Homeಕರ್ನಾಟಕಗೌರಿ ಲಂಕೇಶ್‌ ಹತ್ಯೆ ಪ್ರಕರಣ: ಜಾಮೀನಿನ ಮೇಲಿರುವ ಆರೋಪಿಗೆ ನೊಟೀಸ್‌ ನೀಡಿದ ಸುಪ್ರೀಂಕೋರ್ಟ್‌

ಗೌರಿ ಲಂಕೇಶ್‌ ಹತ್ಯೆ ಪ್ರಕರಣ: ಜಾಮೀನಿನ ಮೇಲಿರುವ ಆರೋಪಿಗೆ ನೊಟೀಸ್‌ ನೀಡಿದ ಸುಪ್ರೀಂಕೋರ್ಟ್‌

- Advertisement -
- Advertisement -

ಚಿಂತಕಿ, ವಿಚಾರವಾದಿ ಹಾಗೂ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗೆ ಜಾಮೀನು ಮಂಜೂರು ಮಾಡಿರುವ ಕರ್ನಾಟಕ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಆರೋಪಿಗೆ ನೋಟಿಸ್ ಜಾರಿ ಮಾಡಿದೆ.

ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠವು ಹತ್ಯೆಗೀಡಾದ ಪತ್ರಕರ್ತೆಯ ಸಹೋದರಿ ಕವಿತಾ ಲಂಕೇಶ್ ಅವರು ಸಲ್ಲಿಸಿದ ಮೇಲ್ಮನವಿ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡಿದೆ. ಅರ್ಜಿಯಲ್ಲಿ ಮೋಹನ್ ನಾಯಕ್‌ಗೆ ಜಾಮೀನು ರದ್ದುಗೊಳಿಸುವಂತೆ ಕವಿತಾ ಲಂಕೇಶ್ ಕೋರಿದ್ದರು.

ಗೌರಿ ಲಂಕೇಶ್‌ ಹತ್ಯೆ ಆರೋಪಿ ಮೋಹನ್ ನಾಯಕ್‌ಗೆ ಕರ್ನಾಟಕ ಹೈಕೋರ್ಟ್ ಡಿ.7, 2023ರಂದು ಜಾಮೀನು ನೀಡಿತ್ತು. ಮೋಹನ್ ನಾಯಕ್ ಪರ ಹೈಕೋರ್ಟ್‌ನಲ್ಲಿ ವಕೀಲ ಅಮರ್ ಕೊರಿಯಾ ವಾದ ಮಂಡಿಸಿದ್ದರು. ಗೌರಿ ಹತ್ಯೆಯ ಕ್ರಿಮಿನಲ್ ಪಿತೂರಿಯ ಭಾಗವಾಗಿರುವ ಮೋಹನ್ ನಾಯಕ್‌ಗೆ ನೀಡಲಾದ ಜಾಮೀನನ್ನು ರದ್ದುಗೊಳಿಸುವಂತೆ ನಿರ್ದೇಶನ ನೀಡುವಂತೆ ಕವಿತಾ ಅವರು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಆರೋಪಿಯು ಐದು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿದ್ದಾನೆ ಮತ್ತು ವಿಚಾರಣೆಯಲ್ಲಿ ಅನಗತ್ಯ ವಿಳಂಬವನ್ನು ಉಲ್ಲೇಖಿಸಿ ಕರ್ನಾಟಕ ಹೈಕೋರ್ಟ್ ಕಳೆದ ವರ್ಷ ಡಿಸೆಂಬರ್‌ನಲ್ಲಿ ನಾಯಕ್‌ಗೆ ಜಾಮೀನು ಮಂಜೂರು ಮಾಡಿತ್ತು. ವಿಶೇಷ ತನಿಖಾ ತಂಡ(ಎಸ್‌ಐಟಿ) ಪ್ರಕರಣದ ತನಿಖೆ ನಡೆಸುತ್ತಿದೆ. ನಾಯಕ್ ಪ್ರಕರಣದಲ್ಲಿ 11ನೇ ಆರೋಪಿಯಾಗಿದ್ದು, ಒಟ್ಟು 17 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಗಮನಾರ್ಹವಾಗಿ 2021ರ ಅಕ್ಟೋಬರ್ 21ರಂದು ಸುಪ್ರೀಂಕೋರ್ಟ್ ಆರೋಪಿ ಮೋಹನ್ ನಾಯಕ್ ಎನ್ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆಯ (ಕೆಸಿಒಸಿಎ) ಅಡಿಯಲ್ಲಿ ಆರೋಪಗಳನ್ನು ರದ್ದುಗೊಳಿಸಿದ ಏಪ್ರಿಲ್ 22, 2021ರ ಹೈಕೋರ್ಟ್ ತೀರ್ಪನ್ನು ರದ್ದುಗೊಳಿಸಿದೆ. ಸಂಘಟಿತ ಅಪರಾಧಗಳಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ಕಠಿಣ ನಿಬಂಧನೆಗಳನ್ನು ಅನ್ವಯಿಸಬಹುದು ಎಂದು ಅದು ಹೇಳಿದೆ. ಗೌರಿ ಹತ್ಯೆಯ ಹೊರತಾಗಿ ಅನೇಕ ಸಂಘಟಿತ ಅಪರಾಧಗಳನ್ನು ಎಸಗಿರುವ ಅಮೋಲ್ ಕಾಳೆ ನೇತೃತ್ವದ ತಂಡದ ಭಾಗವಾಗಿ ನಾಯಕ್ ಇದ್ದ ಎನ್ನುವುದು ತನಿಖೆಯ ವೇಳೆ ಬಯಲಾಗಿತ್ತು.

2017ರ ಸೆಪ್ಟೆಂಬರ್ 05ರಂದು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿನ ಮನೆಯ ಹೊರಗೆ ಪತ್ರಕರ್ತೆ ಮತ್ತು ಸಾಮಾಜಿಕ ಕಾರ್ಯಕರ್ತೆ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಲಾಗಿತ್ತು. ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿದಂತೆ ಒಟ್ಟು 18 ಆರೋಪಿಗಳ ಪೈಕಿ 17 ಆರೋಪಿಗಳನ್ನು ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿ ವಿಕಾಸ್ ಪಾಟೀಲ್ ತಲೆಮರೆಸಿಕೊಂಡಿದ್ದಾನೆ. ಈ ಪ್ರಕರಣದ ಕುರಿತು ತನಿಖೆ ನಡೆಸಿದ ಎಸ್ಐಟಿ ಅಧಿಕಾರಿಗಳು ಬೆಂಗಳೂರಿನ 1ನೇ ಸೆಷನ್ಸ್ ಕೋರ್ಟ್‌ಗೆ ಒಂದು ವರ್ಷದ ಬಳಿಕ 500ಕ್ಕೂ ಹೆಚ್ಚು ಸಾಕ್ಷಿಗಳು ಹಾಗೂ 1 ಸಾವಿರಕ್ಕೂ ಹೆಚ್ಚು ಪುರಾವೆಗಳನ್ನು ದಾಖಲಿಸಿರುವ ಸುಮಾರು 10 ಸಾವಿರ ಪುಟಕ್ಕೂ ಹೆಚ್ಚಿನ ಚಾರ್ಜ್‌ಶೀಟ್‌ನ್ನು ಸಲ್ಲಿಸಿದ್ದಾರೆ.

ಒಟ್ಟು 18 ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 302, 120ಬಿ, 114, 118, 109, 201, 203, 204 ಮತ್ತು 35, ಸಶಸ್ತ್ರ ಕಾಯ್ದೆಯ ಸೆಕ್ಷನ್ಗಳಾದ 25(1), 25(1ಃ), 27(1) ಮತ್ತು ಕೋಕಾ ಕಾಯ್ದೆಯ ಸೆಕ್ಷನ್ಗಳಾದ 3(1), 3(2), 3(3), 3(4)ರಡಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣದ ಪ್ರಮುಖ ಆರೋಪಿ ಅಮೋಲ್ ಕಾಳೆ, ಪರಶುರಾಮ್ ವಾಗ್ಮೊರೆ, ಗಣೇಶ್ ಮಿಸ್ಕಿನ್, ಅಮಿತ್ ಬಡ್ಡಿ, ಅಮಿತ್ ದೆಗ್ವೇಕರ್, ‘ರತ್ ಕುರ್ಣೇ, ಸುರೇಶ್ ಎಚ್.ಎಲ್, ರಾಜೇಶ್ ಬಂಗೇರ, ಸುನ್ವ ಗೊಂದಲೇಕರ್, ಶರದ್ ಕಾಲಸ್ಕರ್, ಮೋಹನ್ ನಾಯಕ್, ವಾಸುದೇವ ಸೂರ್ಯವಂಶಿ, ಸುಜಿತ್ ಕುಮಾರ್, ಮನೋಹರ್ ಎಡವೆ, ಶ್ರೀಕಾಂತ್ ಪಂಗರ್ಕರ್, ಕೆ.ಟಿ.ನವೀನ್ಕುಮಾರ್ ಹಾಗೂ ಹೃಷಿಕೇಶ್ ದೇವಡೇಕರ್ ಬಂಧನದಲ್ಲಿದ್ದಾರೆ. ಅಮೋಲ್ ಕಾಳೆಯನ್ನೂ ಒಳಗೊಂಡಂತೆ 7 ಆರೋಪಿಗಳು ಮಹಾರಾಷ್ಟ್ರದವರು, ಉಳಿದವರು ಕರ್ನಾಟಕ ರಾಜ್ಯದವರಾಗಿದ್ದಾರೆ.

ಈ ಎಲ್ಲ ಆರೋಪಿಗಳಿಗೂ ಸನಾತನ ಸಂಸ್ಥೆ ಮತ್ತು ‘ಹಿಂದೂ ಜನ ಜಾಗೃತಿ ಸಂಸ್ಥೆ’ಗಳೊಂದಿಗೆ ಪ್ರತ್ಯಕ್ಷ ಹಾಗೂ ಪರೋಕ್ಷ ಸಂಬಂಧಗಳಿವೆ ಎಂಬುವುದು ಪ್ರಾಸಿಕ್ಯೂಷನ್ ಪತ್ತೆ ಹಚ್ಚಿರುವ ಸಂಗತಿಯಾಗಿದ್ದು, ಸನಾತನ ಸಂಸ್ಥೆಯ ಸಿದ್ಧಾಂತ ಮತ್ತು ಗುರಿಗಳು ಈ ಆರೋಪಿಗಳನ್ನು ಹತ್ಯೆ ಮಾಡಲು ಪ್ರೇರೇಪಿಸಿದೆ ಎಂದು ಪ್ರಾಸಿಕ್ಯೂಷನ್ ಆರೋಪವಾಗಿದೆ. ಪ್ರಕರಣದ ಪ್ರಮುಖ ಆರೋಪಿ ಅಮೋಲ್ ಕಾಳೆ ತಂಡದವರೇ ಮಹಾರಾಷ್ಟ್ರದ ದಾಬೋಲ್ಕರ್, ಪನ್ಸಾರೆ ಹಾಗೂ ಕರ್ನಾಟಕದ ಸಂಶೋಧಕ ಪ್ರೊ.ಎಂ.ಎಂ.ಕಲಬುರ್ಗಿಯವರ ಹತ್ಯೆಯಲ್ಲೂ ಆರೋಪಿಗಳಾಗಿದ್ದಾರೆ ಎನ್ನಲಾಗಿದೆ. ಇವರಲ್ಲಿ ಕೆಲವರು ಮಹಾರಾಷ್ಟ್ರದ ಜೈಲಿನಲ್ಲಿದ್ದಾರೆ. ಉಳಿದವರು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...