Homeಮುಖಪುಟಪ್ರಬೀರ್ ಪುರ್ಕಾಯಸ್ಥ ವೈದ್ಯಕೀಯ ಪರೀಕ್ಷೆಗೆ ವೈದ್ಯರ ಮಂಡಳಿ ನೇಮಿಸಲು AIIMSಗೆ ನಿರ್ದೇಶಿಸಿದ ಸುಪ್ರೀಂ

ಪ್ರಬೀರ್ ಪುರ್ಕಾಯಸ್ಥ ವೈದ್ಯಕೀಯ ಪರೀಕ್ಷೆಗೆ ವೈದ್ಯರ ಮಂಡಳಿ ನೇಮಿಸಲು AIIMSಗೆ ನಿರ್ದೇಶಿಸಿದ ಸುಪ್ರೀಂ

- Advertisement -
- Advertisement -

ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಅವರಿಗೆ ಸ್ವತಂತ್ರವಾಗಿ ವೈದ್ಯಕೀಯ ಪರೀಕ್ಷೆ ನಡೆಸುವಂತೆ ಸುಪ್ರೀಂಕೋರ್ಟ್ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ಗೆ (ಎಐಐಎಂಎಸ್) ಸೂಚನೆ ನೀಡಿದೆ.

ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು,  ಪ್ರಬೀರ್ ಪುರ್ಕಾಯಸ್ಥ ಅವರ ವೈದ್ಯಕೀಯ ಸ್ಥಿತಿಯನ್ನು ಏಮ್ಸ್ ನಿರ್ದೇಶಕರು ನೇಮಿಸಿದ ಮಂಡಳಿಯಿಂದ ಪರೀಕ್ಷಿಸುವುದು ಸೂಕ್ತವಾಗಿರುತ್ತದೆ. ಮಂಡಳಿಯು ಜೈಲು ದಾಖಲೆಗಳನ್ನು ಮತ್ತು ಅರ್ಜಿದಾರರ ಸಂಪೂರ್ಣ ವೈದ್ಯಕೀಯ ಇತಿಹಾಸವನ್ನು ಪರಿಶೀಲಿಸಲಿದೆ ಎಂದು  ನ್ಯಾಯಾಲಯ ಹೇಳಿದೆ.

ದೆಹಲಿ ಪೊಲೀಸರ ಪರ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ ರಾಜು ಅವರ ವಾದವನ್ನು ನ್ಯಾಯಾಲಯ ತಿರಸ್ಕರಿಸಿದೆ. ನ್ಯೂಸ್‌ಕ್ಲಿಕ್ ಸಂಸ್ಥಾಪಕರು ವಿಶೇಷ ಚಿಕಿತ್ಸೆ ಕೇಳುತ್ತಿದ್ದಾರೆ. ಅಸಾರಾಂ ಬಾಪು ಅವರಿಗೆ ಏಮ್ಸ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯಬಹುದಾದರೆ, ಪುರಕಾಯಸ್ಥ ಕೂಡ ಚಿಕಿತ್ಸೆ ಪಡೆಯಬಹುದು ಎಂದು ಪೀಠ ಒತ್ತಿ ಹೇಳಿದೆ

ಜೋಧ್‌ಪುರದಲ್ಲಿ (ಅಸಾರಾಮ್) ಒಬ್ಬ ಅಪರಾಧಿ ಇದ್ದಾನೆ, ಅವರು ಏಮ್ಸ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ. ನೀವು ಅವರನ್ನು ಬಿಡುಗಡೆ ಮಾಡುತ್ತೀರಿ ಮತ್ತು ಅವರಿಗೆ ಎಲ್ಲಿ ಬೇಕಾದರೂ ಚಿಕಿತ್ಸೆ ಕೊಡುತ್ತೀರಿ ಎನ್ನುವುದನ್ನು ನ್ಯಾಯಾಲಯ ಉಲ್ಲೇಖಿಸಿದೆ.

ಪುರ್ಕಾಯಸ್ಥ ಪರ ಕಪಿಲ್ ಸಿಬಲ್ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಪ್ರಕರಣದಲ್ಲಿ ತನ್ನನ್ನು ಮತ್ತು ಇತರರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸುವ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದ ದೆಹಲಿ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಪುರ್ಕಾಯಸ್ಥ ಸುಪ್ರೀಂ ಮೊರೆ ಹೋಗಿದ್ದರು.

ಅಕ್ಟೋಬರ್ 4ರಂದು ಪುರ್ಕಾಯಸ್ಥ ಮತ್ತು ಚಕ್ರವರ್ತಿಯವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ದೆಹಲಿ ಪೊಲೀಸರು ಸಲ್ಲಿಸಿದ ಮಾಹಿತಿ ಪ್ರಕಾರ,  ನೆವಿಲ್ಲೆ ರಾಯ್ ಸಿಂಗಮ್, ಪ್ರಬೀರ್ ಪುರ್ಕಾಯಸ್ಥ ಮತ್ತು ಅಮಿತ್ ಚಕ್ರವರ್ತಿ ಪರಸ್ಪರ ನೇರ ಸಂಪರ್ಕದಲ್ಲಿದ್ದರು ಮತ್ತು ಕಾಶ್ಮೀರವಿಲ್ಲದೆ ಭಾರತದ ನಕ್ಷೆಯನ್ನು ಹೇಗೆ ರಚಿಸುವುದು ಮತ್ತು ಅರುಣಾಚಲ ಪ್ರದೇಶವನ್ನು ವಿವಾದಿತ ಪ್ರದೇಶವೆಂದು ತೋರಿಸುವುದು ಹೇಗೆ ಎಂದು ಇವರು ಚರ್ಚಿಸುತ್ತಿರುವುದು ಕಂಡುಬಂದಿದೆ. ಈ ಉದ್ದೇಶವನ್ನು ಸಾಧಿಸಲು ಆರೋಪಿಗಳು ವಿದೇಶಿ ನಿಧಿಯ ಹೆಸರಿನಲ್ಲಿ ಪಿಪಿಕೆ ನ್ಯೂಸ್‌ಕ್ಲಿಕ್, ಜಿಸ್ಪಾನ್ ಇಂಡಿಯಾ, ಜೆಜೆ ಎಂಟರ್‌ಪ್ರೈಸಸ್, ವರ್ಚುನೆಟ್ ಸಿಸ್ಟಮ್ ಹೆಸರಿನ ಕಂಪನಿಗಳಲ್ಲಿ 115 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಇದರ ಭಾಗವಾಗಿ ಆನ್‌ಲೈನ್ ನ್ಯೂಸ್ ಪೋರ್ಟಲ್ ನ್ಯೂಸ್ ಕ್ಲಿಕ್‌ ವಿರುದ್ಧ ಕೂಡ ಪ್ರಕರಣ ದಾಖಲಿಸಲಾಗಿದೆ.

ದೆಹಲಿ ಪೊಲೀಸರ ವಿಶೇಷ ಕೋಶವು  ನ್ಯೂಸ್‌ ಕ್ಲಿಕ್‌ಗೆ ಸಂಬಂಧಿಸಿದ ವಿವಿಧೆಡೆ ದಾಳಿ ನಡೆಸಿದ್ದು, ಈ ವೇಳೆ ಪತ್ರಕರ್ತರಿಂದ ಫೋನ್‌ಗಳು, ಹಾರ್ಡ್ ಡಿಸ್ಕ್‌ಗಳು ಮತ್ತು ಲ್ಯಾಪ್‌ಟಾಪ್‌ಗಳು  ಸೇರಿದಂತೆ ಸುಮಾರು 250 ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಂಡಿದೆ. ನ್ಯೂಸ್‌ಗೆ ಸಂಬಂಧಿಸಿದ 90ಕ್ಕೂ ಹೆಚ್ಚು ಪತ್ರಕರ್ತರ ನಿವಾಸಗಳಲ್ಲಿ ಪೊಲೀಸರು ಪರಿಶೀಲನೆಯನ್ನು ನಡೆಸಿದ್ದರು. ಪ್ರಬೀರ್ ಪುರ್ಕಾಯಸ್ಥ ಮತ್ತು ನ್ಯೂಸ್‌ಕ್ಲಿಕ್ ಎಚ್‌ಆರ್ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರನ್ನು ಕಠಿಣ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆಯಡಿ ಬಂಧಿಸಲಾಗಿತ್ತು.

ಇದನ್ನು ಓದಿ: ರಾಜ್ಯಸಭಾ ಚುನಾವಣೆ ನಂತರ ಹಿಮಾಚಲ ಕಾಂಗ್ರೆಸ್‌ನಲ್ಲಿ ಕೋಲಾಹಲ; ಡ್ಯಾಮೇಜ್‌ ಕಂಟ್ರೋಲಿಗೆ ಮುಂದಾದ ಡಿಕೆಶಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...