Homeಮುಖಪುಟಕಾಸರಗೋಡು: ಅಣಕು ಮತದಾನದ ವೇಳೆ ಬಿಜೆಪಿ ಚಿಹ್ನೆಯೊಂದಿಗೆ ಹೆಚ್ಚುವರಿ ಸ್ಲಿಪ್ ಮುದ್ರಿಸಿದ ವಿವಿಪ್ಯಾಟ್

ಕಾಸರಗೋಡು: ಅಣಕು ಮತದಾನದ ವೇಳೆ ಬಿಜೆಪಿ ಚಿಹ್ನೆಯೊಂದಿಗೆ ಹೆಚ್ಚುವರಿ ಸ್ಲಿಪ್ ಮುದ್ರಿಸಿದ ವಿವಿಪ್ಯಾಟ್

- Advertisement -
- Advertisement -

ಕೇರಳದ ಕಾಸರಗೋಡಿನಲ್ಲಿ ಬುಧವಾರ (ಏ.17) ನಡೆದ ಅಣಕು ಮತದಾನದ ಸಂದರ್ಭದಲ್ಲಿ ಮೂರು ವಿವಿ ಪ್ಯಾಟ್ (ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್) ಯಂತ್ರಗಳು ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಮಲದ ಚಿಹ್ನೆಯೊಂದಿಗೆ ತಲಾ ಒಂದು ಹೆಚ್ಚುವರಿ ಸ್ಲಿಪ್ ಅನ್ನು ಮುದ್ರಿಸಿವೆ.

ವಿದ್ಯುನ್ಮಾನ ಮತಯಂತ್ರಗಳು (ಇವಿಎಂಗಳು) ‘ಮನುಷ್ಯನ ಹಸ್ತಕ್ಷೇಪ’ ಇಲ್ಲದಿದ್ದರೆ ನಿಖರವಾದ ಫಲಿತಾಂಶಗಳನ್ನು ನೀಡುತ್ತವೆ ಎಂದು ಸುಪ್ರೀಂ ಕೋರ್ಟ್ ಹೇಳಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ.

ವಿವಿಪ್ಯಾಟ್ ಲೋಪದ ಬಗ್ಗೆ ಕಾಂಗ್ರೆಸ್ ಮತ್ತು ಸಿಪಿಐ (ಎಂ) ಪ್ರಶ್ನೆ ಎತ್ತಿದ್ದು, ಚುನಾವಣಾ ಆಯೋಗದ ಅಧಿಕಾರಿಗಳು ದೋಷಗಳನ್ನು ಪರಿಶೀಲಿಸಿ ಯಂತ್ರಗಳನ್ನು ಬದಲಾಯಿಸುವಂತೆ ಒತ್ತಾಯಿಸಿದ್ದಾರೆ.

ಎರಡೂ ಬಾರಿ ಪರಿಶೀಲಿಸಿದಾಗಲೂ ಮೂರು ವಿವಿ ಪ್ಯಾಟ್‌ಗಳು ಬಿಜೆಪಿ ಚಿಹ್ನೆಯಿರುವ ತಲಾ ಒಂದೊಂದು ಹೆಚ್ಚುವರಿ ಸ್ಲಿಪ್ ಮುದ್ರಿಸಿವೆ. ಕಾಂಗ್ರೆಸ್ ಅಭ್ಯರ್ಥಿ ರಾಜಮೋಹನ್ ಉನ್ನಿತಾನ್ ಅವರ ಚುನಾವಣಾ ಏಜೆಂಟ್ ನಾಸರ್ ಚೆರ್ಕಳಂ ಅವರ ಪ್ರಕಾರ, ಮೂರನೇ ಸುತ್ತಿನ ಪರಿಶೀಲನೆ ವೇಳೆ ಸಮಸ್ಯೆಯನ್ನು ಸರಿಪಡಿಸಲಾಗಿದೆ.

ಕಾಸರಗೋಡು ಸರ್ಕಾರಿ ಕಾಲೇಜಿನಲ್ಲಿ ಇರಿಸಲಾಗಿರುವ ಇವಿಎಂಗಳಲ್ಲಿ ‘ನಾನ್ ಆಫ್ ದಿ ಎಬವ್’ (ನೋಟಾ) ಆಯ್ಕೆ ಸೇರಿದಂತೆ 10 ಅಭ್ಯರ್ಥಿಗಳ ಹೆಸರಿತ್ತು. ಒಟ್ಟು 10 ಟೆಸ್ಟ್ ವಿವಿಪ್ಯಾಟ್‌ಗಳ ಪೈಕಿ
ಮೂರು ವಿವಿ ಪ್ಯಾಟ್‌ಗಳು ‘ಟೆಸ್ಟ್ ಪ್ರಿಂಟ್’ಗಳನ್ನು ಮುದ್ರಿಸಿದ್ದವು. ಈ ಎಲ್ಲಾ ಮೂರು ಮುದ್ರಣಗಳ ಮೇಲೆ ಬಿಜೆಪಿಯ ಕಮಲದ ಚಿಹ್ನೆ ಇತ್ತು ಮತ್ತು ‘ಎಣಿಕೆ ಮಾಡಬಾರದು’ ಎಂದು ಸಣ್ಣ ಅಕ್ಷರಗಳಲ್ಲಿ ಬರೆಯಲಾಗಿತ್ತು ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ವಿವಿಪ್ಯಾಟ್ ಎಂಬುವುದು ಇವಿಎಂಗೆ ಸಂಪರ್ಕಗೊಂಡಿರುವ ಯಂತ್ರವಾಗಿದ್ದು, ಒಬ್ಬ ವ್ಯಕ್ತಿಯು ಒಮ್ಮೆ ಮತ ಚಲಾಯಿಸಿದ ನಂತರ, ಕಾಗದದ ಟ್ರಯಲ್ ಅಥವಾ ಸ್ಲಿಪ್ ಮುದ್ರಣಗೊಳ್ಳುವ ಮೂಲಕ ವಿವಿಪ್ಯಾಟ್‌ನಲ್ಲಿನಲ್ಲಿ ಮತವೂ ದಾಖಲಾಗುತ್ತದೆ. ಸ್ಲಿಪ್‌ಗಳನ್ನು ಸಾಮಾನ್ಯವಾಗಿ ಮತದಾರರಿಗೆ ಹಸ್ತಾಂತರಿಸುವುದಿಲ್ಲ. ಆದರೆ, ಕೇವಲ ಏಳು ಸೆಕೆಂಡುಗಳ ಕಾಲ ಬೆಳಗುವ ಸಣ್ಣ ಮಸೂರದ ಮೂಲಕ ಅದನ್ನು ತೋರಿಸಲಾಗುತ್ತದೆ. ಅಣಕು ಮತದಾನದ ಸಮಯದಲ್ಲಿ, ಸ್ಲಿಪ್‌ಗಳನ್ನು ಮುದ್ರಿಸಲಾಗುತ್ತದೆ ಮತ್ತು ಏಜೆಂಟ್‌ಗಳು ಅವುಗಳನ್ನು ವೈಯಕ್ತಿಕವಾಗಿ ಪರಿಶೀಲಿಸುತ್ತಾರೆ.

‘ಎಣಿಕೆ ಮಾಡಬಾರದು’ ಎಂಬ ಬರಹದೊಂದಿಗೆ ಬಿಜೆಪಿಯ ಚಿಹ್ನೆ ಸಹಿತ ಮುದ್ರಿತವಾಗಿರುವ ಹೆಚ್ಚುವರಿ ಸ್ಲಿಪ್‌ಗಳು ಸ್ವಲ್ಪ ದೊಡ್ಡದಾಗಿ ಬಂದಿದ್ದರೂ, ನಿಜವಾದ ಚುನಾವಣೆಯ ಸಮಯದಲ್ಲಿ ಈ ಸ್ಲಿಪ್‌ಗಳು ತಪ್ಪಾಗಿ ಎಣಿಕೆಯಾಗುವ ಸಾಧ್ಯತೆಗಳಿವೆ ಎಂದು ದೂರುದಾರರು ವಾದಿಸಿದ್ದಾರೆ.

“ಟೆಸ್ಟ್ ಸ್ಲಿಪ್ ಸಾಮಾನ್ಯ ವಿವಿಪ್ಯಾಟ್ ಸ್ಲಿಪ್‌ಗಿಂತ ಗಾತ್ರದಲ್ಲಿ ಸ್ವಲ್ಪ ದೊಡ್ಡದಾಗಿದೆ. ಬಿಜೆಪಿಯ ಚಹ್ನೆಯಲ್ಲಿ ಬಂದ ಸ್ಲಿಪ್‌ಗಳು ದೊಡ್ಡದಾಗಿಯೇ ಇತ್ತು. ಆದರೆ, ನನ್ನ ಪ್ರಶ್ನೆ, ಈ ಟೆಸ್ಟ್ ಸ್ಲಿಪ್ ಏಕೆ ಬರಬೇಕು? ಅದು ಕೂಡ ಬಿಜೆಪಿಯ ಚಿಹ್ನೆಯೊಂದಿಗೆ? ಸ್ಲಿಪ್‌ನಲ್ಲಿ ‘ಎಣಿಸಬಾರದು’ ಎಂದು ಬರೆದರೂ ಪದಗಳು ಚಿಕ್ಕ ಅಕ್ಷರ ಶೈಲಿಯಲ್ಲಿವೆ. ನಿಜವಾದ ಚುನಾವಣೆಯ ಸಮಯದಲ್ಲಿ ಇಂತಹ ಸ್ಲಿಪ್‌ಗಳು ಎಣಿಸಿದರೆ ಏನಾಗಬಹುದು?” ಎಂದು ಕಾಂಗ್ರೆಸ್‌ ಅಭ್ಯರ್ಥಿಯ ಏಜೆಂಟ್ ಜಮಾಲ್ ಪ್ರಶ್ನಿಸಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ತಿಳಿಸಿದೆ.

ಪರೀಶೀಲನೆಗೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್:

ಕಾಸರಗೋಡಿನಲ್ಲಿ ವಿವಿಪ್ಯಾಟ್ ಪರಿಶೀಲನೆ ವೇಳೆ ಬಿಜೆಪಿ ಚಿಹ್ನೆಯ ಸ್ಲಿಪ್ ಬಂದಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಪರಿಶೀಲನೆ ನಡೆಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ನಿರ್ದೇಶನ ನೀಡಿದೆ ಎಂದು ಬಾರ್‌ & ಬೆಂಚ್ ವರದಿ ಮಾಡಿದೆ.

ಇವಿಎಂನಲ್ಲಿ ಚಲಾವಣೆಯಾದ ಎಲ್ಲಾ ಮತಗಳನ್ನು ವಿವಿಪ್ಯಾಟ್ ಸ್ಲಿಪ್‌ಗಳೊಂದಿಗೆ ತಾಳೆ ಮಾಡಿ ನೋಡುವಂತೆ ನಿರ್ದೇಶನ ನೀಡಲು ಕೋರಿ ಎಡಿಆರ್ ಮತ್ತು ಇತರರು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಈಗಾಗಲೇ ವಿಚಾರಣೆ ನಡೆಸುತ್ತಿದೆ. ಎಡಿಆರ್‌ ಪರ ಹಿರಿಯ ವಕೀಲ ಪ್ರಶಾಂತ್ ಭೂಷಣ್ ವಾದಿಸುತ್ತಿದ್ದಾರೆ.

ಇಂದು (ಏ.18) ವಿಚಾರಣೆ ವೇಳೆ ವಕೀಲ ಪ್ರಶಾಂತ್ ಭೂಷಣ್ ಅವರು ಕಾಸರಗೋಡಿನ ವಿಚಾರವನ್ನು ನ್ಯಾಯಪೀಠದ ಗಮನಕ್ಕೆ ತಂದಿದ್ದಾರೆ. ಈ ಹಿನ್ನೆಲೆ ಪೀಠ ಈ ಕುರಿತು ಪರಿಶೀಲನೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶಿಸಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಮೋದಿಯವರ ಹಲವಾರು ಹೇಳಿಕೆಗಳಿಂದ ಮಾದರಿ ನೀತಿ ಸಂಹಿತೆ ಉಲ್ಲಂಘನೆ: ಸೀತಾರಾಂ ಯೆಚೂರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...