Homeಮುಖಪುಟಶಿವಸೇನೆ, NCP ಶಾಸಕರ ವಿರುದ್ಧದ ಅನರ್ಹತೆ ಅರ್ಜಿ; ಸ್ಪೀಕರ್‌ಗೆ ಗಡುವು ನೀಡಿದ ಸುಪ್ರೀಂಕೋರ್ಟ್‌

ಶಿವಸೇನೆ, NCP ಶಾಸಕರ ವಿರುದ್ಧದ ಅನರ್ಹತೆ ಅರ್ಜಿ; ಸ್ಪೀಕರ್‌ಗೆ ಗಡುವು ನೀಡಿದ ಸುಪ್ರೀಂಕೋರ್ಟ್‌

- Advertisement -
- Advertisement -

ಮುಖ್ಯಮಂತ್ರಿ ಏಕನಾಥ್ ಶಿಂಧೆ ಸೇರಿದಂತೆ ಶಿವಸೇನೆಯ ಶಾಸಕರ ಅನರ್ಹತೆ ಅರ್ಜಿಗಳ ಕುರಿತು 2023ರ ಡಿ.31 ಮೊದಲು ಅಂತಿಮ ಆದೇಶಗಳನ್ನು ನೀಡುವಂತೆ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ ತಿಳಿಸಿದೆ.

ಹತ್ತನೇ ಶೆಡ್ಯೂಲ್ ಅಡಿಯಲ್ಲಿ ಪ್ರಕ್ರಿಯೆಗಳನ್ನು ವಿಳಂಬಗೊಳಿಸಲು ಅನುಮತಿ ನೀಡಬಾರದು ಎಂದು ಸುಪ್ರೀಂಕೋರ್ಟ್ ಹೇಳಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠವು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷಕ್ಕೆ(ಎನ್‌ಸಿಪಿ) ಸಂಬಂಧಿಸಿದ ಬಾಕಿ ಉಳಿದಿರುವ ಅನರ್ಹತೆ ಅರ್ಜಿಗಳನ್ನು ನಿರ್ಧರಿಸಲು 2024, ಜ.31ರ ಗಡುವನ್ನು ನಿಗದಿಪಡಿಸಿದೆ. ಇದರಲ್ಲಿ ಉಪಮುಖ್ಯಮಂತ್ರಿ ಎಂ.ಅಜಿತ್‌ ಪವಾರ್‌ ಮತ್ತು ಇತರ ಎಂಟು ಮಂದಿ ಶಾಸಕರನ್ನು ಅನರ್ಹಗೊಳಿಸಲು ಆಗ್ರಹಿಸಲಾಗಿದೆ.

ಉದ್ಧವ್ ಠಾಕ್ರೆ ಅವರ ಶಿವಸೇನೆ ಮತ್ತು ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಸಲ್ಲಿಸಿದ ಅರ್ಜಿಗಳ ಕುರಿತು ಸ್ಪೀಕರ್‌ಗೆ ಹೆಚ್ಚಿನ ಸಮಯಾವಕಾಶ ನೀಡಲು ಪೀಠ ನಿರಾಕರಿಸಿದೆ.

ಅ.17ರಂದು ಎರಡು ಅನರ್ಹತೆಯ ಅರ್ಜಿ ಕುರಿತು ಸಮಯ ನಿರ್ಧಾರ ತೆಗೆದುಕೊಳ್ಳುವಂತೆ ನ್ಯಾಯಾಲಯವು ಸ್ಪೀಕರ್‌ಗೆ ಹೇಳಿತ್ತು.

ಕಳೆದ ವರ್ಷ ಏಕನಾಥ ಶಿಂದೆ ನೇತೃತ್ವದಲ್ಲಿ ಶಿವಸೇನೆಯ ಶಾಸಕರು ಬಂಡಾಯ ಎದ್ದು ಬಿಜೆಪಿಗೆ ಬೆಂಬಲ ಘೋಷಿಸಿದ್ದರು. ಈ ಪ್ರಕರಣ ಸಂಬಂಧ ಏಕನಾಥ ಶಿಂಧೆ ಹಾಗೂ 15 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಮಹಾವಿಕಾಸ ಅಘಾಡಿ ಸರ್ಕಾರವನ್ನು ಮರುಸ್ಥಾಪನೆ ಮಾಡಬೇಕು ಎಂದು ಕೋರಿ ಉದ್ಧವ್ ಠಾಕ್ರೆ ಬಣ ಸುಪ್ರೀಂಕೋರ್ಟ್‌ ಮೆಟ್ಟಿಲೇರಿತ್ತು.

ಪ್ರಕರಣದ ಸಂಬಂಧ ತೀರ್ಪು ಪ್ರಕಟಿಸಿದ್ದ ಸುಪ್ರೀಂಕೋರ್ಟ್‌, ಉದ್ಧವ್‌ ಠಾಕ್ರೆ ವಿಶ್ವಾಸಮತ ಸಾಬೀತು ಪಡಿಸದೆ ರಾಜೀನಾಮೆ ನೀಡಿದ್ದರಿಂದ ಸರ್ಕಾರವನ್ನು ಮರುಸ್ಥಾಪಿಸಲಾಗದು ಎಂದು ಹೇಳಿತ್ತು. ಅಲ್ಲದೆ ಶಾಸಕರ ಅನರ್ಹತೆ ಕುರಿತು ಆದಷ್ಟು ಬೇಗ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸ್ಪೀಕರ್‌ಗೆ ಸೂಚನೆ ನೀಡಿತ್ತು.

ನಿರ್ಧಾರದ ವಿಳಂಬದ ವಿರುದ್ಧ ಶಿವಸೇನೆಯ(ಉದ್ದವ್‌ ಬಣದ)  ಸುನೀಲ್ ಪ್ರಭು ಮತ್ತು ಎನ್‌ಸಿಪಿಯ ಜಯಂತ್ ಪಾಟೀಲ್ ಸಲ್ಲಿಸಿದ ಅರ್ಜಿಗಳ ವಿಚಾರಣೆಯನ್ನು ಪುನರಾರಂಭಿಸಿದ ಪೀಠವು, ಹತ್ತನೇ ಶೆಡ್ಯೂಲ್ ಅಡಿಯಲ್ಲಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ನಾವು ಸ್ಪೀಕರ್‌ಗೆ ಪದೇ ಪದೇ ಸಮಯ ನೀಡಿದ್ದೇವೆ. ಈಗ ಮಹಾರಾಷ್ಟ್ರ ಶಾಸಕಾಂಗ ಕಾರ್ಯದರ್ಶಿಯವರು ಅಫಿಡವಿಟ್ ಸಲ್ಲಿಸಿದ್ದಾರೆ. ಅನರ್ಹತೆ ಅರ್ಜಿಗಳಲ್ಲಿ ಶಿವಸೇನೆಯ ಮತ್ತು ಎನ್‌ಸಿಪಿಯದ್ದು ಇದೆ ಎಂದು ಅದು ಹೇಳುತ್ತದೆ. ದೀಪಾವಳಿ ರಜೆಯಲ್ಲಿ ಸೆಕ್ರೆಟರಿಯೇಟ್‌ನ್ನು ಮುಚ್ಚಲಾಗುವುದು ಮತ್ತು ಚಳಿಗಾಲದ ವಿಧಾನಸಭೆಯ ಅಧಿವೇಶನವು ನಾಗ್ಪುರದಲ್ಲಿ ನಡೆಯಲಿದೆ ಎಂದು ಅಫಿಡವಿಟ್ ಹೇಳುತ್ತದೆ. ಇದು ಅನರ್ಹತೆಯ ನಿರ್ಧಾರದಲ್ಲಿ ವಿಳಂಬಕ್ಕೆ ಕಾರಣವಾಗುವುದಿಲ್ಲ ಎಂದು ನಾವು ಭಾವಿಸುತ್ತೇವೆ ಎಂದು ಕೋರ್ಟ್ ಹೇಳಿದೆ.

ಚುನಾವಣೆ ಘೋಷಣೆಯಾಗುವವರೆಗೆ ಈ ಪ್ರಕ್ರಿಯೆಗಳು ಮುಂದುವರಿಯುತ್ತಾ  ಎಂಬುದು ನಮ್ಮ ಕಳವಳವಾಗಿದೆ ಎಂದು ಪೀಠ ಹೇಳಿದೆ. ಠಾಕ್ರೆ ಬಣದ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಕೋರ್ಟ್‌ಗೆ ಹಾಜರಾಗಿದ್ದು, ಸ್ಪೀಕರ್ ನಿರಂಕುಶವಾಗಿ ವರ್ತಿಸುತ್ತಿದ್ದಾರೆ ಮತ್ತು ಕಲಾಪವನ್ನು ವಿಳಂಬ ಮಾಡುತ್ತಿದ್ದಾರೆ ಎಂದು ಸುಪ್ರೀಂಕೋರ್ಟ್‌ ಗಮನಕ್ಕೆ ತಂದಿದ್ದಾರೆ.

ಇದನ್ನು ಓದಿ: ಕೊಚ್ಚಿ: ಸರಣಿ ಸ್ಪೋಟ ಪ್ರಕರಣ: ವಿಡಿಯೋ ಹೇಳಿಕೆ ಕೊಟ್ಟು ಪೊಲೀಸರಿಗೆ ಶರಣಾದ ಆರೋಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...