Homeಮುಖಪುಟಸಾಕ್ಷ್ಯಾಧಾರವಿಲ್ಲದೆ ಆರೋಪ: ಇಡಿಗೆ ಸುಪ್ರೀಂ ಕೋರ್ಟ್ ಛೀಮಾರಿ

ಸಾಕ್ಷ್ಯಾಧಾರವಿಲ್ಲದೆ ಆರೋಪ: ಇಡಿಗೆ ಸುಪ್ರೀಂ ಕೋರ್ಟ್ ಛೀಮಾರಿ

- Advertisement -
- Advertisement -

ಛತ್ತೀಸ್‌ಗಢ ಮದ್ಯ ಹಗರಣ ಪ್ರಕರಣದ ಆರೋಪಿಯ ವಿರುದ್ಧ ‘ಯಾವುದೇ ಸಾಕ್ಷ್ಯಗಳಿಲ್ಲದೆ’ ಆರೋಪಗಳನ್ನು ಮಾಡಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಸೋಮವಾರ ಜಾರಿ ನಿರ್ದೇಶನಾಲಯವನ್ನು (ಇಡಿ) ತರಾಟೆಗೆ ತೆಗೆದುಕೊಂಡಿದ್ದು, “ನಿಮಗೆ ಇದೇ ರೂಢಿಯಾಗಿದೆ” ಎಂದು ಛೀಮಾರಿ ಹಾಕಿದೆ.

ಛತ್ತೀಸ್‌ಗಢದಲ್ಲಿ ನಡೆದ 2,000 ಕೋಟಿ ರೂಪಾಯಿಗಳ ಮದ್ಯ ಹಗರಣದಲ್ಲಿ ಜಾಮೀನು ಕೋರಿ ಅರವಿಂದ್ ಸಿಂಗ್ ಎಂಬವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ವಿಚಾರಣೆ ನಡೆಸಿತು.

“ಇದು ಹಲವಾರು ಪ್ರಕರಣಗಳಲ್ಲಿ ಜಾರಿ ನಿರ್ದೇಶನಾಲಯ ಅಳವಡಿಸಿಕೊಂಡ ಮಾದರಿಯಾಗಿದೆ. ನೀವು ಯಾವುದೇ ಪುರಾವೆಗಳಿಲ್ಲದೆ ಆರೋಪಗಳನ್ನು ಮಾಡುತ್ತೀರಿ. ಈ ರೀತಿ ಪ್ರಾಸಿಕ್ಯೂಷನ್ ನ್ಯಾಯಾಲಯದ ಮುಂದೆ ನಿಲ್ಲುವುದಿಲ್ಲ” ಎಂದು ಪೀಠ ಹೇಳಿದೆ.

ವಿಚಾರಣೆಯ ಸಮಯದಲ್ಲಿ, ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ ರಾಜು ಅವರು, ವಿಕಾಸ್ ಅಗರ್ವಾಲ್ ಎಂಬ ಇನ್ನೊಬ್ಬ ವ್ಯಕ್ತಿಯೊಂದಿಗೆ ಸಿಂಗ್ 40 ಕೋಟಿ ರೂ.ಗಳನ್ನು ಸಂಪಾದಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಅಗರ್ವಾಲ್ ಅವರನ್ನು ಆರೋಪಿಯನ್ನಾಗಿ ಮಾಡಲಾಗಿದೆಯೇ ಎಂದು ನ್ಯಾಯಾಲಯ ಕೇಳಿದಾಗ, ಅವರು ತಲೆಮರೆಸಿಕೊಂಡಿದ್ದಾರೆ ಎಂದು ರಾಜು ಅವರು ಉತ್ತರಿಸಿದ್ದಾರೆ.

“ಅವರು (ಸಿಂಗ್) 40 ಕೋಟಿ ರೂ. ಗಳಿಸಿದ್ದಾರೆ ಎಂದು ನೀವು ನಿರ್ದಿಷ್ಟ ಆರೋಪ ಮಾಡಿದ್ದೀರಿ. ಈಗ ನಿಮಗೆ ಈ ವ್ಯಕ್ತಿಗೆ ಈ ಕಂಪನಿ ಅಥವಾ ಯಾವುದೇ ಇತರ ಕಂಪನಿಯೊಂದಿಗೆ ಸಂಪರ್ಕವಿದೆಯೇ ಎಂದು ತೋರಿಸಲು ಸಾಧ್ಯವಾಗುತ್ತಿಲ್ಲ” ಎಂದು ಪೀಠ ಗರಂ ಆಗಿದೆ.

“ಅವರು ಆ ಕಂಪನಿಗಳ ನಿರ್ದೇಶಕರೇ, ಬಹುಪಾಲು ಷೇರುದಾರರೇ, ವ್ಯವಸ್ಥಾಪಕ ನಿರ್ದೇಶಕರೇ ಎಂಬುದನ್ನು ನೀವು ಹೇಳಬೇಕು. ಏನಾದರೂ ಇರಬೇಕು” ಎಂದಿದೆ.

ಇದಕ್ಕೆ ಉತ್ತರಿಸಿದೆ ರಾಜು ಅವರು, ಒಬ್ಬ ವ್ಯಕ್ತಿಯು ಕಂಪನಿಯನ್ನು ನಿಯಂತ್ರಿಸಬಹುದು. ಆದರೆ ಕಂಪನಿಯ ನಡವಳಿಕೆಗೆ ಅವನು ಜವಾಬ್ದಾರನಾಗಿರಬೇಕಾಗಿಲ್ಲ ಎಂದು ಹೇಳಿದ್ದಾರೆ.

ಏಪ್ರಿಲ್ 28 ರಂದು ಛತ್ತೀಸ್‌ಗಢ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದ ಸುಪ್ರೀಂ ಕೋರ್ಟ್, ರಾಜ್ಯ ಅಧಿಕಾರಿಗಳು ದಾಖಲಿಸಿರುವ ಮದ್ಯ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಎಷ್ಟು ಕಾಲ ಜೈಲಿನಲ್ಲಿ ಇಡುತ್ತೀರಿ? ಎಂದು ಕೇಳಿತ್ತು.

ಈ ಪ್ರಕರಣದಲ್ಲಿ ಮೂರು ಆರೋಪ ಪಟ್ಟಿಗಳನ್ನು ಸಲ್ಲಿಸಲಾಗಿದ್ದು, ತನಿಖೆ ಇನ್ನೂ ನಡೆಯುತ್ತಿದೆ ಎಂಬುವುದನ್ನು ನ್ಯಾಯಾಲಯ ಗಮನಿಸಿತ್ತು.

“ಮೂರು ಆರೋಪ ಪಟ್ಟಿಗಳನ್ನು ಸಲ್ಲಿಸಿದ ಬಳಿಕವೂ ತನಿಖೆ ನಡೆಯುತ್ತಿದೆ. ನೀವು ಆ ವ್ಯಕ್ತಿಯನ್ನು ಕಸ್ಟಡಿಯಲ್ಲಿ ಇರಿಸುವ ಮೂಲಕ ವಾಸ್ತವಿಕವಾಗಿ ಶಿಕ್ಷೆ ವಿಧಿಸುತ್ತಿದ್ದೀರಿ. ನೀವು ಪ್ರಕ್ರಿಯೆಯನ್ನು ಶಿಕ್ಷೆಯನ್ನಾಗಿ ಮಾಡಿದ್ದೀರಿ. ಇದು ಭಯೋತ್ಪಾದಕ ಅಥವಾ ತ್ರಿವಳಿ ಕೊಲೆಯ ಪ್ರಕರಣವಲ್ಲ” ಎಂದು ನ್ಯಾಯಪೀಠ ಮೌಖಿಕವಾಗಿ ಹೇಳಿತ್ತು.

ರಾಜ್ಯ ಸರ್ಕಾರ ಜಾಮೀನು ಅರ್ಜಿಗೆ ವಿರೋಧ ವ್ಯಕ್ತಪಡಿಸಿತ್ತು. ಪ್ರಕರಣದ ಇತರ ಆರೋಪಿಗಳೊಂದಿಗೆ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸುವ ಅಗತ್ಯವಿದೆ ಎಂದು ವಾದಿಸಿತ್ತು.

ಆರೋಪಿಗಳ ಪರವಾಗಿ ಹಾಜರಾದ ಹಿರಿಯ ವಕೀಲ ಸಿದ್ಧಾರ್ಥ್ ಅಗರ್ವಾಲ್, ಪ್ರಕರಣದಲ್ಲಿ ಮೂರು ಆರೋಪಪಟ್ಟಿಗಳನ್ನು ಸಲ್ಲಿಸಲಾಗಿದ್ದು, ಇನ್ನೂ ಆರೋಪಗಳನ್ನು ರೂಪಿಸಬೇಕಾಗಿದೆ ಎಂದು ವಾದಿಸಿದ್ದರು.

ಅರವಿಂದ್ ಸಿಂಗ್ ಮತ್ತು ಅಮಿತ್ ಸಿಂಗ್ ಅವರಿಗೆ ಮಾಜಿ ಅಬಕಾರಿ ಸಚಿವ ಕವಾಸಿ ಲಖ್ಮಾ ಅವರನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿ, ಮೇ 9ಕ್ಕೆ ವಿಚಾರಣೆಯನ್ನು ಮುಂದೂಡಿತ್ತು.

2019-22ರಲ್ಲಿ ರಾಜ್ಯ ಸರ್ಕಾರದ ಉನ್ನತ ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು ಮತ್ತು ರಾಜಕೀಯ ವ್ಯಕ್ತಿಗಳು ಜಂಟಿಯಾಗಿ ಈ ಹಗರಣವನ್ನು ಎಸಗಿದ್ದು, 2,000 ಕೋಟಿ ರೂ.ಗೂ ಹೆಚ್ಚು ಮೊತ್ತದ ಅಕ್ರಮ ನಡೆದಿದೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ.

ಈ ಹಣ ವರ್ಗಾವಣೆ ಪ್ರಕರಣವು 2022 ರಲ್ಲಿ ದೆಹಲಿಯ ನ್ಯಾಯಾಲಯದಲ್ಲಿ ಸಲ್ಲಿಸಲಾದ ಆದಾಯ ತೆರಿಗೆ ಇಲಾಖೆ ಆರೋಪಪಟ್ಟಿಯಿಂದ ಹುಟ್ಟಿಕೊಂಡಿದೆ.

ಸಿಎಸ್‌ಎಂಸಿಎಲ್ (ಮದ್ಯ ಖರೀದಿ ಮತ್ತು ಮಾರಾಟದ ರಾಜ್ಯ ಸಂಸ್ಥೆ) ನಿಂದ ಸಂಗ್ರಹಿಸಿದ ಪ್ರತಿ ಮದ್ಯದ ಮೇಲೆ ರಾಜ್ಯದ ಡಿಸ್ಟಿಲರಿಗಳಿಂದ ಲಂಚವನ್ನು ಪಡೆಯಲಾಗಿದೆ ಮತ್ತು ದೇಶೀಯ ಮದ್ಯವನ್ನು ಲೆಕ್ಕದಿಂದ ಹೊರಗಿಟ್ಟು ಮಾರಾಟ ಮಾಡಲಾಗಿದೆ ಎಂದು ಇಡಿ ಆರೋಪಿಸಿದೆ.

ನ್ಯಾಯಮೂರ್ತಿ ನಿವಾಸದಲ್ಲಿ ನಗದು ಪತ್ತೆ ಪ್ರಕರಣ: ತನಿಖಾ ವರದಿ ಸುಪ್ರಿಂಕೋರ್ಟ್‌ಗೆ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...