Homeಮುಖಪುಟಉತ್ತರಖಂಡ: ಕುಮಾನ್ ಹಿಮಾಲಯದಲ್ಲಿ 90 ಎಕರೆ ಹೋಟೆಲ್, ಟೌನ್‌ಶಿಪ್ ಯೋಜನೆಗೆ ಸುಪ್ರೀಂಕೋರ್ಟ್‌ ತಡೆ

ಉತ್ತರಖಂಡ: ಕುಮಾನ್ ಹಿಮಾಲಯದಲ್ಲಿ 90 ಎಕರೆ ಹೋಟೆಲ್, ಟೌನ್‌ಶಿಪ್ ಯೋಜನೆಗೆ ಸುಪ್ರೀಂಕೋರ್ಟ್‌ ತಡೆ

- Advertisement -
- Advertisement -

ಉತ್ತರಖಂಡದ ಕುಮಾನ್ ಬೆಟ್ಟಗಳಲ್ಲಿ 90 ಎಕರೆ ವಿಸ್ತೀರ್ಣದ ಹೋಟೆಲ್ ಮತ್ತು ಟೌನ್‌ಶಿಪ್ ಯೋಜನೆಯ ನಿರ್ಮಾಣವನ್ನು ತಾತ್ಕಾಲಿಕವಾಗಿ ತಡೆಹಿಡಿಯುವ ಮೂಲಕ ಪರಿಸರ ದುರ್ಬಲ ಮತ್ತು ಭೂಕಂಪನ ಪೀಡಿತ ಹಿಮಾಲಯ ಶ್ರೇಣಿಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಯನ್ನು ತ್ವರಿತಗೊಳಿಸುವ ಸರಕಾರದ ಉದ್ದೇಶಕ್ಕೆ ಸುಪ್ರೀಂಕೋರ್ಟ್‌ ತಡೆ ನೀಡಿದೆ.

ಈ ಕುರಿತು ನ್ಯಾಯಮೂರ್ತಿಗಳಾದ ಎ.ಎಸ್. ಓಕಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠ ಮಧ್ಯಂತರ ಆದೇಶವನ್ನು ಜಾರಿಗೊಳಿಸಿದೆ. ಭೂಮಾಲೀಕ ಬೀರೇಂದ್ರ ಸಿಂಗ್ ಅವರು ಸಲ್ಲಿಸಿದ ವಿಶೇಷ ಅರ್ಜಿಯನ್ನು ಆಧರಿಸಿ, ಹಿರಿಯ ವಕೀಲ ಪಿ.ಬಿ. ಸುರೇಶ್ ಮತ್ತು ವಕೀಲರಾದ ವಿಪಿನ್ ನಾಯರ್ ಮತ್ತು ಕಾರ್ತಿಕ್ ಜಯಶಂಕರ್, ಈ ಪರಿಸರದಲ್ಲಿ ಹೋಟೆಲ್ ಯೋಜನೆಗಳಂತಹ ಬೃಹತ್ ನಿರ್ಮಾಣ ಯೊಜನೆ ಪ್ರಾರಂಭಿಸುವ ಮೊದಲು ಕಡ್ಡಾಯವಾಗಿದ್ದ ಪರಿಸರಕ್ಕೆ ಸಂಬಂಧಿಸಿದ ಕ್ಲಿಯರೆನ್ಸ್‌ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದರು.

ಪರಿಸರ ದುರ್ಬಲವಾದ ಉತ್ತರಾಖಂಡದಲ್ಲಿ ಹೋಟೆಲ್ ಯೋಜನೆಗಳಂತಹ ಬೃಹತ್ ನಿರ್ಮಾಣಗಳನ್ನು ಪ್ರಾರಂಭಿಸುವ ಮೊದಲು ಕ್ಲಿಯರೆನ್ಸ್‌ ಕಡ್ಡಾಯವಾಗಿದೆ. ದುರ್ಬಲವಾದ ಪರಿಸರ ವಲಯವನ್ನು ರಕ್ಷಿಸಲು  ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳದೆ ಯೋಜನೆಗೆ ಕ್ಲಿಯರೆನ್ಸ್‌ ಸುಲಭವಾಗಿ ನೀಡಬಹುದೇ? ಕುಮಾನ್ ಹಿಮಾಲಯದ ಪರಿಸರ ದುರ್ಬಲವಾದ ಮತ್ತು ಸೂಕ್ಷ್ಮ ಭೂಕಂಪನ ವಲಯವಾಗಿದೆ, ಆದರೂ ಯೋಜನೆಗೆ ಅನುಮತಿ ನೀಡಲಾಗಿದೆ. ಸರಾಸರಿ ಸಮುದ್ರ ಮಟ್ಟದಿಂದ 6,700 ಅಡಿಗಳಿಗಿಂತ ಹೆಚ್ಚು ಎತ್ತರವಿದೆಯೇ? ಎಂದು ಅರ್ಜಿದಾರರು ಸುಪ್ರೀಂ ಕೋರ್ಟ್‌ಗೆ ಪ್ರಶ್ನಿಸಿದ್ದರು.

ಕಾನೂನು ಮತ್ತು ಸಮಗ್ರ ಪರಿಸರ ಪ್ರಭಾವದ ಮೌಲ್ಯಮಾಪನ (ಇಐಎ) ಅಡಿಯಲ್ಲಿ ಅಗತ್ಯವಾದ ಅನುಮತಿಯಿಲ್ಲದೆ ರಾಜ್ಯದಲ್ಲಿ ವಾಣಿಜ್ಯ ಯೋಜನೆಗಳನ್ನು ಪ್ರಾರಂಭಿಸುವುದನ್ನು ತಡೆಯುವಂತೆ ಅರ್ಜಿಯಲ್ಲಿ ಕೋರಲಾಗಿತ್ತು. ನ್ಯಾಯಮೂರ್ತಿ ಓಕಾ ಅವರ ಪೀಠವು ಆಗಸ್ಟ್ 12ಕ್ಕೆ ಪ್ರಕರಣವನ್ನು ಪಟ್ಟಿ ಮಾಡಿದೆ. ಹಿರಿಯ ವಕೀಲರಾದ ಸಿ.ಯು ಸಿಂಗ್ ಮತ್ತು ಆರ್ಯಮ ಸುಂದರಂ ನೇತೃತ್ವದ ತಂಡವು ಪ್ರತಿವಾದಿಗಳನ್ನು ಪ್ರತಿನಿಧಿಸಿದ್ದರು.

ಅರ್ಜಿದಾರರು ಸೆಪ್ಟೆಂಬರ್ 14, 2006ರ ಇಐಎ ಅಧಿಸೂಚನೆಯನ್ನು ಉಲ್ಲೇಖಿಸಿದ್ದಾರೆ, ಇದರಲ್ಲಿ ಯಾವುದೇ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸುವ ಮೊದಲು ಪೂರ್ವ ಪರಿಸರ ಅನುಮತಿ ಅಗತ್ಯವಿದೆ ಎಂದು ಸ್ಪಷ್ಟವಾಗಿ ಹೇಳಿದೆ. ಇದು ಪರಿಸರ ವಿಪತ್ತುಗಳಿಗೆ ಕಾರಣವಾಗುವುದರಿಂದ ಅದನ್ನು ಬಲವಾಗಿ ನಿರಾಕರಿಸಬೇಕು ಎಂದು ಅರ್ಜಿದಾರರ ಪರ ವಕೀಲರು ಕೋರ್ಟ್‌ ಗಮನಕ್ಕೆ ತಂದಿದ್ದಾರೆ.

ಇದನ್ನು ಓದಿ: ಕಾಂಗ್ರೆಸ್‌ ಮುಖಂಡ, ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...