Homeಮುಖಪುಟಚುನಾವಣಾ ಬಾಂಡ್ ಸಂಖ್ಯೆಗಳು ಸೇರಿದಂತೆ ಎಲ್ಲಾ ವಿವರಗಳನ್ನು ಚು. ಆಯೋಗಕ್ಕೆ ಸಲ್ಲಿಸಿದ ಎಸ್‌ಬಿಐ

ಚುನಾವಣಾ ಬಾಂಡ್ ಸಂಖ್ಯೆಗಳು ಸೇರಿದಂತೆ ಎಲ್ಲಾ ವಿವರಗಳನ್ನು ಚು. ಆಯೋಗಕ್ಕೆ ಸಲ್ಲಿಸಿದ ಎಸ್‌ಬಿಐ

- Advertisement -
- Advertisement -

ವಿಶಿಷ್ಟ ಸಂಖ್ಯೆಗಳು ಅಥವಾ ಸೀರಿಯಲ್ ನಂಬರ್‌ಗಳು ಸೇರಿದಂತೆ ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿದೆ ಎಂದು ಭಾರತೀಯ ಸ್ಟೇಟ್ ಬ್ಯಾಂಕ್(ಎಸ್‌ಬಿಐ) ಅಧ್ಯಕ್ಷ ದಿನೇಶ್ ಕುಮಾರ್ ಖಾರಾ ಅವರು ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದಾರೆ.

‘ಆಲ್ಪಾ ನ್ಯೂಮರಿಕ್’ ಎಂಬ ವಿಶೇಷ ಸಂಖ್ಯೆಗಳು ಚುನಾವಣಾ ಬಾಂಡ್‌ಗಳ ಖರೀದಿದಾರರು ಮತ್ತು ಬಾಂಡ್‌ಗಳನ್ನು ನಗದೀಕರಿಸಿಕೊಂಡ ರಾಜಕೀಯ ಪಕ್ಷಗಳನ್ನು ಹೊಂದಾಣಿಕೆ ಮಾಡಲು ಅನುವು ಮಾಡಿಕೊಡುತ್ತದೆ.

ಅಫಿಡವಿಟ್ ಪ್ರಕಾರ, ಎಸ್‌ಬಿಐ ತನ್ನ ಬಳಿ ಇರುವ ಚುನಾವಣಾ ಬಾಂಡ್‌ಗಳ ಎಲ್ಲಾ ವಿವರಗಳನ್ನು ಮಾರ್ಚ್ 21 ರಂದು ಭಾರತೀಯ ಚುನಾವಣಾ ಆಯೋಗಕ್ಕೆ ಒದಗಿಸಿದೆ.

https://x.com/LiveLawIndia/status/1770764128392556871?s=20

ಬಾಂಡ್‌ ಖರೀದಿದಾರರ ವಿವರಗಳು : ಸೀರಿಯಲ್ ನಂಬರ್ ಯುಆರ್‌ಎನ್ ನಂಬರ್, ಜರ್ನಲ್ ದಿನಾಂಕ, ಖರೀದಿಯ ದಿನಾಂಕ, ಮುಕ್ತಾಯ ದಿನಾಂಕ, ಖರೀದಿದಾರರ ಹೆಸರು, ಪ್ರಿಫಿಕ್ಸ್, ಬಾಂಡ್ ಸಂಖ್ಯೆ, ಮುಖಬೆಲೆ, ಬಾಂಡ್ ನೀಡಿದ ಎಸ್‌ಬಿಐ ಶಾಖೆಯ ಕೋಡ್, ಬಾಂಡ್‌ನ ಟೆಲ್ಲರ್, ಸ್ಟೇಟಸ್.

ಬಾಂಡ್‌ ನಗದೀಕರಿಸಿದ ರಾಜಕೀಯ ಪಕ್ಷಗಳ ವಿವರಗಳು : ಕ್ರಮಸಂಖ್ಯೆ, ನಗದೀಕರಣದ ದಿನಾಂಕ, ರಾಜಕೀಯ ಪಕ್ಷದ ಹೆಸರು, ಖಾತೆ ಸಂಖ್ಯೆಯ ಕೊನೆಯ ನಾಲ್ಕು ಅಂಕೆಗಳು, ಪ್ರಿಫಿಕ್ಸ್‌, ಬಾಂಡ್ ಸಂಖ್ಯೆ, ಮುಖಬೆಲೆ, ಪಾವತಿ ಶಾಖೆ, ಕೋಡ್ ಮತ್ತು ಪಾವತಿ ಟೆಲ್ಲರ್.

ರಾಜಕೀಯ ಪಕ್ಷಗಳ ಸಂಪೂರ್ಣ ಬ್ಯಾಂಕ್ ಖಾತೆ ಸಂಖ್ಯೆಗಳು ಮತ್ತು ಕೆವೈಸಿ ವಿವರಗಳನ್ನು ಸಾರ್ವಜನಿಕಗೊಳಿಸುತ್ತಿಲ್ಲ ಇದು ಖಾತೆಯ ಭದ್ರತೆಗೆ ಸಮಸ್ಯೆ ಉಂಟು ಮಾಡಬಹುದು ಎಂದು ಅಫಿಡವಿಟ್‌ನಲ್ಲಿ ಎಸ್‌ಬಿಐ ಹೇಳಿದೆ. ಅದೇ ರೀತಿ, ಖರೀದಿದಾರರ ಕೆವೈಸಿ ವಿವರಗಳನ್ನು ಕೂಡ ಸಾರ್ವಜನಿಕಗೊಳಿಸುತ್ತಿಲ್ಲ. ದೇಣಿಗೆ ಪಡೆದ ರಾಜಕೀಯ ಪಕ್ಷಗಳನ್ನು ಗುರುತಿಸಲು ಅವುಗಳ ಅಗತ್ಯವಿಲ್ಲ ಎಂದು ಅಫಿಡವಿಟ್‌ನಲ್ಲಿ ತಿಳಿಸಿದೆ.

ಫೆ.15ರಂದು ಚುನಾವಣಾ ಬಾಂಡ್‌ ಯೋಜನೆಯನ್ನು ಅಸಂವಿಧಾನಿಕ ಎಂದಿದ್ದ ಸುಪ್ರೀಂ ಕೋರ್ಟ್ ಅದನ್ನು ರದ್ದುಗೊಳಿಸಿತ್ತು. ಆ ಬಳಿಕ ತನ್ನ ಬಳಿ ಇರುವ ಬಾಂಡ್‌ಗಳ ಕುರಿತ ಎಲ್ಲಾ ಮಾಹಿತಿಗಳನ್ನು ಚುನಾವಣಾ ಆಯೋಗಕ್ಕೆ ನೀಡುವಂತೆ ಎಸ್‌ಬಿಐಗೆ ಸೂಚಿಸಿತ್ತು. ಆರಂಭದಲ್ಲಿ ಸಮಯ ವಿಸ್ತರಣೆ ಕೋರಿದ್ದ ಎಸ್‌ಬಿಐ, ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ ಬಳಿಕ ಮಾಹಿತಿ ಒದಗಿಸಿತ್ತು. ಆ ಮಾಹಿತಿಯನ್ನು ಚುನಾವಣಾ ಆಯೋಗ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಆದರೆ, ಎಸ್‌ಬಿಐ ಯಾವ ಕಂಪನಿಗಳು ಮತ್ತು ವ್ಯಕ್ತಿಗಳು ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದೆ ಮತ್ತು ರಾಜಕೀಯ ಪಕ್ಷಗಳು ಪಡೆದ ಒಟ್ಟು ದೇಣಿಗೆ ಎಷ್ಟು ಎಂಬುವುದನ್ನು ಮಾತ್ರ ಬಹಿರಂಗಪಡಿಸಿತ್ತು. ಯಾವ ಕಂಪನಿ ಅಥವಾ ವ್ಯಕ್ತಿಗಳು ಯಾವ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದ್ದಾರೆ ಎಂದು ತಿಳಿಯಲು ಸಹಕಾರಿಯಾಗುವ ಆಲ್ಫಾ ನ್ಯೂಮರಿಕ್ ನಂಬರ್ ಅಥವಾ ಸೀರಿಯಲ್ ನಂಬರ್‌ಗಳನ್ನು ಕೊಟ್ಟಿರಲಿಲ್ಲ. ಈ ಕಾರಣಕ್ಕೆ ಮತ್ತೊಮ್ಮೆ ಎಸ್‌ಬಿ ಅನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಈ ಬೆನ್ನಲ್ಲೇ ಎಲ್ಲಾ ಮಾಹಿತಿಗಳನ್ನು ಒದಗಿಸಿರುವುದಾಗಿ ಎಸ್‌ಬಿಐ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ.

ಇದನ್ನೂ ಓದಿ : ಚುನಾವಣಾ ಬಾಂಡ್‌ಗಳಲ್ಲದೆ 7,726 ಕೋಟಿ ರೂ.ದೇಣಿಗೆ: 65% ದೇಣಿಗೆ ಬಿಜೆಪಿ ಪಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...