Homeಮುಖಪುಟಬುಲ್ಡೋಝರ್ ಅ'ನ್ಯಾಯ'ದ ವಿರುದ್ದದ ತೀರ್ಪು ನಾಗರಿಕರ ಹಕ್ಕುಗಳನ್ನು ಎತ್ತಿ ಹಿಡಿದಿದೆ: ಸಿಜೆಐ ಗವಾಯಿ

ಬುಲ್ಡೋಝರ್ ಅ’ನ್ಯಾಯ’ದ ವಿರುದ್ದದ ತೀರ್ಪು ನಾಗರಿಕರ ಹಕ್ಕುಗಳನ್ನು ಎತ್ತಿ ಹಿಡಿದಿದೆ: ಸಿಜೆಐ ಗವಾಯಿ

- Advertisement -
- Advertisement -

ಕಾನೂನುಬದ್ಧ ಕಾರ್ಯವಿಧಾನವನ್ನು ಅನುಸರಿಸದೆ ಆರೋಪಿಗಳ ಮನೆಗಳನ್ನು ಕೆಡವುದರ ವಿರುದ್ಧ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ನಾಗರಿಕರ ಹಕ್ಕುಗಳನ್ನು ಎತ್ತಿಹಿಡಿದಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ. ಆರ್ ಗವಾಯಿ ಸಂತಸ ವ್ಯಕ್ತಪಡಿಸಿದ್ದಾರೆ.

ಸಿಜೆಐ ಗವಾಯಿ ಅವರು ಆರೋಪಿಗಳ ಮನೆಗಳನ್ನು ಕೆಡವುವ ‘ಬುಲ್ದೋಝರ್ ಅನ್ಯಾಯ’ದ ವಿರುದ್ದ ಮಾರ್ಗಸೂಚಿಗಳನ್ನು ರೂಪಿಸಿ ಕಳೆದ ವರ್ಷ ಮಹತ್ವದ ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್ ಪೀಠದ ಭಾಗವಾಗಿದ್ದರು.

ಶನಿವಾರ (ಆ.23) ಪಣಜಿಯಲ್ಲಿ ಗೋವಾ ಹೈಕೋರ್ಟ್ ಬಾರ್ ಅಸೋಸಿಯೇಷನ್ ​​ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಸಿಜೆಐ, ಒಳ ಮೀಸಲಾತಿ ತೀರ್ಪು ನೀಡುವಾಗ ಕೆನೆಪದರವನ್ನು ಉಲ್ಲೇಖಿಸಿದ ಹಿಂದಿನ ಕಾರಣವನ್ನು ವಿವರಿಸಿದ್ದಾರೆ.

ಕಾರ್ಯಕ್ರಮದಲ್ಲಿ ಭಾಷಣಕಾರರು ತಮ್ಮ ಐತಿಹಾಸಿಕ ತೀರ್ಪುಗಳನ್ನು ಉಲ್ಲೇಖಿಸಿದ ಬಗ್ಗೆ ಪ್ರತಿಕ್ರಿಯಿಸಿದ ಸಿಜೆಐ “ಕಾನೂನಿನ ಕಾರ್ಯವಿಧಾನಗಳನ್ನು ಅನುಸರಿಸದೆ ಮನೆಗಳನ್ನು ಕೆಡವುತ್ತಿದ್ದಾಗ ನಾಗರಿಕರ ಹಕ್ಕುಗಳನ್ನು ರಕ್ಷಿಸಲು ಸಂವಿಧಾನದ ರಕ್ಷಕನಾಗಿ ನಾವು ಏನಾದರೂ ಮಾಡಲು ಸಾಧ್ಯವಾಯಿತು ಎಂದು ನನಗೆ ನಿಜವಾಗಿಯೂ ಸಂತೋಷವಾಗಿದೆ” ಎಂದಿದ್ದಾರೆ.

ಕಾನೂನಿನಡಿಯಲ್ಲಿ ವಿಚಾರಣೆಗೆ ಒಳಗಾಗದ ಮತ್ತು ಕೆಲವು ಆರೋಪಗಳು ಹೊರಿಸಲ್ಪಟ್ಟ ಜನರ ಕಟ್ಟಡಗಳು ಅಥವಾ ಮನೆಗಳನ್ನು ಕಾನೂನಿನ ಸರಿಯಾದ ಕಾರ್ಯವಿಧಾನವನ್ನು ಅನುಸರಿಸದೆ ಕೆಡವಲಾಗುತ್ತಿತ್ತು ಎಂದು ಹೇಳಿದ್ದಾರೆ.

ಮನೆಗಳು ಕೇವಲ ಆರೋಪಿತ ವ್ಯಕ್ತಿಗೆ ಸೇರಿದ್ದಲ್ಲ. ಮನೆಗಳನ್ನು ಹಠಾತ್ ಕೆಡವುದರಿಂದ ಅದರಲ್ಲಿ ವಾಸಿಸುವ ಆರೋಪಿಯ ಕುಟುಂಬ ಸದಸ್ಯರೂ ತಮ್ಮದಲ್ಲದ ತಪ್ಪಿಗೆ ತೊಂದರೆ ಅನುಭವಿಸಬೇಕಾಗಿತ್ತು. ಒಬ್ಬ ವ್ಯಕ್ತಿ ಶಿಕ್ಷೆಗೊಳಗಾದರೂ, ಅವನು ಇನ್ನೂ ಕಾನೂನಿನ ಆಳ್ವಿಕೆಗೆ ಅರ್ಹನಾಗಿರುತ್ತಾನೆ ಎಂದು ಸಿಜೆಐ ತಿಳಿಸಿದ್ದಾರೆ.

“ದೇಶದಲ್ಲಿ ಕಾನೂನಿನ ನಿಯಮವು ಅತ್ಯುನ್ನತವಾಗಿದೆ. ನಾವು ಮಾರ್ಗಸೂಚಿಗಳನ್ನು ರೂಪಿಸಲು ಸಾಧ್ಯವಾಯಿತು ಎಂದು ನನಗೆ ಸಂತೋಷವಿದೆ. ಈ ಮೂಲಕ ಕಾರ್ಯಾಂಗ ನ್ಯಾಯಾಧೀಶರಾಗದಂತೆ ತಡೆದಿದ್ದೇವೆ” ಎಂದಿದ್ದಾರೆ.

ಕಾರ್ಯಾಂಗ, ನ್ಯಾಯಾಂಗ ಮತ್ತು ಶಾಸಕಾಂಗದ ಅಧಿಕಾರಗಳ ಪ್ರತ್ಯೇಕತೆಯನ್ನು ಭಾರತೀಯ ಸಂವಿಧಾನವು ಸ್ಪಷ್ಟವಾಗಿ ವಿವರಿಸಿದೆ ಎಂದ ಸಿಜೆಐ, ಕಾರ್ಯಾಂಗಕ್ಕೆ ನ್ಯಾಯಾಧೀಶರಾಗಲು ಅವಕಾಶ ನೀಡಿದರೆ, ನಾವು ಅಧಿಕಾರ ವಿಭಜನೆಯ ಪರಿಕಲ್ಪನೆಯನ್ನೇ ಹಾಳು ಮಾಡಿದಂತೆ ಎಂದು ಹೇಳಿದ್ದಾರೆ.

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಕುರಿತ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿದ ಸಿಜೆಐ ಗವಾಯಿ, ತಮ್ಮದೇ ಸಮುದಾಯಕ್ಕೆ ಸೇರಿದ ಜನರಿಂದ ಈ ತೀರ್ಪಿಗಾಗಿ ವ್ಯಾಪಕ ಟೀಕೆಗೆ ಒಳಗಾಗಬೇಕಾಯಿತು ಎಂದಿದ್ದಾರೆ.

“ನಾನು ಅರ್ಥಮಾಡಿಕೊಂಡ ಕಾನೂನಿನ ಪ್ರಕಾರ ಮತ್ತು ನನ್ನ ಸ್ವಂತ ಆತ್ಮಸಾಕ್ಷಿಯ ಪ್ರಕಾರ ತೀರ್ಪು ಬರೆಯಬೇಕೇ ಹೊರತು, ಜನರ ಬೇಡಿಕೆಗಳು ಅಥವಾ ಆಸೆಯಂತಲ್ಲ ಎಂದು ನಾನು ಯಾವಾಗಲೂ ನಂಬಿದ್ದೇನೆ” ಎಂದು ತಿಳಿಸಿದ್ದಾರೆ.

“ಮೀಸಲಾತಿ ವರ್ಗದಿಂದ ಬಂದ ಮೊದಲ ತಲೆಮಾರಿನ ವ್ಯಕ್ತಿಯೊಬ್ಬರು ಐಎಎಸ್ ಅಧಿಕಾರಿಯಾದಾಗ, ಅದರ ಪ್ರಯೋಜನವು ನಂತರದ ಪೀಳಿಗೆಗೆ ವಿಸ್ತರಿಸುತ್ತದೆ ಮತ್ತು ಎರಡನೇ ಮತ್ತು ಮೂರನೇ ತಲೆಮಾರಿನವರೂ ಕೂಡ ಅದೇ ವರ್ಗದ ಮೂಲಕ ಐಎಎಸ್‌ಗೆ ಪ್ರವೇಶಿಸುತ್ತಾರೆ” ಎಂದು ಹೇಳಿದ್ದಾರೆ.

“ಮುಂಬೈ ಅಥವಾ ದೆಹಲಿಯ ಶಾಲೆಯಲ್ಲಿ ಉತ್ತಮ ಶಿಕ್ಷಣ ಪಡೆಯುವ ವ್ಯಕ್ತಿಯ ಮಗ ಅಥವಾ ಮಗಳನ್ನು ಜಿಲ್ಲಾ ಪರಿಷತ್ ಅಥವಾ ಗ್ರಾಮ ಪಂಚಾಯತ್ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ಹಳ್ಳಿಯಲ್ಲಿ ಮೇಸ್ತ್ರಿ ಅಥವಾ ಕೃಷಿ ಕಾರ್ಮಿಕರ ಮಗ ಅಥವಾ ಮಗಳಿಗೆ ಸಮನಾಗಿ ಪರಿಗಣಿಸಬಹುದೇ ಎಂಬುದು ನಾನು ನನ್ನನ್ನು ಕೇಳಿಕೊಂಡ ಪ್ರಶ್ನೆ” ಎಂದಿದ್ದಾರೆ.

“ಸಂವಿಧಾನದ 14ನೇ ವಿಧಿಯು ಅಸಮಾನರ ನಡುವೆ ಸಮಾನತೆಯನ್ನು ಅರ್ಥೈಸುವುದಿಲ್ಲ. ಅಸಮಾನರನ್ನು ಅಸಮಾನವಾಗಿ ನಡೆಸಿಕೊಳ್ಳುವುದರಿಂದ ಅವರು ಸಮಾನರಾಗುತ್ತಾರೆ ಎಂದು ಪರಿಗಣಿಸಲಾಗಿದೆ. ಆದ್ದರಿಂದ, ಹಳ್ಳಿಯಲ್ಲಿ ವಾಸಿಸುವ ಕಾರ್ಮಿಕನ ಮಗುವನ್ನು ಮತ್ತು ಮುಂಬೈನಲ್ಲಿ ವಾಸಿಸುವ ಮುಖ್ಯ ಕಾರ್ಯದರ್ಶಿಯ ಮಗುವನ್ನು ಅತ್ಯುತ್ತಮ ಶಾಲೆಯಲ್ಲಿ ಓದಿಸುವುದು ಸಮಾನತೆಯ ಅತ್ಯುತ್ತಮ ಪರಿಕಲ್ಪನೆ ಎಂಬುದು ನನ್ನ ಅಭಿಪ್ರಾಯ” ಎಂದು ಸಿಜೆಐ ಹೇಳಿದ್ದಾರೆ.

ಪ್ರೊ. ಅಲಿ ಖಾನ್ ವಿರುದ್ಧದ ಆರೋಪಪಟ್ಟಿ ಪರಿಗಣಿಸದಂತೆ ವಿಚಾರಣಾ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...