾರೆ.

‘ಆಲ್ಪಾ ನ್ಯೂಮರಿಕ್’ ಎಂಬ ವಿಶೇಷ ಸಂಖ್ಯೆಗಳು ಚುನಾವಣಾ ಬಾಂಡ್‌ಗಳ ಖರೀದಿದಾರರು ಮತ್ತು ಬಾಂಡ್‌ಗಳನ್ನು ನಗದೀಕರಿಸಿಕೊಂಡ ರಾಜಕೀಯ ಪಕ್ಷಗಳನ್ನು ಹೊಂದಾಣಿಕೆ ಮಾಡಲು ಅನುವು ಮಾಡಿಕೊಡುತ್ತದೆ.

ಅಫಿಡವಿಟ್ ಪ್ರಕಾರ, ಎಸ್‌ಬಿಐ ತನ್ನ ಬಳಿ ಇರುವ ಚುನಾವಣಾ ಬಾಂಡ್‌ಗಳ ಎಲ್ಲಾ ವಿವರಗಳನ್ನು ಮಾರ್ಚ್ 21 ರಂದು ಭಾರತೀಯ ಚುನಾವಣಾ ಆಯೋಗಕ್ಕೆ ಒದಗಿಸಿದೆ.

https://x.com/LiveLawIndia/status/1770764128392556871?s=20

ಬಾಂಡ್‌ ಖರೀದಿದಾರರ ವಿವರಗಳು : ಸೀರಿಯಲ್ ನಂಬರ್ ಯುಆರ್‌ಎನ್ ನಂಬರ್, ಜರ್ನಲ್ ದಿನಾಂಕ, ಖರೀದಿಯ ದಿನಾಂಕ, ಮುಕ್ತಾಯ ದಿನಾಂಕ, ಖರೀದಿದಾರರ ಹೆಸರು, ಪ್ರಿಫಿಕ್ಸ್, ಬಾಂಡ್ ಸಂಖ್ಯೆ, ಮುಖಬೆಲೆ, ಬಾಂಡ್ ನೀಡಿದ ಎಸ್‌ಬಿಐ ಶಾಖೆಯ ಕೋಡ್, ಬಾಂಡ್‌ನ ಟೆಲ್ಲರ್, ಸ್ಟೇಟಸ್.

ಬಾಂಡ್‌ ನಗದೀಕರಿಸಿದ ರಾಜಕೀಯ ಪಕ್ಷಗಳ ವಿವರಗಳು : ಕ್ರಮಸಂಖ್ಯೆ, ನಗದೀಕರಣದ ದಿನಾಂಕ, ರಾಜಕೀಯ ಪಕ್ಷದ ಹೆಸರು, ಖಾತೆ ಸಂಖ್ಯೆಯ ಕೊನೆಯ ನಾಲ್ಕು ಅಂಕೆಗಳು, ಪ್ರಿಫಿಕ್ಸ್‌, ಬಾಂಡ್ ಸಂಖ್ಯೆ, ಮುಖಬೆಲೆ, ಪಾವತಿ ಶಾಖೆ, ಕೋಡ್ ಮತ್ತು ಪಾವತಿ ಟೆಲ್ಲರ್.

ರಾಜಕೀಯ ಪಕ್ಷಗಳ ಸಂಪೂರ್ಣ ಬ್ಯಾಂಕ್ ಖಾತೆ ಸಂಖ್ಯೆಗಳು ಮತ್ತು ಕೆವೈಸಿ ವಿವರಗಳನ್ನು ಸಾರ್ವಜನಿಕಗೊಳಿಸುತ್ತಿಲ್ಲ ಇದು ಖಾತೆಯ ಭದ್ರತೆಗೆ ಸಮಸ್ಯೆ ಉಂಟು ಮಾಡಬಹುದು ಎಂದು ಅಫಿಡವಿಟ್‌ನಲ್ಲಿ ಎಸ್‌ಬಿಐ ಹೇಳಿದೆ. ಅದೇ ರೀತಿ, ಖರೀದಿದಾರರ ಕೆವೈಸಿ ವಿವರಗಳನ್ನು ಕೂಡ ಸಾರ್ವಜನಿಕಗೊಳಿಸುತ್ತಿಲ್ಲ. ದೇಣಿಗೆ ಪಡೆದ ರಾಜಕೀಯ ಪಕ್ಷಗಳನ್ನು ಗುರುತಿಸಲು ಅವುಗಳ ಅಗತ್ಯವಿಲ್ಲ ಎಂದು ಅಫಿಡವಿಟ್‌ನಲ್ಲಿ ತಿಳಿಸಿದೆ.

ಫೆ.15ರಂದು ಚುನಾವಣಾ ಬಾಂಡ್‌ ಯೋಜನೆಯನ್ನು ಅಸಂವಿಧಾನಿಕ ಎಂದಿದ್ದ ಸುಪ್ರೀಂ ಕೋರ್ಟ್ ಅದನ್ನು ರದ್ದುಗೊಳಿಸಿತ್ತು. ಆ ಬಳಿಕ ತನ್ನ ಬಳಿ ಇರುವ ಬಾಂಡ್‌ಗಳ ಕುರಿತ ಎಲ್ಲಾ ಮಾಹಿತಿಗಳನ್ನು ಚುನಾವಣಾ ಆಯೋಗಕ್ಕೆ ನೀಡುವಂತೆ ಎಸ್‌ಬಿಐಗೆ ಸೂಚಿಸಿತ್ತು. ಆರಂಭದಲ್ಲಿ ಸಮಯ ವಿಸ್ತರಣೆ ಕೋರಿದ್ದ ಎಸ್‌ಬಿಐ, ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ ಬಳಿಕ ಮಾಹಿತಿ ಒದಗಿಸಿತ್ತು. ಆ ಮಾಹಿತಿಯನ್ನು ಚುನಾವಣಾ ಆಯೋಗ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಆದರೆ, ಎಸ್‌ಬಿಐ ಯಾವ ಕಂಪನಿಗಳು ಮತ್ತು ವ್ಯಕ್ತಿಗಳು ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದೆ ಮತ್ತು ರಾಜಕೀಯ ಪಕ್ಷಗಳು ಪಡೆದ ಒಟ್ಟು ದೇಣಿಗೆ ಎಷ್ಟು ಎಂಬುವುದನ್ನು ಮಾತ್ರ ಬಹಿರಂಗಪಡಿಸಿತ್ತು. ಯಾವ ಕಂಪನಿ ಅಥವಾ ವ್ಯಕ್ತಿಗಳು ಯಾವ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದ್ದಾರೆ ಎಂದು ತಿಳಿಯಲು ಸಹಕಾರಿಯಾಗುವ ಆಲ್ಫಾ ನ್ಯೂಮರಿಕ್ ನಂಬರ್ ಅಥವಾ ಸೀರಿಯಲ್ ನಂಬರ್‌ಗಳನ್ನು ಕೊಟ್ಟಿರಲಿಲ್ಲ. ಈ ಕಾರಣಕ್ಕೆ ಮತ್ತೊಮ್ಮೆ ಎಸ್‌ಬಿ ಅನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಈ ಬೆನ್ನಲ್ಲೇ ಎಲ್ಲಾ ಮಾಹಿತಿಗಳನ್ನು ಒದಗಿಸಿರುವುದಾಗಿ ಎಸ್‌ಬಿಐ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ.

ಇದನ್ನೂ ಓದಿ : ಚುನಾವಣಾ ಬಾಂಡ್‌ಗಳಲ್ಲದೆ 7,726 ಕೋಟಿ ರೂ.ದೇಣಿಗೆ: 65% ದೇಣಿಗೆ ಬಿಜೆಪಿ ಪಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...