Homeಮುಖಪುಟಕಾಸರಗೋಡು: ಅಣಕು ಮತದಾನದ ವೇಳೆ ಬಿಜೆಪಿ ಚಿಹ್ನೆಯೊಂದಿಗೆ ಹೆಚ್ಚುವರಿ ಸ್ಲಿಪ್ ಮುದ್ರಿಸಿದ ವಿವಿಪ್ಯಾಟ್

ಕಾಸರಗೋಡು: ಅಣಕು ಮತದಾನದ ವೇಳೆ ಬಿಜೆಪಿ ಚಿಹ್ನೆಯೊಂದಿಗೆ ಹೆಚ್ಚುವರಿ ಸ್ಲಿಪ್ ಮುದ್ರಿಸಿದ ವಿವಿಪ್ಯಾಟ್

- Advertisement -
- Advertisement -

ಕೇರಳದ ಕಾಸರಗೋಡಿನಲ್ಲಿ ಬುಧವಾರ (ಏ.17) ನಡೆದ ಅಣಕು ಮತದಾನದ ಸಂದರ್ಭದಲ್ಲಿ ಮೂರು ವಿವಿ ಪ್ಯಾಟ್ (ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್) ಯಂತ್ರಗಳು ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಮಲದ ಚಿಹ್ನೆಯೊಂದಿಗೆ ತಲಾ ಒಂದು ಹೆಚ್ಚುವರಿ ಸ್ಲಿಪ್ ಅನ್ನು ಮುದ್ರಿಸಿವೆ.

ವಿದ್ಯುನ್ಮಾನ ಮತಯಂತ್ರಗಳು (ಇವಿಎಂಗಳು) ‘ಮನುಷ್ಯನ ಹಸ್ತಕ್ಷೇಪ’ ಇಲ್ಲದಿದ್ದರೆ ನಿಖರವಾದ ಫಲಿತಾಂಶಗಳನ್ನು ನೀಡುತ್ತವೆ ಎಂದು ಸುಪ್ರೀಂ ಕೋರ್ಟ್ ಹೇಳಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ.

ವಿವಿಪ್ಯಾಟ್ ಲೋಪದ ಬಗ್ಗೆ ಕಾಂಗ್ರೆಸ್ ಮತ್ತು ಸಿಪಿಐ (ಎಂ) ಪ್ರಶ್ನೆ ಎತ್ತಿದ್ದು, ಚುನಾವಣಾ ಆಯೋಗದ ಅಧಿಕಾರಿಗಳು ದೋಷಗಳನ್ನು ಪರಿಶೀಲಿಸಿ ಯಂತ್ರಗಳನ್ನು ಬದಲಾಯಿಸುವಂತೆ ಒತ್ತಾಯಿಸಿದ್ದಾರೆ.

ಎರಡೂ ಬಾರಿ ಪರಿಶೀಲಿಸಿದಾಗಲೂ ಮೂರು ವಿವಿ ಪ್ಯಾಟ್‌ಗಳು ಬಿಜೆಪಿ ಚಿಹ್ನೆಯಿರುವ ತಲಾ ಒಂದೊಂದು ಹೆಚ್ಚುವರಿ ಸ್ಲಿಪ್ ಮುದ್ರಿಸಿವೆ. ಕಾಂಗ್ರೆಸ್ ಅಭ್ಯರ್ಥಿ ರಾಜಮೋಹನ್ ಉನ್ನಿತಾನ್ ಅವರ ಚುನಾವಣಾ ಏಜೆಂಟ್ ನಾಸರ್ ಚೆರ್ಕಳಂ ಅವರ ಪ್ರಕಾರ, ಮೂರನೇ ಸುತ್ತಿನ ಪರಿಶೀಲನೆ ವೇಳೆ ಸಮಸ್ಯೆಯನ್ನು ಸರಿಪಡಿಸಲಾಗಿದೆ.

ಕಾಸರಗೋಡು ಸರ್ಕಾರಿ ಕಾಲೇಜಿನಲ್ಲಿ ಇರಿಸಲಾಗಿರುವ ಇವಿಎಂಗಳಲ್ಲಿ ‘ನಾನ್ ಆಫ್ ದಿ ಎಬವ್’ (ನೋಟಾ) ಆಯ್ಕೆ ಸೇರಿದಂತೆ 10 ಅಭ್ಯರ್ಥಿಗಳ ಹೆಸರಿತ್ತು. ಒಟ್ಟು 10 ಟೆಸ್ಟ್ ವಿವಿಪ್ಯಾಟ್‌ಗಳ ಪೈಕಿ
ಮೂರು ವಿವಿ ಪ್ಯಾಟ್‌ಗಳು ‘ಟೆಸ್ಟ್ ಪ್ರಿಂಟ್’ಗಳನ್ನು ಮುದ್ರಿಸಿದ್ದವು. ಈ ಎಲ್ಲಾ ಮೂರು ಮುದ್ರಣಗಳ ಮೇಲೆ ಬಿಜೆಪಿಯ ಕಮಲದ ಚಿಹ್ನೆ ಇತ್ತು ಮತ್ತು ‘ಎಣಿಕೆ ಮಾಡಬಾರದು’ ಎಂದು ಸಣ್ಣ ಅಕ್ಷರಗಳಲ್ಲಿ ಬರೆಯಲಾಗಿತ್ತು ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ವಿವಿಪ್ಯಾಟ್ ಎಂಬುವುದು ಇವಿಎಂಗೆ ಸಂಪರ್ಕಗೊಂಡಿರುವ ಯಂತ್ರವಾಗಿದ್ದು, ಒಬ್ಬ ವ್ಯಕ್ತಿಯು ಒಮ್ಮೆ ಮತ ಚಲಾಯಿಸಿದ ನಂತರ, ಕಾಗದದ ಟ್ರಯಲ್ ಅಥವಾ ಸ್ಲಿಪ್ ಮುದ್ರಣಗೊಳ್ಳುವ ಮೂಲಕ ವಿವಿಪ್ಯಾಟ್‌ನಲ್ಲಿನಲ್ಲಿ ಮತವೂ ದಾಖಲಾಗುತ್ತದೆ. ಸ್ಲಿಪ್‌ಗಳನ್ನು ಸಾಮಾನ್ಯವಾಗಿ ಮತದಾರರಿಗೆ ಹಸ್ತಾಂತರಿಸುವುದಿಲ್ಲ. ಆದರೆ, ಕೇವಲ ಏಳು ಸೆಕೆಂಡುಗಳ ಕಾಲ ಬೆಳಗುವ ಸಣ್ಣ ಮಸೂರದ ಮೂಲಕ ಅದನ್ನು ತೋರಿಸಲಾಗುತ್ತದೆ. ಅಣಕು ಮತದಾನದ ಸಮಯದಲ್ಲಿ, ಸ್ಲಿಪ್‌ಗಳನ್ನು ಮುದ್ರಿಸಲಾಗುತ್ತದೆ ಮತ್ತು ಏಜೆಂಟ್‌ಗಳು ಅವುಗಳನ್ನು ವೈಯಕ್ತಿಕವಾಗಿ ಪರಿಶೀಲಿಸುತ್ತಾರೆ.

‘ಎಣಿಕೆ ಮಾಡಬಾರದು’ ಎಂಬ ಬರಹದೊಂದಿಗೆ ಬಿಜೆಪಿಯ ಚಿಹ್ನೆ ಸಹಿತ ಮುದ್ರಿತವಾಗಿರುವ ಹೆಚ್ಚುವರಿ ಸ್ಲಿಪ್‌ಗಳು ಸ್ವಲ್ಪ ದೊಡ್ಡದಾಗಿ ಬಂದಿದ್ದರೂ, ನಿಜವಾದ ಚುನಾವಣೆಯ ಸಮಯದಲ್ಲಿ ಈ ಸ್ಲಿಪ್‌ಗಳು ತಪ್ಪಾಗಿ ಎಣಿಕೆಯಾಗುವ ಸಾಧ್ಯತೆಗಳಿವೆ ಎಂದು ದೂರುದಾರರು ವಾದಿಸಿದ್ದಾರೆ.

“ಟೆಸ್ಟ್ ಸ್ಲಿಪ್ ಸಾಮಾನ್ಯ ವಿವಿಪ್ಯಾಟ್ ಸ್ಲಿಪ್‌ಗಿಂತ ಗಾತ್ರದಲ್ಲಿ ಸ್ವಲ್ಪ ದೊಡ್ಡದಾಗಿದೆ. ಬಿಜೆಪಿಯ ಚಹ್ನೆಯಲ್ಲಿ ಬಂದ ಸ್ಲಿಪ್‌ಗಳು ದೊಡ್ಡದಾಗಿಯೇ ಇತ್ತು. ಆದರೆ, ನನ್ನ ಪ್ರಶ್ನೆ, ಈ ಟೆಸ್ಟ್ ಸ್ಲಿಪ್ ಏಕೆ ಬರಬೇಕು? ಅದು ಕೂಡ ಬಿಜೆಪಿಯ ಚಿಹ್ನೆಯೊಂದಿಗೆ? ಸ್ಲಿಪ್‌ನಲ್ಲಿ ‘ಎಣಿಸಬಾರದು’ ಎಂದು ಬರೆದರೂ ಪದಗಳು ಚಿಕ್ಕ ಅಕ್ಷರ ಶೈಲಿಯಲ್ಲಿವೆ. ನಿಜವಾದ ಚುನಾವಣೆಯ ಸಮಯದಲ್ಲಿ ಇಂತಹ ಸ್ಲಿಪ್‌ಗಳು ಎಣಿಸಿದರೆ ಏನಾಗಬಹುದು?” ಎಂದು ಕಾಂಗ್ರೆಸ್‌ ಅಭ್ಯರ್ಥಿಯ ಏಜೆಂಟ್ ಜಮಾಲ್ ಪ್ರಶ್ನಿಸಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ತಿಳಿಸಿದೆ.

ಪರೀಶೀಲನೆಗೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್:

ಕಾಸರಗೋಡಿನಲ್ಲಿ ವಿವಿಪ್ಯಾಟ್ ಪರಿಶೀಲನೆ ವೇಳೆ ಬಿಜೆಪಿ ಚಿಹ್ನೆಯ ಸ್ಲಿಪ್ ಬಂದಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಪರಿಶೀಲನೆ ನಡೆಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ನಿರ್ದೇಶನ ನೀಡಿದೆ ಎಂದು ಬಾರ್‌ & ಬೆಂಚ್ ವರದಿ ಮಾಡಿದೆ.

ಇವಿಎಂನಲ್ಲಿ ಚಲಾವಣೆಯಾದ ಎಲ್ಲಾ ಮತಗಳನ್ನು ವಿವಿಪ್ಯಾಟ್ ಸ್ಲಿಪ್‌ಗಳೊಂದಿಗೆ ತಾಳೆ ಮಾಡಿ ನೋಡುವಂತೆ ನಿರ್ದೇಶನ ನೀಡಲು ಕೋರಿ ಎಡಿಆರ್ ಮತ್ತು ಇತರರು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಈಗಾಗಲೇ ವಿಚಾರಣೆ ನಡೆಸುತ್ತಿದೆ. ಎಡಿಆರ್‌ ಪರ ಹಿರಿಯ ವಕೀಲ ಪ್ರಶಾಂತ್ ಭೂಷಣ್ ವಾದಿಸುತ್ತಿದ್ದಾರೆ.

ಇಂದು (ಏ.18) ವಿಚಾರಣೆ ವೇಳೆ ವಕೀಲ ಪ್ರಶಾಂತ್ ಭೂಷಣ್ ಅವರು ಕಾಸರಗೋಡಿನ ವಿಚಾರವನ್ನು ನ್ಯಾಯಪೀಠದ ಗಮನಕ್ಕೆ ತಂದಿದ್ದಾರೆ. ಈ ಹಿನ್ನೆಲೆ ಪೀಠ ಈ ಕುರಿತು ಪರಿಶೀಲನೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶಿಸಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಮೋದಿಯವರ ಹಲವಾರು ಹೇಳಿಕೆಗಳಿಂದ ಮಾದರಿ ನೀತಿ ಸಂಹಿತೆ ಉಲ್ಲಂಘನೆ: ಸೀತಾರಾಂ ಯೆಚೂರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...