Homeಮುಖಪುಟಭೀಮಾ ಕೋರೆಗಾಂವ್ ಪ್ರಕರಣ : ಹೋರಾಟಗಾರ ಮಹೇಶ್ ರಾವುತ್‌ಗೆ ಮಧ್ಯಂತರ ಜಾಮೀನು

ಭೀಮಾ ಕೋರೆಗಾಂವ್ ಪ್ರಕರಣ : ಹೋರಾಟಗಾರ ಮಹೇಶ್ ರಾವುತ್‌ಗೆ ಮಧ್ಯಂತರ ಜಾಮೀನು

- Advertisement -
- Advertisement -

ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿ ಮಹೇಶ್ ರಾವುತ್‌ ಅವರಿಗೆ ತನ್ನ ಅಜ್ಜಿಯ ಅಂತಿಮ ಸಂಸ್ಕಾರಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಸುಪ್ರೀಂ ಕೋರ್ಟ್ ಎರಡು ವಾರಗಳ ಮಧ್ಯಂತರ ಜಾಮೀನು ನೀಡಿದೆ.

ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಎಸ್‌ವಿಎನ್ ಭಟ್ಟಿ ಅವರ ರಜಾಕಾಲದ ಪೀಠವು, ಮಹೇಶ್ ರಾವುತ್‌ ಅವರಿಗೆ ಜೂನ್ 26 ರಿಂದ ಜುಲೈ 10 ರವರೆಗೆ ಮಧ್ಯಂತರ ಜಾಮೀನು ನೀಡಿದೆ. ಮಧ್ಯಂತರ ಜಾಮೀನು ವಿಚಾರಣಾ ನ್ಯಾಯಾಲಯವು ನಿಗದಿಪಡಿಸಿದ ನಿಯಮಗಳು ಮತ್ತು ಷರತ್ತುಗಳಿಗೆ ಒಳಪಟ್ಟಿರುತ್ತದೆ. ಆರೋಪಿಯು ಜುಲೈ 10 ರಂದು ತಪ್ಪದೇ ಶರಣಾಗಬೇಕು ಎಂದು ನ್ಯಾಯಾಲಯ ಸೂಚಿಸಿದೆ.

ರಾವುತ್ ಪರ ವಾದ ಮಂಡಿಸಿದ ವಕೀಲೆ ಅಪರ್ಣಾ ಭಟ್ ಅವರು, ರಾವುತ್ ಅವರಿಗೆ ಬಾಂಬೆ ಹೈಕೋರ್ಟ್ ಈಗಾಗಲೇ ಜಾಮೀನು ನೀಡಿದ್ದರೂ, ಆದೇಶಕ್ಕೆ ತಡೆ ನೀಡಲಾಗಿದೆ. ಅವರ ಅಜ್ಜಿ ಮೇ ಕೊನೆಯ ವಾರದಲ್ಲಿ ನಿಧನರಾಗಿದ್ದು, ಕೆಲವು ಅಂತಿಮ ವಿಧಿವಿಧಾನಗಳನ್ನು ನಡೆಸಬೇಕಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಎನ್‌ಐಎ ಪರ ವಾದ ಮಂಡಿಸಿದ ವಕೀಲರು ಎನ್‌ಐಎ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಲು ಆದ್ಯತೆ ನೀಡಬೇಕು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಅಪರ್ಣಾ ಭಟ್, ಜಾಮೀನು ಆದೇಶವನ್ನು ಪ್ರಶ್ನಿಸಿ ಎನ್‌ಐಎ ಸಲ್ಲಿಸಿರುವ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ಕಾರಣ ವಿಶೇಷ ನ್ಯಾಯಾಲಯವು ಅರ್ಜಿ ಪರಿಗಣಿಸುವುದಿಲ್ಲ ಎಂದು ಉತ್ತರಿಸಿದರು.

2018ರ ಭೀಮಾ ಕೋರೆಗಾಂವ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 1967ರ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯ ಸೆಕ್ಷನ್ 15 ರ ಅಡಿಯಲ್ಲಿ ಬುಡಕಟ್ಟು ಹಕ್ಕುಗಳ ಕಾರ್ಯಕರ್ತ ರಾವುತ್ ವಿರುದ್ಧ ಆರೋಪ ಹೊರಿಸಲಾಗಿದೆ. ಅವರು ನಿಷೇಧಿತ ಸಿಪಿಐ (ಮಾವೋವಾದಿ) ಯೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ದೇಶದ ವಿರುದ್ಧ ಯುದ್ಧ ಸಾರಿದ್ದಾರೆ ಎಂದು ಆರೋಪಿಸಲಾಗಿದೆ.

ರಾವುತ್ ಅವರನ್ನು ಜೂನ್, 2018ರಲ್ಲಿ ಬಂಧಿಸಲಾಗಿತ್ತು. 5 ವರ್ಷಗಳ ನಂತರ ಬಾಂಬೆ ಹೈಕೋರ್ಟ್ ಭೀಮಾ ಕೋರೆಗಾಂವ್-ಎಲ್ಗಾರ್ ಪರಿಷತ್ ಪ್ರಕರಣದಲ್ಲಿ ಅವರಿಗೆ ಜಾಮೀನು ನೀಡಿತ್ತು. ಅವರ ವಿರುದ್ದದ ಆರೋಪಗಳಿಗೆ ಪುರಾವೆಗಳಿಲ್ಲದಿರುವುದು ಪ್ರಾಥಮಿಕವಾಗಿ ಕಂಡು ಬಂದಿದೆ. ಅಲ್ಲದೆ, ಅವರು ವಿಚಾರಣೆಯಿಲ್ಲದೆ 5 ವರ್ಷ ಮತ್ತು 3 ತಿಂಗಳು ಜೈಲಿನಲ್ಲಿ ಕಳೆದಿದ್ದಾರೆ ಎಂದು ನ್ಯಾಯಾಲಯ ಹೇಳಿತ್ತು.

ಆದರೆ, ಬಳಿಕ ಜಾಮೀನು ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಅಂತಿಮವಾಗಿ ಸುಪ್ರೀಂ ಕೋರ್ಟ್ ತಡೆಯಾಜ್ಞೆಯನ್ನು ವಿಸ್ತರಿಸಿದೆ.

ರಾವುತ್‌ ಅವರ ಅಜ್ಜಿಯ ಅಂತಿಮ ಸಂಸ್ಕಾರ ಮೇ 26ರಂದು ನಡೆದಿದ್ದು, ಉಳಿದ ಕಾರ್ಯಗಳನ್ನು ಜೂನ್ 27ಕ್ಕೆ ನಿಗದಿಪಡಿಸಿಲಾಗಿದೆ. ಈ ಹಿನ್ನೆಲೆ ಸುಪ್ರೀಂ ಕೋರ್ಟ್ ಮುಂದೆ ಅವರ ಜಾಮೀನು ಅರ್ಜಿಯನ್ನು ಜೂನ್‌ 14ರಂದು ವಿಚಾರಣೆಗೆ ಪಟ್ಟಿ ಮಾಡಲಾಗಿತ್ತು. ಆದರೆ, ಸೂಚನೆಗಳನ್ನು ಪಡೆಯಲು ಮತ್ತು ಉತ್ತರವನ್ನು ಸಲ್ಲಿಸಲು ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ವಕೀಲರು ಸಮಯ ಕೋರಿದ್ದ ಹಿನ್ನೆಲೆ ಮುಂದೂಡಲಾಗಿತ್ತು.

ಇದನ್ನೂ ಓದಿ : ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಆರೋಪ: ಸಂತ್ರಸ್ತನ ವಿರುದ್ದವೇ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...