Homeಮುಖಪುಟಕೇರಳ: ಜಡ್ಜ್‌ ನೇಮಕಾತಿಗೆ ಆಕ್ಷೇಪ; ಕೇಂದ್ರದ ದ್ವಿಮುಖ ನೀತಿ ಗಮನಿಸಿದ ಕೋರ್ಟ್‌

ಕೇರಳ: ಜಡ್ಜ್‌ ನೇಮಕಾತಿಗೆ ಆಕ್ಷೇಪ; ಕೇಂದ್ರದ ದ್ವಿಮುಖ ನೀತಿ ಗಮನಿಸಿದ ಕೋರ್ಟ್‌

- Advertisement -
- Advertisement -

ಕೇರಳ ಹೈಕೋರ್ಟ್ ನ್ಯಾಯಮೂರ್ತಿಯಾಗಿ, ನ್ಯಾಯವಾದಿ ಮನೋಜ್ ಪುಲಂಬಿ ಮಾಧವನ್ ಅವರ ಪದೋನ್ನತಿಯನ್ನು ಆಕ್ಷೇಪಿಸಿದ ಕೇಂದ್ರ ಸರಕಾರದ ಆಕ್ಷೇಪಣೆಯನ್ನು ಸುಪ್ರೀಂಕೋರ್ಟ್‌ ತಿರಸ್ಕರಿಸಿದ್ದು, ಬಿಜೆಪಿಯ ಮಹಿಳಾ ನಾಯಕಿ ಲಕ್ಷ್ಮಣ ಚಂದ್ರ ವಿಕ್ಟೋರಿಯಾ ಗೌರಿ(ಹೆಸರನ್ನು ಉಲ್ಲೇಖಿಸದೆ ಪ್ರಸ್ತಾಪಿಸಿದ್ದ ಕೋರ್ಟ್‌) ಅವರನ್ನು ಜಡ್ಜ್‌ ಆಗಿ ನೇಮಿಸಿರುವುದನ್ನು ಕೋರ್ಟ್‌ ಉಲ್ಲೇಖಿಸಿದ್ದು, ಕೇಂದ್ರದ ದ್ವಿಮುಖ ನೀತಿಯನ್ನು ಗಮನಿಸಿದೆ.

ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ ಪೀಠವು ಈ ಕುರಿತ ಅರ್ಜಿಯನ್ನು ವಿಚಾರಣೆ ನಡೆಸಿ ಕೇಂದ್ರದ ಆಕ್ಷೇಪಣೆಯನ್ನು ತಿರಸ್ಕರಿಸಿದೆ. ಪೀಠದಲ್ಲಿ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಬಿ.ಆರ್.ಗವಾಯಿ ಅವರಿದ್ದರು.

ಮಾಧವನ್ ಅವರು ಸಿಪಿಐ(ಎಂ) ಸಹಾನುಭೂತಿ ಹೊಂದಿರುವವರು ಮತ್ತು 2010 ಮತ್ತು 2016-2021ರಲ್ಲಿ ಎಲ್‌ಡಿಎಫ್ ಸರ್ಕಾರದಿಂದ ಸರ್ಕಾರಿ ವಕೀಲರಾಗಿ ನೇಮಕಗೊಂಡಿದ್ದರಿಂದ ಮಾಧವನ್ ನ್ಯಾಯಾಧೀಶರಾಗಲು ಯೋಗ್ಯರಲ್ಲ ಎಂದು ಸರ್ಕಾರ ಹೇಳಿಕೊಂಡಿತ್ತು.

ಡೆಕ್ಕನ್ ಹೆರಾಲ್ಡ್ ಪ್ರಕಾರ, ಸುಪ್ರೀಂಕೋರ್ಟ್‌ ಕೊಲಿಜಿಯಂ ಸರ್ಕಾರದ ಕಾರಣಗಳನ್ನು ಅಸ್ಪಷ್ಟ ಮತ್ತು ಆಧಾರ ರಹಿತ ಎಂದು ಕರೆದಿದೆ. ಅಭ್ಯರ್ಥಿಯು ರಾಜಕೀಯ ಹಿನ್ನೆಲೆಯನ್ನು ಹೊಂದಿದ್ದಾನೆ ಎಂಬ ಅಂಶವು ಎಲ್ಲಾ ಸಂದರ್ಭಗಳಲ್ಲಿ ಸಾಕಷ್ಟು ಕಾರಣವಾಗಿರುವುದಿಲ್ಲ ಎಂದು ಕೊಲಿಜಿಯಂ ಹೇಳಿದೆ.

2023ರಲ್ಲಿ ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕಗೊಂಡ ಲಕ್ಷ್ಮಣ ಚಂದ್ರ ವಿಕ್ಟೋರಿಯಾ ಗೌರಿ ಅವರ ವಿವಾದಾತ್ಮಕ ಉನ್ನತಿಯನ್ನು ಸಹ ಕೊಲಿಜಿಯಂ ಉಲ್ಲೇಖಿಸಿದೆ. ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ವಿವಾದಾತ್ಮಕ ಹೇಳಿಕೆಗಳು ಮತ್ತು ಭಾರತೀಯ ಜನತಾ ಪಕ್ಷದೊಂದಿಗೆ ಅವರ ಆಪಾದಿತ ಸಂಬಂಧಗಳಿಗಾಗಿ ಗೌರಿ ಟೀಕೆಗೆ ಗುರಿಯಾಗಿದ್ದರು.

ಕೋರ್ಟ್‌ ವಿಚಾರಣೆಯ ವೇಳೆ, ಉದಾಹರಣೆಗೆ ಇತ್ತೀಚೆಗೆ ವಕೀಲರೋರ್ವರನ್ನು ಉಚ್ಚ ನ್ಯಾಯಾಲಯದ ನ್ಯಾಯಾಧೀಶರನ್ನಾಗಿ ನೇಮಿಸಲಾಗಿದೆ. ಅವರು ಪದೋನ್ನತಿಯ ಮೊದಲು ರಾಜಕೀಯ ಪಕ್ಷದ ಪದಾಧಿಕಾರಿಯಾಗಿದ್ದರು ಎಂಬುವುದನ್ನು ಸುಪ್ರೀಂಕೋರ್ಟ್‌ ಕೊಲಿಜಿಯಂ ಹೇಳಿದೆ.

ಮಾಧವನ್ ಪರಿಶಿಷ್ಟ ಜಾತಿಗೆ ಸೇರಿದವರು. ಅವರ ನೇಮಕಾತಿಗೆ ಆಕ್ಷೇಪವನ್ನು ಸಲ್ಲಿಸಲು ಮಾನ್ಯವಾದ ಆಧಾರವಿಲ್ಲ ಎಂದು ಕೋರ್ಟ್‌ ಹೇಳಿದೆ. ಅಭ್ಯರ್ಥಿಯನ್ನು ಈ ಹಿಂದೆ ಸರ್ಕಾರಿ ವಕೀಲರಾಗಿ ನೇಮಕ ಮಾಡಿರುವುದಿಂದ ಕಾನೂನಿನ ವಿವಿಧ ವಿಭಾಗಗಳಲ್ಲಿನ ಪ್ರಕರಣ ನಿರ್ವಹಿಸುವಲ್ಲಿ ಅವರು ಸಾಕಷ್ಟು ಅನುಭವವನ್ನು ಪಡೆದಿರುವುದನ್ನು ಸೂಚಿಸುತ್ತದೆ. ಅಭ್ಯರ್ಥಿಯು ಹೈಕೋರ್ಟಿನ ನ್ಯಾಯಾಧೀಶರಾಗಿ ನೇಮಕಗೊಳ್ಳಲು ಸಮರ್ಥರಾಗಿದ್ದಾರೆ ಎಂದು ಕೋರ್ಟ್‌ ಹೇಳಿದೆ.

ಇದಲ್ಲದೆ ವಕೀಲರಾದ ಅಬ್ದುಲ್ ಹಕೀಮ್, ಮುಲ್ಲಪ್ಪಲ್ಲಿ ಅಬ್ದುಲ್ ಅಜೀಜ್, ಶ್ಯಾಮ್ ಕುಮಾರ್ ವಡಕ್ಕೆ ಮುದವಕ್ಕಟ್, ಹರಿಶಂಕರ್ ವಿಜಯನ್ ಮೆನನ್, ಮನು ಶ್ರೀಧರನ್ ನಾಯರ್ ಮತ್ತು ಈಶ್ವರನ್ ಸುಬ್ರಮಣಿ ಅವರಿಗೆ ಕೇರಳ ಹೈಕೋರ್ಟ್‌ನ ನ್ಯಾಯಮೂರ್ತಿಗಳಾಗಿ ಬಡ್ತಿ ನೀಡಲು ಕೊಲಿಜಿಯಂ ಶಿಫಾರಸು ಮಾಡಿದೆ.

ಏನಿದು ಲಕ್ಷ್ಮಣ ಚಂದ್ರ ವಿಕ್ಟೋರಿಯಾ ಗೌರಿ ಪ್ರಕರಣ:

ಬಿಜೆಪಿ ನಾಯಕಿ, ವಕೀಲೆ ಲಕ್ಷ್ಮಣ ಚಂದ್ರ ವಿಕ್ಟೋರಿಯಾ ಗೌರಿ ಅವರನ್ನು ಮದ್ರಾಸ್ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ಈ ಹಿಂದೆ ನೇಮಿಸಲಾಗಿತ್ತು. ಅಲ್ಪಸಂಖ್ಯಾತ ಸಮುದಾಯದ ಬಗ್ಗೆ ಹಗುರವಾಗಿ ಮಾತನಾಡಿರುವ ಅವರನ್ನು ನ್ಯಾಯಮೂರ್ತಿಯನ್ನಾಗಿ ನೇಮಿಸಿರುವುದು ಟೀಕೆಗೆ ಗುರಿಯಾಗಿತ್ತು.

ಗೌರಿ ಅವರು ಭಾರತೀಯ ಜನತಾ ಪಕ್ಷದ ಸದಸ್ಯೆಯಾಗಿದ್ದಾರೆ. ಕ್ರಿಶ್ಚಿಯನ್ನರು ಮತ್ತು ಮುಸ್ಲಿಮರ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ಹಲವು ಬಾರಿ ನೀಡಿದ್ದರು. ಅವರ ಹೆಸರನ್ನು ಶಿಫಾರಸು ಮಾಡಿದ ಕೊಲಿಜಿಯಂ ಕ್ರಮವು ಸರಿಯಲ್ಲ ಎಂದು ವಕೀಲರು ಮತ್ತು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದರು.

ಬಿಜೆಪಿಯ ಸೈದ್ಧಾಂತಿಕ ಪೋಷಕ, ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ಅತ್ಯಾಪ್ತವಾಗಿದ್ದ ವಿಕ್ಟೋರಿಯಾ ಗೌರಿ, ಆರೆಸ್ಸೆಸ್‌ನ ಆಂಗ್ಲ ಭಾಷೆಯ ಮುಖವಾಣಿ ಆರ್ಗನೈಸರ್‌ನಲ್ಲಿ ಲೇಖನವನ್ನು ಬರೆಯುತ್ತಿದ್ದರು.

ಇದನ್ನು ಓದಿ: ಗೋಹತ್ಯೆ ವದಂತಿಯಿಂದ ಮುಸ್ಲಿಂ ವ್ಯಾಪಾರಿಯ ಗುಂಪು ಹತ್ಯೆ: ಪೊಲೀಸರು ಕೂಡ ತಪ್ಪಿತಸ್ಥರೆಂದು ಕೋರ್ಟ್‌ ಹೇಳಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...