Homeಮುಖಪುಟಬುಲ್ಡೋಝರ್ ಅ'ನ್ಯಾಯ'ದ ವಿರುದ್ದದ ತೀರ್ಪು ನಾಗರಿಕರ ಹಕ್ಕುಗಳನ್ನು ಎತ್ತಿ ಹಿಡಿದಿದೆ: ಸಿಜೆಐ ಗವಾಯಿ

ಬುಲ್ಡೋಝರ್ ಅ’ನ್ಯಾಯ’ದ ವಿರುದ್ದದ ತೀರ್ಪು ನಾಗರಿಕರ ಹಕ್ಕುಗಳನ್ನು ಎತ್ತಿ ಹಿಡಿದಿದೆ: ಸಿಜೆಐ ಗವಾಯಿ

- Advertisement -
- Advertisement -

ಕಾನೂನುಬದ್ಧ ಕಾರ್ಯವಿಧಾನವನ್ನು ಅನುಸರಿಸದೆ ಆರೋಪಿಗಳ ಮನೆಗಳನ್ನು ಕೆಡವುದರ ವಿರುದ್ಧ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ನಾಗರಿಕರ ಹಕ್ಕುಗಳನ್ನು ಎತ್ತಿಹಿಡಿದಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ. ಆರ್ ಗವಾಯಿ ಸಂತಸ ವ್ಯಕ್ತಪಡಿಸಿದ್ದಾರೆ.

ಸಿಜೆಐ ಗವಾಯಿ ಅವರು ಆರೋಪಿಗಳ ಮನೆಗಳನ್ನು ಕೆಡವುವ ‘ಬುಲ್ದೋಝರ್ ಅನ್ಯಾಯ’ದ ವಿರುದ್ದ ಮಾರ್ಗಸೂಚಿಗಳನ್ನು ರೂಪಿಸಿ ಕಳೆದ ವರ್ಷ ಮಹತ್ವದ ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್ ಪೀಠದ ಭಾಗವಾಗಿದ್ದರು.

ಶನಿವಾರ (ಆ.23) ಪಣಜಿಯಲ್ಲಿ ಗೋವಾ ಹೈಕೋರ್ಟ್ ಬಾರ್ ಅಸೋಸಿಯೇಷನ್ ​​ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಸಿಜೆಐ, ಒಳ ಮೀಸಲಾತಿ ತೀರ್ಪು ನೀಡುವಾಗ ಕೆನೆಪದರವನ್ನು ಉಲ್ಲೇಖಿಸಿದ ಹಿಂದಿನ ಕಾರಣವನ್ನು ವಿವರಿಸಿದ್ದಾರೆ.

ಕಾರ್ಯಕ್ರಮದಲ್ಲಿ ಭಾಷಣಕಾರರು ತಮ್ಮ ಐತಿಹಾಸಿಕ ತೀರ್ಪುಗಳನ್ನು ಉಲ್ಲೇಖಿಸಿದ ಬಗ್ಗೆ ಪ್ರತಿಕ್ರಿಯಿಸಿದ ಸಿಜೆಐ “ಕಾನೂನಿನ ಕಾರ್ಯವಿಧಾನಗಳನ್ನು ಅನುಸರಿಸದೆ ಮನೆಗಳನ್ನು ಕೆಡವುತ್ತಿದ್ದಾಗ ನಾಗರಿಕರ ಹಕ್ಕುಗಳನ್ನು ರಕ್ಷಿಸಲು ಸಂವಿಧಾನದ ರಕ್ಷಕನಾಗಿ ನಾವು ಏನಾದರೂ ಮಾಡಲು ಸಾಧ್ಯವಾಯಿತು ಎಂದು ನನಗೆ ನಿಜವಾಗಿಯೂ ಸಂತೋಷವಾಗಿದೆ” ಎಂದಿದ್ದಾರೆ.

ಕಾನೂನಿನಡಿಯಲ್ಲಿ ವಿಚಾರಣೆಗೆ ಒಳಗಾಗದ ಮತ್ತು ಕೆಲವು ಆರೋಪಗಳು ಹೊರಿಸಲ್ಪಟ್ಟ ಜನರ ಕಟ್ಟಡಗಳು ಅಥವಾ ಮನೆಗಳನ್ನು ಕಾನೂನಿನ ಸರಿಯಾದ ಕಾರ್ಯವಿಧಾನವನ್ನು ಅನುಸರಿಸದೆ ಕೆಡವಲಾಗುತ್ತಿತ್ತು ಎಂದು ಹೇಳಿದ್ದಾರೆ.

ಮನೆಗಳು ಕೇವಲ ಆರೋಪಿತ ವ್ಯಕ್ತಿಗೆ ಸೇರಿದ್ದಲ್ಲ. ಮನೆಗಳನ್ನು ಹಠಾತ್ ಕೆಡವುದರಿಂದ ಅದರಲ್ಲಿ ವಾಸಿಸುವ ಆರೋಪಿಯ ಕುಟುಂಬ ಸದಸ್ಯರೂ ತಮ್ಮದಲ್ಲದ ತಪ್ಪಿಗೆ ತೊಂದರೆ ಅನುಭವಿಸಬೇಕಾಗಿತ್ತು. ಒಬ್ಬ ವ್ಯಕ್ತಿ ಶಿಕ್ಷೆಗೊಳಗಾದರೂ, ಅವನು ಇನ್ನೂ ಕಾನೂನಿನ ಆಳ್ವಿಕೆಗೆ ಅರ್ಹನಾಗಿರುತ್ತಾನೆ ಎಂದು ಸಿಜೆಐ ತಿಳಿಸಿದ್ದಾರೆ.

“ದೇಶದಲ್ಲಿ ಕಾನೂನಿನ ನಿಯಮವು ಅತ್ಯುನ್ನತವಾಗಿದೆ. ನಾವು ಮಾರ್ಗಸೂಚಿಗಳನ್ನು ರೂಪಿಸಲು ಸಾಧ್ಯವಾಯಿತು ಎಂದು ನನಗೆ ಸಂತೋಷವಿದೆ. ಈ ಮೂಲಕ ಕಾರ್ಯಾಂಗ ನ್ಯಾಯಾಧೀಶರಾಗದಂತೆ ತಡೆದಿದ್ದೇವೆ” ಎಂದಿದ್ದಾರೆ.

ಕಾರ್ಯಾಂಗ, ನ್ಯಾಯಾಂಗ ಮತ್ತು ಶಾಸಕಾಂಗದ ಅಧಿಕಾರಗಳ ಪ್ರತ್ಯೇಕತೆಯನ್ನು ಭಾರತೀಯ ಸಂವಿಧಾನವು ಸ್ಪಷ್ಟವಾಗಿ ವಿವರಿಸಿದೆ ಎಂದ ಸಿಜೆಐ, ಕಾರ್ಯಾಂಗಕ್ಕೆ ನ್ಯಾಯಾಧೀಶರಾಗಲು ಅವಕಾಶ ನೀಡಿದರೆ, ನಾವು ಅಧಿಕಾರ ವಿಭಜನೆಯ ಪರಿಕಲ್ಪನೆಯನ್ನೇ ಹಾಳು ಮಾಡಿದಂತೆ ಎಂದು ಹೇಳಿದ್ದಾರೆ.

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಕುರಿತ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿದ ಸಿಜೆಐ ಗವಾಯಿ, ತಮ್ಮದೇ ಸಮುದಾಯಕ್ಕೆ ಸೇರಿದ ಜನರಿಂದ ಈ ತೀರ್ಪಿಗಾಗಿ ವ್ಯಾಪಕ ಟೀಕೆಗೆ ಒಳಗಾಗಬೇಕಾಯಿತು ಎಂದಿದ್ದಾರೆ.

“ನಾನು ಅರ್ಥಮಾಡಿಕೊಂಡ ಕಾನೂನಿನ ಪ್ರಕಾರ ಮತ್ತು ನನ್ನ ಸ್ವಂತ ಆತ್ಮಸಾಕ್ಷಿಯ ಪ್ರಕಾರ ತೀರ್ಪು ಬರೆಯಬೇಕೇ ಹೊರತು, ಜನರ ಬೇಡಿಕೆಗಳು ಅಥವಾ ಆಸೆಯಂತಲ್ಲ ಎಂದು ನಾನು ಯಾವಾಗಲೂ ನಂಬಿದ್ದೇನೆ” ಎಂದು ತಿಳಿಸಿದ್ದಾರೆ.

“ಮೀಸಲಾತಿ ವರ್ಗದಿಂದ ಬಂದ ಮೊದಲ ತಲೆಮಾರಿನ ವ್ಯಕ್ತಿಯೊಬ್ಬರು ಐಎಎಸ್ ಅಧಿಕಾರಿಯಾದಾಗ, ಅದರ ಪ್ರಯೋಜನವು ನಂತರದ ಪೀಳಿಗೆಗೆ ವಿಸ್ತರಿಸುತ್ತದೆ ಮತ್ತು ಎರಡನೇ ಮತ್ತು ಮೂರನೇ ತಲೆಮಾರಿನವರೂ ಕೂಡ ಅದೇ ವರ್ಗದ ಮೂಲಕ ಐಎಎಸ್‌ಗೆ ಪ್ರವೇಶಿಸುತ್ತಾರೆ” ಎಂದು ಹೇಳಿದ್ದಾರೆ.

“ಮುಂಬೈ ಅಥವಾ ದೆಹಲಿಯ ಶಾಲೆಯಲ್ಲಿ ಉತ್ತಮ ಶಿಕ್ಷಣ ಪಡೆಯುವ ವ್ಯಕ್ತಿಯ ಮಗ ಅಥವಾ ಮಗಳನ್ನು ಜಿಲ್ಲಾ ಪರಿಷತ್ ಅಥವಾ ಗ್ರಾಮ ಪಂಚಾಯತ್ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ಹಳ್ಳಿಯಲ್ಲಿ ಮೇಸ್ತ್ರಿ ಅಥವಾ ಕೃಷಿ ಕಾರ್ಮಿಕರ ಮಗ ಅಥವಾ ಮಗಳಿಗೆ ಸಮನಾಗಿ ಪರಿಗಣಿಸಬಹುದೇ ಎಂಬುದು ನಾನು ನನ್ನನ್ನು ಕೇಳಿಕೊಂಡ ಪ್ರಶ್ನೆ” ಎಂದಿದ್ದಾರೆ.

“ಸಂವಿಧಾನದ 14ನೇ ವಿಧಿಯು ಅಸಮಾನರ ನಡುವೆ ಸಮಾನತೆಯನ್ನು ಅರ್ಥೈಸುವುದಿಲ್ಲ. ಅಸಮಾನರನ್ನು ಅಸಮಾನವಾಗಿ ನಡೆಸಿಕೊಳ್ಳುವುದರಿಂದ ಅವರು ಸಮಾನರಾಗುತ್ತಾರೆ ಎಂದು ಪರಿಗಣಿಸಲಾಗಿದೆ. ಆದ್ದರಿಂದ, ಹಳ್ಳಿಯಲ್ಲಿ ವಾಸಿಸುವ ಕಾರ್ಮಿಕನ ಮಗುವನ್ನು ಮತ್ತು ಮುಂಬೈನಲ್ಲಿ ವಾಸಿಸುವ ಮುಖ್ಯ ಕಾರ್ಯದರ್ಶಿಯ ಮಗುವನ್ನು ಅತ್ಯುತ್ತಮ ಶಾಲೆಯಲ್ಲಿ ಓದಿಸುವುದು ಸಮಾನತೆಯ ಅತ್ಯುತ್ತಮ ಪರಿಕಲ್ಪನೆ ಎಂಬುದು ನನ್ನ ಅಭಿಪ್ರಾಯ” ಎಂದು ಸಿಜೆಐ ಹೇಳಿದ್ದಾರೆ.

ಪ್ರೊ. ಅಲಿ ಖಾನ್ ವಿರುದ್ಧದ ಆರೋಪಪಟ್ಟಿ ಪರಿಗಣಿಸದಂತೆ ವಿಚಾರಣಾ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...