Homeಮುಖಪುಟಬುಲ್ಡೋಝರ್ ಅ'ನ್ಯಾಯ'ದ ವಿರುದ್ದದ ತೀರ್ಪು ನಾಗರಿಕರ ಹಕ್ಕುಗಳನ್ನು ಎತ್ತಿ ಹಿಡಿದಿದೆ: ಸಿಜೆಐ ಗವಾಯಿ

ಬುಲ್ಡೋಝರ್ ಅ’ನ್ಯಾಯ’ದ ವಿರುದ್ದದ ತೀರ್ಪು ನಾಗರಿಕರ ಹಕ್ಕುಗಳನ್ನು ಎತ್ತಿ ಹಿಡಿದಿದೆ: ಸಿಜೆಐ ಗವಾಯಿ

- Advertisement -
- Advertisement -

ಕಾನೂನುಬದ್ಧ ಕಾರ್ಯವಿಧಾನವನ್ನು ಅನುಸರಿಸದೆ ಆರೋಪಿಗಳ ಮನೆಗಳನ್ನು ಕೆಡವುದರ ವಿರುದ್ಧ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ನಾಗರಿಕರ ಹಕ್ಕುಗಳನ್ನು ಎತ್ತಿಹಿಡಿದಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ. ಆರ್ ಗವಾಯಿ ಸಂತಸ ವ್ಯಕ್ತಪಡಿಸಿದ್ದಾರೆ.

ಸಿಜೆಐ ಗವಾಯಿ ಅವರು ಆರೋಪಿಗಳ ಮನೆಗಳನ್ನು ಕೆಡವುವ ‘ಬುಲ್ದೋಝರ್ ಅನ್ಯಾಯ’ದ ವಿರುದ್ದ ಮಾರ್ಗಸೂಚಿಗಳನ್ನು ರೂಪಿಸಿ ಕಳೆದ ವರ್ಷ ಮಹತ್ವದ ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್ ಪೀಠದ ಭಾಗವಾಗಿದ್ದರು.

ಶನಿವಾರ (ಆ.23) ಪಣಜಿಯಲ್ಲಿ ಗೋವಾ ಹೈಕೋರ್ಟ್ ಬಾರ್ ಅಸೋಸಿಯೇಷನ್ ​​ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಸಿಜೆಐ, ಒಳ ಮೀಸಲಾತಿ ತೀರ್ಪು ನೀಡುವಾಗ ಕೆನೆಪದರವನ್ನು ಉಲ್ಲೇಖಿಸಿದ ಹಿಂದಿನ ಕಾರಣವನ್ನು ವಿವರಿಸಿದ್ದಾರೆ.

ಕಾರ್ಯಕ್ರಮದಲ್ಲಿ ಭಾಷಣಕಾರರು ತಮ್ಮ ಐತಿಹಾಸಿಕ ತೀರ್ಪುಗಳನ್ನು ಉಲ್ಲೇಖಿಸಿದ ಬಗ್ಗೆ ಪ್ರತಿಕ್ರಿಯಿಸಿದ ಸಿಜೆಐ “ಕಾನೂನಿನ ಕಾರ್ಯವಿಧಾನಗಳನ್ನು ಅನುಸರಿಸದೆ ಮನೆಗಳನ್ನು ಕೆಡವುತ್ತಿದ್ದಾಗ ನಾಗರಿಕರ ಹಕ್ಕುಗಳನ್ನು ರಕ್ಷಿಸಲು ಸಂವಿಧಾನದ ರಕ್ಷಕನಾಗಿ ನಾವು ಏನಾದರೂ ಮಾಡಲು ಸಾಧ್ಯವಾಯಿತು ಎಂದು ನನಗೆ ನಿಜವಾಗಿಯೂ ಸಂತೋಷವಾಗಿದೆ” ಎಂದಿದ್ದಾರೆ.

ಕಾನೂನಿನಡಿಯಲ್ಲಿ ವಿಚಾರಣೆಗೆ ಒಳಗಾಗದ ಮತ್ತು ಕೆಲವು ಆರೋಪಗಳು ಹೊರಿಸಲ್ಪಟ್ಟ ಜನರ ಕಟ್ಟಡಗಳು ಅಥವಾ ಮನೆಗಳನ್ನು ಕಾನೂನಿನ ಸರಿಯಾದ ಕಾರ್ಯವಿಧಾನವನ್ನು ಅನುಸರಿಸದೆ ಕೆಡವಲಾಗುತ್ತಿತ್ತು ಎಂದು ಹೇಳಿದ್ದಾರೆ.

ಮನೆಗಳು ಕೇವಲ ಆರೋಪಿತ ವ್ಯಕ್ತಿಗೆ ಸೇರಿದ್ದಲ್ಲ. ಮನೆಗಳನ್ನು ಹಠಾತ್ ಕೆಡವುದರಿಂದ ಅದರಲ್ಲಿ ವಾಸಿಸುವ ಆರೋಪಿಯ ಕುಟುಂಬ ಸದಸ್ಯರೂ ತಮ್ಮದಲ್ಲದ ತಪ್ಪಿಗೆ ತೊಂದರೆ ಅನುಭವಿಸಬೇಕಾಗಿತ್ತು. ಒಬ್ಬ ವ್ಯಕ್ತಿ ಶಿಕ್ಷೆಗೊಳಗಾದರೂ, ಅವನು ಇನ್ನೂ ಕಾನೂನಿನ ಆಳ್ವಿಕೆಗೆ ಅರ್ಹನಾಗಿರುತ್ತಾನೆ ಎಂದು ಸಿಜೆಐ ತಿಳಿಸಿದ್ದಾರೆ.

“ದೇಶದಲ್ಲಿ ಕಾನೂನಿನ ನಿಯಮವು ಅತ್ಯುನ್ನತವಾಗಿದೆ. ನಾವು ಮಾರ್ಗಸೂಚಿಗಳನ್ನು ರೂಪಿಸಲು ಸಾಧ್ಯವಾಯಿತು ಎಂದು ನನಗೆ ಸಂತೋಷವಿದೆ. ಈ ಮೂಲಕ ಕಾರ್ಯಾಂಗ ನ್ಯಾಯಾಧೀಶರಾಗದಂತೆ ತಡೆದಿದ್ದೇವೆ” ಎಂದಿದ್ದಾರೆ.

ಕಾರ್ಯಾಂಗ, ನ್ಯಾಯಾಂಗ ಮತ್ತು ಶಾಸಕಾಂಗದ ಅಧಿಕಾರಗಳ ಪ್ರತ್ಯೇಕತೆಯನ್ನು ಭಾರತೀಯ ಸಂವಿಧಾನವು ಸ್ಪಷ್ಟವಾಗಿ ವಿವರಿಸಿದೆ ಎಂದ ಸಿಜೆಐ, ಕಾರ್ಯಾಂಗಕ್ಕೆ ನ್ಯಾಯಾಧೀಶರಾಗಲು ಅವಕಾಶ ನೀಡಿದರೆ, ನಾವು ಅಧಿಕಾರ ವಿಭಜನೆಯ ಪರಿಕಲ್ಪನೆಯನ್ನೇ ಹಾಳು ಮಾಡಿದಂತೆ ಎಂದು ಹೇಳಿದ್ದಾರೆ.

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಕುರಿತ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿದ ಸಿಜೆಐ ಗವಾಯಿ, ತಮ್ಮದೇ ಸಮುದಾಯಕ್ಕೆ ಸೇರಿದ ಜನರಿಂದ ಈ ತೀರ್ಪಿಗಾಗಿ ವ್ಯಾಪಕ ಟೀಕೆಗೆ ಒಳಗಾಗಬೇಕಾಯಿತು ಎಂದಿದ್ದಾರೆ.

“ನಾನು ಅರ್ಥಮಾಡಿಕೊಂಡ ಕಾನೂನಿನ ಪ್ರಕಾರ ಮತ್ತು ನನ್ನ ಸ್ವಂತ ಆತ್ಮಸಾಕ್ಷಿಯ ಪ್ರಕಾರ ತೀರ್ಪು ಬರೆಯಬೇಕೇ ಹೊರತು, ಜನರ ಬೇಡಿಕೆಗಳು ಅಥವಾ ಆಸೆಯಂತಲ್ಲ ಎಂದು ನಾನು ಯಾವಾಗಲೂ ನಂಬಿದ್ದೇನೆ” ಎಂದು ತಿಳಿಸಿದ್ದಾರೆ.

“ಮೀಸಲಾತಿ ವರ್ಗದಿಂದ ಬಂದ ಮೊದಲ ತಲೆಮಾರಿನ ವ್ಯಕ್ತಿಯೊಬ್ಬರು ಐಎಎಸ್ ಅಧಿಕಾರಿಯಾದಾಗ, ಅದರ ಪ್ರಯೋಜನವು ನಂತರದ ಪೀಳಿಗೆಗೆ ವಿಸ್ತರಿಸುತ್ತದೆ ಮತ್ತು ಎರಡನೇ ಮತ್ತು ಮೂರನೇ ತಲೆಮಾರಿನವರೂ ಕೂಡ ಅದೇ ವರ್ಗದ ಮೂಲಕ ಐಎಎಸ್‌ಗೆ ಪ್ರವೇಶಿಸುತ್ತಾರೆ” ಎಂದು ಹೇಳಿದ್ದಾರೆ.

“ಮುಂಬೈ ಅಥವಾ ದೆಹಲಿಯ ಶಾಲೆಯಲ್ಲಿ ಉತ್ತಮ ಶಿಕ್ಷಣ ಪಡೆಯುವ ವ್ಯಕ್ತಿಯ ಮಗ ಅಥವಾ ಮಗಳನ್ನು ಜಿಲ್ಲಾ ಪರಿಷತ್ ಅಥವಾ ಗ್ರಾಮ ಪಂಚಾಯತ್ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ಹಳ್ಳಿಯಲ್ಲಿ ಮೇಸ್ತ್ರಿ ಅಥವಾ ಕೃಷಿ ಕಾರ್ಮಿಕರ ಮಗ ಅಥವಾ ಮಗಳಿಗೆ ಸಮನಾಗಿ ಪರಿಗಣಿಸಬಹುದೇ ಎಂಬುದು ನಾನು ನನ್ನನ್ನು ಕೇಳಿಕೊಂಡ ಪ್ರಶ್ನೆ” ಎಂದಿದ್ದಾರೆ.

“ಸಂವಿಧಾನದ 14ನೇ ವಿಧಿಯು ಅಸಮಾನರ ನಡುವೆ ಸಮಾನತೆಯನ್ನು ಅರ್ಥೈಸುವುದಿಲ್ಲ. ಅಸಮಾನರನ್ನು ಅಸಮಾನವಾಗಿ ನಡೆಸಿಕೊಳ್ಳುವುದರಿಂದ ಅವರು ಸಮಾನರಾಗುತ್ತಾರೆ ಎಂದು ಪರಿಗಣಿಸಲಾಗಿದೆ. ಆದ್ದರಿಂದ, ಹಳ್ಳಿಯಲ್ಲಿ ವಾಸಿಸುವ ಕಾರ್ಮಿಕನ ಮಗುವನ್ನು ಮತ್ತು ಮುಂಬೈನಲ್ಲಿ ವಾಸಿಸುವ ಮುಖ್ಯ ಕಾರ್ಯದರ್ಶಿಯ ಮಗುವನ್ನು ಅತ್ಯುತ್ತಮ ಶಾಲೆಯಲ್ಲಿ ಓದಿಸುವುದು ಸಮಾನತೆಯ ಅತ್ಯುತ್ತಮ ಪರಿಕಲ್ಪನೆ ಎಂಬುದು ನನ್ನ ಅಭಿಪ್ರಾಯ” ಎಂದು ಸಿಜೆಐ ಹೇಳಿದ್ದಾರೆ.

ಪ್ರೊ. ಅಲಿ ಖಾನ್ ವಿರುದ್ಧದ ಆರೋಪಪಟ್ಟಿ ಪರಿಗಣಿಸದಂತೆ ವಿಚಾರಣಾ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...