Homeಮುಖಪುಟಶಿವಸೇನೆ, NCP ಶಾಸಕರ ವಿರುದ್ಧದ ಅನರ್ಹತೆ ಅರ್ಜಿ; ಸ್ಪೀಕರ್‌ಗೆ ಗಡುವು ನೀಡಿದ ಸುಪ್ರೀಂಕೋರ್ಟ್‌

ಶಿವಸೇನೆ, NCP ಶಾಸಕರ ವಿರುದ್ಧದ ಅನರ್ಹತೆ ಅರ್ಜಿ; ಸ್ಪೀಕರ್‌ಗೆ ಗಡುವು ನೀಡಿದ ಸುಪ್ರೀಂಕೋರ್ಟ್‌

- Advertisement -
- Advertisement -

ಮುಖ್ಯಮಂತ್ರಿ ಏಕನಾಥ್ ಶಿಂಧೆ ಸೇರಿದಂತೆ ಶಿವಸೇನೆಯ ಶಾಸಕರ ಅನರ್ಹತೆ ಅರ್ಜಿಗಳ ಕುರಿತು 2023ರ ಡಿ.31 ಮೊದಲು ಅಂತಿಮ ಆದೇಶಗಳನ್ನು ನೀಡುವಂತೆ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ ತಿಳಿಸಿದೆ.

ಹತ್ತನೇ ಶೆಡ್ಯೂಲ್ ಅಡಿಯಲ್ಲಿ ಪ್ರಕ್ರಿಯೆಗಳನ್ನು ವಿಳಂಬಗೊಳಿಸಲು ಅನುಮತಿ ನೀಡಬಾರದು ಎಂದು ಸುಪ್ರೀಂಕೋರ್ಟ್ ಹೇಳಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠವು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷಕ್ಕೆ(ಎನ್‌ಸಿಪಿ) ಸಂಬಂಧಿಸಿದ ಬಾಕಿ ಉಳಿದಿರುವ ಅನರ್ಹತೆ ಅರ್ಜಿಗಳನ್ನು ನಿರ್ಧರಿಸಲು 2024, ಜ.31ರ ಗಡುವನ್ನು ನಿಗದಿಪಡಿಸಿದೆ. ಇದರಲ್ಲಿ ಉಪಮುಖ್ಯಮಂತ್ರಿ ಎಂ.ಅಜಿತ್‌ ಪವಾರ್‌ ಮತ್ತು ಇತರ ಎಂಟು ಮಂದಿ ಶಾಸಕರನ್ನು ಅನರ್ಹಗೊಳಿಸಲು ಆಗ್ರಹಿಸಲಾಗಿದೆ.

ಉದ್ಧವ್ ಠಾಕ್ರೆ ಅವರ ಶಿವಸೇನೆ ಮತ್ತು ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಸಲ್ಲಿಸಿದ ಅರ್ಜಿಗಳ ಕುರಿತು ಸ್ಪೀಕರ್‌ಗೆ ಹೆಚ್ಚಿನ ಸಮಯಾವಕಾಶ ನೀಡಲು ಪೀಠ ನಿರಾಕರಿಸಿದೆ.

ಅ.17ರಂದು ಎರಡು ಅನರ್ಹತೆಯ ಅರ್ಜಿ ಕುರಿತು ಸಮಯ ನಿರ್ಧಾರ ತೆಗೆದುಕೊಳ್ಳುವಂತೆ ನ್ಯಾಯಾಲಯವು ಸ್ಪೀಕರ್‌ಗೆ ಹೇಳಿತ್ತು.

ಕಳೆದ ವರ್ಷ ಏಕನಾಥ ಶಿಂದೆ ನೇತೃತ್ವದಲ್ಲಿ ಶಿವಸೇನೆಯ ಶಾಸಕರು ಬಂಡಾಯ ಎದ್ದು ಬಿಜೆಪಿಗೆ ಬೆಂಬಲ ಘೋಷಿಸಿದ್ದರು. ಈ ಪ್ರಕರಣ ಸಂಬಂಧ ಏಕನಾಥ ಶಿಂಧೆ ಹಾಗೂ 15 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಮಹಾವಿಕಾಸ ಅಘಾಡಿ ಸರ್ಕಾರವನ್ನು ಮರುಸ್ಥಾಪನೆ ಮಾಡಬೇಕು ಎಂದು ಕೋರಿ ಉದ್ಧವ್ ಠಾಕ್ರೆ ಬಣ ಸುಪ್ರೀಂಕೋರ್ಟ್‌ ಮೆಟ್ಟಿಲೇರಿತ್ತು.

ಪ್ರಕರಣದ ಸಂಬಂಧ ತೀರ್ಪು ಪ್ರಕಟಿಸಿದ್ದ ಸುಪ್ರೀಂಕೋರ್ಟ್‌, ಉದ್ಧವ್‌ ಠಾಕ್ರೆ ವಿಶ್ವಾಸಮತ ಸಾಬೀತು ಪಡಿಸದೆ ರಾಜೀನಾಮೆ ನೀಡಿದ್ದರಿಂದ ಸರ್ಕಾರವನ್ನು ಮರುಸ್ಥಾಪಿಸಲಾಗದು ಎಂದು ಹೇಳಿತ್ತು. ಅಲ್ಲದೆ ಶಾಸಕರ ಅನರ್ಹತೆ ಕುರಿತು ಆದಷ್ಟು ಬೇಗ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸ್ಪೀಕರ್‌ಗೆ ಸೂಚನೆ ನೀಡಿತ್ತು.

ನಿರ್ಧಾರದ ವಿಳಂಬದ ವಿರುದ್ಧ ಶಿವಸೇನೆಯ(ಉದ್ದವ್‌ ಬಣದ)  ಸುನೀಲ್ ಪ್ರಭು ಮತ್ತು ಎನ್‌ಸಿಪಿಯ ಜಯಂತ್ ಪಾಟೀಲ್ ಸಲ್ಲಿಸಿದ ಅರ್ಜಿಗಳ ವಿಚಾರಣೆಯನ್ನು ಪುನರಾರಂಭಿಸಿದ ಪೀಠವು, ಹತ್ತನೇ ಶೆಡ್ಯೂಲ್ ಅಡಿಯಲ್ಲಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ನಾವು ಸ್ಪೀಕರ್‌ಗೆ ಪದೇ ಪದೇ ಸಮಯ ನೀಡಿದ್ದೇವೆ. ಈಗ ಮಹಾರಾಷ್ಟ್ರ ಶಾಸಕಾಂಗ ಕಾರ್ಯದರ್ಶಿಯವರು ಅಫಿಡವಿಟ್ ಸಲ್ಲಿಸಿದ್ದಾರೆ. ಅನರ್ಹತೆ ಅರ್ಜಿಗಳಲ್ಲಿ ಶಿವಸೇನೆಯ ಮತ್ತು ಎನ್‌ಸಿಪಿಯದ್ದು ಇದೆ ಎಂದು ಅದು ಹೇಳುತ್ತದೆ. ದೀಪಾವಳಿ ರಜೆಯಲ್ಲಿ ಸೆಕ್ರೆಟರಿಯೇಟ್‌ನ್ನು ಮುಚ್ಚಲಾಗುವುದು ಮತ್ತು ಚಳಿಗಾಲದ ವಿಧಾನಸಭೆಯ ಅಧಿವೇಶನವು ನಾಗ್ಪುರದಲ್ಲಿ ನಡೆಯಲಿದೆ ಎಂದು ಅಫಿಡವಿಟ್ ಹೇಳುತ್ತದೆ. ಇದು ಅನರ್ಹತೆಯ ನಿರ್ಧಾರದಲ್ಲಿ ವಿಳಂಬಕ್ಕೆ ಕಾರಣವಾಗುವುದಿಲ್ಲ ಎಂದು ನಾವು ಭಾವಿಸುತ್ತೇವೆ ಎಂದು ಕೋರ್ಟ್ ಹೇಳಿದೆ.

ಚುನಾವಣೆ ಘೋಷಣೆಯಾಗುವವರೆಗೆ ಈ ಪ್ರಕ್ರಿಯೆಗಳು ಮುಂದುವರಿಯುತ್ತಾ  ಎಂಬುದು ನಮ್ಮ ಕಳವಳವಾಗಿದೆ ಎಂದು ಪೀಠ ಹೇಳಿದೆ. ಠಾಕ್ರೆ ಬಣದ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಕೋರ್ಟ್‌ಗೆ ಹಾಜರಾಗಿದ್ದು, ಸ್ಪೀಕರ್ ನಿರಂಕುಶವಾಗಿ ವರ್ತಿಸುತ್ತಿದ್ದಾರೆ ಮತ್ತು ಕಲಾಪವನ್ನು ವಿಳಂಬ ಮಾಡುತ್ತಿದ್ದಾರೆ ಎಂದು ಸುಪ್ರೀಂಕೋರ್ಟ್‌ ಗಮನಕ್ಕೆ ತಂದಿದ್ದಾರೆ.

ಇದನ್ನು ಓದಿ: ಕೊಚ್ಚಿ: ಸರಣಿ ಸ್ಪೋಟ ಪ್ರಕರಣ: ವಿಡಿಯೋ ಹೇಳಿಕೆ ಕೊಟ್ಟು ಪೊಲೀಸರಿಗೆ ಶರಣಾದ ಆರೋಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...