Homeಮುಖಪುಟಬುಲ್ಡೋಝರ್ ಅ'ನ್ಯಾಯ'ದ ವಿರುದ್ದದ ತೀರ್ಪು ನಾಗರಿಕರ ಹಕ್ಕುಗಳನ್ನು ಎತ್ತಿ ಹಿಡಿದಿದೆ: ಸಿಜೆಐ ಗವಾಯಿ

ಬುಲ್ಡೋಝರ್ ಅ’ನ್ಯಾಯ’ದ ವಿರುದ್ದದ ತೀರ್ಪು ನಾಗರಿಕರ ಹಕ್ಕುಗಳನ್ನು ಎತ್ತಿ ಹಿಡಿದಿದೆ: ಸಿಜೆಐ ಗವಾಯಿ

- Advertisement -
- Advertisement -

ಕಾನೂನುಬದ್ಧ ಕಾರ್ಯವಿಧಾನವನ್ನು ಅನುಸರಿಸದೆ ಆರೋಪಿಗಳ ಮನೆಗಳನ್ನು ಕೆಡವುದರ ವಿರುದ್ಧ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ನಾಗರಿಕರ ಹಕ್ಕುಗಳನ್ನು ಎತ್ತಿಹಿಡಿದಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ. ಆರ್ ಗವಾಯಿ ಸಂತಸ ವ್ಯಕ್ತಪಡಿಸಿದ್ದಾರೆ.

ಸಿಜೆಐ ಗವಾಯಿ ಅವರು ಆರೋಪಿಗಳ ಮನೆಗಳನ್ನು ಕೆಡವುವ ‘ಬುಲ್ದೋಝರ್ ಅನ್ಯಾಯ’ದ ವಿರುದ್ದ ಮಾರ್ಗಸೂಚಿಗಳನ್ನು ರೂಪಿಸಿ ಕಳೆದ ವರ್ಷ ಮಹತ್ವದ ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್ ಪೀಠದ ಭಾಗವಾಗಿದ್ದರು.

ಶನಿವಾರ (ಆ.23) ಪಣಜಿಯಲ್ಲಿ ಗೋವಾ ಹೈಕೋರ್ಟ್ ಬಾರ್ ಅಸೋಸಿಯೇಷನ್ ​​ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಸಿಜೆಐ, ಒಳ ಮೀಸಲಾತಿ ತೀರ್ಪು ನೀಡುವಾಗ ಕೆನೆಪದರವನ್ನು ಉಲ್ಲೇಖಿಸಿದ ಹಿಂದಿನ ಕಾರಣವನ್ನು ವಿವರಿಸಿದ್ದಾರೆ.

ಕಾರ್ಯಕ್ರಮದಲ್ಲಿ ಭಾಷಣಕಾರರು ತಮ್ಮ ಐತಿಹಾಸಿಕ ತೀರ್ಪುಗಳನ್ನು ಉಲ್ಲೇಖಿಸಿದ ಬಗ್ಗೆ ಪ್ರತಿಕ್ರಿಯಿಸಿದ ಸಿಜೆಐ “ಕಾನೂನಿನ ಕಾರ್ಯವಿಧಾನಗಳನ್ನು ಅನುಸರಿಸದೆ ಮನೆಗಳನ್ನು ಕೆಡವುತ್ತಿದ್ದಾಗ ನಾಗರಿಕರ ಹಕ್ಕುಗಳನ್ನು ರಕ್ಷಿಸಲು ಸಂವಿಧಾನದ ರಕ್ಷಕನಾಗಿ ನಾವು ಏನಾದರೂ ಮಾಡಲು ಸಾಧ್ಯವಾಯಿತು ಎಂದು ನನಗೆ ನಿಜವಾಗಿಯೂ ಸಂತೋಷವಾಗಿದೆ” ಎಂದಿದ್ದಾರೆ.

ಕಾನೂನಿನಡಿಯಲ್ಲಿ ವಿಚಾರಣೆಗೆ ಒಳಗಾಗದ ಮತ್ತು ಕೆಲವು ಆರೋಪಗಳು ಹೊರಿಸಲ್ಪಟ್ಟ ಜನರ ಕಟ್ಟಡಗಳು ಅಥವಾ ಮನೆಗಳನ್ನು ಕಾನೂನಿನ ಸರಿಯಾದ ಕಾರ್ಯವಿಧಾನವನ್ನು ಅನುಸರಿಸದೆ ಕೆಡವಲಾಗುತ್ತಿತ್ತು ಎಂದು ಹೇಳಿದ್ದಾರೆ.

ಮನೆಗಳು ಕೇವಲ ಆರೋಪಿತ ವ್ಯಕ್ತಿಗೆ ಸೇರಿದ್ದಲ್ಲ. ಮನೆಗಳನ್ನು ಹಠಾತ್ ಕೆಡವುದರಿಂದ ಅದರಲ್ಲಿ ವಾಸಿಸುವ ಆರೋಪಿಯ ಕುಟುಂಬ ಸದಸ್ಯರೂ ತಮ್ಮದಲ್ಲದ ತಪ್ಪಿಗೆ ತೊಂದರೆ ಅನುಭವಿಸಬೇಕಾಗಿತ್ತು. ಒಬ್ಬ ವ್ಯಕ್ತಿ ಶಿಕ್ಷೆಗೊಳಗಾದರೂ, ಅವನು ಇನ್ನೂ ಕಾನೂನಿನ ಆಳ್ವಿಕೆಗೆ ಅರ್ಹನಾಗಿರುತ್ತಾನೆ ಎಂದು ಸಿಜೆಐ ತಿಳಿಸಿದ್ದಾರೆ.

“ದೇಶದಲ್ಲಿ ಕಾನೂನಿನ ನಿಯಮವು ಅತ್ಯುನ್ನತವಾಗಿದೆ. ನಾವು ಮಾರ್ಗಸೂಚಿಗಳನ್ನು ರೂಪಿಸಲು ಸಾಧ್ಯವಾಯಿತು ಎಂದು ನನಗೆ ಸಂತೋಷವಿದೆ. ಈ ಮೂಲಕ ಕಾರ್ಯಾಂಗ ನ್ಯಾಯಾಧೀಶರಾಗದಂತೆ ತಡೆದಿದ್ದೇವೆ” ಎಂದಿದ್ದಾರೆ.

ಕಾರ್ಯಾಂಗ, ನ್ಯಾಯಾಂಗ ಮತ್ತು ಶಾಸಕಾಂಗದ ಅಧಿಕಾರಗಳ ಪ್ರತ್ಯೇಕತೆಯನ್ನು ಭಾರತೀಯ ಸಂವಿಧಾನವು ಸ್ಪಷ್ಟವಾಗಿ ವಿವರಿಸಿದೆ ಎಂದ ಸಿಜೆಐ, ಕಾರ್ಯಾಂಗಕ್ಕೆ ನ್ಯಾಯಾಧೀಶರಾಗಲು ಅವಕಾಶ ನೀಡಿದರೆ, ನಾವು ಅಧಿಕಾರ ವಿಭಜನೆಯ ಪರಿಕಲ್ಪನೆಯನ್ನೇ ಹಾಳು ಮಾಡಿದಂತೆ ಎಂದು ಹೇಳಿದ್ದಾರೆ.

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಕುರಿತ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿದ ಸಿಜೆಐ ಗವಾಯಿ, ತಮ್ಮದೇ ಸಮುದಾಯಕ್ಕೆ ಸೇರಿದ ಜನರಿಂದ ಈ ತೀರ್ಪಿಗಾಗಿ ವ್ಯಾಪಕ ಟೀಕೆಗೆ ಒಳಗಾಗಬೇಕಾಯಿತು ಎಂದಿದ್ದಾರೆ.

“ನಾನು ಅರ್ಥಮಾಡಿಕೊಂಡ ಕಾನೂನಿನ ಪ್ರಕಾರ ಮತ್ತು ನನ್ನ ಸ್ವಂತ ಆತ್ಮಸಾಕ್ಷಿಯ ಪ್ರಕಾರ ತೀರ್ಪು ಬರೆಯಬೇಕೇ ಹೊರತು, ಜನರ ಬೇಡಿಕೆಗಳು ಅಥವಾ ಆಸೆಯಂತಲ್ಲ ಎಂದು ನಾನು ಯಾವಾಗಲೂ ನಂಬಿದ್ದೇನೆ” ಎಂದು ತಿಳಿಸಿದ್ದಾರೆ.

“ಮೀಸಲಾತಿ ವರ್ಗದಿಂದ ಬಂದ ಮೊದಲ ತಲೆಮಾರಿನ ವ್ಯಕ್ತಿಯೊಬ್ಬರು ಐಎಎಸ್ ಅಧಿಕಾರಿಯಾದಾಗ, ಅದರ ಪ್ರಯೋಜನವು ನಂತರದ ಪೀಳಿಗೆಗೆ ವಿಸ್ತರಿಸುತ್ತದೆ ಮತ್ತು ಎರಡನೇ ಮತ್ತು ಮೂರನೇ ತಲೆಮಾರಿನವರೂ ಕೂಡ ಅದೇ ವರ್ಗದ ಮೂಲಕ ಐಎಎಸ್‌ಗೆ ಪ್ರವೇಶಿಸುತ್ತಾರೆ” ಎಂದು ಹೇಳಿದ್ದಾರೆ.

“ಮುಂಬೈ ಅಥವಾ ದೆಹಲಿಯ ಶಾಲೆಯಲ್ಲಿ ಉತ್ತಮ ಶಿಕ್ಷಣ ಪಡೆಯುವ ವ್ಯಕ್ತಿಯ ಮಗ ಅಥವಾ ಮಗಳನ್ನು ಜಿಲ್ಲಾ ಪರಿಷತ್ ಅಥವಾ ಗ್ರಾಮ ಪಂಚಾಯತ್ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ಹಳ್ಳಿಯಲ್ಲಿ ಮೇಸ್ತ್ರಿ ಅಥವಾ ಕೃಷಿ ಕಾರ್ಮಿಕರ ಮಗ ಅಥವಾ ಮಗಳಿಗೆ ಸಮನಾಗಿ ಪರಿಗಣಿಸಬಹುದೇ ಎಂಬುದು ನಾನು ನನ್ನನ್ನು ಕೇಳಿಕೊಂಡ ಪ್ರಶ್ನೆ” ಎಂದಿದ್ದಾರೆ.

“ಸಂವಿಧಾನದ 14ನೇ ವಿಧಿಯು ಅಸಮಾನರ ನಡುವೆ ಸಮಾನತೆಯನ್ನು ಅರ್ಥೈಸುವುದಿಲ್ಲ. ಅಸಮಾನರನ್ನು ಅಸಮಾನವಾಗಿ ನಡೆಸಿಕೊಳ್ಳುವುದರಿಂದ ಅವರು ಸಮಾನರಾಗುತ್ತಾರೆ ಎಂದು ಪರಿಗಣಿಸಲಾಗಿದೆ. ಆದ್ದರಿಂದ, ಹಳ್ಳಿಯಲ್ಲಿ ವಾಸಿಸುವ ಕಾರ್ಮಿಕನ ಮಗುವನ್ನು ಮತ್ತು ಮುಂಬೈನಲ್ಲಿ ವಾಸಿಸುವ ಮುಖ್ಯ ಕಾರ್ಯದರ್ಶಿಯ ಮಗುವನ್ನು ಅತ್ಯುತ್ತಮ ಶಾಲೆಯಲ್ಲಿ ಓದಿಸುವುದು ಸಮಾನತೆಯ ಅತ್ಯುತ್ತಮ ಪರಿಕಲ್ಪನೆ ಎಂಬುದು ನನ್ನ ಅಭಿಪ್ರಾಯ” ಎಂದು ಸಿಜೆಐ ಹೇಳಿದ್ದಾರೆ.

ಪ್ರೊ. ಅಲಿ ಖಾನ್ ವಿರುದ್ಧದ ಆರೋಪಪಟ್ಟಿ ಪರಿಗಣಿಸದಂತೆ ವಿಚಾರಣಾ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...