Homeಮುಖಪುಟ'ಸನಾತನ ಧರ್ಮ ನಿರ್ಮೂಲನೆ': ಉದಯನಿಧಿ ಸ್ಟಾಲಿನ್‌ಗೆ ನೋಟಿಸ್ ಜಾರಿ ಮಾಡಿದ ಸುಪ್ರೀಂ

‘ಸನಾತನ ಧರ್ಮ ನಿರ್ಮೂಲನೆ’: ಉದಯನಿಧಿ ಸ್ಟಾಲಿನ್‌ಗೆ ನೋಟಿಸ್ ಜಾರಿ ಮಾಡಿದ ಸುಪ್ರೀಂ

- Advertisement -
- Advertisement -

‘ಸನಾತನ ಧರ್ಮ’ ಸಾಮಾಜಿಕ ನ್ಯಾಯದ ಕಲ್ಪನೆಗೆ ವಿರುದ್ಧವಾಗಿದೆ ಮತ್ತು ಅದನ್ನು ನಿರ್ಮೂಲನೆ ಮಾಡಬೇಕು ಎಂಬ ಹೇಳಿಕೆ ನೀಡಿದ್ದ ಉದಯನಿಧಿ ಸ್ಟಾಲಿನ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರಿದ ಅರ್ಜಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಪ್ರತಿಕ್ರಿಯೆ ಕೇಳಿದೆ.

ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಬೇಲಾ ಎಂ ತ್ರಿವೇದಿ ಅವರ ಪೀಠವು ತಮಿಳುನಾಡು ಸರ್ಕಾರ ಮತ್ತು ಉದಯನಿಧಿಗೆ ನೋಟಿಸ್ ಜಾರಿಗೊಳಿಸಿದೆ.

ನೀವು ಇಲ್ಲಿ ಏಕೆ ಇದ್ದೀರ? ನೀವು ಹೈಕೋರ್ಟ್‌ಗೆ ಹೋಗಿ.. ಎಫ್‌ಐಆರ್ ದಾಖಲಾಗಬೇಕೆಂಬುದು ನಿಮ್ಮ ಮನವಿಯಾಗಿದ್ದರೆ, ಇದೇನು ಪೊಲೀಸ್ ಠಾಣೆಯೇ? ಹೈಕೋರ್ಟ್‌ಗೆ ಸಂಪರ್ಕಿಸುವಂತೆ ಅರ್ಜಿದಾರರಿಗೆ ಪೀಠ ಹೇಳಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲರು, ದ್ವೇಷದ ಭಾಷಣಕ್ಕೆ ಸಂಬಂಧಿಸಿದ ವಿಷಯಗಳ ಪ್ರಕರಣಗಳು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿದೆ ಎಂದು ತಿಳಿಸಿದರು.

”ರಾಜ್ಯ ಸರ್ಕಾರವೇ ಒಂದು ನಿರ್ದಿಷ್ಟ ಧರ್ಮದ ವಿರುದ್ಧ ಟೀಕೆಗಳನ್ನು ಮಾಡುತ್ತಿದ್ದಾಗ ಮತ್ತು ನಿರ್ದಿಷ್ಟ ಧರ್ಮದ ವಿರುದ್ಧ ಮಾತನಾಡಲು ಪ್ರೋತ್ಸಾಹಿಸುತ್ತಿರುವಾಗ ಅದಕ್ಕೆ ಸುಪ್ರೀಂ ಕೋರ್ಟ್ ಮಾತ್ರ ಪರಿಹಾರ ನೀಡಬೇಕು. ಮಕ್ಕಳು ಸನಾತನ ಧರ್ಮದ ವಿರುದ್ಧ ಮಾತನಾಡುತ್ತಾರೆ ಎಂದು ಎರಡು ದಿನಗಳ ಹಿಂದೆ ರಾಜ್ಯದ ಅಧಿಕಾರಿಗಳು ಸುತ್ತೋಲೆ ಹೊರಡಿಸಿದ್ದಾರೆ” ಎಂದು ಅವರು ಹೇಳಿದರು.

ಇದು ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಪ್ರಕರಣವಾಗಿದ್ದು, ಆದ್ದರಿಂದ ಸುಪ್ರೀಂ ಕೋರ್ಟ್ ಮೆಟ್ಟಿಲೇರಬೇಕಾಯಿತು ಎಂದು ಹಿರಿಯ ವಕೀಲರು ಹೇಳಿದರು.

ಮದ್ರಾಸ್ ಹೈಕೋರ್ಟ್‌ನಲ್ಲಿ ವಕೀಲರಾಗಿದ್ದ ಬಿ ಜಗನ್ನಾಥ್ ಅವರು ಸಲ್ಲಿಸಿದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಪೀಠವು ಆರಂಭದಲ್ಲಿ ನಿರಾಕರಿಸಿತು. ಆದರೆ ಅಂತಿಮವಾಗಿ ಅರ್ಜಿಯನ್ನು ಸ್ವೀಕರಿಸಲು ಮತ್ತು ನೋಟಿಸ್ ನೀಡಲು ಒಪ್ಪಿಕೊಂಡಿತು.

ಅರ್ಜಿಯಲ್ಲಿ ಪ್ರತಿವಾದಿಗಳಾಗಿ ತಮಿಳುನಾಡು ಹಿಂದೂ ಧಾರ್ಮಿಕ ದತ್ತಿ ಸಚಿವ ಸೇಕರ್ ಬಾಬು, ಲೋಕಸಭಾ ಸದಸ್ಯ ಎ ರಾಜಾ, ಡಿಎಂಕೆ ಅಧ್ಯಕ್ಷ ವೀರಮಣಿ ಕೆ ವೀರಮಣಿ ಮತ್ತು ತಮಿಳುನಾಡು ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಪೀಟರ್ ಅಲ್ಫೋನ್ಸ್ ಕೂಡ ಇದ್ದರು.

ತಮಿಳುನಾಡು ಪ್ರಗತಿಪರ ಲೇಖಕರ ಕಲಾವಿದರ ಸಂಘವು ಸೆ.2ರಂದು ‘ಸನಾತನ ನಿರ್ಮೂಲನೆ’ ವಿಷಯದ ಕುರಿತು ಚೆನ್ನೈನಲ್ಲಿ ಆಯೋಜಿಸಿದ್ದ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಉದಯನಿಧಿ, ಸನಾತನವು ಸಾಮಾಜಿಕ ನ್ಯಾಯದ ಕಲ್ಪನೆಗೆ ವಿರುದ್ಧವಾಗಿದ್ದು, ಅದನ್ನು ನಿರ್ಮೂಲನೆ ಮಾಡಬೇಕಿದೆ. ಕೆಲವು ವಿಷಯಗಳನ್ನು ವಿರೋಧಿಸಲು ಸಾಧ್ಯವಿಲ್ಲ, ಅದನ್ನು ಮಾತ್ರ ರದ್ದುಗೊಳಿಸಬೇಕು. ನಾವು ಡೆಂಗ್ಯೂ, ಸೊಳ್ಳೆಗಳು, ಮಲೇರಿಯಾ ಅಥವಾ ಕರೋನಾವನ್ನು ವಿರೋಧಿಸಲು ಸಾಧ್ಯವಿಲ್ಲ. ನಾವು ಇದನ್ನು ನಿರ್ಮೂಲನೆ ಮಾಡಬೇಕು, ನಾವು ಸನಾತನವನ್ನು ನಿರ್ಮೂಲನೆ ಮಾಡಬೇಕು ಎಂದು ಉದಯನಿಧಿ ಹೇಳಿದ್ದರು.

ಅವರ ಹೇಳಿಕೆಗಳು ರಾಜಕೀಯ ಗದ್ದಲವನ್ನು ಸೃಷ್ಟಿಸಿತು. ಬಿಜೆಪಿ ನಾಯಕರು ಉದಯನಿಧಿ ಮೇಲೆ ಮುಗಿಬಿದ್ದು ದಾಳಿ ಮಾಡಿದರು, ಆದರೂ ಉದಯನಿಧಿ ಮಾತ್ರ ”ಯಾವುದೇ ಕಾನೂನು ಸವಾಲನ್ನು ಎದುರಿಸಲು ಸಿದ್ಧ” ಎನ್ನುವ ಮೂಲಕ ತಮ್ಮ ಹೇಳಿಕೆ ಮೇಲೆ ನಿಂತರು.

ಇದನ್ನೂ ಓದಿ: ಸನಾತನ ನಿರ್ಮೂಲನೆಯ ಬಗ್ಗೆ ಉದಯನಿಧಿ ಎಬ್ಬಿಸಿದ ಬಿರುಗಾಳಿ ಮತ್ತು ಪೆರಿಯಾರ್ ಪರಂಪರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಒಪ್ಪುವುದಿಲ್ಲ : ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...