HomeUncategorizedಜೈಲುಗಳಲ್ಲಿ ಜಾತಿ ತಾರತಮ್ಯ : ಕೇಂದ್ರ, 11 ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್‌ ನೋಟಿಸ್

ಜೈಲುಗಳಲ್ಲಿ ಜಾತಿ ತಾರತಮ್ಯ : ಕೇಂದ್ರ, 11 ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್‌ ನೋಟಿಸ್

- Advertisement -
- Advertisement -

ಜಾತಿ ಆಧಾರಿತ ತಾರತಮ್ಯ ಮಾಡಲಾಗ್ತಿದೆ, ಜಾತಿ ನೋಡಿ ಜೈಲುಗಳಲ್ಲಿ ಖೈದಿಗಳನ್ನು ಪ್ರತ್ಯೇಕಿಸಲಾಗುತ್ತಿದೆ ಎಂದು ಆರೋಪಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಬುಧವಾರ ಕೇಂದ್ರ ಮತ್ತು 11 ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.

ಪತ್ರಕರ್ತೆ ಸುಕನ್ಯಾ ಶಾಂತಾ ಅವರು ಪಿಐಎಲ್‌ ಸಲ್ಲಿಸಿದ್ದು, ಜೈಲು ಕೈಪಿಡಿಗಳ ಮೂಲಕ ಜಾತಿ ಆಧಾರಿತ ತಾರತಮ್ಯ ನಡೆಸಲಾಗ್ತಿದೆ ಎಂದು ಆರೋಪಿಸಿದ್ದಾರೆ. ಈ ಆರೋಪ 2020ರಲ್ಲಿ ಸುಕನ್ಯಾ ಅವರು ಸಂಗ್ರಹಿಸಿದ ವರದಿಯನ್ನು ಆಧರಿಸಿದೆ.

ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ಕೇಂದ್ರದ ಪರವಾಗಿ ನ್ಯಾಯಾಲಯಕ್ಕೆ ಸಹಾಯ ಮಾಡಲು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರನ್ನು ಕೋರಿದ್ದು”ಇದು ಅತ್ಯಂತ ಗಂಭೀರ ವಿಷಯ” ಎಂದಿದ್ದಾರೆ.

ವಕೀಲ ಎಸ್.ಪ್ರಸನ್ನ ಅವರೊಂದಿಗೆ ಅರ್ಜಿದಾರರ ಪರವಾಗಿ ವಾದಿಸಿದ ಹಿರಿಯ ವಕೀಲ ಎಸ್.ಮುರಳೀಧರ್, ಜೈಲುಗಳಲ್ಲಿ ಖೈದಿಯ ಜಾತಿಗೆ ಅನುಗುಣವಾಗಿ ಹೇಗೆ ಕೆಲಸ ಹಂಚಿಕೆ ಮಾಡಲಾಗುತ್ತಿದೆ ಎಂಬುವುದನ್ನು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.

ಮಧ್ಯಪ್ರದೇಶ, ದೆಹಲಿ ಮತ್ತು ತಮಿಳುನಾಡು ಜೈಲುಗಳ ಕೆಲವು ನಿದರ್ಶನಗಳನ್ನು ಅರ್ಜಿಯು ಎತ್ತಿ ತೋರಿಸಿದ ಅವರು, ಈ ರಾಜ್ಯಗಳ ಜೈಲುಗಳಲ್ಲಿ ಪ್ರಬಲ ಜಾತಿಯ ಖೈದಿಗಳಿಗೆ ಅಡುಗೆ ಕೆಲಸ ಕೊಟ್ಟರೆ, ಗುಡಿಸುವುದು, ಶೌಚಾಲಯ ಸ್ವಚ್ಛಗೊಳಿಸುವಂತಹ ಕೆಲಸಗಳನ್ನು ನಿರ್ದಿಷ್ಟ ದುರ್ಬಲ ಜಾತಿಯ ಖೈದಿಗಳಿಗೆ ನೀಡಲಾಗ್ತಿದೆ ಎಂದು ಹೇಳಿದ್ದಾರೆ.

ರಾಜ್ಯಗಳ ಜೈಲು ಕೈಪಿಡಿಗಳು ಕೆಲಸ ನೀಡುವಲ್ಲಿ ಮತ್ತು ಬ್ಯಾರಕ್‌ಗಳ ಹಂಚಿಕೆ ವೇಳೆ ಖೈದಿಗಳನ್ನು ಜಾತಿ ಆಧಾರರ ಮೇಲೆ ಪ್ರತ್ಯೇಖಿಸಲು ಉತ್ತೇಜನ ನೀಡುವಂತಿದೆ. ಅಲ್ಲದೆ, ದುರ್ಬಲ ಜಾತಿಯ ಖೈದಿಗಳಿಂದ ಬಲವಂತದ ದುಡಿಮೆ ಮಾಡಿಸಿಕೊಂಡು ದೌರ್ಜನ್ಯ ಎಸಗುತ್ತಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ತಮಿಳುನಾಡಿನ ಪಾಲಯಂಕೊಟ್ಟೈ ಕೇಂದ್ರ ಕಾರಾಗೃಹದಲ್ಲಿ ತೇವರ್‌, ನಾಡಾರ್‌ ಮತ್ತು ಪಲ್ಲರ್‌ ಖೈದಿಗಳನ್ನು ಅವರ ಜಾತಿಯ ಆಧಾರದ ಮೇಲೆ ವಿವಿಧ ಬ್ಯಾರಕ್‌ಗಳಲ್ಲಿ ಪ್ರತ್ಯೇಕಿಸಿರುವುದು ಕಾರಾಗೃಗಳಲ್ಲಿ ಜಾತಿ ಆಧಾರಿತ ತಾರತಮ್ಯಕ್ಕೆ ಸ್ಪಷ್ಟ ಉದಾಹರಣೆಯಾಗಿದೆ ಎಂದು ಹೇಳಿದ್ದಾರೆ. ಜೈಲಿನೊಳಗೆ ಕಾಲಿಟ್ಟ ಕೂಡಲೇ ಕೈದಿಗಳು ಇಂತಹ ತಾರತಮ್ಯವನ್ನು ಎದುರಿಸುತ್ತಿದ್ದಾರೆ ಎಂದು ವಕೀಲ ಮುರಳೀಧರ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಜೈಲುಗಳಲ್ಲಿ ಜಾತಿ ಆಧಾರಿತ ಖೈದಿ ಕಾರ್ಮಿಕರ ಪ್ರತ್ಯೇಕತೆಯು ವಸಾಹತುಶಾಹಿ ಭಾರತದ ಅವಶೇಷವಾಗಿದೆ. ಜಾತಿ ಆಧಾರಿತ ಖೈದಿ ಕಾರ್ಮಿಕರ ಹಂಚಿಕೆ ಅವಮಾನಕರ ಮತ್ತು ಅನಾರೋಗ್ಯಕರವಾಗಿದೆ. ಇದು ಘನತೆಯಿಂದ ಬದುಕುವ ಕೈದಿಗಳ ಹಕ್ಕಿನ ವಿರುದ್ಧವಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

2003ರ ಮಾದರಿ ಜೈಲು ಕೈಪಿಡಿಯು ಭದ್ರತೆ, ಶಿಸ್ತು ಮತ್ತು ಸಾಂಸ್ಥಿಕ ಕಾರ್ಯಕ್ರಮದ ಆಧಾರದ ಮೇಲೆ ವರ್ಗೀಕರಣವನ್ನು ಮಾಡಬೇಕು ಎಂದು ಸ್ಪಷ್ಟವಾಗಿ ಹೇಳುತ್ತದೆ. ಆದರೆ, ಸಾಮಾಜಿಕ-ಆರ್ಥಿಕ ಸ್ಥಿತಿ, ಜಾತಿ ಅಥವಾ ವರ್ಗದ ಆಧಾರದ ಮೇಲೆ ಖೈದಿಗಳನ್ನು ವರ್ಗೀಕರಣ ಮಾಡಬೇಕು ಎಂದಿಲ್ಲ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಅಪರಾಧಿಗಳು ಮತ್ತು ವಿಚಾರಣಾಧೀನ ಕೈದಿಗಳ ಆಧಾರದ ಮೇಲೆ ಜೈಲುಗಳಲ್ಲಿ ಪ್ರತ್ಯೇಕತೆಯ ಬಗ್ಗೆ ತಾನು ಕೇಳಿದ್ದೇನೆ. ಆದರೆ, ಜಾತಿ ಆಧಾರಿತ ಪ್ರತ್ಯೇಕತೆ ಇದ್ದರೆ, ಅದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆಬಿ ಪಾರ್ಧಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು, ಉತ್ತರ ಪ್ರದೇಶ, ಒಡಿಶಾ, ಜಾರ್ಖಂಡ್, ಕೇರಳ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಆಂಧ್ರಪ್ರದೇಶ, ಮಹಾರಾಷ್ಟ್ರ, ತೆಲಂಗಾಣ, ಪಂಜಾಬ್ ಮತ್ತು ತಮಿಳುನಾಡು ಸೇರಿದಂತೆ ಒಟ್ಟು 11 ರಾಜ್ಯಗಳಿಗೆ ನೋಟಿಸ್ ಜಾರಿ ಮಾಡಿದೆ. ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೇಳಿದೆ.

ಇದನ್ನೂ ಓದಿ : ನಿರ್ಮಲಾ ಸೀತಾರಾಮನ್ ವಜಾಗೊಳಿಸಿ, ಇಡಿ ರಕ್ಷಿಸಿ: IRS ಅಧಿಕಾರಿಯಿಂದ ರಾಷ್ಟ್ರಪತಿಗೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...