Homeಮುಖಪುಟಸಂಸದರು, ಶಾಸಕರ ಕ್ರಿಮಿನಲ್ ಕೇಸ್‌ಗಳ ವಿವರ ಸಲ್ಲಿಸಿ: ಕೇಂದ್ರಕ್ಕೆ ಸುಪ್ರೀಂ ಆದೇಶ

ಸಂಸದರು, ಶಾಸಕರ ಕ್ರಿಮಿನಲ್ ಕೇಸ್‌ಗಳ ವಿವರ ಸಲ್ಲಿಸಿ: ಕೇಂದ್ರಕ್ಕೆ ಸುಪ್ರೀಂ ಆದೇಶ

ಹಾಲಿ ಮತ್ತು ಮಾಜಿ ಶಾಸಕರು ಮತ್ತು ಸಂಸದರ ವಿರುದ್ಧ 4,442 ಕ್ರಿಮಿನಲ್ ಪ್ರಕರಣಗಳು ಬಾಕಿ ಉಳಿದಿದ್ದು, ಇದರಲ್ಲಿ 2,556 ಹಾಲಿ ಶಾಸಕರ ಮೇಲೆ ಕ್ರಿಮಿನಲ್ ಪ್ರಕರಣಗಳಿವೆ.

- Advertisement -
- Advertisement -

ದೇಶದಾದ್ಯಂತ ಸಂಸದರು, ಶಾಸಕರ ವಿರುದ್ಧ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದ ವಿವರಗಳನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ಕೇಳಿದೆ.

ಸಂಸದರು ಮತ್ತು ಶಾಸಕರ ವಿರುದ್ಧದ ಪ್ರಕರಣಗಳನ್ನು ಶೀಘ್ರವಾಗಿ ವಿಲೇವಾರಿ ಮಾಡುವಂತೆ ಕೋರಿ 2016 ರಲ್ಲಿ ವಕೀಲೆ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಎನ್ ವಿ ರಮಣ, ಸೂರ್ಯಕಾಂತ್ ಮತ್ತು ಅನಿರುದ್ಧ ಬೋಸ್ ಅವರಿದ್ದ ನ್ಯಾಯಪೀಠ ನಡೆಸಿತು.

ದೇಶದ ವಿವಿಧ ಹೈಕೋರ್ಟ್‌ಗಳು ಬಾಕಿ ಉಳಿದಿರುವ ಕ್ರಿಮಿನಲ್ ಪ್ರಕರಣಗಳ ವಿಲೇವಾರಿಗಾಗಿ ವಿಡಿಯೋ ಕಾನ್ಫರೆನ್ಸಿಂಗ್ ಸೌಲಭ್ಯಗಳಿಗೆ ಸಂಬಂಧಿಸಿದಂತೆ ತಾಂತ್ರಿಕ ನೆರವು ಕೇಳುತ್ತಿವೆ ಎಂದು ವಿಚಾರಣೆಯ ವೇಳೆ, ನ್ಯಾಯಾಲಯವು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ತಿಳಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ಮೆಹ್ತಾ ‘ಧನಸಹಾಯ ಮಾಡಲು ತೊಂದರೆ ಇಲ್ಲ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲೈಂಗಿಕ ಕಾರ್ಯಕರ್ತೆಯರಿಗೂ ಪಡಿತರ ನೀಡಿ: ರಾಜ್ಯಗಳಿಗೆ ಸುಪ್ರೀಂ ಆದೇಶ

ನ್ಯಾಯಪೀಠ ವ್ಯಕ್ತಪಡಿಸಿದ ಆತಂಕವೆಂದರೆ, ಅನೇಕ ಸಂದರ್ಭಗಳಲ್ಲಿ ಪೊಲೀಸರು ಶಾಸಕರಿಗೆ ಹೆದರುತ್ತಿದ್ದರು ಮತ್ತು ಅದು ಗಂಭೀರ ವಿಷಯವಾಗಿದೆ. ಈ ವಿಷಯದ ಬಗ್ಗೆಯೂ ಗಮನಹರಿಸಲು ನ್ಯಾಯಪೀಠ ಕೇಂದ್ರವನ್ನು ಕೇಳಿತು.

ಜನಪ್ರತಿನಿಧಿಗಳ ಒತ್ತಡದಿಂದಾಗಿ ಪೊಲೀಸರು ಕೆಲವೊಮ್ಮೆ ಕಾನೂನು ಜಾರಿಗೊಳಿಸದ ಕಾರಣಕ್ಕೆ ಸಂಸತ್ ಸದಸ್ಯರು ಮತ್ತು ವಿಧಾನಸಭೆ ಸದಸ್ಯರ (ಸಂಸದರು ಮತ್ತು ಶಾಸಕರು) ವಿರುದ್ಧ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ಬಾಕಿ ಉಳಿದಿವೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.

ಇಂತಹ ಸನ್ನಿವೇಶದಲ್ಲಿ ಸಮಯೋಚಿತ ಸಮನ್ಸ್ ಇತ್ಯಾದಿಗಳನ್ನು ಜಾರಿಗೊಳಿಸಲು ಉನ್ನತ ನ್ಯಾಯಾಲಯವು ಪ್ರತಿ ರಾಜ್ಯದ ಪೊಲೀಸ್ ಡಿಜಿಗೆ ನಿರ್ದೇಶನಗಳನ್ನು ನೀಡಬಹುದು ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸಲಹೆ ನೀಡಿದರು.

ಮಾರ್ಚ್ 2020 ರ ವೇಳೆಗೆ ಸಂಸದರು ಮತ್ತು ಶಾಸಕರ ವಿರುದ್ಧ 4,442 ಪ್ರಕರಣಗಳು ಬಾಕಿ ಉಳಿದಿವೆ ಎಂದು ಹಿರಿಯ ವಕೀಲ ಹನ್ಸಾರಿಯಾ ಈ ಹಿಂದೆ ನ್ಯಾಯಾಲಯಕ್ಕೆ ತಿಳಿಸಿದ್ದರು. ವಿವಿಧ ಹೈಕೋರ್ಟ್‌ಗಳಿಂದ ಮಾಹಿತಿ ಪಡೆದ ನಂತರ ಸಂಗ್ರಹಿಸಲಾದ ಇತ್ತೀಚಿನ ಮಾಹಿತಿಯ ಪ್ರಕಾರ, ಪ್ರಕರಣಗಳ ಸಂಖ್ಯೆ ಇದೀಗ 4,859 ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ: ಹತ್ರಾಸ್: ಘಟನೆಯನ್ನು ’ಅಸಾಧಾರಣ ಮತ್ತು ಆಘಾತಕಾರಿ’ ಎಂದು ಕರೆದ ಸುಪ್ರೀಂ

ಹಾಲಿ ಮತ್ತು ಮಾಜಿ ಶಾಸಕರು ಹಾಗೂ ಸಂಸದರ ವಿರುದ್ಧ ಬಾಕಿ ಇರುವ ಪ್ರಕರಣಗಳ ವಿಚಾರಣೆಯನ್ನು ತ್ವರಿತಗೊಳಿಸಲು ಕ್ರಿಯಾ ಯೋಜನೆ ರೂಪಿಸುವಂತೆ ಸೆಪ್ಟೆಂಬರ್ 16 ರಂದು ನ್ಯಾಯಾಲಯ ಎಲ್ಲಾ ಹೈಕೋರ್ಟ್‌ಗಳಿಗೆ ನಿರ್ದೇಶನ ನೀಡಿತ್ತು.

ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸಲ್ಲಿಸಲು ಕೇಂದ್ರವು ಹೆಚ್ಚಿನ ಕಾಲಾವಕಾಶ ಕೋರಿದೆ.  ಹೀಗಾಗಿ ನ್ಯಾಯಪೀಠ ಈ ಪ್ರಕರಣವನ್ನು ತಾತ್ಕಾಲಿಕವಾಗಿ 10 ದಿನಗಳವರೆಗೆ ಮುಂದೂಡಿದೆ.

ಹಾಲಿ ಮತ್ತು ಮಾಜಿ ಶಾಸಕರು ಮತ್ತು ಸಂಸದರ ವಿರುದ್ಧ 4,442 ಕ್ರಿಮಿನಲ್ ಪ್ರಕರಣಗಳು ಬಾಕಿ ಉಳಿದಿವೆ ಎಂದು ಸೆಪ್ಟೆಂಬರ್ 9 ರಂದು ಉನ್ನತ ನ್ಯಾಯಾಲಯಕ್ಕೆ ತಿಳಿಸಲಾಗಿತ್ತು. ಇದರಲ್ಲಿ 2,556 ಹಾಲಿ ಶಾಸಕರ ಮೇಲೆ ಕ್ರಿಮಿನಲ್ ಪ್ರಕರಣಗಳಿವೆ.


ಇದನ್ನೂ ಓದಿ: ಕೃಷಿ ಮಸೂದೆ: ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಕೇರಳ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...