HomeUncategorizedಜೈಲುಗಳಲ್ಲಿ ಜಾತಿ ತಾರತಮ್ಯ : ಕೇಂದ್ರ, 11 ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್‌ ನೋಟಿಸ್

ಜೈಲುಗಳಲ್ಲಿ ಜಾತಿ ತಾರತಮ್ಯ : ಕೇಂದ್ರ, 11 ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್‌ ನೋಟಿಸ್

- Advertisement -
- Advertisement -

ಜಾತಿ ಆಧಾರಿತ ತಾರತಮ್ಯ ಮಾಡಲಾಗ್ತಿದೆ, ಜಾತಿ ನೋಡಿ ಜೈಲುಗಳಲ್ಲಿ ಖೈದಿಗಳನ್ನು ಪ್ರತ್ಯೇಕಿಸಲಾಗುತ್ತಿದೆ ಎಂದು ಆರೋಪಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಬುಧವಾರ ಕೇಂದ್ರ ಮತ್ತು 11 ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.

ಪತ್ರಕರ್ತೆ ಸುಕನ್ಯಾ ಶಾಂತಾ ಅವರು ಪಿಐಎಲ್‌ ಸಲ್ಲಿಸಿದ್ದು, ಜೈಲು ಕೈಪಿಡಿಗಳ ಮೂಲಕ ಜಾತಿ ಆಧಾರಿತ ತಾರತಮ್ಯ ನಡೆಸಲಾಗ್ತಿದೆ ಎಂದು ಆರೋಪಿಸಿದ್ದಾರೆ. ಈ ಆರೋಪ 2020ರಲ್ಲಿ ಸುಕನ್ಯಾ ಅವರು ಸಂಗ್ರಹಿಸಿದ ವರದಿಯನ್ನು ಆಧರಿಸಿದೆ.

ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ಕೇಂದ್ರದ ಪರವಾಗಿ ನ್ಯಾಯಾಲಯಕ್ಕೆ ಸಹಾಯ ಮಾಡಲು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರನ್ನು ಕೋರಿದ್ದು”ಇದು ಅತ್ಯಂತ ಗಂಭೀರ ವಿಷಯ” ಎಂದಿದ್ದಾರೆ.

ವಕೀಲ ಎಸ್.ಪ್ರಸನ್ನ ಅವರೊಂದಿಗೆ ಅರ್ಜಿದಾರರ ಪರವಾಗಿ ವಾದಿಸಿದ ಹಿರಿಯ ವಕೀಲ ಎಸ್.ಮುರಳೀಧರ್, ಜೈಲುಗಳಲ್ಲಿ ಖೈದಿಯ ಜಾತಿಗೆ ಅನುಗುಣವಾಗಿ ಹೇಗೆ ಕೆಲಸ ಹಂಚಿಕೆ ಮಾಡಲಾಗುತ್ತಿದೆ ಎಂಬುವುದನ್ನು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.

ಮಧ್ಯಪ್ರದೇಶ, ದೆಹಲಿ ಮತ್ತು ತಮಿಳುನಾಡು ಜೈಲುಗಳ ಕೆಲವು ನಿದರ್ಶನಗಳನ್ನು ಅರ್ಜಿಯು ಎತ್ತಿ ತೋರಿಸಿದ ಅವರು, ಈ ರಾಜ್ಯಗಳ ಜೈಲುಗಳಲ್ಲಿ ಪ್ರಬಲ ಜಾತಿಯ ಖೈದಿಗಳಿಗೆ ಅಡುಗೆ ಕೆಲಸ ಕೊಟ್ಟರೆ, ಗುಡಿಸುವುದು, ಶೌಚಾಲಯ ಸ್ವಚ್ಛಗೊಳಿಸುವಂತಹ ಕೆಲಸಗಳನ್ನು ನಿರ್ದಿಷ್ಟ ದುರ್ಬಲ ಜಾತಿಯ ಖೈದಿಗಳಿಗೆ ನೀಡಲಾಗ್ತಿದೆ ಎಂದು ಹೇಳಿದ್ದಾರೆ.

ರಾಜ್ಯಗಳ ಜೈಲು ಕೈಪಿಡಿಗಳು ಕೆಲಸ ನೀಡುವಲ್ಲಿ ಮತ್ತು ಬ್ಯಾರಕ್‌ಗಳ ಹಂಚಿಕೆ ವೇಳೆ ಖೈದಿಗಳನ್ನು ಜಾತಿ ಆಧಾರರ ಮೇಲೆ ಪ್ರತ್ಯೇಖಿಸಲು ಉತ್ತೇಜನ ನೀಡುವಂತಿದೆ. ಅಲ್ಲದೆ, ದುರ್ಬಲ ಜಾತಿಯ ಖೈದಿಗಳಿಂದ ಬಲವಂತದ ದುಡಿಮೆ ಮಾಡಿಸಿಕೊಂಡು ದೌರ್ಜನ್ಯ ಎಸಗುತ್ತಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ತಮಿಳುನಾಡಿನ ಪಾಲಯಂಕೊಟ್ಟೈ ಕೇಂದ್ರ ಕಾರಾಗೃಹದಲ್ಲಿ ತೇವರ್‌, ನಾಡಾರ್‌ ಮತ್ತು ಪಲ್ಲರ್‌ ಖೈದಿಗಳನ್ನು ಅವರ ಜಾತಿಯ ಆಧಾರದ ಮೇಲೆ ವಿವಿಧ ಬ್ಯಾರಕ್‌ಗಳಲ್ಲಿ ಪ್ರತ್ಯೇಕಿಸಿರುವುದು ಕಾರಾಗೃಗಳಲ್ಲಿ ಜಾತಿ ಆಧಾರಿತ ತಾರತಮ್ಯಕ್ಕೆ ಸ್ಪಷ್ಟ ಉದಾಹರಣೆಯಾಗಿದೆ ಎಂದು ಹೇಳಿದ್ದಾರೆ. ಜೈಲಿನೊಳಗೆ ಕಾಲಿಟ್ಟ ಕೂಡಲೇ ಕೈದಿಗಳು ಇಂತಹ ತಾರತಮ್ಯವನ್ನು ಎದುರಿಸುತ್ತಿದ್ದಾರೆ ಎಂದು ವಕೀಲ ಮುರಳೀಧರ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಜೈಲುಗಳಲ್ಲಿ ಜಾತಿ ಆಧಾರಿತ ಖೈದಿ ಕಾರ್ಮಿಕರ ಪ್ರತ್ಯೇಕತೆಯು ವಸಾಹತುಶಾಹಿ ಭಾರತದ ಅವಶೇಷವಾಗಿದೆ. ಜಾತಿ ಆಧಾರಿತ ಖೈದಿ ಕಾರ್ಮಿಕರ ಹಂಚಿಕೆ ಅವಮಾನಕರ ಮತ್ತು ಅನಾರೋಗ್ಯಕರವಾಗಿದೆ. ಇದು ಘನತೆಯಿಂದ ಬದುಕುವ ಕೈದಿಗಳ ಹಕ್ಕಿನ ವಿರುದ್ಧವಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

2003ರ ಮಾದರಿ ಜೈಲು ಕೈಪಿಡಿಯು ಭದ್ರತೆ, ಶಿಸ್ತು ಮತ್ತು ಸಾಂಸ್ಥಿಕ ಕಾರ್ಯಕ್ರಮದ ಆಧಾರದ ಮೇಲೆ ವರ್ಗೀಕರಣವನ್ನು ಮಾಡಬೇಕು ಎಂದು ಸ್ಪಷ್ಟವಾಗಿ ಹೇಳುತ್ತದೆ. ಆದರೆ, ಸಾಮಾಜಿಕ-ಆರ್ಥಿಕ ಸ್ಥಿತಿ, ಜಾತಿ ಅಥವಾ ವರ್ಗದ ಆಧಾರದ ಮೇಲೆ ಖೈದಿಗಳನ್ನು ವರ್ಗೀಕರಣ ಮಾಡಬೇಕು ಎಂದಿಲ್ಲ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಅಪರಾಧಿಗಳು ಮತ್ತು ವಿಚಾರಣಾಧೀನ ಕೈದಿಗಳ ಆಧಾರದ ಮೇಲೆ ಜೈಲುಗಳಲ್ಲಿ ಪ್ರತ್ಯೇಕತೆಯ ಬಗ್ಗೆ ತಾನು ಕೇಳಿದ್ದೇನೆ. ಆದರೆ, ಜಾತಿ ಆಧಾರಿತ ಪ್ರತ್ಯೇಕತೆ ಇದ್ದರೆ, ಅದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆಬಿ ಪಾರ್ಧಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು, ಉತ್ತರ ಪ್ರದೇಶ, ಒಡಿಶಾ, ಜಾರ್ಖಂಡ್, ಕೇರಳ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಆಂಧ್ರಪ್ರದೇಶ, ಮಹಾರಾಷ್ಟ್ರ, ತೆಲಂಗಾಣ, ಪಂಜಾಬ್ ಮತ್ತು ತಮಿಳುನಾಡು ಸೇರಿದಂತೆ ಒಟ್ಟು 11 ರಾಜ್ಯಗಳಿಗೆ ನೋಟಿಸ್ ಜಾರಿ ಮಾಡಿದೆ. ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೇಳಿದೆ.

ಇದನ್ನೂ ಓದಿ : ನಿರ್ಮಲಾ ಸೀತಾರಾಮನ್ ವಜಾಗೊಳಿಸಿ, ಇಡಿ ರಕ್ಷಿಸಿ: IRS ಅಧಿಕಾರಿಯಿಂದ ರಾಷ್ಟ್ರಪತಿಗೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...