Homeಮುಖಪುಟಕಾಸರಗೋಡು: ಅಣಕು ಮತದಾನದ ವೇಳೆ ಬಿಜೆಪಿ ಚಿಹ್ನೆಯೊಂದಿಗೆ ಹೆಚ್ಚುವರಿ ಸ್ಲಿಪ್ ಮುದ್ರಿಸಿದ ವಿವಿಪ್ಯಾಟ್

ಕಾಸರಗೋಡು: ಅಣಕು ಮತದಾನದ ವೇಳೆ ಬಿಜೆಪಿ ಚಿಹ್ನೆಯೊಂದಿಗೆ ಹೆಚ್ಚುವರಿ ಸ್ಲಿಪ್ ಮುದ್ರಿಸಿದ ವಿವಿಪ್ಯಾಟ್

- Advertisement -
- Advertisement -

ಕೇರಳದ ಕಾಸರಗೋಡಿನಲ್ಲಿ ಬುಧವಾರ (ಏ.17) ನಡೆದ ಅಣಕು ಮತದಾನದ ಸಂದರ್ಭದಲ್ಲಿ ಮೂರು ವಿವಿ ಪ್ಯಾಟ್ (ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್) ಯಂತ್ರಗಳು ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಮಲದ ಚಿಹ್ನೆಯೊಂದಿಗೆ ತಲಾ ಒಂದು ಹೆಚ್ಚುವರಿ ಸ್ಲಿಪ್ ಅನ್ನು ಮುದ್ರಿಸಿವೆ.

ವಿದ್ಯುನ್ಮಾನ ಮತಯಂತ್ರಗಳು (ಇವಿಎಂಗಳು) ‘ಮನುಷ್ಯನ ಹಸ್ತಕ್ಷೇಪ’ ಇಲ್ಲದಿದ್ದರೆ ನಿಖರವಾದ ಫಲಿತಾಂಶಗಳನ್ನು ನೀಡುತ್ತವೆ ಎಂದು ಸುಪ್ರೀಂ ಕೋರ್ಟ್ ಹೇಳಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ.

ವಿವಿಪ್ಯಾಟ್ ಲೋಪದ ಬಗ್ಗೆ ಕಾಂಗ್ರೆಸ್ ಮತ್ತು ಸಿಪಿಐ (ಎಂ) ಪ್ರಶ್ನೆ ಎತ್ತಿದ್ದು, ಚುನಾವಣಾ ಆಯೋಗದ ಅಧಿಕಾರಿಗಳು ದೋಷಗಳನ್ನು ಪರಿಶೀಲಿಸಿ ಯಂತ್ರಗಳನ್ನು ಬದಲಾಯಿಸುವಂತೆ ಒತ್ತಾಯಿಸಿದ್ದಾರೆ.

ಎರಡೂ ಬಾರಿ ಪರಿಶೀಲಿಸಿದಾಗಲೂ ಮೂರು ವಿವಿ ಪ್ಯಾಟ್‌ಗಳು ಬಿಜೆಪಿ ಚಿಹ್ನೆಯಿರುವ ತಲಾ ಒಂದೊಂದು ಹೆಚ್ಚುವರಿ ಸ್ಲಿಪ್ ಮುದ್ರಿಸಿವೆ. ಕಾಂಗ್ರೆಸ್ ಅಭ್ಯರ್ಥಿ ರಾಜಮೋಹನ್ ಉನ್ನಿತಾನ್ ಅವರ ಚುನಾವಣಾ ಏಜೆಂಟ್ ನಾಸರ್ ಚೆರ್ಕಳಂ ಅವರ ಪ್ರಕಾರ, ಮೂರನೇ ಸುತ್ತಿನ ಪರಿಶೀಲನೆ ವೇಳೆ ಸಮಸ್ಯೆಯನ್ನು ಸರಿಪಡಿಸಲಾಗಿದೆ.

ಕಾಸರಗೋಡು ಸರ್ಕಾರಿ ಕಾಲೇಜಿನಲ್ಲಿ ಇರಿಸಲಾಗಿರುವ ಇವಿಎಂಗಳಲ್ಲಿ ‘ನಾನ್ ಆಫ್ ದಿ ಎಬವ್’ (ನೋಟಾ) ಆಯ್ಕೆ ಸೇರಿದಂತೆ 10 ಅಭ್ಯರ್ಥಿಗಳ ಹೆಸರಿತ್ತು. ಒಟ್ಟು 10 ಟೆಸ್ಟ್ ವಿವಿಪ್ಯಾಟ್‌ಗಳ ಪೈಕಿ
ಮೂರು ವಿವಿ ಪ್ಯಾಟ್‌ಗಳು ‘ಟೆಸ್ಟ್ ಪ್ರಿಂಟ್’ಗಳನ್ನು ಮುದ್ರಿಸಿದ್ದವು. ಈ ಎಲ್ಲಾ ಮೂರು ಮುದ್ರಣಗಳ ಮೇಲೆ ಬಿಜೆಪಿಯ ಕಮಲದ ಚಿಹ್ನೆ ಇತ್ತು ಮತ್ತು ‘ಎಣಿಕೆ ಮಾಡಬಾರದು’ ಎಂದು ಸಣ್ಣ ಅಕ್ಷರಗಳಲ್ಲಿ ಬರೆಯಲಾಗಿತ್ತು ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ವಿವಿಪ್ಯಾಟ್ ಎಂಬುವುದು ಇವಿಎಂಗೆ ಸಂಪರ್ಕಗೊಂಡಿರುವ ಯಂತ್ರವಾಗಿದ್ದು, ಒಬ್ಬ ವ್ಯಕ್ತಿಯು ಒಮ್ಮೆ ಮತ ಚಲಾಯಿಸಿದ ನಂತರ, ಕಾಗದದ ಟ್ರಯಲ್ ಅಥವಾ ಸ್ಲಿಪ್ ಮುದ್ರಣಗೊಳ್ಳುವ ಮೂಲಕ ವಿವಿಪ್ಯಾಟ್‌ನಲ್ಲಿನಲ್ಲಿ ಮತವೂ ದಾಖಲಾಗುತ್ತದೆ. ಸ್ಲಿಪ್‌ಗಳನ್ನು ಸಾಮಾನ್ಯವಾಗಿ ಮತದಾರರಿಗೆ ಹಸ್ತಾಂತರಿಸುವುದಿಲ್ಲ. ಆದರೆ, ಕೇವಲ ಏಳು ಸೆಕೆಂಡುಗಳ ಕಾಲ ಬೆಳಗುವ ಸಣ್ಣ ಮಸೂರದ ಮೂಲಕ ಅದನ್ನು ತೋರಿಸಲಾಗುತ್ತದೆ. ಅಣಕು ಮತದಾನದ ಸಮಯದಲ್ಲಿ, ಸ್ಲಿಪ್‌ಗಳನ್ನು ಮುದ್ರಿಸಲಾಗುತ್ತದೆ ಮತ್ತು ಏಜೆಂಟ್‌ಗಳು ಅವುಗಳನ್ನು ವೈಯಕ್ತಿಕವಾಗಿ ಪರಿಶೀಲಿಸುತ್ತಾರೆ.

‘ಎಣಿಕೆ ಮಾಡಬಾರದು’ ಎಂಬ ಬರಹದೊಂದಿಗೆ ಬಿಜೆಪಿಯ ಚಿಹ್ನೆ ಸಹಿತ ಮುದ್ರಿತವಾಗಿರುವ ಹೆಚ್ಚುವರಿ ಸ್ಲಿಪ್‌ಗಳು ಸ್ವಲ್ಪ ದೊಡ್ಡದಾಗಿ ಬಂದಿದ್ದರೂ, ನಿಜವಾದ ಚುನಾವಣೆಯ ಸಮಯದಲ್ಲಿ ಈ ಸ್ಲಿಪ್‌ಗಳು ತಪ್ಪಾಗಿ ಎಣಿಕೆಯಾಗುವ ಸಾಧ್ಯತೆಗಳಿವೆ ಎಂದು ದೂರುದಾರರು ವಾದಿಸಿದ್ದಾರೆ.

“ಟೆಸ್ಟ್ ಸ್ಲಿಪ್ ಸಾಮಾನ್ಯ ವಿವಿಪ್ಯಾಟ್ ಸ್ಲಿಪ್‌ಗಿಂತ ಗಾತ್ರದಲ್ಲಿ ಸ್ವಲ್ಪ ದೊಡ್ಡದಾಗಿದೆ. ಬಿಜೆಪಿಯ ಚಹ್ನೆಯಲ್ಲಿ ಬಂದ ಸ್ಲಿಪ್‌ಗಳು ದೊಡ್ಡದಾಗಿಯೇ ಇತ್ತು. ಆದರೆ, ನನ್ನ ಪ್ರಶ್ನೆ, ಈ ಟೆಸ್ಟ್ ಸ್ಲಿಪ್ ಏಕೆ ಬರಬೇಕು? ಅದು ಕೂಡ ಬಿಜೆಪಿಯ ಚಿಹ್ನೆಯೊಂದಿಗೆ? ಸ್ಲಿಪ್‌ನಲ್ಲಿ ‘ಎಣಿಸಬಾರದು’ ಎಂದು ಬರೆದರೂ ಪದಗಳು ಚಿಕ್ಕ ಅಕ್ಷರ ಶೈಲಿಯಲ್ಲಿವೆ. ನಿಜವಾದ ಚುನಾವಣೆಯ ಸಮಯದಲ್ಲಿ ಇಂತಹ ಸ್ಲಿಪ್‌ಗಳು ಎಣಿಸಿದರೆ ಏನಾಗಬಹುದು?” ಎಂದು ಕಾಂಗ್ರೆಸ್‌ ಅಭ್ಯರ್ಥಿಯ ಏಜೆಂಟ್ ಜಮಾಲ್ ಪ್ರಶ್ನಿಸಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ತಿಳಿಸಿದೆ.

ಪರೀಶೀಲನೆಗೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್:

ಕಾಸರಗೋಡಿನಲ್ಲಿ ವಿವಿಪ್ಯಾಟ್ ಪರಿಶೀಲನೆ ವೇಳೆ ಬಿಜೆಪಿ ಚಿಹ್ನೆಯ ಸ್ಲಿಪ್ ಬಂದಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಪರಿಶೀಲನೆ ನಡೆಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ನಿರ್ದೇಶನ ನೀಡಿದೆ ಎಂದು ಬಾರ್‌ & ಬೆಂಚ್ ವರದಿ ಮಾಡಿದೆ.

ಇವಿಎಂನಲ್ಲಿ ಚಲಾವಣೆಯಾದ ಎಲ್ಲಾ ಮತಗಳನ್ನು ವಿವಿಪ್ಯಾಟ್ ಸ್ಲಿಪ್‌ಗಳೊಂದಿಗೆ ತಾಳೆ ಮಾಡಿ ನೋಡುವಂತೆ ನಿರ್ದೇಶನ ನೀಡಲು ಕೋರಿ ಎಡಿಆರ್ ಮತ್ತು ಇತರರು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಈಗಾಗಲೇ ವಿಚಾರಣೆ ನಡೆಸುತ್ತಿದೆ. ಎಡಿಆರ್‌ ಪರ ಹಿರಿಯ ವಕೀಲ ಪ್ರಶಾಂತ್ ಭೂಷಣ್ ವಾದಿಸುತ್ತಿದ್ದಾರೆ.

ಇಂದು (ಏ.18) ವಿಚಾರಣೆ ವೇಳೆ ವಕೀಲ ಪ್ರಶಾಂತ್ ಭೂಷಣ್ ಅವರು ಕಾಸರಗೋಡಿನ ವಿಚಾರವನ್ನು ನ್ಯಾಯಪೀಠದ ಗಮನಕ್ಕೆ ತಂದಿದ್ದಾರೆ. ಈ ಹಿನ್ನೆಲೆ ಪೀಠ ಈ ಕುರಿತು ಪರಿಶೀಲನೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶಿಸಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಮೋದಿಯವರ ಹಲವಾರು ಹೇಳಿಕೆಗಳಿಂದ ಮಾದರಿ ನೀತಿ ಸಂಹಿತೆ ಉಲ್ಲಂಘನೆ: ಸೀತಾರಾಂ ಯೆಚೂರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...