Homeಮುಖಪುಟಮಾದ್ಯಮ ಪ್ರತಿನಿಧಿಗಳಿಂದ ಎಲೆಕ್ಟ್ರಾನಿಕ್ ಸಾಧನಗಳ ಜಪ್ತಿ: ಮಾರ್ಗಸೂಚಿ ರಚಿಸಲು ಸುಪ್ರೀಂಕೋರ್ಟ್ ಸೂಚನೆ

ಮಾದ್ಯಮ ಪ್ರತಿನಿಧಿಗಳಿಂದ ಎಲೆಕ್ಟ್ರಾನಿಕ್ ಸಾಧನಗಳ ಜಪ್ತಿ: ಮಾರ್ಗಸೂಚಿ ರಚಿಸಲು ಸುಪ್ರೀಂಕೋರ್ಟ್ ಸೂಚನೆ

- Advertisement -
- Advertisement -

ವ್ಯಕ್ತಿಗಳು, ವಿಶೇಷವಾಗಿ ಮಾದ್ಯಮ ಪ್ರತಿನಿಧಿಗಳಿಂದ ಫೋನ್‌ಗಳು ಮತ್ತು ಲ್ಯಾಪ್‌ಟಾಪ್‌ಗಳಂತಹ ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಳ್ಳುವುದಕ್ಕೆ ಸಂಬಂಧಿಸಿ ಮಾರ್ಗಸೂಚಿಗಳನ್ನು ಜಾರಿಗೆ ತರುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರಕಾರಕ್ಕೆ ಸೂಚಿಸಿದೆ.

ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಸುಧಾಂಶು ಧುಲಿಯಾ ಅವರ ಪೀಠವು, ಕೇಂದ್ರದ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ಅವರಲ್ಲಿ ತನಿಖಾ ಸಂಸ್ಥೆಗಳ ಅಧಿಕಾರ ವ್ಯಾಪ್ತಿಗೆ ಸಂಬಂಧಿಸಿದಂತೆ ಗಂಭೀರ ಕಳವಳವನ್ನು ವ್ಯಕ್ತಪಡಿಸಿದ್ದಾರೆ. ಈ ವಿಷಯ ಗಂಭೀರವಾದುದು ಎಂದು ಹೇಳಿರುವ ಸುಪ್ರೀಂ ಕೋರ್ಟ್, ಕೇಂದ್ರದ ತನಿಖಾ ಸಂಸ್ಥೆಗಳಿಗೆ ಪರಮಾಧಿಕಾರ ನೀಡಿರುವುದು ಕಳವಳಕಾರಿ ಎಂದು ಹೇಳಿದೆ.

ಸರ್ವ ರೀತಿಯ ಅಧಿಕಾರವನ್ನು ತನಿಖಾ ಸಂಸ್ಥೆಗಳಿಗೆ ನೀಡಿರುವುದನ್ನು ಒಪ್ಪಿಕೊಳ್ಳುವುದು ನನಗೆ ತುಂಬಾ ಕಷ್ಟಕರವಾಗಿದೆ. ಇದು ತುಂಬಾ ಅಪಾಯಕಾರಿ ಎಂದು ನಾನು ಭಾವಿಸುತ್ತೇನೆ ಎಂದು ನ್ಯಾಯಮೂರ್ತಿ ಕೌಲ್ ಹೇಳಿದ್ದಾರೆ.

ಫೌಂಡೇಶನ್ ಆಫ್ ಮೀಡಿಯಾ ಪ್ರೊಫೆಷನಲ್ಸ್ ಪರವಾಗಿ ಕೋರ್ಟ್‌ಗೆ ಹಾಜರಾದ ವಕೀಲರು, ತನಿಖಾ ಸಂಸ್ಥೆಗಳು ಎಲೆಕ್ಟ್ರಾನಿಕ್ ಸಾಧನಗಳನ್ನು ಯಾವಾಗ ಮತ್ತು ಹೇಗೆ ವಶಪಡಿಸಿಕೊಳ್ಳುತ್ತವೆ ಎಂಬುದಕ್ಕೆ ಸಂಬಂಧಿಸಿದಂತೆ ಯಾವುದೇ ಮಾರ್ಗಸೂಚಿಗಳಿಲ್ಲದ ಕಾರಣ ಇದು ಒಂದು ಪ್ರಮುಖ ವಿಷಯವಾಗಿದೆ ಎಂದು ಹೇಳಿದ್ದಾರೆ.

ಈ ವಿಚಾರದಲ್ಲಿ ಜಟಿಲವಾದ ಕಾನೂನು ಸಮಸ್ಯೆಗಳು ತಲೆದೋರಿರುವುದರಿಂದ ಈ ವಿಚಾರದಲ್ಲಿ ಸ್ವಲ್ಪ ಕಾಲಾವಕಾಶ ನೀಡುವಂತೆ ರಾಜು ನ್ಯಾಯಾಲಯವನ್ನು ಕೋರಿದ್ದಾರೆ. ಪದೇಪದೇ ಅಪರಾಧ ಕೃತ್ಯಗಳನ್ನು ಎಸಗುವವರು ಅಥವಾ ದೇಶ ವಿರೋಧಿ ಶಕ್ತಿಗಳು ಎಲೆಕ್ಟ್ರಾನಿಕ್‌ ಸಾಧನಗಳಲ್ಲಿ ಮಹತ್ವದ ದತ್ತಾಂಶಗಳನ್ನು ಮುಚ್ಚಿಟ್ಟಿರುತ್ತಾರೆ. ಇಂಥ ಸಾಧನಗಳನ್ನು ಜಪ್ತಿ ಮಾಡುವುದು ಅಗತ್ಯವಾಗುತ್ತದೆ ಎಂದು ಎಸ್.ವಿ.ರಾಜು ನ್ಯಾಯಪೀಠಕ್ಕೆ ತಿಳಿಸಿದರು.

ಅರ್ಜಿದಾರರ ವಕೀಲರು ರಾಜ್ಯದ ಅಧಿಕಾರ ಮತ್ತು ಖಾಸಗಿತನದ ಹಕ್ಕು ಸೇರಿದಂತೆ ವ್ಯಕ್ತಿಯ ಹಕ್ಕುಗಳಿಗೆ ಸಂಬಂಧಿಸಿದ ಸಮಸ್ಯೆಯನ್ನು ಕೋರ್ಟ್‌ ಗಮನಕ್ಕೆ ತಂದಿದ್ದಾರೆ. ಹಲವು ಮಾದ್ಯಮ ಪ್ರತಿನಿಧಿಗಳು ಸುದ್ದಿಗಳಿಗೆ ಸಂಬಂಧಿಸಿ ತಮ್ಮದೇ ಆದ ಮೂಲಗಳನ್ನು ಹೊಂದಿರುತ್ತಾರೆ. ಹೀಗಾಗಿ ಅವರ ಸಾಧನಗಳನ್ನು ಜಪ್ತಿ ಮಾಡುವುದು ಗಂಭೀರ ವಿಷಯ ಎಂದು ಹೇಳಿದ ನ್ಯಾಯಪೀಠ, ಎಲ್ಲ ಸಾಧನಗಳನ್ನು ನೀವು ವಶಕ್ಕೆ ಪಡೆದರೆ ಸಮಸ್ಯೆಯಾಗುತ್ತದೆ. ಈ ಕುರಿತು ಮಾರ್ಗಸೂಚಿಗಳನ್ನು ರಚಿಸಲೇಬೇಕು ಎಂದು ಹೇಳಿದೆ.

ಎರಡೂ ಪಕ್ಷದವರ ಹಿತಾಸಕ್ತಿ ರಕ್ಷಣೆಯಾಗಬೇಕು. ಯಾವುದೇ ದುಷ್ಪರಿಣಾಮವೂ ಉಂಟಾಗಬಾರದು. ಹೀಗಾಗಿ ಯಾವ ರೀತಿಯ ಮಾರ್ಗಸೂಚಿಗಳಿರಬೇಕು ಎಂಬ ಬಗ್ಗೆ ಕೇಂದ್ರ ಸರ್ಕಾರ ವಿಶ್ಲೇಷಣೆ ನಡೆಸಬೇಕು. ಮಾದ್ಯಮ  ಪ್ರತಿನಿಧಿಗಳ ಹಿತಾಸಕ್ತಿಗಳನ್ನು ರಕ್ಷಿಸಲು ಸರಿಯಾದ ಮಾರ್ಗಸೂಚಿಗಳ ಅಗತ್ಯವಿದೆ ಎಂದು ಸುಪ್ರೀಂಕೋರ್ಟ್‌ ಹೇಳಿದೆ. ಈ ವಿಷಯದ  ಮುಂದಿನ ವಿಚಾರಣೆ ಡಿಸೆಂಬರ್‌ನಲ್ಲಿ ನಡೆಯಲಿದೆ.

ಇದನ್ನು ಓದಿ: ಅಲಿಘರ್ ನಗರದ ಹೆಸರು ಹರಿಘರ್ ಎಂದು ಬದಲಾಯಿಸಲು ಅನುಮೋದನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...