Homeಮುಖಪುಟಕೇರಳ: ಜಡ್ಜ್‌ ನೇಮಕಾತಿಗೆ ಆಕ್ಷೇಪ; ಕೇಂದ್ರದ ದ್ವಿಮುಖ ನೀತಿ ಗಮನಿಸಿದ ಕೋರ್ಟ್‌

ಕೇರಳ: ಜಡ್ಜ್‌ ನೇಮಕಾತಿಗೆ ಆಕ್ಷೇಪ; ಕೇಂದ್ರದ ದ್ವಿಮುಖ ನೀತಿ ಗಮನಿಸಿದ ಕೋರ್ಟ್‌

- Advertisement -
- Advertisement -

ಕೇರಳ ಹೈಕೋರ್ಟ್ ನ್ಯಾಯಮೂರ್ತಿಯಾಗಿ, ನ್ಯಾಯವಾದಿ ಮನೋಜ್ ಪುಲಂಬಿ ಮಾಧವನ್ ಅವರ ಪದೋನ್ನತಿಯನ್ನು ಆಕ್ಷೇಪಿಸಿದ ಕೇಂದ್ರ ಸರಕಾರದ ಆಕ್ಷೇಪಣೆಯನ್ನು ಸುಪ್ರೀಂಕೋರ್ಟ್‌ ತಿರಸ್ಕರಿಸಿದ್ದು, ಬಿಜೆಪಿಯ ಮಹಿಳಾ ನಾಯಕಿ ಲಕ್ಷ್ಮಣ ಚಂದ್ರ ವಿಕ್ಟೋರಿಯಾ ಗೌರಿ(ಹೆಸರನ್ನು ಉಲ್ಲೇಖಿಸದೆ ಪ್ರಸ್ತಾಪಿಸಿದ್ದ ಕೋರ್ಟ್‌) ಅವರನ್ನು ಜಡ್ಜ್‌ ಆಗಿ ನೇಮಿಸಿರುವುದನ್ನು ಕೋರ್ಟ್‌ ಉಲ್ಲೇಖಿಸಿದ್ದು, ಕೇಂದ್ರದ ದ್ವಿಮುಖ ನೀತಿಯನ್ನು ಗಮನಿಸಿದೆ.

ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ ಪೀಠವು ಈ ಕುರಿತ ಅರ್ಜಿಯನ್ನು ವಿಚಾರಣೆ ನಡೆಸಿ ಕೇಂದ್ರದ ಆಕ್ಷೇಪಣೆಯನ್ನು ತಿರಸ್ಕರಿಸಿದೆ. ಪೀಠದಲ್ಲಿ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಬಿ.ಆರ್.ಗವಾಯಿ ಅವರಿದ್ದರು.

ಮಾಧವನ್ ಅವರು ಸಿಪಿಐ(ಎಂ) ಸಹಾನುಭೂತಿ ಹೊಂದಿರುವವರು ಮತ್ತು 2010 ಮತ್ತು 2016-2021ರಲ್ಲಿ ಎಲ್‌ಡಿಎಫ್ ಸರ್ಕಾರದಿಂದ ಸರ್ಕಾರಿ ವಕೀಲರಾಗಿ ನೇಮಕಗೊಂಡಿದ್ದರಿಂದ ಮಾಧವನ್ ನ್ಯಾಯಾಧೀಶರಾಗಲು ಯೋಗ್ಯರಲ್ಲ ಎಂದು ಸರ್ಕಾರ ಹೇಳಿಕೊಂಡಿತ್ತು.

ಡೆಕ್ಕನ್ ಹೆರಾಲ್ಡ್ ಪ್ರಕಾರ, ಸುಪ್ರೀಂಕೋರ್ಟ್‌ ಕೊಲಿಜಿಯಂ ಸರ್ಕಾರದ ಕಾರಣಗಳನ್ನು ಅಸ್ಪಷ್ಟ ಮತ್ತು ಆಧಾರ ರಹಿತ ಎಂದು ಕರೆದಿದೆ. ಅಭ್ಯರ್ಥಿಯು ರಾಜಕೀಯ ಹಿನ್ನೆಲೆಯನ್ನು ಹೊಂದಿದ್ದಾನೆ ಎಂಬ ಅಂಶವು ಎಲ್ಲಾ ಸಂದರ್ಭಗಳಲ್ಲಿ ಸಾಕಷ್ಟು ಕಾರಣವಾಗಿರುವುದಿಲ್ಲ ಎಂದು ಕೊಲಿಜಿಯಂ ಹೇಳಿದೆ.

2023ರಲ್ಲಿ ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕಗೊಂಡ ಲಕ್ಷ್ಮಣ ಚಂದ್ರ ವಿಕ್ಟೋರಿಯಾ ಗೌರಿ ಅವರ ವಿವಾದಾತ್ಮಕ ಉನ್ನತಿಯನ್ನು ಸಹ ಕೊಲಿಜಿಯಂ ಉಲ್ಲೇಖಿಸಿದೆ. ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ವಿವಾದಾತ್ಮಕ ಹೇಳಿಕೆಗಳು ಮತ್ತು ಭಾರತೀಯ ಜನತಾ ಪಕ್ಷದೊಂದಿಗೆ ಅವರ ಆಪಾದಿತ ಸಂಬಂಧಗಳಿಗಾಗಿ ಗೌರಿ ಟೀಕೆಗೆ ಗುರಿಯಾಗಿದ್ದರು.

ಕೋರ್ಟ್‌ ವಿಚಾರಣೆಯ ವೇಳೆ, ಉದಾಹರಣೆಗೆ ಇತ್ತೀಚೆಗೆ ವಕೀಲರೋರ್ವರನ್ನು ಉಚ್ಚ ನ್ಯಾಯಾಲಯದ ನ್ಯಾಯಾಧೀಶರನ್ನಾಗಿ ನೇಮಿಸಲಾಗಿದೆ. ಅವರು ಪದೋನ್ನತಿಯ ಮೊದಲು ರಾಜಕೀಯ ಪಕ್ಷದ ಪದಾಧಿಕಾರಿಯಾಗಿದ್ದರು ಎಂಬುವುದನ್ನು ಸುಪ್ರೀಂಕೋರ್ಟ್‌ ಕೊಲಿಜಿಯಂ ಹೇಳಿದೆ.

ಮಾಧವನ್ ಪರಿಶಿಷ್ಟ ಜಾತಿಗೆ ಸೇರಿದವರು. ಅವರ ನೇಮಕಾತಿಗೆ ಆಕ್ಷೇಪವನ್ನು ಸಲ್ಲಿಸಲು ಮಾನ್ಯವಾದ ಆಧಾರವಿಲ್ಲ ಎಂದು ಕೋರ್ಟ್‌ ಹೇಳಿದೆ. ಅಭ್ಯರ್ಥಿಯನ್ನು ಈ ಹಿಂದೆ ಸರ್ಕಾರಿ ವಕೀಲರಾಗಿ ನೇಮಕ ಮಾಡಿರುವುದಿಂದ ಕಾನೂನಿನ ವಿವಿಧ ವಿಭಾಗಗಳಲ್ಲಿನ ಪ್ರಕರಣ ನಿರ್ವಹಿಸುವಲ್ಲಿ ಅವರು ಸಾಕಷ್ಟು ಅನುಭವವನ್ನು ಪಡೆದಿರುವುದನ್ನು ಸೂಚಿಸುತ್ತದೆ. ಅಭ್ಯರ್ಥಿಯು ಹೈಕೋರ್ಟಿನ ನ್ಯಾಯಾಧೀಶರಾಗಿ ನೇಮಕಗೊಳ್ಳಲು ಸಮರ್ಥರಾಗಿದ್ದಾರೆ ಎಂದು ಕೋರ್ಟ್‌ ಹೇಳಿದೆ.

ಇದಲ್ಲದೆ ವಕೀಲರಾದ ಅಬ್ದುಲ್ ಹಕೀಮ್, ಮುಲ್ಲಪ್ಪಲ್ಲಿ ಅಬ್ದುಲ್ ಅಜೀಜ್, ಶ್ಯಾಮ್ ಕುಮಾರ್ ವಡಕ್ಕೆ ಮುದವಕ್ಕಟ್, ಹರಿಶಂಕರ್ ವಿಜಯನ್ ಮೆನನ್, ಮನು ಶ್ರೀಧರನ್ ನಾಯರ್ ಮತ್ತು ಈಶ್ವರನ್ ಸುಬ್ರಮಣಿ ಅವರಿಗೆ ಕೇರಳ ಹೈಕೋರ್ಟ್‌ನ ನ್ಯಾಯಮೂರ್ತಿಗಳಾಗಿ ಬಡ್ತಿ ನೀಡಲು ಕೊಲಿಜಿಯಂ ಶಿಫಾರಸು ಮಾಡಿದೆ.

ಏನಿದು ಲಕ್ಷ್ಮಣ ಚಂದ್ರ ವಿಕ್ಟೋರಿಯಾ ಗೌರಿ ಪ್ರಕರಣ:

ಬಿಜೆಪಿ ನಾಯಕಿ, ವಕೀಲೆ ಲಕ್ಷ್ಮಣ ಚಂದ್ರ ವಿಕ್ಟೋರಿಯಾ ಗೌರಿ ಅವರನ್ನು ಮದ್ರಾಸ್ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ಈ ಹಿಂದೆ ನೇಮಿಸಲಾಗಿತ್ತು. ಅಲ್ಪಸಂಖ್ಯಾತ ಸಮುದಾಯದ ಬಗ್ಗೆ ಹಗುರವಾಗಿ ಮಾತನಾಡಿರುವ ಅವರನ್ನು ನ್ಯಾಯಮೂರ್ತಿಯನ್ನಾಗಿ ನೇಮಿಸಿರುವುದು ಟೀಕೆಗೆ ಗುರಿಯಾಗಿತ್ತು.

ಗೌರಿ ಅವರು ಭಾರತೀಯ ಜನತಾ ಪಕ್ಷದ ಸದಸ್ಯೆಯಾಗಿದ್ದಾರೆ. ಕ್ರಿಶ್ಚಿಯನ್ನರು ಮತ್ತು ಮುಸ್ಲಿಮರ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ಹಲವು ಬಾರಿ ನೀಡಿದ್ದರು. ಅವರ ಹೆಸರನ್ನು ಶಿಫಾರಸು ಮಾಡಿದ ಕೊಲಿಜಿಯಂ ಕ್ರಮವು ಸರಿಯಲ್ಲ ಎಂದು ವಕೀಲರು ಮತ್ತು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದರು.

ಬಿಜೆಪಿಯ ಸೈದ್ಧಾಂತಿಕ ಪೋಷಕ, ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ಅತ್ಯಾಪ್ತವಾಗಿದ್ದ ವಿಕ್ಟೋರಿಯಾ ಗೌರಿ, ಆರೆಸ್ಸೆಸ್‌ನ ಆಂಗ್ಲ ಭಾಷೆಯ ಮುಖವಾಣಿ ಆರ್ಗನೈಸರ್‌ನಲ್ಲಿ ಲೇಖನವನ್ನು ಬರೆಯುತ್ತಿದ್ದರು.

ಇದನ್ನು ಓದಿ: ಗೋಹತ್ಯೆ ವದಂತಿಯಿಂದ ಮುಸ್ಲಿಂ ವ್ಯಾಪಾರಿಯ ಗುಂಪು ಹತ್ಯೆ: ಪೊಲೀಸರು ಕೂಡ ತಪ್ಪಿತಸ್ಥರೆಂದು ಕೋರ್ಟ್‌ ಹೇಳಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...