Homeಮುಖಪುಟಕಾಸರಗೋಡು: ಅಣಕು ಮತದಾನದ ವೇಳೆ ಬಿಜೆಪಿ ಚಿಹ್ನೆಯೊಂದಿಗೆ ಹೆಚ್ಚುವರಿ ಸ್ಲಿಪ್ ಮುದ್ರಿಸಿದ ವಿವಿಪ್ಯಾಟ್

ಕಾಸರಗೋಡು: ಅಣಕು ಮತದಾನದ ವೇಳೆ ಬಿಜೆಪಿ ಚಿಹ್ನೆಯೊಂದಿಗೆ ಹೆಚ್ಚುವರಿ ಸ್ಲಿಪ್ ಮುದ್ರಿಸಿದ ವಿವಿಪ್ಯಾಟ್

- Advertisement -
- Advertisement -

ಕೇರಳದ ಕಾಸರಗೋಡಿನಲ್ಲಿ ಬುಧವಾರ (ಏ.17) ನಡೆದ ಅಣಕು ಮತದಾನದ ಸಂದರ್ಭದಲ್ಲಿ ಮೂರು ವಿವಿ ಪ್ಯಾಟ್ (ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್) ಯಂತ್ರಗಳು ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಮಲದ ಚಿಹ್ನೆಯೊಂದಿಗೆ ತಲಾ ಒಂದು ಹೆಚ್ಚುವರಿ ಸ್ಲಿಪ್ ಅನ್ನು ಮುದ್ರಿಸಿವೆ.

ವಿದ್ಯುನ್ಮಾನ ಮತಯಂತ್ರಗಳು (ಇವಿಎಂಗಳು) ‘ಮನುಷ್ಯನ ಹಸ್ತಕ್ಷೇಪ’ ಇಲ್ಲದಿದ್ದರೆ ನಿಖರವಾದ ಫಲಿತಾಂಶಗಳನ್ನು ನೀಡುತ್ತವೆ ಎಂದು ಸುಪ್ರೀಂ ಕೋರ್ಟ್ ಹೇಳಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ.

ವಿವಿಪ್ಯಾಟ್ ಲೋಪದ ಬಗ್ಗೆ ಕಾಂಗ್ರೆಸ್ ಮತ್ತು ಸಿಪಿಐ (ಎಂ) ಪ್ರಶ್ನೆ ಎತ್ತಿದ್ದು, ಚುನಾವಣಾ ಆಯೋಗದ ಅಧಿಕಾರಿಗಳು ದೋಷಗಳನ್ನು ಪರಿಶೀಲಿಸಿ ಯಂತ್ರಗಳನ್ನು ಬದಲಾಯಿಸುವಂತೆ ಒತ್ತಾಯಿಸಿದ್ದಾರೆ.

ಎರಡೂ ಬಾರಿ ಪರಿಶೀಲಿಸಿದಾಗಲೂ ಮೂರು ವಿವಿ ಪ್ಯಾಟ್‌ಗಳು ಬಿಜೆಪಿ ಚಿಹ್ನೆಯಿರುವ ತಲಾ ಒಂದೊಂದು ಹೆಚ್ಚುವರಿ ಸ್ಲಿಪ್ ಮುದ್ರಿಸಿವೆ. ಕಾಂಗ್ರೆಸ್ ಅಭ್ಯರ್ಥಿ ರಾಜಮೋಹನ್ ಉನ್ನಿತಾನ್ ಅವರ ಚುನಾವಣಾ ಏಜೆಂಟ್ ನಾಸರ್ ಚೆರ್ಕಳಂ ಅವರ ಪ್ರಕಾರ, ಮೂರನೇ ಸುತ್ತಿನ ಪರಿಶೀಲನೆ ವೇಳೆ ಸಮಸ್ಯೆಯನ್ನು ಸರಿಪಡಿಸಲಾಗಿದೆ.

ಕಾಸರಗೋಡು ಸರ್ಕಾರಿ ಕಾಲೇಜಿನಲ್ಲಿ ಇರಿಸಲಾಗಿರುವ ಇವಿಎಂಗಳಲ್ಲಿ ‘ನಾನ್ ಆಫ್ ದಿ ಎಬವ್’ (ನೋಟಾ) ಆಯ್ಕೆ ಸೇರಿದಂತೆ 10 ಅಭ್ಯರ್ಥಿಗಳ ಹೆಸರಿತ್ತು. ಒಟ್ಟು 10 ಟೆಸ್ಟ್ ವಿವಿಪ್ಯಾಟ್‌ಗಳ ಪೈಕಿ
ಮೂರು ವಿವಿ ಪ್ಯಾಟ್‌ಗಳು ‘ಟೆಸ್ಟ್ ಪ್ರಿಂಟ್’ಗಳನ್ನು ಮುದ್ರಿಸಿದ್ದವು. ಈ ಎಲ್ಲಾ ಮೂರು ಮುದ್ರಣಗಳ ಮೇಲೆ ಬಿಜೆಪಿಯ ಕಮಲದ ಚಿಹ್ನೆ ಇತ್ತು ಮತ್ತು ‘ಎಣಿಕೆ ಮಾಡಬಾರದು’ ಎಂದು ಸಣ್ಣ ಅಕ್ಷರಗಳಲ್ಲಿ ಬರೆಯಲಾಗಿತ್ತು ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ವಿವಿಪ್ಯಾಟ್ ಎಂಬುವುದು ಇವಿಎಂಗೆ ಸಂಪರ್ಕಗೊಂಡಿರುವ ಯಂತ್ರವಾಗಿದ್ದು, ಒಬ್ಬ ವ್ಯಕ್ತಿಯು ಒಮ್ಮೆ ಮತ ಚಲಾಯಿಸಿದ ನಂತರ, ಕಾಗದದ ಟ್ರಯಲ್ ಅಥವಾ ಸ್ಲಿಪ್ ಮುದ್ರಣಗೊಳ್ಳುವ ಮೂಲಕ ವಿವಿಪ್ಯಾಟ್‌ನಲ್ಲಿನಲ್ಲಿ ಮತವೂ ದಾಖಲಾಗುತ್ತದೆ. ಸ್ಲಿಪ್‌ಗಳನ್ನು ಸಾಮಾನ್ಯವಾಗಿ ಮತದಾರರಿಗೆ ಹಸ್ತಾಂತರಿಸುವುದಿಲ್ಲ. ಆದರೆ, ಕೇವಲ ಏಳು ಸೆಕೆಂಡುಗಳ ಕಾಲ ಬೆಳಗುವ ಸಣ್ಣ ಮಸೂರದ ಮೂಲಕ ಅದನ್ನು ತೋರಿಸಲಾಗುತ್ತದೆ. ಅಣಕು ಮತದಾನದ ಸಮಯದಲ್ಲಿ, ಸ್ಲಿಪ್‌ಗಳನ್ನು ಮುದ್ರಿಸಲಾಗುತ್ತದೆ ಮತ್ತು ಏಜೆಂಟ್‌ಗಳು ಅವುಗಳನ್ನು ವೈಯಕ್ತಿಕವಾಗಿ ಪರಿಶೀಲಿಸುತ್ತಾರೆ.

‘ಎಣಿಕೆ ಮಾಡಬಾರದು’ ಎಂಬ ಬರಹದೊಂದಿಗೆ ಬಿಜೆಪಿಯ ಚಿಹ್ನೆ ಸಹಿತ ಮುದ್ರಿತವಾಗಿರುವ ಹೆಚ್ಚುವರಿ ಸ್ಲಿಪ್‌ಗಳು ಸ್ವಲ್ಪ ದೊಡ್ಡದಾಗಿ ಬಂದಿದ್ದರೂ, ನಿಜವಾದ ಚುನಾವಣೆಯ ಸಮಯದಲ್ಲಿ ಈ ಸ್ಲಿಪ್‌ಗಳು ತಪ್ಪಾಗಿ ಎಣಿಕೆಯಾಗುವ ಸಾಧ್ಯತೆಗಳಿವೆ ಎಂದು ದೂರುದಾರರು ವಾದಿಸಿದ್ದಾರೆ.

“ಟೆಸ್ಟ್ ಸ್ಲಿಪ್ ಸಾಮಾನ್ಯ ವಿವಿಪ್ಯಾಟ್ ಸ್ಲಿಪ್‌ಗಿಂತ ಗಾತ್ರದಲ್ಲಿ ಸ್ವಲ್ಪ ದೊಡ್ಡದಾಗಿದೆ. ಬಿಜೆಪಿಯ ಚಹ್ನೆಯಲ್ಲಿ ಬಂದ ಸ್ಲಿಪ್‌ಗಳು ದೊಡ್ಡದಾಗಿಯೇ ಇತ್ತು. ಆದರೆ, ನನ್ನ ಪ್ರಶ್ನೆ, ಈ ಟೆಸ್ಟ್ ಸ್ಲಿಪ್ ಏಕೆ ಬರಬೇಕು? ಅದು ಕೂಡ ಬಿಜೆಪಿಯ ಚಿಹ್ನೆಯೊಂದಿಗೆ? ಸ್ಲಿಪ್‌ನಲ್ಲಿ ‘ಎಣಿಸಬಾರದು’ ಎಂದು ಬರೆದರೂ ಪದಗಳು ಚಿಕ್ಕ ಅಕ್ಷರ ಶೈಲಿಯಲ್ಲಿವೆ. ನಿಜವಾದ ಚುನಾವಣೆಯ ಸಮಯದಲ್ಲಿ ಇಂತಹ ಸ್ಲಿಪ್‌ಗಳು ಎಣಿಸಿದರೆ ಏನಾಗಬಹುದು?” ಎಂದು ಕಾಂಗ್ರೆಸ್‌ ಅಭ್ಯರ್ಥಿಯ ಏಜೆಂಟ್ ಜಮಾಲ್ ಪ್ರಶ್ನಿಸಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ತಿಳಿಸಿದೆ.

ಪರೀಶೀಲನೆಗೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್:

ಕಾಸರಗೋಡಿನಲ್ಲಿ ವಿವಿಪ್ಯಾಟ್ ಪರಿಶೀಲನೆ ವೇಳೆ ಬಿಜೆಪಿ ಚಿಹ್ನೆಯ ಸ್ಲಿಪ್ ಬಂದಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಪರಿಶೀಲನೆ ನಡೆಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ನಿರ್ದೇಶನ ನೀಡಿದೆ ಎಂದು ಬಾರ್‌ & ಬೆಂಚ್ ವರದಿ ಮಾಡಿದೆ.

ಇವಿಎಂನಲ್ಲಿ ಚಲಾವಣೆಯಾದ ಎಲ್ಲಾ ಮತಗಳನ್ನು ವಿವಿಪ್ಯಾಟ್ ಸ್ಲಿಪ್‌ಗಳೊಂದಿಗೆ ತಾಳೆ ಮಾಡಿ ನೋಡುವಂತೆ ನಿರ್ದೇಶನ ನೀಡಲು ಕೋರಿ ಎಡಿಆರ್ ಮತ್ತು ಇತರರು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಈಗಾಗಲೇ ವಿಚಾರಣೆ ನಡೆಸುತ್ತಿದೆ. ಎಡಿಆರ್‌ ಪರ ಹಿರಿಯ ವಕೀಲ ಪ್ರಶಾಂತ್ ಭೂಷಣ್ ವಾದಿಸುತ್ತಿದ್ದಾರೆ.

ಇಂದು (ಏ.18) ವಿಚಾರಣೆ ವೇಳೆ ವಕೀಲ ಪ್ರಶಾಂತ್ ಭೂಷಣ್ ಅವರು ಕಾಸರಗೋಡಿನ ವಿಚಾರವನ್ನು ನ್ಯಾಯಪೀಠದ ಗಮನಕ್ಕೆ ತಂದಿದ್ದಾರೆ. ಈ ಹಿನ್ನೆಲೆ ಪೀಠ ಈ ಕುರಿತು ಪರಿಶೀಲನೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶಿಸಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಮೋದಿಯವರ ಹಲವಾರು ಹೇಳಿಕೆಗಳಿಂದ ಮಾದರಿ ನೀತಿ ಸಂಹಿತೆ ಉಲ್ಲಂಘನೆ: ಸೀತಾರಾಂ ಯೆಚೂರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...