Homeಮುಖಪುಟಸಾಕ್ಷ್ಯಾಧಾರವಿಲ್ಲದೆ ಆರೋಪ: ಇಡಿಗೆ ಸುಪ್ರೀಂ ಕೋರ್ಟ್ ಛೀಮಾರಿ

ಸಾಕ್ಷ್ಯಾಧಾರವಿಲ್ಲದೆ ಆರೋಪ: ಇಡಿಗೆ ಸುಪ್ರೀಂ ಕೋರ್ಟ್ ಛೀಮಾರಿ

- Advertisement -
- Advertisement -

ಛತ್ತೀಸ್‌ಗಢ ಮದ್ಯ ಹಗರಣ ಪ್ರಕರಣದ ಆರೋಪಿಯ ವಿರುದ್ಧ ‘ಯಾವುದೇ ಸಾಕ್ಷ್ಯಗಳಿಲ್ಲದೆ’ ಆರೋಪಗಳನ್ನು ಮಾಡಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಸೋಮವಾರ ಜಾರಿ ನಿರ್ದೇಶನಾಲಯವನ್ನು (ಇಡಿ) ತರಾಟೆಗೆ ತೆಗೆದುಕೊಂಡಿದ್ದು, “ನಿಮಗೆ ಇದೇ ರೂಢಿಯಾಗಿದೆ” ಎಂದು ಛೀಮಾರಿ ಹಾಕಿದೆ.

ಛತ್ತೀಸ್‌ಗಢದಲ್ಲಿ ನಡೆದ 2,000 ಕೋಟಿ ರೂಪಾಯಿಗಳ ಮದ್ಯ ಹಗರಣದಲ್ಲಿ ಜಾಮೀನು ಕೋರಿ ಅರವಿಂದ್ ಸಿಂಗ್ ಎಂಬವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ವಿಚಾರಣೆ ನಡೆಸಿತು.

“ಇದು ಹಲವಾರು ಪ್ರಕರಣಗಳಲ್ಲಿ ಜಾರಿ ನಿರ್ದೇಶನಾಲಯ ಅಳವಡಿಸಿಕೊಂಡ ಮಾದರಿಯಾಗಿದೆ. ನೀವು ಯಾವುದೇ ಪುರಾವೆಗಳಿಲ್ಲದೆ ಆರೋಪಗಳನ್ನು ಮಾಡುತ್ತೀರಿ. ಈ ರೀತಿ ಪ್ರಾಸಿಕ್ಯೂಷನ್ ನ್ಯಾಯಾಲಯದ ಮುಂದೆ ನಿಲ್ಲುವುದಿಲ್ಲ” ಎಂದು ಪೀಠ ಹೇಳಿದೆ.

ವಿಚಾರಣೆಯ ಸಮಯದಲ್ಲಿ, ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ ರಾಜು ಅವರು, ವಿಕಾಸ್ ಅಗರ್ವಾಲ್ ಎಂಬ ಇನ್ನೊಬ್ಬ ವ್ಯಕ್ತಿಯೊಂದಿಗೆ ಸಿಂಗ್ 40 ಕೋಟಿ ರೂ.ಗಳನ್ನು ಸಂಪಾದಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಅಗರ್ವಾಲ್ ಅವರನ್ನು ಆರೋಪಿಯನ್ನಾಗಿ ಮಾಡಲಾಗಿದೆಯೇ ಎಂದು ನ್ಯಾಯಾಲಯ ಕೇಳಿದಾಗ, ಅವರು ತಲೆಮರೆಸಿಕೊಂಡಿದ್ದಾರೆ ಎಂದು ರಾಜು ಅವರು ಉತ್ತರಿಸಿದ್ದಾರೆ.

“ಅವರು (ಸಿಂಗ್) 40 ಕೋಟಿ ರೂ. ಗಳಿಸಿದ್ದಾರೆ ಎಂದು ನೀವು ನಿರ್ದಿಷ್ಟ ಆರೋಪ ಮಾಡಿದ್ದೀರಿ. ಈಗ ನಿಮಗೆ ಈ ವ್ಯಕ್ತಿಗೆ ಈ ಕಂಪನಿ ಅಥವಾ ಯಾವುದೇ ಇತರ ಕಂಪನಿಯೊಂದಿಗೆ ಸಂಪರ್ಕವಿದೆಯೇ ಎಂದು ತೋರಿಸಲು ಸಾಧ್ಯವಾಗುತ್ತಿಲ್ಲ” ಎಂದು ಪೀಠ ಗರಂ ಆಗಿದೆ.

“ಅವರು ಆ ಕಂಪನಿಗಳ ನಿರ್ದೇಶಕರೇ, ಬಹುಪಾಲು ಷೇರುದಾರರೇ, ವ್ಯವಸ್ಥಾಪಕ ನಿರ್ದೇಶಕರೇ ಎಂಬುದನ್ನು ನೀವು ಹೇಳಬೇಕು. ಏನಾದರೂ ಇರಬೇಕು” ಎಂದಿದೆ.

ಇದಕ್ಕೆ ಉತ್ತರಿಸಿದೆ ರಾಜು ಅವರು, ಒಬ್ಬ ವ್ಯಕ್ತಿಯು ಕಂಪನಿಯನ್ನು ನಿಯಂತ್ರಿಸಬಹುದು. ಆದರೆ ಕಂಪನಿಯ ನಡವಳಿಕೆಗೆ ಅವನು ಜವಾಬ್ದಾರನಾಗಿರಬೇಕಾಗಿಲ್ಲ ಎಂದು ಹೇಳಿದ್ದಾರೆ.

ಏಪ್ರಿಲ್ 28 ರಂದು ಛತ್ತೀಸ್‌ಗಢ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದ ಸುಪ್ರೀಂ ಕೋರ್ಟ್, ರಾಜ್ಯ ಅಧಿಕಾರಿಗಳು ದಾಖಲಿಸಿರುವ ಮದ್ಯ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಎಷ್ಟು ಕಾಲ ಜೈಲಿನಲ್ಲಿ ಇಡುತ್ತೀರಿ? ಎಂದು ಕೇಳಿತ್ತು.

ಈ ಪ್ರಕರಣದಲ್ಲಿ ಮೂರು ಆರೋಪ ಪಟ್ಟಿಗಳನ್ನು ಸಲ್ಲಿಸಲಾಗಿದ್ದು, ತನಿಖೆ ಇನ್ನೂ ನಡೆಯುತ್ತಿದೆ ಎಂಬುವುದನ್ನು ನ್ಯಾಯಾಲಯ ಗಮನಿಸಿತ್ತು.

“ಮೂರು ಆರೋಪ ಪಟ್ಟಿಗಳನ್ನು ಸಲ್ಲಿಸಿದ ಬಳಿಕವೂ ತನಿಖೆ ನಡೆಯುತ್ತಿದೆ. ನೀವು ಆ ವ್ಯಕ್ತಿಯನ್ನು ಕಸ್ಟಡಿಯಲ್ಲಿ ಇರಿಸುವ ಮೂಲಕ ವಾಸ್ತವಿಕವಾಗಿ ಶಿಕ್ಷೆ ವಿಧಿಸುತ್ತಿದ್ದೀರಿ. ನೀವು ಪ್ರಕ್ರಿಯೆಯನ್ನು ಶಿಕ್ಷೆಯನ್ನಾಗಿ ಮಾಡಿದ್ದೀರಿ. ಇದು ಭಯೋತ್ಪಾದಕ ಅಥವಾ ತ್ರಿವಳಿ ಕೊಲೆಯ ಪ್ರಕರಣವಲ್ಲ” ಎಂದು ನ್ಯಾಯಪೀಠ ಮೌಖಿಕವಾಗಿ ಹೇಳಿತ್ತು.

ರಾಜ್ಯ ಸರ್ಕಾರ ಜಾಮೀನು ಅರ್ಜಿಗೆ ವಿರೋಧ ವ್ಯಕ್ತಪಡಿಸಿತ್ತು. ಪ್ರಕರಣದ ಇತರ ಆರೋಪಿಗಳೊಂದಿಗೆ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸುವ ಅಗತ್ಯವಿದೆ ಎಂದು ವಾದಿಸಿತ್ತು.

ಆರೋಪಿಗಳ ಪರವಾಗಿ ಹಾಜರಾದ ಹಿರಿಯ ವಕೀಲ ಸಿದ್ಧಾರ್ಥ್ ಅಗರ್ವಾಲ್, ಪ್ರಕರಣದಲ್ಲಿ ಮೂರು ಆರೋಪಪಟ್ಟಿಗಳನ್ನು ಸಲ್ಲಿಸಲಾಗಿದ್ದು, ಇನ್ನೂ ಆರೋಪಗಳನ್ನು ರೂಪಿಸಬೇಕಾಗಿದೆ ಎಂದು ವಾದಿಸಿದ್ದರು.

ಅರವಿಂದ್ ಸಿಂಗ್ ಮತ್ತು ಅಮಿತ್ ಸಿಂಗ್ ಅವರಿಗೆ ಮಾಜಿ ಅಬಕಾರಿ ಸಚಿವ ಕವಾಸಿ ಲಖ್ಮಾ ಅವರನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿ, ಮೇ 9ಕ್ಕೆ ವಿಚಾರಣೆಯನ್ನು ಮುಂದೂಡಿತ್ತು.

2019-22ರಲ್ಲಿ ರಾಜ್ಯ ಸರ್ಕಾರದ ಉನ್ನತ ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು ಮತ್ತು ರಾಜಕೀಯ ವ್ಯಕ್ತಿಗಳು ಜಂಟಿಯಾಗಿ ಈ ಹಗರಣವನ್ನು ಎಸಗಿದ್ದು, 2,000 ಕೋಟಿ ರೂ.ಗೂ ಹೆಚ್ಚು ಮೊತ್ತದ ಅಕ್ರಮ ನಡೆದಿದೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ.

ಈ ಹಣ ವರ್ಗಾವಣೆ ಪ್ರಕರಣವು 2022 ರಲ್ಲಿ ದೆಹಲಿಯ ನ್ಯಾಯಾಲಯದಲ್ಲಿ ಸಲ್ಲಿಸಲಾದ ಆದಾಯ ತೆರಿಗೆ ಇಲಾಖೆ ಆರೋಪಪಟ್ಟಿಯಿಂದ ಹುಟ್ಟಿಕೊಂಡಿದೆ.

ಸಿಎಸ್‌ಎಂಸಿಎಲ್ (ಮದ್ಯ ಖರೀದಿ ಮತ್ತು ಮಾರಾಟದ ರಾಜ್ಯ ಸಂಸ್ಥೆ) ನಿಂದ ಸಂಗ್ರಹಿಸಿದ ಪ್ರತಿ ಮದ್ಯದ ಮೇಲೆ ರಾಜ್ಯದ ಡಿಸ್ಟಿಲರಿಗಳಿಂದ ಲಂಚವನ್ನು ಪಡೆಯಲಾಗಿದೆ ಮತ್ತು ದೇಶೀಯ ಮದ್ಯವನ್ನು ಲೆಕ್ಕದಿಂದ ಹೊರಗಿಟ್ಟು ಮಾರಾಟ ಮಾಡಲಾಗಿದೆ ಎಂದು ಇಡಿ ಆರೋಪಿಸಿದೆ.

ನ್ಯಾಯಮೂರ್ತಿ ನಿವಾಸದಲ್ಲಿ ನಗದು ಪತ್ತೆ ಪ್ರಕರಣ: ತನಿಖಾ ವರದಿ ಸುಪ್ರಿಂಕೋರ್ಟ್‌ಗೆ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...