Homeಕರ್ನಾಟಕಪರಿಶಿಷ್ಟ ಜಾತಿ ಒಳ ಮೀಸಲಾತಿ: ನ್ಯಾ. ನಾಗಮೋಹನದಾಸ್ ಆಯೋಗದಿಂದ ಇಂದು ಮಧ್ಯಂತರ ವರದಿ ಸಲ್ಲಿಕೆ

ಪರಿಶಿಷ್ಟ ಜಾತಿ ಒಳ ಮೀಸಲಾತಿ: ನ್ಯಾ. ನಾಗಮೋಹನದಾಸ್ ಆಯೋಗದಿಂದ ಇಂದು ಮಧ್ಯಂತರ ವರದಿ ಸಲ್ಲಿಕೆ

- Advertisement -
- Advertisement -

ಪರಿಶಿಷ್ಟ ಜಾತಿಗಳಲ್ಲಿ (ಎಸ್‌ಸಿ) ಒಳ ಮೀಸಲಾತಿ ಕಲ್ಪಿಸುವ ಸಂಬಂಧ ನೇಮಿಸಿರುವ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನದಾಸ್ ನೇತೃತ್ವದ ಆಯೋಗ ಇಂದು (ಮಾ. 27) ರಾಜ್ಯ ಸರ್ಕಾರಕ್ಕೆ ತನ್ನ ಮಧ್ಯಂತರ ವರದಿ ಸಲ್ಲಿಸಲಿದೆ.

ವಿಧಾನಸೌಧದಲ್ಲಿ ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಯೋಗವು ಮಧ್ಯಂತರ ವರದಿ ಸಲ್ಲಿಕೆ ಮಾಡಲಿದೆ ಎಂದು ಸಿಎಂ ಕಚೇರಿ ಅಧಿಕೃತ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ಉಪಜಾತಿಗಳಿಗೆ ಪ್ರಾತಿನಿಧ್ಯತೆ ಕಲ್ಪಿಸುವ ಕುರಿತು ಪ್ರಾಯೋಗಿಕ ಅಂಕಿ ಅಂಶ (ಎಂಫರಿಕಲ್ ಡಾಟಾ) ಪಡೆದು ಒಳಮೀಸಲಾತಿ ಜಾರಿಗೆ ಸೂಕ್ತ ಶಿಫಾರಸು ಮಾಡುವಂತೆ 14 ನವೆಂಬರ್ 2024ರಂದು ರಾಜ್ಯ ಸರ್ಕಾರ ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ನೇತೃತ್ವದಲ್ಲಿ ಆಯೋಗ ರಚಿಸಿತ್ತು. ಎರಡು ತಿಂಗಳ ಒಳಗೆ ವರದಿ ಸಲ್ಲಿಸುವಂತೆ ಆದೇಶಿಸಿತ್ತು. ಬಳಿಕ ಅವಧಿಯನ್ನು ವಿಸ್ತರಿಸಲಾಗಿತ್ತು.

ನಾಗಮೋಹನದಾಸ್ ಆಯೋಗ ಪ್ರಾಯೋಗಿಕ ಅಂಕಿ ಅಂಶ ಪಡೆದು ವರದಿ ಸಿದ್ದಪಡಿಸುತ್ತಿರುವ ನಡುವೆ ಒಳ ಮೀಸಲಾತಿ ಜಾರಿಗೆ ರಾಜ್ಯಾದ್ಯಂತ ಆಗ್ರಹ ಹೆಚ್ಚಾಗಿದೆ. ವಿವಿಧ ಸಂಘಟನೆಗಳು ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಸುದ್ದಿಗೋಷ್ಠಿ, ಪ್ರತಿಭಟನೆ ಸೇರಿದಂತೆ ಹಲವು ರೀತಿಯ ಹೋರಾಟಗಳನ್ನು ಮಾಡುತ್ತಿವೆ.

ಸಚಿವ ಮುನಿಯಪ್ಪ ಭೇಟಿ ಮಾಡಿದ ನಿಯೋಗ

ಒಳ ಮೀಸಲಾತಿ ಅನುಷ್ಠಾನದಲ್ಲಿ ಉಪಜಾತಿಯ ಗೊಂದಲ ನಿವಾರಣೆ ಮಾಡಲು ಕ್ರಮವಹಿಸುವಂತೆ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಅವರಿಗೆ ಷಡಕ್ಷರಿ ಮುನಿ ದೇಶಿಕೇಂದ್ರ ಸ್ವಾಮೀಜಿ ನೇತೃತ್ವದ ನಿಯೋಗ ಮನವಿ ಮಾಡಿದೆ ಎಂದು ವರದಿಯಾಗಿದೆ.

ಮಾದಿಗ ಸಮುದಾಯದ ಮೂಲ ಮಠವಾದ ಆದಿಜಾಂಬವ ಬೃಹ್ಮಠದ ಪೀಠಾಧ್ಯಕ್ಷರಾದ ಷಡಕ್ಷರಿ ಮುನಿದೇಶಿ ಕೇಂದ್ರ ಸ್ವಾಮೀಜಿ ಹಾಗೂ ರಾಜ್ಯ ಮಾತಂಗ ಜಾಗೃತಿ ಸಮಿತಿಯ ಗೌರವಾಧ್ಯಕ್ಷ ಆರ್.ಲೋಕೇಶ್ ನೇತೃತ್ವದ ನಿಯೋಗ ಸಚಿವ ಮುನಿಯಪ್ಪ ಅವರ ಮನೆಯಲ್ಲಿ ಒಳ ಮೀಸಲಾತಿ ಜಾರಿಯ ಕುರಿತಾಗಿ ಚರ್ಚಿಸಿದೆ ಎಂದು ದಿ ಫೆಡರಲ್ ವರದಿ ಮಾಡಿದೆ.

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಹಾಗೂ ಹಾಗೂ ಅತಿದೊಡ್ಡ ಸಂಖ್ಯೆಯಲ್ಲಿ ಇರುವ ಆದಿ ಕರ್ನಾಟಕ/ ಆದಿ ದ್ರಾವಿಡ ಜಾತಿ ಪ್ರಮಾಣ ಪತ್ರ ಹೊಂದಿರುವವರಿಗೆ ನಿರ್ದಿಷ್ಟ ಜಾತಿಯ ಪ್ರಮಾಣ ಪತ್ರವನ್ನು ಹೊಂದಲು ತಕ್ಷಣ ಕ್ರಮ ಕೈಗೊಳ್ಳುವಂತೆ ನಿಯೋಗ ಒತ್ತಾಯಿಸಿದೆ ಎಂದು ವರದಿ ತಿಳಿಸಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಲ್ಲಿ ಅತ್ಯಂತ ಹಿಂದುಳಿದ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸುವ ಅಧಿಕಾರ ರಾಜ್ಯಗಳಿಗೆ ಇದೆ ಎಂದು ಸುಪ್ರೀಂ ಕೋರ್ಟ್ 1 ಆಗಸ್ಟ್ 2024ರಂದು ಮಹತ್ವದ ತೀರ್ಪು ನೀಡಿದೆ.

ನಿವೃತ್ತ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಸಾಂವಿಧಾನಿಕ ಪೀಠ ಎಸ್‌ಸಿ, ಎಸ್‌ಟಿ ಒಳ ಮೀಸಲಾತಿಗೆ ಒಪ್ಪಿಗೆ ನೀಡಿತ್ತು. ಏಳು ನ್ಯಾಯಮೂರ್ತಿಗಳಲ್ಲಿ ಆರು ಮಂದಿ ಒಳ ಮೀಸಲಾತಿಯ ಪರವಾಗಿ ತೀರ್ಪು ನೀಡಿದರೆ, ಒಬ್ಬರು ಮಾತ್ರ (ನ್ಯಾ. ಬೇಲಾ ತ್ರಿವೇದಿ) ಒಳ ಮೀಸಲಾತಿಗೆ ವಿರುದ್ಧವಾಗಿ ತೀರ್ಪು ಪ್ರಕಟಿಸಿದ್ದರು. ಹಾಗಾಗಿ 6:1 ರ ಅನುಪಾತದಡಿ ಒಳ ಮೀಸಲಾತಿಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.

ಪಕ್ಷ ವಿರೋಧಿ ಹೇಳಿಕೆ: ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ 6 ವರ್ಷ ಉಚ್ಚಾಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...