Homeಮುಖಪುಟಆರು ವಕೀಲರನ್ನು ಬದಲಾಯಿಸಿದ್ದಕ್ಕೆ ಮಹಿಳೆಗೆ ಜೈಲು ಶಿಕ್ಷೆ : ತೀರ್ಪು 'ಆಘಾತಕಾರಿ' ಎಂದ ಸುಪ್ರೀಂ ಕೋರ್ಟ್‌

ಆರು ವಕೀಲರನ್ನು ಬದಲಾಯಿಸಿದ್ದಕ್ಕೆ ಮಹಿಳೆಗೆ ಜೈಲು ಶಿಕ್ಷೆ : ತೀರ್ಪು ‘ಆಘಾತಕಾರಿ’ ಎಂದ ಸುಪ್ರೀಂ ಕೋರ್ಟ್‌

- Advertisement -
- Advertisement -

ಚೆಕ್ ಬೌನ್ಸ್ ಪ್ರಕರಣದ ಮೇಲ್ಮನವಿ ವಿಚಾರಣೆಗೆ ವೇಳೆ ಆರು ತಿಂಗಳಲ್ಲಿ ಆರು ಬಾರಿ ವಕೀಲರನ್ನು ಬದಲಾಯಿಸಿದ್ದಕ್ಕಾಗಿ ಹರಿಯಾಣದ ಫರಿದಾಬಾದ್ ಸೆಷನ್ಸ್ ಕೋರ್ಟ್‌ನಿಂದ ಜೈಲು ಶಿಕ್ಷೆಗೊಳಗಾದ ಮಹಿಳೆಯನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ನವೆಂಬರ್ 27ರಂದು ಆದೇಶಿಸಿದ್ದು, ಕೆಳ ನ್ಯಾಯಾಲದ ಆದೇಶ ‘ಆಘಾತಕಾರಿ’ ಎಂದಿದೆ.

ಈ ಪ್ರಕರಣವು ಮಹಿಳೆಯ ತಾಯಿ ನೀಡಿದ ಚೆಕ್‌ಗಳಿಗೆ ಸಂಬಂಧಿಸಿದ್ದು, 7 ಲಕ್ಷ ಮತ್ತು 5.02 ಲಕ್ಷ ರೂ. ಮೌಲ್ಯದ ಚೆಕ್‌ಗಳು ಬೌನ್ಸ್ ಆಗಿತ್ತು. ಈ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯವು ತಾಯಿ ಮತ್ತು ಮಗಳು ಇಬ್ಬರನ್ನೂ ಅಪರಾಧಿಗಳು ಎಂದು ತೀರ್ಪು ನೀಡಿ ಶಿಕ್ಷೆ ವಿಧಿಸಿತ್ತು ಮತ್ತು ಜಾಮೀನು ಕೊಟ್ಟಿತ್ತು. ವಿಚಾರಣಾ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದ್ದನ್ನು ಪ್ರಶ್ನಿಸಿ ಮಹಿಳೆ ಫರಿದಾಬಾದ್‌ನ ಸೆಷನ್ಸ್ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ಎಂಟು ವರ್ಷಗಳಿಂದ ಬಾಕಿ ಉಳಿದಿತ್ತು.

ಈ ನಡುವೆ ಮಹಿಳೆ 6 ತಿಂಗಳಲ್ಲಿ 6 ವಕೀಲರನ್ನು ಬದಲಾಯಿಸಿದ್ದು. ಈ ಕಾರಣಕ್ಕೆ ವಿಚಾರಣೆಗೆ ಅಸಹಕಾರ ಎಂದ ಸೆಷನ್ಸ್ ಕೋರ್ಟ್, ಮಹಿಳೆಗೆ ವಿಚಾರಣಾ ನ್ಯಾಯಾಲಯ ನೀಡಿದ್ದ ಜಾಮೀನು ರದ್ದುಗೊಳಿಸಿ ವಶಕ್ಕೆ ಪಡೆಯಲು ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಮಹಿಳೆ ಹೈಕೋರ್ಟ್ ಮತ್ತು ನಂತರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್. ವಿ ಅಂಜಾರಿಯಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್‌ ಪೀಠ, ಮಹಿಳೆಯ ತಾಯಿ ನಿಧನರಾಗಿದ್ದು, ಆದರೆ ಸೆಷನ್ಸ್ ಕೋರ್ಟ್ ಮರಣ ಪ್ರಮಾಣಪತ್ರವನ್ನು ಸ್ವೀಕರಿಸಿಲ್ಲ ಎಂಬುದನ್ನು ಗಮನಿಸಿದೆ. ಈ ಪ್ರಮಾಣಪತ್ರ ಕಾನೂನುಬದ್ಧವಾಗಿದೆಯೇ ಎಂಬುದನ್ನು ಪರಿಶೀಲಿಸಲು ಸೆಷನ್ಸ್ ನ್ಯಾಯಾಲಯವು ಸಂಬಂಧಪಟ್ಟ ಸ್ಟೇಷನ್ ಹೌಸ್ ಅಧಿಕಾರಿಗೆ ನಿರ್ದೇಶನ ನೀಡಿತ್ತು.

ವಕೀಲರು ನ್ಯಾಯಾಲಯಕ್ಕೆ ಸಹಾಯ ಮಾಡದಿದ್ದರೆ, ಅಮಿಕಸ್ ಕ್ಯೂರಿಯನ್ನು ನೇಮಿಸಬಹುದು ಅಥವಾ ಆರೋಪಿಗೆ ಪರ್ಯಾಯ ವಕೀಲರನ್ನು ವ್ಯವಸ್ಥೆ ಮಾಡಬಹುದು. ಇದು ಸೂಕ್ತವಾದ ಕ್ರಮ. ಆದರೆ ಅವರನ್ನು ಜೈಲಿಗೆ ಹಾಕುವುದು ಸರಿಯಲ್ಲ ಎಂದು ಸುಪ್ರೀಂ ಕೋರ್ಟ್ ಪೀಠ ಹೇಳಿದೆ.

ಸುಪ್ರೀಂ ಕೋರ್ಟ್ ಮಹಿಳೆಯನ್ನು 1 ಲಕ್ಷ ರೂ. ವೈಯಕ್ತಿಕ ಬಾಂಡ್ ಮೇಲೆ ಬಿಡುಗಡೆ ಮಾಡಿದೆ. ಶಿಕ್ಷೆಯನ್ನು ಈಗಾಗಲೇ ಸ್ಥಗಿತಗೊಳಿಸಿದ ನಂತರವೂ, ಸೆಷನ್ಸ್ ನ್ಯಾಯಾಲಯವು ಪ್ರತಿಯೊಂದು ವಿಚಾರಣೆಯ ದಿನಾಂಕದಂದು ಮಹಿಳೆ ಹಾಜರಾಗಲೇಬೇಕೆಂದು ಒತ್ತಾಯ ಮಾಡಿರುವುದು ಆಘಾತಕಾರಿ ಎಂದು ನ್ಯಾಯಪೀಠವು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...