Homeಮುಖಪುಟಸಿಬಿಐ, ಇಡಿ, ಎನ್‌ಐಎ ಕಚೇರಿಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯ: ಸುಪ್ರೀಂ

ಸಿಬಿಐ, ಇಡಿ, ಎನ್‌ಐಎ ಕಚೇರಿಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯ: ಸುಪ್ರೀಂ

ಪೊಲೀಸ್ ಠಾಣೆಗಳಲ್ಲಿ ಹಲ್ಲೆಗೊಳಗಾದಾಗ ಅಥವಾ ಲಾಕಪ್ ಡೆತ್ ಸಂಭವಿಸಿದ ಸಂದರ್ಭಗಳಲ್ಲಿ ಸಂತ್ರಸ್ತರು ಸಿಸಿಟಿವಿ ದೃಶ್ಯಾವಳಿಗಳನ್ನು ಸಾಕ್ಷಿಯಾಗಿ ಬಳಸಿಕೊಳ್ಳಬಹುದು.

- Advertisement -
- Advertisement -

ದೇಶಾದ್ಯಂತದ ಪ್ರತಿಯೊಂದು ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆಯೇ ಎಂಬುದನ್ನು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳು ಖಚಿತಪಡಿಸಿಕೊಳ್ಳುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ.

ಪ್ರತಿ ಪೊಲೀಸ್ ಠಾಣೆಗಳಲ್ಲಿ ನೈಟ್ ವಿಷನ್ ಕ್ಯಾಮೆರಾಗಳೊಂದಿಗೆ, ಆಡಿಯೋ ಮುದ್ರಿಸುವ ಸಿಸಿಟಿವಿ ಅಳವಡಿಸುವಂತೆ ಸುಪ್ರೀಂ ಕೋರ್ಟ್ ಹೇಳಿದ್ದು, ಕ್ಯಾಮೆರಾ ರೆಕಾರ್ಡಿಂಗ್ ಅನ್ನು ಕನಿಷ್ಠ 18 ತಿಂಗಳವರೆಗೆ ಸಂಗ್ರಹಿಸಿಡುವಂತೆ ನ್ಯಾಯಾಲಯ ನಿರ್ದೇಶಿಸಿದೆ.

ಜೊತೆಗೆ ವಿಚಾರಣೆ ನಡೆಸುವ ಮತ್ತು ಬಂಧಿಸುವ ಅಧಿಕಾರವಿರುವ ಸಿಬಿಐ, ಜಾರಿ ನಿರ್ದೇಶಾನಲಯ, ರಾಷ್ಟ್ರೀಯ ತನಿಖಾ ಸಂಸ್ಥೆ ಸೇರಿದಂತೆ ದೇಶದ ಎಲ್ಲಾ ಏಜೆನ್ಸಿಗಳ ಕಚೇರಿಗಳಲ್ಲಿ ಧ್ವನಿಮುದ್ರಣ ಸವಲತ್ತು ಇರುವ ಸಿಸಿಟಿವಿ ಕ್ಯಾಮೆರಾವನ್ನು ಅಳವಡಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಆದೇಶಿಸಿದೆ.

ಇದನ್ನೂ ಓದಿ: ವಾರಣಾಸಿ: ಮೋದಿ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಸೈನಿಕನ ಮನವಿ ತಿರಸ್ಕರಿಸಿದ ಸುಪ್ರೀಂ!

ಪರಮವೀರ್ ಸಿಂಗ್ ಸೈನಿ ಎನ್ನುವವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಸುಪ್ರೀಂಕೋರ್ಟ್ 2018ರಲ್ಲಿ ಸಿಸಿಟಿವಿ ಅಳವಡಿಕೆ ಕುರಿತು ತೀರ್ಪು ನೀಡಿತ್ತು. ಸಾಕ್ಷಿಗಳ ಹೇಳಿಕೆಗಳ ಆಡಿಯೋ ಮತ್ತು ವಿಡಿಯೋ ರೆಕಾರ್ಡಿಂಗ್ ಮತ್ತು ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸುವ ವಿಷಯವನ್ನು ಪರಮವೀರ್ ಸಿಂಗ್ ಸೈನಿ ಎತ್ತಿದ್ದರು.

ಈಗ ಮತ್ತೆ ನ್ಯಾಯಮೂರ್ತಿ ಆರ್‌.ಎಫ್‌.ನಾರೀಮನ್ ಅವರ ನೇತೃತ್ವದ ತ್ರಿಸದಸ್ಯ ಪೀಠವು, ಕಚೇರಿಗಳಲ್ಲಿ ಅಳವಡಿಸಲಾದ ಸಿಸಿಟಿವಿಗಳು ನೈಟ್ ವಿಷನ್ ಹೊಂದಿರಬೇಕು ಮತ್ತು ಅಗತ್ಯವಾಗಿ ಆಡಿಯೋ ಮತ್ತು ವಿಡಿಯೋಗಳು ಇರಬೇಕು ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ತೀರ್ಪಿನಲ್ಲಿ, ವಿದ್ಯುತ್ ಮತ್ತು ಇಂಟರ್ನೆಟ್ ಸಂಪರ್ಕವಿಲ್ಲದ ಪ್ರದೇಶಗಳಲ್ಲಿ, ಸೌರಶಕ್ತಿ ಮತ್ತು ಪವನ ಶಕ್ತಿ ಸೇರಿದಂತೆ ವಿದ್ಯುತ್ ಒದಗಿಸುವ ಯಾವುದೇ ವಿಧಾನವನ್ನು ಬಳಸಿಕೊಳ್ಳಬೇಕು. ಸಾಧ್ಯವಾದಷ್ಟು ತ್ವರಿತವಾಗಿ ಸಿಸಿಟಿವಿ ಒದಗಿಸುವುದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕರ್ತವ್ಯವಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: ಸುಪ್ರೀಂ ಹೊರಗೆ ಪ್ರತಿಭಟನೆ: ರೈತರ ಹೋರಾಟಕ್ಕೆ ಸಾಥ್ ನೀಡಿದ ದೆಹಲಿ ವಕೀಲರು!

ಪೊಲೀಸ್ ಠಾಣೆಗಳಲ್ಲಿ ಹಲ್ಲೆಗೊಳಗಾದಾಗ ಅಥವಾ ಲಾಕಪ್ ಡೆತ್ ಸಂಭವಿಸಿದ ಸಂದರ್ಭಗಳಲ್ಲಿ ಸಂತ್ರಸ್ತರು ಮಾನವ ಹಕ್ಕುಗಳ ನ್ಯಾಯಾಲಯಗಳಿಗೆ ದೂರು ನೀಡಬಹುದು. ಆಗ ಸಿಸಿಟಿವಿ ದೃಶ್ಯಾವಳಿಗಳನ್ನು ಸಾಕ್ಷಿಯಾಗಿ ಬಳಸಿಕೊಳ್ಳಬಹುದು. ಮಾನವ ಹಕ್ಕುಗಳ ಉಲ್ಲಂಘನೆಯ ಸಂದರ್ಭದಲ್ಲಿ ದೃಶ್ಯಾವಳಿಯನ್ನು ಸಂತ್ರಸ್ತರಿಗೆ ಲಭ್ಯವಾಗುವಂತೆ ಮಾಡಬೇಕು ಎಂದು ನ್ಯಾಯಾಲಯ ತಿಳಿಸಿದೆ.

ಸಿಸಿಟಿವಿಗಳ ಕೆಲಸ, ನಿರ್ವಹಣೆ ಮತ್ತು ಧ್ವನಿಮುದ್ರಣದ ಜವಾಬ್ದಾರಿ ಸಂಬಂಧಪಟ್ಟ ಪೊಲೀಸ್ ಠಾಣೆಯ ಎಸ್‌ಎಚ್‌ಒಗೆ ಇರುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಪೊಲೀಸ್ ಠಾಣೆಗಳ ಪ್ರವೇಶ ದ್ವಾರ ಮತ್ತು ನಿರ್ಗಮನ ದ್ವಾರಗಳಲ್ಲಿ, ಮುಖ್ಯದ್ವಾರ, ಲಾಬಿಯಲ್ಲಿ, ಎಲ್ಲಾ ಲಾಕ್-ಅಪ್‌ಗಳು, ಇನ್ಸ್‌ಪೆಕ್ಟರ್‌ಗಳ ಕೊಠಡಿ, ಸಬ್ ಇನ್ಸ್‌ಪೆಕ್ಟರ್‌ಗಳ ಕೊಠಡಿ ಸೇರಿ ಎಲ್ಲಾ ಕಡೆ ಕ್ಯಾಮೆರಾ ಅಳವಡಿಸಬೇಕು. ಜೊತೆಗೆ ಇದನ್ನು ತಿಳಿಸುವ ಪೋಸ್ಟರ್‌ಗಳನ್ನು ಪೊಲೀಸ್ ಠಾಣೆಗಳ ಪ್ರವೇಶದ್ವಾರದಲ್ಲಿ ಹಾಕಬೇಕು ಎಂದು ನ್ಯಾಯಾಲಯ ತಿಳಿಸಿದೆ.


ಇದನ್ನೂ ಓದಿ: ರಾಜ್ಯಗಳ ಒಪ್ಪಿಗೆಯಿಲ್ಲದೆ ಕೇಂದ್ರವು ಸಿಬಿಐ ಅಧಿಕಾರ ವ್ಯಾಪ್ತಿ ವಿಸ್ತರಿಸಲು ಸಾಧ್ಯವಿಲ್ಲ: ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...