Homeಮುಖಪುಟಕೇರಳ: ಜಡ್ಜ್‌ ನೇಮಕಾತಿಗೆ ಆಕ್ಷೇಪ; ಕೇಂದ್ರದ ದ್ವಿಮುಖ ನೀತಿ ಗಮನಿಸಿದ ಕೋರ್ಟ್‌

ಕೇರಳ: ಜಡ್ಜ್‌ ನೇಮಕಾತಿಗೆ ಆಕ್ಷೇಪ; ಕೇಂದ್ರದ ದ್ವಿಮುಖ ನೀತಿ ಗಮನಿಸಿದ ಕೋರ್ಟ್‌

- Advertisement -
- Advertisement -

ಕೇರಳ ಹೈಕೋರ್ಟ್ ನ್ಯಾಯಮೂರ್ತಿಯಾಗಿ, ನ್ಯಾಯವಾದಿ ಮನೋಜ್ ಪುಲಂಬಿ ಮಾಧವನ್ ಅವರ ಪದೋನ್ನತಿಯನ್ನು ಆಕ್ಷೇಪಿಸಿದ ಕೇಂದ್ರ ಸರಕಾರದ ಆಕ್ಷೇಪಣೆಯನ್ನು ಸುಪ್ರೀಂಕೋರ್ಟ್‌ ತಿರಸ್ಕರಿಸಿದ್ದು, ಬಿಜೆಪಿಯ ಮಹಿಳಾ ನಾಯಕಿ ಲಕ್ಷ್ಮಣ ಚಂದ್ರ ವಿಕ್ಟೋರಿಯಾ ಗೌರಿ(ಹೆಸರನ್ನು ಉಲ್ಲೇಖಿಸದೆ ಪ್ರಸ್ತಾಪಿಸಿದ್ದ ಕೋರ್ಟ್‌) ಅವರನ್ನು ಜಡ್ಜ್‌ ಆಗಿ ನೇಮಿಸಿರುವುದನ್ನು ಕೋರ್ಟ್‌ ಉಲ್ಲೇಖಿಸಿದ್ದು, ಕೇಂದ್ರದ ದ್ವಿಮುಖ ನೀತಿಯನ್ನು ಗಮನಿಸಿದೆ.

ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ ಪೀಠವು ಈ ಕುರಿತ ಅರ್ಜಿಯನ್ನು ವಿಚಾರಣೆ ನಡೆಸಿ ಕೇಂದ್ರದ ಆಕ್ಷೇಪಣೆಯನ್ನು ತಿರಸ್ಕರಿಸಿದೆ. ಪೀಠದಲ್ಲಿ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಬಿ.ಆರ್.ಗವಾಯಿ ಅವರಿದ್ದರು.

ಮಾಧವನ್ ಅವರು ಸಿಪಿಐ(ಎಂ) ಸಹಾನುಭೂತಿ ಹೊಂದಿರುವವರು ಮತ್ತು 2010 ಮತ್ತು 2016-2021ರಲ್ಲಿ ಎಲ್‌ಡಿಎಫ್ ಸರ್ಕಾರದಿಂದ ಸರ್ಕಾರಿ ವಕೀಲರಾಗಿ ನೇಮಕಗೊಂಡಿದ್ದರಿಂದ ಮಾಧವನ್ ನ್ಯಾಯಾಧೀಶರಾಗಲು ಯೋಗ್ಯರಲ್ಲ ಎಂದು ಸರ್ಕಾರ ಹೇಳಿಕೊಂಡಿತ್ತು.

ಡೆಕ್ಕನ್ ಹೆರಾಲ್ಡ್ ಪ್ರಕಾರ, ಸುಪ್ರೀಂಕೋರ್ಟ್‌ ಕೊಲಿಜಿಯಂ ಸರ್ಕಾರದ ಕಾರಣಗಳನ್ನು ಅಸ್ಪಷ್ಟ ಮತ್ತು ಆಧಾರ ರಹಿತ ಎಂದು ಕರೆದಿದೆ. ಅಭ್ಯರ್ಥಿಯು ರಾಜಕೀಯ ಹಿನ್ನೆಲೆಯನ್ನು ಹೊಂದಿದ್ದಾನೆ ಎಂಬ ಅಂಶವು ಎಲ್ಲಾ ಸಂದರ್ಭಗಳಲ್ಲಿ ಸಾಕಷ್ಟು ಕಾರಣವಾಗಿರುವುದಿಲ್ಲ ಎಂದು ಕೊಲಿಜಿಯಂ ಹೇಳಿದೆ.

2023ರಲ್ಲಿ ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕಗೊಂಡ ಲಕ್ಷ್ಮಣ ಚಂದ್ರ ವಿಕ್ಟೋರಿಯಾ ಗೌರಿ ಅವರ ವಿವಾದಾತ್ಮಕ ಉನ್ನತಿಯನ್ನು ಸಹ ಕೊಲಿಜಿಯಂ ಉಲ್ಲೇಖಿಸಿದೆ. ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ವಿವಾದಾತ್ಮಕ ಹೇಳಿಕೆಗಳು ಮತ್ತು ಭಾರತೀಯ ಜನತಾ ಪಕ್ಷದೊಂದಿಗೆ ಅವರ ಆಪಾದಿತ ಸಂಬಂಧಗಳಿಗಾಗಿ ಗೌರಿ ಟೀಕೆಗೆ ಗುರಿಯಾಗಿದ್ದರು.

ಕೋರ್ಟ್‌ ವಿಚಾರಣೆಯ ವೇಳೆ, ಉದಾಹರಣೆಗೆ ಇತ್ತೀಚೆಗೆ ವಕೀಲರೋರ್ವರನ್ನು ಉಚ್ಚ ನ್ಯಾಯಾಲಯದ ನ್ಯಾಯಾಧೀಶರನ್ನಾಗಿ ನೇಮಿಸಲಾಗಿದೆ. ಅವರು ಪದೋನ್ನತಿಯ ಮೊದಲು ರಾಜಕೀಯ ಪಕ್ಷದ ಪದಾಧಿಕಾರಿಯಾಗಿದ್ದರು ಎಂಬುವುದನ್ನು ಸುಪ್ರೀಂಕೋರ್ಟ್‌ ಕೊಲಿಜಿಯಂ ಹೇಳಿದೆ.

ಮಾಧವನ್ ಪರಿಶಿಷ್ಟ ಜಾತಿಗೆ ಸೇರಿದವರು. ಅವರ ನೇಮಕಾತಿಗೆ ಆಕ್ಷೇಪವನ್ನು ಸಲ್ಲಿಸಲು ಮಾನ್ಯವಾದ ಆಧಾರವಿಲ್ಲ ಎಂದು ಕೋರ್ಟ್‌ ಹೇಳಿದೆ. ಅಭ್ಯರ್ಥಿಯನ್ನು ಈ ಹಿಂದೆ ಸರ್ಕಾರಿ ವಕೀಲರಾಗಿ ನೇಮಕ ಮಾಡಿರುವುದಿಂದ ಕಾನೂನಿನ ವಿವಿಧ ವಿಭಾಗಗಳಲ್ಲಿನ ಪ್ರಕರಣ ನಿರ್ವಹಿಸುವಲ್ಲಿ ಅವರು ಸಾಕಷ್ಟು ಅನುಭವವನ್ನು ಪಡೆದಿರುವುದನ್ನು ಸೂಚಿಸುತ್ತದೆ. ಅಭ್ಯರ್ಥಿಯು ಹೈಕೋರ್ಟಿನ ನ್ಯಾಯಾಧೀಶರಾಗಿ ನೇಮಕಗೊಳ್ಳಲು ಸಮರ್ಥರಾಗಿದ್ದಾರೆ ಎಂದು ಕೋರ್ಟ್‌ ಹೇಳಿದೆ.

ಇದಲ್ಲದೆ ವಕೀಲರಾದ ಅಬ್ದುಲ್ ಹಕೀಮ್, ಮುಲ್ಲಪ್ಪಲ್ಲಿ ಅಬ್ದುಲ್ ಅಜೀಜ್, ಶ್ಯಾಮ್ ಕುಮಾರ್ ವಡಕ್ಕೆ ಮುದವಕ್ಕಟ್, ಹರಿಶಂಕರ್ ವಿಜಯನ್ ಮೆನನ್, ಮನು ಶ್ರೀಧರನ್ ನಾಯರ್ ಮತ್ತು ಈಶ್ವರನ್ ಸುಬ್ರಮಣಿ ಅವರಿಗೆ ಕೇರಳ ಹೈಕೋರ್ಟ್‌ನ ನ್ಯಾಯಮೂರ್ತಿಗಳಾಗಿ ಬಡ್ತಿ ನೀಡಲು ಕೊಲಿಜಿಯಂ ಶಿಫಾರಸು ಮಾಡಿದೆ.

ಏನಿದು ಲಕ್ಷ್ಮಣ ಚಂದ್ರ ವಿಕ್ಟೋರಿಯಾ ಗೌರಿ ಪ್ರಕರಣ:

ಬಿಜೆಪಿ ನಾಯಕಿ, ವಕೀಲೆ ಲಕ್ಷ್ಮಣ ಚಂದ್ರ ವಿಕ್ಟೋರಿಯಾ ಗೌರಿ ಅವರನ್ನು ಮದ್ರಾಸ್ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ಈ ಹಿಂದೆ ನೇಮಿಸಲಾಗಿತ್ತು. ಅಲ್ಪಸಂಖ್ಯಾತ ಸಮುದಾಯದ ಬಗ್ಗೆ ಹಗುರವಾಗಿ ಮಾತನಾಡಿರುವ ಅವರನ್ನು ನ್ಯಾಯಮೂರ್ತಿಯನ್ನಾಗಿ ನೇಮಿಸಿರುವುದು ಟೀಕೆಗೆ ಗುರಿಯಾಗಿತ್ತು.

ಗೌರಿ ಅವರು ಭಾರತೀಯ ಜನತಾ ಪಕ್ಷದ ಸದಸ್ಯೆಯಾಗಿದ್ದಾರೆ. ಕ್ರಿಶ್ಚಿಯನ್ನರು ಮತ್ತು ಮುಸ್ಲಿಮರ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ಹಲವು ಬಾರಿ ನೀಡಿದ್ದರು. ಅವರ ಹೆಸರನ್ನು ಶಿಫಾರಸು ಮಾಡಿದ ಕೊಲಿಜಿಯಂ ಕ್ರಮವು ಸರಿಯಲ್ಲ ಎಂದು ವಕೀಲರು ಮತ್ತು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದರು.

ಬಿಜೆಪಿಯ ಸೈದ್ಧಾಂತಿಕ ಪೋಷಕ, ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ಅತ್ಯಾಪ್ತವಾಗಿದ್ದ ವಿಕ್ಟೋರಿಯಾ ಗೌರಿ, ಆರೆಸ್ಸೆಸ್‌ನ ಆಂಗ್ಲ ಭಾಷೆಯ ಮುಖವಾಣಿ ಆರ್ಗನೈಸರ್‌ನಲ್ಲಿ ಲೇಖನವನ್ನು ಬರೆಯುತ್ತಿದ್ದರು.

ಇದನ್ನು ಓದಿ: ಗೋಹತ್ಯೆ ವದಂತಿಯಿಂದ ಮುಸ್ಲಿಂ ವ್ಯಾಪಾರಿಯ ಗುಂಪು ಹತ್ಯೆ: ಪೊಲೀಸರು ಕೂಡ ತಪ್ಪಿತಸ್ಥರೆಂದು ಕೋರ್ಟ್‌ ಹೇಳಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...