Homeಮುಖಪುಟಕಾಂಗ್ರೆಸ್ ನಾಯಕ ಸುರ್ಜೇವಾಲಾಗೆ ಬಂಧನದಿಂದ ರಕ್ಷಣೆ ನೀಡಿದ ಸುಪ್ರೀಂಕೋರ್ಟ್‌

ಕಾಂಗ್ರೆಸ್ ನಾಯಕ ಸುರ್ಜೇವಾಲಾಗೆ ಬಂಧನದಿಂದ ರಕ್ಷಣೆ ನೀಡಿದ ಸುಪ್ರೀಂಕೋರ್ಟ್‌

- Advertisement -
- Advertisement -

ಎರಡು ದಶಕಗಳಷ್ಟು ಹಳೆಯದಾದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಸುಪ್ರೀಂಕೋರ್ಟ್‌ ಬಿಗ್‌ ರಿಲೀಫ್‌ ನೀಡಿದ್ದು, ಬಂಧನದಿಂದ ರಕ್ಷಣೆಯನ್ನು ನೀಡಿದೆ.

ವಾರಣಾಸಿಯ ವಿಭಾಗೀಯ ಆಯುಕ್ತರ ಕಚೇರಿ ಆವರಣದಲ್ಲಿ ಹಿಂಸಾತ್ಮಕ ಪ್ರತಿಭಟನೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊರಡಿಸಲಾದ ಜಾಮೀನು ರಹಿತ ವಾರಂಟ್‌ ವಿರುದ್ಧ ಸುಪ್ರೀಂಕೋರ್ಟ್ ಗುರುವಾರ ಐದು ವಾರಗಳ ಕಾಲ ಅವರಿಗೆ ಬಂಧನದಿಂದ ರಕ್ಷಣೆ ನೀಡಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠವು ವಾರಣಾಸಿ ನ್ಯಾಯಾಲಯದ ಮುಂದೆ ಜಾಮೀನು ರಹಿತ ವಾರಂಟ್‌ಗಳ ರದ್ದತಿಗೆ ಹಾಜರಾಗಲು 4 ವಾರಗಳ ಕಾಲಾವಕಾಶ ನೀಡಿದೆ.

ಸಂವಿಧಾನದ 32ನೇ ವಿಧಿಯ ಅಡಿಯಲ್ಲಿ ಸುರ್ಜೆವಾಲ್ ಅವರು ಸಲ್ಲಿಸಿದ ರಿಟ್ ಅರ್ಜಿಯ ಮೇಲೆ ನ್ಯಾಯಾಲಯವು ತನ್ನ ಆದೇಶವನ್ನು ನೀಡಿದೆ.

23 ವರ್ಷಗಳ ಹಿಂದೆ ನಡೆದ ಘಟನೆಯೊಂದಕ್ಕೆ ಸಂಬಂಧಿಸಿ ಪ್ರಮುಖ ರಾಜಕೀಯ ಪಕ್ಷದ ಕಾರ್ಯದರ್ಶಿ ವಿರುದ್ಧ ಜಾಮೀನು ರಹಿತ ವಾರಂಟ್‌ ಜಾರಿ ಮಾಡಲಾಗಿದೆ ಎಂದು ಹಿರಿಯ ವಕೀಲ ಎಎಂ ಸಿಂಘ್ವಿ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.

ವಿಚಾರಣೆ ವೇಳೆ ನೀವು ಯಾಕೆ ಇಲ್ಲಿಗೆ ಬಂದಿದ್ದೀರಿ? ನೀವು ಹೈಕೋರ್ಟ್‌ಗೆ ಹೋಗಬೇಕು ಎಂದು ಪೀಠ ಅವರಿಗೆ ಹೇಳಿದೆ.

ಅವರು ಹೈಕೋರ್ಟ್‌ಗೆ ಹೋಗಿದ್ದರು ಆದರೆ ಅಲ್ಲಿ ತುರ್ತು ಆದೇಶಕ್ಕೆ ನಿರಾಕರಿಸಲಾಗಿದೆ. ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 482ರ ಅಡಿಯಲ್ಲಿ ಅರ್ಜಿದಾರರು ಸಲ್ಲಿಸಿದ ಅರ್ಜಿಯ ಮೇಲೆ ಅಲಹಾಬಾದ್ ಹೈಕೋರ್ಟ್ ತನ್ನ ತೀರ್ಪನ್ನು ಕಾಯ್ದಿರಿಸಿದ್ದರೂ ಕೂಡ ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್ ನೀಡಲಾಗಿದೆ ಎಂದು ಅವರು ಸುಪ್ರೀಂಕೋರ್ಟ್‌ ಗಮನಕ್ಕೆ ತಂದಿದ್ದಾರೆ.

ಅರ್ಜಿಯ ಕುರಿತು ಹೈಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿದಾಗ ಜಾಮೀನು ರಹಿತ ವಾರೆಂಟ್‌ ನೀಡುವ ಅಗತ್ಯ ಏನಿತ್ತು ಎಂದು ಅವರು ಪ್ರಶ್ನಿಸಿದ್ದಾರೆ. 2000 ವಿಷವಿಯಲ್ಲಿ ಮಾಡಿದ ಎಫ್‌ಐಆರ್‌ ಆಗಿದೆ. ಈ ವೇಳೆ ಆಪಾದಿತ ಕಾಂಗ್ರೆಸ್‌ ನಾಯಕರು ಯೂತ್‌ ಕಾಂಗ್ರೆಸ್‌ನಲ್ಲಿದ್ದರು.

ಈ ಕುರಿತು ಅಕ್ಟೋಬರ್‌ನಲ್ಲಿ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ ಮತ್ತು ನ.7ರಂದು ತನ್ನ ಕಕ್ಷಿದಾರನ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿದೆ ಎಂದು ಕೋರ್ಟ್‌ ಗಮನಕ್ಕೆ ತರಲಾಗಿತ್ತು.

ಇದನ್ನು ಓದಿ: ಸಾಹಿತಿಗಳಿಗೆ ಬೆದರಿಕೆ ಪತ್ರ: ಸಾವರ್ಕರ್ ಕುರಿತ ಪುಸ್ತಕ ಓದುತ್ತಿದ್ದ ಆರೋಪಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....