Homeಮುಖಪುಟಸಿಬಿಐ, ಇಡಿ, ಎನ್‌ಐಎ ಕಚೇರಿಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯ: ಸುಪ್ರೀಂ

ಸಿಬಿಐ, ಇಡಿ, ಎನ್‌ಐಎ ಕಚೇರಿಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯ: ಸುಪ್ರೀಂ

ಪೊಲೀಸ್ ಠಾಣೆಗಳಲ್ಲಿ ಹಲ್ಲೆಗೊಳಗಾದಾಗ ಅಥವಾ ಲಾಕಪ್ ಡೆತ್ ಸಂಭವಿಸಿದ ಸಂದರ್ಭಗಳಲ್ಲಿ ಸಂತ್ರಸ್ತರು ಸಿಸಿಟಿವಿ ದೃಶ್ಯಾವಳಿಗಳನ್ನು ಸಾಕ್ಷಿಯಾಗಿ ಬಳಸಿಕೊಳ್ಳಬಹುದು.

- Advertisement -
- Advertisement -

ದೇಶಾದ್ಯಂತದ ಪ್ರತಿಯೊಂದು ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆಯೇ ಎಂಬುದನ್ನು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳು ಖಚಿತಪಡಿಸಿಕೊಳ್ಳುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ.

ಪ್ರತಿ ಪೊಲೀಸ್ ಠಾಣೆಗಳಲ್ಲಿ ನೈಟ್ ವಿಷನ್ ಕ್ಯಾಮೆರಾಗಳೊಂದಿಗೆ, ಆಡಿಯೋ ಮುದ್ರಿಸುವ ಸಿಸಿಟಿವಿ ಅಳವಡಿಸುವಂತೆ ಸುಪ್ರೀಂ ಕೋರ್ಟ್ ಹೇಳಿದ್ದು, ಕ್ಯಾಮೆರಾ ರೆಕಾರ್ಡಿಂಗ್ ಅನ್ನು ಕನಿಷ್ಠ 18 ತಿಂಗಳವರೆಗೆ ಸಂಗ್ರಹಿಸಿಡುವಂತೆ ನ್ಯಾಯಾಲಯ ನಿರ್ದೇಶಿಸಿದೆ.

ಜೊತೆಗೆ ವಿಚಾರಣೆ ನಡೆಸುವ ಮತ್ತು ಬಂಧಿಸುವ ಅಧಿಕಾರವಿರುವ ಸಿಬಿಐ, ಜಾರಿ ನಿರ್ದೇಶಾನಲಯ, ರಾಷ್ಟ್ರೀಯ ತನಿಖಾ ಸಂಸ್ಥೆ ಸೇರಿದಂತೆ ದೇಶದ ಎಲ್ಲಾ ಏಜೆನ್ಸಿಗಳ ಕಚೇರಿಗಳಲ್ಲಿ ಧ್ವನಿಮುದ್ರಣ ಸವಲತ್ತು ಇರುವ ಸಿಸಿಟಿವಿ ಕ್ಯಾಮೆರಾವನ್ನು ಅಳವಡಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಆದೇಶಿಸಿದೆ.

ಇದನ್ನೂ ಓದಿ: ವಾರಣಾಸಿ: ಮೋದಿ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಸೈನಿಕನ ಮನವಿ ತಿರಸ್ಕರಿಸಿದ ಸುಪ್ರೀಂ!

ಪರಮವೀರ್ ಸಿಂಗ್ ಸೈನಿ ಎನ್ನುವವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಸುಪ್ರೀಂಕೋರ್ಟ್ 2018ರಲ್ಲಿ ಸಿಸಿಟಿವಿ ಅಳವಡಿಕೆ ಕುರಿತು ತೀರ್ಪು ನೀಡಿತ್ತು. ಸಾಕ್ಷಿಗಳ ಹೇಳಿಕೆಗಳ ಆಡಿಯೋ ಮತ್ತು ವಿಡಿಯೋ ರೆಕಾರ್ಡಿಂಗ್ ಮತ್ತು ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸುವ ವಿಷಯವನ್ನು ಪರಮವೀರ್ ಸಿಂಗ್ ಸೈನಿ ಎತ್ತಿದ್ದರು.

ಈಗ ಮತ್ತೆ ನ್ಯಾಯಮೂರ್ತಿ ಆರ್‌.ಎಫ್‌.ನಾರೀಮನ್ ಅವರ ನೇತೃತ್ವದ ತ್ರಿಸದಸ್ಯ ಪೀಠವು, ಕಚೇರಿಗಳಲ್ಲಿ ಅಳವಡಿಸಲಾದ ಸಿಸಿಟಿವಿಗಳು ನೈಟ್ ವಿಷನ್ ಹೊಂದಿರಬೇಕು ಮತ್ತು ಅಗತ್ಯವಾಗಿ ಆಡಿಯೋ ಮತ್ತು ವಿಡಿಯೋಗಳು ಇರಬೇಕು ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ತೀರ್ಪಿನಲ್ಲಿ, ವಿದ್ಯುತ್ ಮತ್ತು ಇಂಟರ್ನೆಟ್ ಸಂಪರ್ಕವಿಲ್ಲದ ಪ್ರದೇಶಗಳಲ್ಲಿ, ಸೌರಶಕ್ತಿ ಮತ್ತು ಪವನ ಶಕ್ತಿ ಸೇರಿದಂತೆ ವಿದ್ಯುತ್ ಒದಗಿಸುವ ಯಾವುದೇ ವಿಧಾನವನ್ನು ಬಳಸಿಕೊಳ್ಳಬೇಕು. ಸಾಧ್ಯವಾದಷ್ಟು ತ್ವರಿತವಾಗಿ ಸಿಸಿಟಿವಿ ಒದಗಿಸುವುದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕರ್ತವ್ಯವಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: ಸುಪ್ರೀಂ ಹೊರಗೆ ಪ್ರತಿಭಟನೆ: ರೈತರ ಹೋರಾಟಕ್ಕೆ ಸಾಥ್ ನೀಡಿದ ದೆಹಲಿ ವಕೀಲರು!

ಪೊಲೀಸ್ ಠಾಣೆಗಳಲ್ಲಿ ಹಲ್ಲೆಗೊಳಗಾದಾಗ ಅಥವಾ ಲಾಕಪ್ ಡೆತ್ ಸಂಭವಿಸಿದ ಸಂದರ್ಭಗಳಲ್ಲಿ ಸಂತ್ರಸ್ತರು ಮಾನವ ಹಕ್ಕುಗಳ ನ್ಯಾಯಾಲಯಗಳಿಗೆ ದೂರು ನೀಡಬಹುದು. ಆಗ ಸಿಸಿಟಿವಿ ದೃಶ್ಯಾವಳಿಗಳನ್ನು ಸಾಕ್ಷಿಯಾಗಿ ಬಳಸಿಕೊಳ್ಳಬಹುದು. ಮಾನವ ಹಕ್ಕುಗಳ ಉಲ್ಲಂಘನೆಯ ಸಂದರ್ಭದಲ್ಲಿ ದೃಶ್ಯಾವಳಿಯನ್ನು ಸಂತ್ರಸ್ತರಿಗೆ ಲಭ್ಯವಾಗುವಂತೆ ಮಾಡಬೇಕು ಎಂದು ನ್ಯಾಯಾಲಯ ತಿಳಿಸಿದೆ.

ಸಿಸಿಟಿವಿಗಳ ಕೆಲಸ, ನಿರ್ವಹಣೆ ಮತ್ತು ಧ್ವನಿಮುದ್ರಣದ ಜವಾಬ್ದಾರಿ ಸಂಬಂಧಪಟ್ಟ ಪೊಲೀಸ್ ಠಾಣೆಯ ಎಸ್‌ಎಚ್‌ಒಗೆ ಇರುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಪೊಲೀಸ್ ಠಾಣೆಗಳ ಪ್ರವೇಶ ದ್ವಾರ ಮತ್ತು ನಿರ್ಗಮನ ದ್ವಾರಗಳಲ್ಲಿ, ಮುಖ್ಯದ್ವಾರ, ಲಾಬಿಯಲ್ಲಿ, ಎಲ್ಲಾ ಲಾಕ್-ಅಪ್‌ಗಳು, ಇನ್ಸ್‌ಪೆಕ್ಟರ್‌ಗಳ ಕೊಠಡಿ, ಸಬ್ ಇನ್ಸ್‌ಪೆಕ್ಟರ್‌ಗಳ ಕೊಠಡಿ ಸೇರಿ ಎಲ್ಲಾ ಕಡೆ ಕ್ಯಾಮೆರಾ ಅಳವಡಿಸಬೇಕು. ಜೊತೆಗೆ ಇದನ್ನು ತಿಳಿಸುವ ಪೋಸ್ಟರ್‌ಗಳನ್ನು ಪೊಲೀಸ್ ಠಾಣೆಗಳ ಪ್ರವೇಶದ್ವಾರದಲ್ಲಿ ಹಾಕಬೇಕು ಎಂದು ನ್ಯಾಯಾಲಯ ತಿಳಿಸಿದೆ.


ಇದನ್ನೂ ಓದಿ: ರಾಜ್ಯಗಳ ಒಪ್ಪಿಗೆಯಿಲ್ಲದೆ ಕೇಂದ್ರವು ಸಿಬಿಐ ಅಧಿಕಾರ ವ್ಯಾಪ್ತಿ ವಿಸ್ತರಿಸಲು ಸಾಧ್ಯವಿಲ್ಲ: ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...