Homeಮುಖಪುಟಕೇರಳ: ಜಡ್ಜ್‌ ನೇಮಕಾತಿಗೆ ಆಕ್ಷೇಪ; ಕೇಂದ್ರದ ದ್ವಿಮುಖ ನೀತಿ ಗಮನಿಸಿದ ಕೋರ್ಟ್‌

ಕೇರಳ: ಜಡ್ಜ್‌ ನೇಮಕಾತಿಗೆ ಆಕ್ಷೇಪ; ಕೇಂದ್ರದ ದ್ವಿಮುಖ ನೀತಿ ಗಮನಿಸಿದ ಕೋರ್ಟ್‌

- Advertisement -
- Advertisement -

ಕೇರಳ ಹೈಕೋರ್ಟ್ ನ್ಯಾಯಮೂರ್ತಿಯಾಗಿ, ನ್ಯಾಯವಾದಿ ಮನೋಜ್ ಪುಲಂಬಿ ಮಾಧವನ್ ಅವರ ಪದೋನ್ನತಿಯನ್ನು ಆಕ್ಷೇಪಿಸಿದ ಕೇಂದ್ರ ಸರಕಾರದ ಆಕ್ಷೇಪಣೆಯನ್ನು ಸುಪ್ರೀಂಕೋರ್ಟ್‌ ತಿರಸ್ಕರಿಸಿದ್ದು, ಬಿಜೆಪಿಯ ಮಹಿಳಾ ನಾಯಕಿ ಲಕ್ಷ್ಮಣ ಚಂದ್ರ ವಿಕ್ಟೋರಿಯಾ ಗೌರಿ(ಹೆಸರನ್ನು ಉಲ್ಲೇಖಿಸದೆ ಪ್ರಸ್ತಾಪಿಸಿದ್ದ ಕೋರ್ಟ್‌) ಅವರನ್ನು ಜಡ್ಜ್‌ ಆಗಿ ನೇಮಿಸಿರುವುದನ್ನು ಕೋರ್ಟ್‌ ಉಲ್ಲೇಖಿಸಿದ್ದು, ಕೇಂದ್ರದ ದ್ವಿಮುಖ ನೀತಿಯನ್ನು ಗಮನಿಸಿದೆ.

ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ ಪೀಠವು ಈ ಕುರಿತ ಅರ್ಜಿಯನ್ನು ವಿಚಾರಣೆ ನಡೆಸಿ ಕೇಂದ್ರದ ಆಕ್ಷೇಪಣೆಯನ್ನು ತಿರಸ್ಕರಿಸಿದೆ. ಪೀಠದಲ್ಲಿ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಬಿ.ಆರ್.ಗವಾಯಿ ಅವರಿದ್ದರು.

ಮಾಧವನ್ ಅವರು ಸಿಪಿಐ(ಎಂ) ಸಹಾನುಭೂತಿ ಹೊಂದಿರುವವರು ಮತ್ತು 2010 ಮತ್ತು 2016-2021ರಲ್ಲಿ ಎಲ್‌ಡಿಎಫ್ ಸರ್ಕಾರದಿಂದ ಸರ್ಕಾರಿ ವಕೀಲರಾಗಿ ನೇಮಕಗೊಂಡಿದ್ದರಿಂದ ಮಾಧವನ್ ನ್ಯಾಯಾಧೀಶರಾಗಲು ಯೋಗ್ಯರಲ್ಲ ಎಂದು ಸರ್ಕಾರ ಹೇಳಿಕೊಂಡಿತ್ತು.

ಡೆಕ್ಕನ್ ಹೆರಾಲ್ಡ್ ಪ್ರಕಾರ, ಸುಪ್ರೀಂಕೋರ್ಟ್‌ ಕೊಲಿಜಿಯಂ ಸರ್ಕಾರದ ಕಾರಣಗಳನ್ನು ಅಸ್ಪಷ್ಟ ಮತ್ತು ಆಧಾರ ರಹಿತ ಎಂದು ಕರೆದಿದೆ. ಅಭ್ಯರ್ಥಿಯು ರಾಜಕೀಯ ಹಿನ್ನೆಲೆಯನ್ನು ಹೊಂದಿದ್ದಾನೆ ಎಂಬ ಅಂಶವು ಎಲ್ಲಾ ಸಂದರ್ಭಗಳಲ್ಲಿ ಸಾಕಷ್ಟು ಕಾರಣವಾಗಿರುವುದಿಲ್ಲ ಎಂದು ಕೊಲಿಜಿಯಂ ಹೇಳಿದೆ.

2023ರಲ್ಲಿ ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕಗೊಂಡ ಲಕ್ಷ್ಮಣ ಚಂದ್ರ ವಿಕ್ಟೋರಿಯಾ ಗೌರಿ ಅವರ ವಿವಾದಾತ್ಮಕ ಉನ್ನತಿಯನ್ನು ಸಹ ಕೊಲಿಜಿಯಂ ಉಲ್ಲೇಖಿಸಿದೆ. ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ವಿವಾದಾತ್ಮಕ ಹೇಳಿಕೆಗಳು ಮತ್ತು ಭಾರತೀಯ ಜನತಾ ಪಕ್ಷದೊಂದಿಗೆ ಅವರ ಆಪಾದಿತ ಸಂಬಂಧಗಳಿಗಾಗಿ ಗೌರಿ ಟೀಕೆಗೆ ಗುರಿಯಾಗಿದ್ದರು.

ಕೋರ್ಟ್‌ ವಿಚಾರಣೆಯ ವೇಳೆ, ಉದಾಹರಣೆಗೆ ಇತ್ತೀಚೆಗೆ ವಕೀಲರೋರ್ವರನ್ನು ಉಚ್ಚ ನ್ಯಾಯಾಲಯದ ನ್ಯಾಯಾಧೀಶರನ್ನಾಗಿ ನೇಮಿಸಲಾಗಿದೆ. ಅವರು ಪದೋನ್ನತಿಯ ಮೊದಲು ರಾಜಕೀಯ ಪಕ್ಷದ ಪದಾಧಿಕಾರಿಯಾಗಿದ್ದರು ಎಂಬುವುದನ್ನು ಸುಪ್ರೀಂಕೋರ್ಟ್‌ ಕೊಲಿಜಿಯಂ ಹೇಳಿದೆ.

ಮಾಧವನ್ ಪರಿಶಿಷ್ಟ ಜಾತಿಗೆ ಸೇರಿದವರು. ಅವರ ನೇಮಕಾತಿಗೆ ಆಕ್ಷೇಪವನ್ನು ಸಲ್ಲಿಸಲು ಮಾನ್ಯವಾದ ಆಧಾರವಿಲ್ಲ ಎಂದು ಕೋರ್ಟ್‌ ಹೇಳಿದೆ. ಅಭ್ಯರ್ಥಿಯನ್ನು ಈ ಹಿಂದೆ ಸರ್ಕಾರಿ ವಕೀಲರಾಗಿ ನೇಮಕ ಮಾಡಿರುವುದಿಂದ ಕಾನೂನಿನ ವಿವಿಧ ವಿಭಾಗಗಳಲ್ಲಿನ ಪ್ರಕರಣ ನಿರ್ವಹಿಸುವಲ್ಲಿ ಅವರು ಸಾಕಷ್ಟು ಅನುಭವವನ್ನು ಪಡೆದಿರುವುದನ್ನು ಸೂಚಿಸುತ್ತದೆ. ಅಭ್ಯರ್ಥಿಯು ಹೈಕೋರ್ಟಿನ ನ್ಯಾಯಾಧೀಶರಾಗಿ ನೇಮಕಗೊಳ್ಳಲು ಸಮರ್ಥರಾಗಿದ್ದಾರೆ ಎಂದು ಕೋರ್ಟ್‌ ಹೇಳಿದೆ.

ಇದಲ್ಲದೆ ವಕೀಲರಾದ ಅಬ್ದುಲ್ ಹಕೀಮ್, ಮುಲ್ಲಪ್ಪಲ್ಲಿ ಅಬ್ದುಲ್ ಅಜೀಜ್, ಶ್ಯಾಮ್ ಕುಮಾರ್ ವಡಕ್ಕೆ ಮುದವಕ್ಕಟ್, ಹರಿಶಂಕರ್ ವಿಜಯನ್ ಮೆನನ್, ಮನು ಶ್ರೀಧರನ್ ನಾಯರ್ ಮತ್ತು ಈಶ್ವರನ್ ಸುಬ್ರಮಣಿ ಅವರಿಗೆ ಕೇರಳ ಹೈಕೋರ್ಟ್‌ನ ನ್ಯಾಯಮೂರ್ತಿಗಳಾಗಿ ಬಡ್ತಿ ನೀಡಲು ಕೊಲಿಜಿಯಂ ಶಿಫಾರಸು ಮಾಡಿದೆ.

ಏನಿದು ಲಕ್ಷ್ಮಣ ಚಂದ್ರ ವಿಕ್ಟೋರಿಯಾ ಗೌರಿ ಪ್ರಕರಣ:

ಬಿಜೆಪಿ ನಾಯಕಿ, ವಕೀಲೆ ಲಕ್ಷ್ಮಣ ಚಂದ್ರ ವಿಕ್ಟೋರಿಯಾ ಗೌರಿ ಅವರನ್ನು ಮದ್ರಾಸ್ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ಈ ಹಿಂದೆ ನೇಮಿಸಲಾಗಿತ್ತು. ಅಲ್ಪಸಂಖ್ಯಾತ ಸಮುದಾಯದ ಬಗ್ಗೆ ಹಗುರವಾಗಿ ಮಾತನಾಡಿರುವ ಅವರನ್ನು ನ್ಯಾಯಮೂರ್ತಿಯನ್ನಾಗಿ ನೇಮಿಸಿರುವುದು ಟೀಕೆಗೆ ಗುರಿಯಾಗಿತ್ತು.

ಗೌರಿ ಅವರು ಭಾರತೀಯ ಜನತಾ ಪಕ್ಷದ ಸದಸ್ಯೆಯಾಗಿದ್ದಾರೆ. ಕ್ರಿಶ್ಚಿಯನ್ನರು ಮತ್ತು ಮುಸ್ಲಿಮರ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ಹಲವು ಬಾರಿ ನೀಡಿದ್ದರು. ಅವರ ಹೆಸರನ್ನು ಶಿಫಾರಸು ಮಾಡಿದ ಕೊಲಿಜಿಯಂ ಕ್ರಮವು ಸರಿಯಲ್ಲ ಎಂದು ವಕೀಲರು ಮತ್ತು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದರು.

ಬಿಜೆಪಿಯ ಸೈದ್ಧಾಂತಿಕ ಪೋಷಕ, ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ಅತ್ಯಾಪ್ತವಾಗಿದ್ದ ವಿಕ್ಟೋರಿಯಾ ಗೌರಿ, ಆರೆಸ್ಸೆಸ್‌ನ ಆಂಗ್ಲ ಭಾಷೆಯ ಮುಖವಾಣಿ ಆರ್ಗನೈಸರ್‌ನಲ್ಲಿ ಲೇಖನವನ್ನು ಬರೆಯುತ್ತಿದ್ದರು.

ಇದನ್ನು ಓದಿ: ಗೋಹತ್ಯೆ ವದಂತಿಯಿಂದ ಮುಸ್ಲಿಂ ವ್ಯಾಪಾರಿಯ ಗುಂಪು ಹತ್ಯೆ: ಪೊಲೀಸರು ಕೂಡ ತಪ್ಪಿತಸ್ಥರೆಂದು ಕೋರ್ಟ್‌ ಹೇಳಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...