Homeಕರ್ನಾಟಕಪರಿಶಿಷ್ಟ ಜಾತಿ ಒಳ ಮೀಸಲಾತಿ: ನ್ಯಾ. ನಾಗಮೋಹನದಾಸ್ ಆಯೋಗದಿಂದ ಇಂದು ಮಧ್ಯಂತರ ವರದಿ ಸಲ್ಲಿಕೆ

ಪರಿಶಿಷ್ಟ ಜಾತಿ ಒಳ ಮೀಸಲಾತಿ: ನ್ಯಾ. ನಾಗಮೋಹನದಾಸ್ ಆಯೋಗದಿಂದ ಇಂದು ಮಧ್ಯಂತರ ವರದಿ ಸಲ್ಲಿಕೆ

- Advertisement -
- Advertisement -

ಪರಿಶಿಷ್ಟ ಜಾತಿಗಳಲ್ಲಿ (ಎಸ್‌ಸಿ) ಒಳ ಮೀಸಲಾತಿ ಕಲ್ಪಿಸುವ ಸಂಬಂಧ ನೇಮಿಸಿರುವ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನದಾಸ್ ನೇತೃತ್ವದ ಆಯೋಗ ಇಂದು (ಮಾ. 27) ರಾಜ್ಯ ಸರ್ಕಾರಕ್ಕೆ ತನ್ನ ಮಧ್ಯಂತರ ವರದಿ ಸಲ್ಲಿಸಲಿದೆ.

ವಿಧಾನಸೌಧದಲ್ಲಿ ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಯೋಗವು ಮಧ್ಯಂತರ ವರದಿ ಸಲ್ಲಿಕೆ ಮಾಡಲಿದೆ ಎಂದು ಸಿಎಂ ಕಚೇರಿ ಅಧಿಕೃತ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ಉಪಜಾತಿಗಳಿಗೆ ಪ್ರಾತಿನಿಧ್ಯತೆ ಕಲ್ಪಿಸುವ ಕುರಿತು ಪ್ರಾಯೋಗಿಕ ಅಂಕಿ ಅಂಶ (ಎಂಫರಿಕಲ್ ಡಾಟಾ) ಪಡೆದು ಒಳಮೀಸಲಾತಿ ಜಾರಿಗೆ ಸೂಕ್ತ ಶಿಫಾರಸು ಮಾಡುವಂತೆ 14 ನವೆಂಬರ್ 2024ರಂದು ರಾಜ್ಯ ಸರ್ಕಾರ ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ನೇತೃತ್ವದಲ್ಲಿ ಆಯೋಗ ರಚಿಸಿತ್ತು. ಎರಡು ತಿಂಗಳ ಒಳಗೆ ವರದಿ ಸಲ್ಲಿಸುವಂತೆ ಆದೇಶಿಸಿತ್ತು. ಬಳಿಕ ಅವಧಿಯನ್ನು ವಿಸ್ತರಿಸಲಾಗಿತ್ತು.

ನಾಗಮೋಹನದಾಸ್ ಆಯೋಗ ಪ್ರಾಯೋಗಿಕ ಅಂಕಿ ಅಂಶ ಪಡೆದು ವರದಿ ಸಿದ್ದಪಡಿಸುತ್ತಿರುವ ನಡುವೆ ಒಳ ಮೀಸಲಾತಿ ಜಾರಿಗೆ ರಾಜ್ಯಾದ್ಯಂತ ಆಗ್ರಹ ಹೆಚ್ಚಾಗಿದೆ. ವಿವಿಧ ಸಂಘಟನೆಗಳು ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಸುದ್ದಿಗೋಷ್ಠಿ, ಪ್ರತಿಭಟನೆ ಸೇರಿದಂತೆ ಹಲವು ರೀತಿಯ ಹೋರಾಟಗಳನ್ನು ಮಾಡುತ್ತಿವೆ.

ಸಚಿವ ಮುನಿಯಪ್ಪ ಭೇಟಿ ಮಾಡಿದ ನಿಯೋಗ

ಒಳ ಮೀಸಲಾತಿ ಅನುಷ್ಠಾನದಲ್ಲಿ ಉಪಜಾತಿಯ ಗೊಂದಲ ನಿವಾರಣೆ ಮಾಡಲು ಕ್ರಮವಹಿಸುವಂತೆ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಅವರಿಗೆ ಷಡಕ್ಷರಿ ಮುನಿ ದೇಶಿಕೇಂದ್ರ ಸ್ವಾಮೀಜಿ ನೇತೃತ್ವದ ನಿಯೋಗ ಮನವಿ ಮಾಡಿದೆ ಎಂದು ವರದಿಯಾಗಿದೆ.

ಮಾದಿಗ ಸಮುದಾಯದ ಮೂಲ ಮಠವಾದ ಆದಿಜಾಂಬವ ಬೃಹ್ಮಠದ ಪೀಠಾಧ್ಯಕ್ಷರಾದ ಷಡಕ್ಷರಿ ಮುನಿದೇಶಿ ಕೇಂದ್ರ ಸ್ವಾಮೀಜಿ ಹಾಗೂ ರಾಜ್ಯ ಮಾತಂಗ ಜಾಗೃತಿ ಸಮಿತಿಯ ಗೌರವಾಧ್ಯಕ್ಷ ಆರ್.ಲೋಕೇಶ್ ನೇತೃತ್ವದ ನಿಯೋಗ ಸಚಿವ ಮುನಿಯಪ್ಪ ಅವರ ಮನೆಯಲ್ಲಿ ಒಳ ಮೀಸಲಾತಿ ಜಾರಿಯ ಕುರಿತಾಗಿ ಚರ್ಚಿಸಿದೆ ಎಂದು ದಿ ಫೆಡರಲ್ ವರದಿ ಮಾಡಿದೆ.

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಹಾಗೂ ಹಾಗೂ ಅತಿದೊಡ್ಡ ಸಂಖ್ಯೆಯಲ್ಲಿ ಇರುವ ಆದಿ ಕರ್ನಾಟಕ/ ಆದಿ ದ್ರಾವಿಡ ಜಾತಿ ಪ್ರಮಾಣ ಪತ್ರ ಹೊಂದಿರುವವರಿಗೆ ನಿರ್ದಿಷ್ಟ ಜಾತಿಯ ಪ್ರಮಾಣ ಪತ್ರವನ್ನು ಹೊಂದಲು ತಕ್ಷಣ ಕ್ರಮ ಕೈಗೊಳ್ಳುವಂತೆ ನಿಯೋಗ ಒತ್ತಾಯಿಸಿದೆ ಎಂದು ವರದಿ ತಿಳಿಸಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಲ್ಲಿ ಅತ್ಯಂತ ಹಿಂದುಳಿದ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸುವ ಅಧಿಕಾರ ರಾಜ್ಯಗಳಿಗೆ ಇದೆ ಎಂದು ಸುಪ್ರೀಂ ಕೋರ್ಟ್ 1 ಆಗಸ್ಟ್ 2024ರಂದು ಮಹತ್ವದ ತೀರ್ಪು ನೀಡಿದೆ.

ನಿವೃತ್ತ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಸಾಂವಿಧಾನಿಕ ಪೀಠ ಎಸ್‌ಸಿ, ಎಸ್‌ಟಿ ಒಳ ಮೀಸಲಾತಿಗೆ ಒಪ್ಪಿಗೆ ನೀಡಿತ್ತು. ಏಳು ನ್ಯಾಯಮೂರ್ತಿಗಳಲ್ಲಿ ಆರು ಮಂದಿ ಒಳ ಮೀಸಲಾತಿಯ ಪರವಾಗಿ ತೀರ್ಪು ನೀಡಿದರೆ, ಒಬ್ಬರು ಮಾತ್ರ (ನ್ಯಾ. ಬೇಲಾ ತ್ರಿವೇದಿ) ಒಳ ಮೀಸಲಾತಿಗೆ ವಿರುದ್ಧವಾಗಿ ತೀರ್ಪು ಪ್ರಕಟಿಸಿದ್ದರು. ಹಾಗಾಗಿ 6:1 ರ ಅನುಪಾತದಡಿ ಒಳ ಮೀಸಲಾತಿಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.

ಪಕ್ಷ ವಿರೋಧಿ ಹೇಳಿಕೆ: ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ 6 ವರ್ಷ ಉಚ್ಚಾಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...