Homeಮುಖಪುಟಪ್ರಬೀರ್ ಪುರ್ಕಾಯಸ್ಥ ವೈದ್ಯಕೀಯ ಪರೀಕ್ಷೆಗೆ ವೈದ್ಯರ ಮಂಡಳಿ ನೇಮಿಸಲು AIIMSಗೆ ನಿರ್ದೇಶಿಸಿದ ಸುಪ್ರೀಂ

ಪ್ರಬೀರ್ ಪುರ್ಕಾಯಸ್ಥ ವೈದ್ಯಕೀಯ ಪರೀಕ್ಷೆಗೆ ವೈದ್ಯರ ಮಂಡಳಿ ನೇಮಿಸಲು AIIMSಗೆ ನಿರ್ದೇಶಿಸಿದ ಸುಪ್ರೀಂ

- Advertisement -
- Advertisement -

ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಅವರಿಗೆ ಸ್ವತಂತ್ರವಾಗಿ ವೈದ್ಯಕೀಯ ಪರೀಕ್ಷೆ ನಡೆಸುವಂತೆ ಸುಪ್ರೀಂಕೋರ್ಟ್ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ಗೆ (ಎಐಐಎಂಎಸ್) ಸೂಚನೆ ನೀಡಿದೆ.

ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು,  ಪ್ರಬೀರ್ ಪುರ್ಕಾಯಸ್ಥ ಅವರ ವೈದ್ಯಕೀಯ ಸ್ಥಿತಿಯನ್ನು ಏಮ್ಸ್ ನಿರ್ದೇಶಕರು ನೇಮಿಸಿದ ಮಂಡಳಿಯಿಂದ ಪರೀಕ್ಷಿಸುವುದು ಸೂಕ್ತವಾಗಿರುತ್ತದೆ. ಮಂಡಳಿಯು ಜೈಲು ದಾಖಲೆಗಳನ್ನು ಮತ್ತು ಅರ್ಜಿದಾರರ ಸಂಪೂರ್ಣ ವೈದ್ಯಕೀಯ ಇತಿಹಾಸವನ್ನು ಪರಿಶೀಲಿಸಲಿದೆ ಎಂದು  ನ್ಯಾಯಾಲಯ ಹೇಳಿದೆ.

ದೆಹಲಿ ಪೊಲೀಸರ ಪರ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ ರಾಜು ಅವರ ವಾದವನ್ನು ನ್ಯಾಯಾಲಯ ತಿರಸ್ಕರಿಸಿದೆ. ನ್ಯೂಸ್‌ಕ್ಲಿಕ್ ಸಂಸ್ಥಾಪಕರು ವಿಶೇಷ ಚಿಕಿತ್ಸೆ ಕೇಳುತ್ತಿದ್ದಾರೆ. ಅಸಾರಾಂ ಬಾಪು ಅವರಿಗೆ ಏಮ್ಸ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯಬಹುದಾದರೆ, ಪುರಕಾಯಸ್ಥ ಕೂಡ ಚಿಕಿತ್ಸೆ ಪಡೆಯಬಹುದು ಎಂದು ಪೀಠ ಒತ್ತಿ ಹೇಳಿದೆ

ಜೋಧ್‌ಪುರದಲ್ಲಿ (ಅಸಾರಾಮ್) ಒಬ್ಬ ಅಪರಾಧಿ ಇದ್ದಾನೆ, ಅವರು ಏಮ್ಸ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ. ನೀವು ಅವರನ್ನು ಬಿಡುಗಡೆ ಮಾಡುತ್ತೀರಿ ಮತ್ತು ಅವರಿಗೆ ಎಲ್ಲಿ ಬೇಕಾದರೂ ಚಿಕಿತ್ಸೆ ಕೊಡುತ್ತೀರಿ ಎನ್ನುವುದನ್ನು ನ್ಯಾಯಾಲಯ ಉಲ್ಲೇಖಿಸಿದೆ.

ಪುರ್ಕಾಯಸ್ಥ ಪರ ಕಪಿಲ್ ಸಿಬಲ್ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಪ್ರಕರಣದಲ್ಲಿ ತನ್ನನ್ನು ಮತ್ತು ಇತರರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸುವ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದ ದೆಹಲಿ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಪುರ್ಕಾಯಸ್ಥ ಸುಪ್ರೀಂ ಮೊರೆ ಹೋಗಿದ್ದರು.

ಅಕ್ಟೋಬರ್ 4ರಂದು ಪುರ್ಕಾಯಸ್ಥ ಮತ್ತು ಚಕ್ರವರ್ತಿಯವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ದೆಹಲಿ ಪೊಲೀಸರು ಸಲ್ಲಿಸಿದ ಮಾಹಿತಿ ಪ್ರಕಾರ,  ನೆವಿಲ್ಲೆ ರಾಯ್ ಸಿಂಗಮ್, ಪ್ರಬೀರ್ ಪುರ್ಕಾಯಸ್ಥ ಮತ್ತು ಅಮಿತ್ ಚಕ್ರವರ್ತಿ ಪರಸ್ಪರ ನೇರ ಸಂಪರ್ಕದಲ್ಲಿದ್ದರು ಮತ್ತು ಕಾಶ್ಮೀರವಿಲ್ಲದೆ ಭಾರತದ ನಕ್ಷೆಯನ್ನು ಹೇಗೆ ರಚಿಸುವುದು ಮತ್ತು ಅರುಣಾಚಲ ಪ್ರದೇಶವನ್ನು ವಿವಾದಿತ ಪ್ರದೇಶವೆಂದು ತೋರಿಸುವುದು ಹೇಗೆ ಎಂದು ಇವರು ಚರ್ಚಿಸುತ್ತಿರುವುದು ಕಂಡುಬಂದಿದೆ. ಈ ಉದ್ದೇಶವನ್ನು ಸಾಧಿಸಲು ಆರೋಪಿಗಳು ವಿದೇಶಿ ನಿಧಿಯ ಹೆಸರಿನಲ್ಲಿ ಪಿಪಿಕೆ ನ್ಯೂಸ್‌ಕ್ಲಿಕ್, ಜಿಸ್ಪಾನ್ ಇಂಡಿಯಾ, ಜೆಜೆ ಎಂಟರ್‌ಪ್ರೈಸಸ್, ವರ್ಚುನೆಟ್ ಸಿಸ್ಟಮ್ ಹೆಸರಿನ ಕಂಪನಿಗಳಲ್ಲಿ 115 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಇದರ ಭಾಗವಾಗಿ ಆನ್‌ಲೈನ್ ನ್ಯೂಸ್ ಪೋರ್ಟಲ್ ನ್ಯೂಸ್ ಕ್ಲಿಕ್‌ ವಿರುದ್ಧ ಕೂಡ ಪ್ರಕರಣ ದಾಖಲಿಸಲಾಗಿದೆ.

ದೆಹಲಿ ಪೊಲೀಸರ ವಿಶೇಷ ಕೋಶವು  ನ್ಯೂಸ್‌ ಕ್ಲಿಕ್‌ಗೆ ಸಂಬಂಧಿಸಿದ ವಿವಿಧೆಡೆ ದಾಳಿ ನಡೆಸಿದ್ದು, ಈ ವೇಳೆ ಪತ್ರಕರ್ತರಿಂದ ಫೋನ್‌ಗಳು, ಹಾರ್ಡ್ ಡಿಸ್ಕ್‌ಗಳು ಮತ್ತು ಲ್ಯಾಪ್‌ಟಾಪ್‌ಗಳು  ಸೇರಿದಂತೆ ಸುಮಾರು 250 ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಂಡಿದೆ. ನ್ಯೂಸ್‌ಗೆ ಸಂಬಂಧಿಸಿದ 90ಕ್ಕೂ ಹೆಚ್ಚು ಪತ್ರಕರ್ತರ ನಿವಾಸಗಳಲ್ಲಿ ಪೊಲೀಸರು ಪರಿಶೀಲನೆಯನ್ನು ನಡೆಸಿದ್ದರು. ಪ್ರಬೀರ್ ಪುರ್ಕಾಯಸ್ಥ ಮತ್ತು ನ್ಯೂಸ್‌ಕ್ಲಿಕ್ ಎಚ್‌ಆರ್ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರನ್ನು ಕಠಿಣ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆಯಡಿ ಬಂಧಿಸಲಾಗಿತ್ತು.

ಇದನ್ನು ಓದಿ: ರಾಜ್ಯಸಭಾ ಚುನಾವಣೆ ನಂತರ ಹಿಮಾಚಲ ಕಾಂಗ್ರೆಸ್‌ನಲ್ಲಿ ಕೋಲಾಹಲ; ಡ್ಯಾಮೇಜ್‌ ಕಂಟ್ರೋಲಿಗೆ ಮುಂದಾದ ಡಿಕೆಶಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...