Homeಮುಖಪುಟಕೇರಳ: ಜಡ್ಜ್‌ ನೇಮಕಾತಿಗೆ ಆಕ್ಷೇಪ; ಕೇಂದ್ರದ ದ್ವಿಮುಖ ನೀತಿ ಗಮನಿಸಿದ ಕೋರ್ಟ್‌

ಕೇರಳ: ಜಡ್ಜ್‌ ನೇಮಕಾತಿಗೆ ಆಕ್ಷೇಪ; ಕೇಂದ್ರದ ದ್ವಿಮುಖ ನೀತಿ ಗಮನಿಸಿದ ಕೋರ್ಟ್‌

- Advertisement -
- Advertisement -

ಕೇರಳ ಹೈಕೋರ್ಟ್ ನ್ಯಾಯಮೂರ್ತಿಯಾಗಿ, ನ್ಯಾಯವಾದಿ ಮನೋಜ್ ಪುಲಂಬಿ ಮಾಧವನ್ ಅವರ ಪದೋನ್ನತಿಯನ್ನು ಆಕ್ಷೇಪಿಸಿದ ಕೇಂದ್ರ ಸರಕಾರದ ಆಕ್ಷೇಪಣೆಯನ್ನು ಸುಪ್ರೀಂಕೋರ್ಟ್‌ ತಿರಸ್ಕರಿಸಿದ್ದು, ಬಿಜೆಪಿಯ ಮಹಿಳಾ ನಾಯಕಿ ಲಕ್ಷ್ಮಣ ಚಂದ್ರ ವಿಕ್ಟೋರಿಯಾ ಗೌರಿ(ಹೆಸರನ್ನು ಉಲ್ಲೇಖಿಸದೆ ಪ್ರಸ್ತಾಪಿಸಿದ್ದ ಕೋರ್ಟ್‌) ಅವರನ್ನು ಜಡ್ಜ್‌ ಆಗಿ ನೇಮಿಸಿರುವುದನ್ನು ಕೋರ್ಟ್‌ ಉಲ್ಲೇಖಿಸಿದ್ದು, ಕೇಂದ್ರದ ದ್ವಿಮುಖ ನೀತಿಯನ್ನು ಗಮನಿಸಿದೆ.

ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ ಪೀಠವು ಈ ಕುರಿತ ಅರ್ಜಿಯನ್ನು ವಿಚಾರಣೆ ನಡೆಸಿ ಕೇಂದ್ರದ ಆಕ್ಷೇಪಣೆಯನ್ನು ತಿರಸ್ಕರಿಸಿದೆ. ಪೀಠದಲ್ಲಿ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಬಿ.ಆರ್.ಗವಾಯಿ ಅವರಿದ್ದರು.

ಮಾಧವನ್ ಅವರು ಸಿಪಿಐ(ಎಂ) ಸಹಾನುಭೂತಿ ಹೊಂದಿರುವವರು ಮತ್ತು 2010 ಮತ್ತು 2016-2021ರಲ್ಲಿ ಎಲ್‌ಡಿಎಫ್ ಸರ್ಕಾರದಿಂದ ಸರ್ಕಾರಿ ವಕೀಲರಾಗಿ ನೇಮಕಗೊಂಡಿದ್ದರಿಂದ ಮಾಧವನ್ ನ್ಯಾಯಾಧೀಶರಾಗಲು ಯೋಗ್ಯರಲ್ಲ ಎಂದು ಸರ್ಕಾರ ಹೇಳಿಕೊಂಡಿತ್ತು.

ಡೆಕ್ಕನ್ ಹೆರಾಲ್ಡ್ ಪ್ರಕಾರ, ಸುಪ್ರೀಂಕೋರ್ಟ್‌ ಕೊಲಿಜಿಯಂ ಸರ್ಕಾರದ ಕಾರಣಗಳನ್ನು ಅಸ್ಪಷ್ಟ ಮತ್ತು ಆಧಾರ ರಹಿತ ಎಂದು ಕರೆದಿದೆ. ಅಭ್ಯರ್ಥಿಯು ರಾಜಕೀಯ ಹಿನ್ನೆಲೆಯನ್ನು ಹೊಂದಿದ್ದಾನೆ ಎಂಬ ಅಂಶವು ಎಲ್ಲಾ ಸಂದರ್ಭಗಳಲ್ಲಿ ಸಾಕಷ್ಟು ಕಾರಣವಾಗಿರುವುದಿಲ್ಲ ಎಂದು ಕೊಲಿಜಿಯಂ ಹೇಳಿದೆ.

2023ರಲ್ಲಿ ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕಗೊಂಡ ಲಕ್ಷ್ಮಣ ಚಂದ್ರ ವಿಕ್ಟೋರಿಯಾ ಗೌರಿ ಅವರ ವಿವಾದಾತ್ಮಕ ಉನ್ನತಿಯನ್ನು ಸಹ ಕೊಲಿಜಿಯಂ ಉಲ್ಲೇಖಿಸಿದೆ. ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ವಿವಾದಾತ್ಮಕ ಹೇಳಿಕೆಗಳು ಮತ್ತು ಭಾರತೀಯ ಜನತಾ ಪಕ್ಷದೊಂದಿಗೆ ಅವರ ಆಪಾದಿತ ಸಂಬಂಧಗಳಿಗಾಗಿ ಗೌರಿ ಟೀಕೆಗೆ ಗುರಿಯಾಗಿದ್ದರು.

ಕೋರ್ಟ್‌ ವಿಚಾರಣೆಯ ವೇಳೆ, ಉದಾಹರಣೆಗೆ ಇತ್ತೀಚೆಗೆ ವಕೀಲರೋರ್ವರನ್ನು ಉಚ್ಚ ನ್ಯಾಯಾಲಯದ ನ್ಯಾಯಾಧೀಶರನ್ನಾಗಿ ನೇಮಿಸಲಾಗಿದೆ. ಅವರು ಪದೋನ್ನತಿಯ ಮೊದಲು ರಾಜಕೀಯ ಪಕ್ಷದ ಪದಾಧಿಕಾರಿಯಾಗಿದ್ದರು ಎಂಬುವುದನ್ನು ಸುಪ್ರೀಂಕೋರ್ಟ್‌ ಕೊಲಿಜಿಯಂ ಹೇಳಿದೆ.

ಮಾಧವನ್ ಪರಿಶಿಷ್ಟ ಜಾತಿಗೆ ಸೇರಿದವರು. ಅವರ ನೇಮಕಾತಿಗೆ ಆಕ್ಷೇಪವನ್ನು ಸಲ್ಲಿಸಲು ಮಾನ್ಯವಾದ ಆಧಾರವಿಲ್ಲ ಎಂದು ಕೋರ್ಟ್‌ ಹೇಳಿದೆ. ಅಭ್ಯರ್ಥಿಯನ್ನು ಈ ಹಿಂದೆ ಸರ್ಕಾರಿ ವಕೀಲರಾಗಿ ನೇಮಕ ಮಾಡಿರುವುದಿಂದ ಕಾನೂನಿನ ವಿವಿಧ ವಿಭಾಗಗಳಲ್ಲಿನ ಪ್ರಕರಣ ನಿರ್ವಹಿಸುವಲ್ಲಿ ಅವರು ಸಾಕಷ್ಟು ಅನುಭವವನ್ನು ಪಡೆದಿರುವುದನ್ನು ಸೂಚಿಸುತ್ತದೆ. ಅಭ್ಯರ್ಥಿಯು ಹೈಕೋರ್ಟಿನ ನ್ಯಾಯಾಧೀಶರಾಗಿ ನೇಮಕಗೊಳ್ಳಲು ಸಮರ್ಥರಾಗಿದ್ದಾರೆ ಎಂದು ಕೋರ್ಟ್‌ ಹೇಳಿದೆ.

ಇದಲ್ಲದೆ ವಕೀಲರಾದ ಅಬ್ದುಲ್ ಹಕೀಮ್, ಮುಲ್ಲಪ್ಪಲ್ಲಿ ಅಬ್ದುಲ್ ಅಜೀಜ್, ಶ್ಯಾಮ್ ಕುಮಾರ್ ವಡಕ್ಕೆ ಮುದವಕ್ಕಟ್, ಹರಿಶಂಕರ್ ವಿಜಯನ್ ಮೆನನ್, ಮನು ಶ್ರೀಧರನ್ ನಾಯರ್ ಮತ್ತು ಈಶ್ವರನ್ ಸುಬ್ರಮಣಿ ಅವರಿಗೆ ಕೇರಳ ಹೈಕೋರ್ಟ್‌ನ ನ್ಯಾಯಮೂರ್ತಿಗಳಾಗಿ ಬಡ್ತಿ ನೀಡಲು ಕೊಲಿಜಿಯಂ ಶಿಫಾರಸು ಮಾಡಿದೆ.

ಏನಿದು ಲಕ್ಷ್ಮಣ ಚಂದ್ರ ವಿಕ್ಟೋರಿಯಾ ಗೌರಿ ಪ್ರಕರಣ:

ಬಿಜೆಪಿ ನಾಯಕಿ, ವಕೀಲೆ ಲಕ್ಷ್ಮಣ ಚಂದ್ರ ವಿಕ್ಟೋರಿಯಾ ಗೌರಿ ಅವರನ್ನು ಮದ್ರಾಸ್ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ಈ ಹಿಂದೆ ನೇಮಿಸಲಾಗಿತ್ತು. ಅಲ್ಪಸಂಖ್ಯಾತ ಸಮುದಾಯದ ಬಗ್ಗೆ ಹಗುರವಾಗಿ ಮಾತನಾಡಿರುವ ಅವರನ್ನು ನ್ಯಾಯಮೂರ್ತಿಯನ್ನಾಗಿ ನೇಮಿಸಿರುವುದು ಟೀಕೆಗೆ ಗುರಿಯಾಗಿತ್ತು.

ಗೌರಿ ಅವರು ಭಾರತೀಯ ಜನತಾ ಪಕ್ಷದ ಸದಸ್ಯೆಯಾಗಿದ್ದಾರೆ. ಕ್ರಿಶ್ಚಿಯನ್ನರು ಮತ್ತು ಮುಸ್ಲಿಮರ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ಹಲವು ಬಾರಿ ನೀಡಿದ್ದರು. ಅವರ ಹೆಸರನ್ನು ಶಿಫಾರಸು ಮಾಡಿದ ಕೊಲಿಜಿಯಂ ಕ್ರಮವು ಸರಿಯಲ್ಲ ಎಂದು ವಕೀಲರು ಮತ್ತು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದರು.

ಬಿಜೆಪಿಯ ಸೈದ್ಧಾಂತಿಕ ಪೋಷಕ, ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ಅತ್ಯಾಪ್ತವಾಗಿದ್ದ ವಿಕ್ಟೋರಿಯಾ ಗೌರಿ, ಆರೆಸ್ಸೆಸ್‌ನ ಆಂಗ್ಲ ಭಾಷೆಯ ಮುಖವಾಣಿ ಆರ್ಗನೈಸರ್‌ನಲ್ಲಿ ಲೇಖನವನ್ನು ಬರೆಯುತ್ತಿದ್ದರು.

ಇದನ್ನು ಓದಿ: ಗೋಹತ್ಯೆ ವದಂತಿಯಿಂದ ಮುಸ್ಲಿಂ ವ್ಯಾಪಾರಿಯ ಗುಂಪು ಹತ್ಯೆ: ಪೊಲೀಸರು ಕೂಡ ತಪ್ಪಿತಸ್ಥರೆಂದು ಕೋರ್ಟ್‌ ಹೇಳಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...