Homeಮುಖಪುಟ'ಸನಾತನ ಧರ್ಮ ನಿರ್ಮೂಲನೆ': ಉದಯನಿಧಿ ಸ್ಟಾಲಿನ್‌ಗೆ ನೋಟಿಸ್ ಜಾರಿ ಮಾಡಿದ ಸುಪ್ರೀಂ

‘ಸನಾತನ ಧರ್ಮ ನಿರ್ಮೂಲನೆ’: ಉದಯನಿಧಿ ಸ್ಟಾಲಿನ್‌ಗೆ ನೋಟಿಸ್ ಜಾರಿ ಮಾಡಿದ ಸುಪ್ರೀಂ

- Advertisement -
- Advertisement -

‘ಸನಾತನ ಧರ್ಮ’ ಸಾಮಾಜಿಕ ನ್ಯಾಯದ ಕಲ್ಪನೆಗೆ ವಿರುದ್ಧವಾಗಿದೆ ಮತ್ತು ಅದನ್ನು ನಿರ್ಮೂಲನೆ ಮಾಡಬೇಕು ಎಂಬ ಹೇಳಿಕೆ ನೀಡಿದ್ದ ಉದಯನಿಧಿ ಸ್ಟಾಲಿನ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರಿದ ಅರ್ಜಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಪ್ರತಿಕ್ರಿಯೆ ಕೇಳಿದೆ.

ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಬೇಲಾ ಎಂ ತ್ರಿವೇದಿ ಅವರ ಪೀಠವು ತಮಿಳುನಾಡು ಸರ್ಕಾರ ಮತ್ತು ಉದಯನಿಧಿಗೆ ನೋಟಿಸ್ ಜಾರಿಗೊಳಿಸಿದೆ.

ನೀವು ಇಲ್ಲಿ ಏಕೆ ಇದ್ದೀರ? ನೀವು ಹೈಕೋರ್ಟ್‌ಗೆ ಹೋಗಿ.. ಎಫ್‌ಐಆರ್ ದಾಖಲಾಗಬೇಕೆಂಬುದು ನಿಮ್ಮ ಮನವಿಯಾಗಿದ್ದರೆ, ಇದೇನು ಪೊಲೀಸ್ ಠಾಣೆಯೇ? ಹೈಕೋರ್ಟ್‌ಗೆ ಸಂಪರ್ಕಿಸುವಂತೆ ಅರ್ಜಿದಾರರಿಗೆ ಪೀಠ ಹೇಳಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲರು, ದ್ವೇಷದ ಭಾಷಣಕ್ಕೆ ಸಂಬಂಧಿಸಿದ ವಿಷಯಗಳ ಪ್ರಕರಣಗಳು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿದೆ ಎಂದು ತಿಳಿಸಿದರು.

”ರಾಜ್ಯ ಸರ್ಕಾರವೇ ಒಂದು ನಿರ್ದಿಷ್ಟ ಧರ್ಮದ ವಿರುದ್ಧ ಟೀಕೆಗಳನ್ನು ಮಾಡುತ್ತಿದ್ದಾಗ ಮತ್ತು ನಿರ್ದಿಷ್ಟ ಧರ್ಮದ ವಿರುದ್ಧ ಮಾತನಾಡಲು ಪ್ರೋತ್ಸಾಹಿಸುತ್ತಿರುವಾಗ ಅದಕ್ಕೆ ಸುಪ್ರೀಂ ಕೋರ್ಟ್ ಮಾತ್ರ ಪರಿಹಾರ ನೀಡಬೇಕು. ಮಕ್ಕಳು ಸನಾತನ ಧರ್ಮದ ವಿರುದ್ಧ ಮಾತನಾಡುತ್ತಾರೆ ಎಂದು ಎರಡು ದಿನಗಳ ಹಿಂದೆ ರಾಜ್ಯದ ಅಧಿಕಾರಿಗಳು ಸುತ್ತೋಲೆ ಹೊರಡಿಸಿದ್ದಾರೆ” ಎಂದು ಅವರು ಹೇಳಿದರು.

ಇದು ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಪ್ರಕರಣವಾಗಿದ್ದು, ಆದ್ದರಿಂದ ಸುಪ್ರೀಂ ಕೋರ್ಟ್ ಮೆಟ್ಟಿಲೇರಬೇಕಾಯಿತು ಎಂದು ಹಿರಿಯ ವಕೀಲರು ಹೇಳಿದರು.

ಮದ್ರಾಸ್ ಹೈಕೋರ್ಟ್‌ನಲ್ಲಿ ವಕೀಲರಾಗಿದ್ದ ಬಿ ಜಗನ್ನಾಥ್ ಅವರು ಸಲ್ಲಿಸಿದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಪೀಠವು ಆರಂಭದಲ್ಲಿ ನಿರಾಕರಿಸಿತು. ಆದರೆ ಅಂತಿಮವಾಗಿ ಅರ್ಜಿಯನ್ನು ಸ್ವೀಕರಿಸಲು ಮತ್ತು ನೋಟಿಸ್ ನೀಡಲು ಒಪ್ಪಿಕೊಂಡಿತು.

ಅರ್ಜಿಯಲ್ಲಿ ಪ್ರತಿವಾದಿಗಳಾಗಿ ತಮಿಳುನಾಡು ಹಿಂದೂ ಧಾರ್ಮಿಕ ದತ್ತಿ ಸಚಿವ ಸೇಕರ್ ಬಾಬು, ಲೋಕಸಭಾ ಸದಸ್ಯ ಎ ರಾಜಾ, ಡಿಎಂಕೆ ಅಧ್ಯಕ್ಷ ವೀರಮಣಿ ಕೆ ವೀರಮಣಿ ಮತ್ತು ತಮಿಳುನಾಡು ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಪೀಟರ್ ಅಲ್ಫೋನ್ಸ್ ಕೂಡ ಇದ್ದರು.

ತಮಿಳುನಾಡು ಪ್ರಗತಿಪರ ಲೇಖಕರ ಕಲಾವಿದರ ಸಂಘವು ಸೆ.2ರಂದು ‘ಸನಾತನ ನಿರ್ಮೂಲನೆ’ ವಿಷಯದ ಕುರಿತು ಚೆನ್ನೈನಲ್ಲಿ ಆಯೋಜಿಸಿದ್ದ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಉದಯನಿಧಿ, ಸನಾತನವು ಸಾಮಾಜಿಕ ನ್ಯಾಯದ ಕಲ್ಪನೆಗೆ ವಿರುದ್ಧವಾಗಿದ್ದು, ಅದನ್ನು ನಿರ್ಮೂಲನೆ ಮಾಡಬೇಕಿದೆ. ಕೆಲವು ವಿಷಯಗಳನ್ನು ವಿರೋಧಿಸಲು ಸಾಧ್ಯವಿಲ್ಲ, ಅದನ್ನು ಮಾತ್ರ ರದ್ದುಗೊಳಿಸಬೇಕು. ನಾವು ಡೆಂಗ್ಯೂ, ಸೊಳ್ಳೆಗಳು, ಮಲೇರಿಯಾ ಅಥವಾ ಕರೋನಾವನ್ನು ವಿರೋಧಿಸಲು ಸಾಧ್ಯವಿಲ್ಲ. ನಾವು ಇದನ್ನು ನಿರ್ಮೂಲನೆ ಮಾಡಬೇಕು, ನಾವು ಸನಾತನವನ್ನು ನಿರ್ಮೂಲನೆ ಮಾಡಬೇಕು ಎಂದು ಉದಯನಿಧಿ ಹೇಳಿದ್ದರು.

ಅವರ ಹೇಳಿಕೆಗಳು ರಾಜಕೀಯ ಗದ್ದಲವನ್ನು ಸೃಷ್ಟಿಸಿತು. ಬಿಜೆಪಿ ನಾಯಕರು ಉದಯನಿಧಿ ಮೇಲೆ ಮುಗಿಬಿದ್ದು ದಾಳಿ ಮಾಡಿದರು, ಆದರೂ ಉದಯನಿಧಿ ಮಾತ್ರ ”ಯಾವುದೇ ಕಾನೂನು ಸವಾಲನ್ನು ಎದುರಿಸಲು ಸಿದ್ಧ” ಎನ್ನುವ ಮೂಲಕ ತಮ್ಮ ಹೇಳಿಕೆ ಮೇಲೆ ನಿಂತರು.

ಇದನ್ನೂ ಓದಿ: ಸನಾತನ ನಿರ್ಮೂಲನೆಯ ಬಗ್ಗೆ ಉದಯನಿಧಿ ಎಬ್ಬಿಸಿದ ಬಿರುಗಾಳಿ ಮತ್ತು ಪೆರಿಯಾರ್ ಪರಂಪರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...