Homeಮುಖಪುಟಅನುಕೂಲಕರ ಆದೇಶ ಪಡೆಯಲು ನ್ಯಾಯಾಧೀಶರನ್ನು ಸಂಪರ್ಕಿಸಿದ ಆರೋಪ: ತನಿಖೆಗೆ ಆದೇಶಿಸಿದ ಸುಪ್ರೀಂ ಕೋರ್ಟ್

ಅನುಕೂಲಕರ ಆದೇಶ ಪಡೆಯಲು ನ್ಯಾಯಾಧೀಶರನ್ನು ಸಂಪರ್ಕಿಸಿದ ಆರೋಪ: ತನಿಖೆಗೆ ಆದೇಶಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ದಿವಾಳಿತನ ಪ್ರಕರಣದಲ್ಲಿ ಅನುಕೂಲಕರ ಆದೇಶವನ್ನು ಪಡೆಯಲು ಉನ್ನತ ನ್ಯಾಯಾಂಗದ ಸದಸ್ಯರೊಬ್ಬರು ಚೆನ್ನೈನಲ್ಲಿರುವ ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿಯ (ಎನ್‌ಸಿಎಲ್‌ಎಟಿ) ನ್ಯಾಯಮೂರ್ತಿ ಶರದ್ ಕುಮಾರ್ ಶರ್ಮಾ ಅವರನ್ನು ಸಂಪರ್ಕಿಸಿದ್ದಾರೆ ಎಂಬ ಆರೋಪದ ಕುರಿತು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ ಎಂದು ಬಾರ್ & ಬೆಂಚ್ ಬುಧವಾರ (ಆ.27) ವರದಿ ಮಾಡಿದೆ.

ತನಿಖೆಯನ್ನು ಸುಪ್ರೀಂ ಕೋರ್ಟ್‌ನ ಪ್ರಧಾನ ಕಾರ್ಯದರ್ಶಿ ನಡೆಸಲಿದ್ದು, ಆ ಕರೆಯನ್ನು ನಿಜವಾಗಿಯೂ ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಮಾಡಿದ್ದಾರೆಯೇ. ಮಾಡಿದ್ದರೆ, ಕರೆ ಮಾಡಿದವರು ಯಾರು ಎಂದು ಪರಿಶೀಲನೆ ನಡೆಸಲಿದ್ದಾರೆ ಎಂದು ವರದಿ ಹೇಳಿದೆ.

ಈ ದೇಶದ ಉನ್ನತ ನ್ಯಾಯಾಂಗದ ಅತ್ಯಂತ ಗೌರವಾನ್ವಿತ ಸದಸ್ಯರಲ್ಲಿ ಒಬ್ಬರು” ನಮ್ಮ ತೀರ್ಪಿನ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿ ನ್ಯಾ. ಶರ್ಮಾ ಅವರು ಈ ತಿಂಗಳ ಆರಂಭದಲ್ಲಿ ಪ್ರಕರಣದಿಂದ ಹಿಂದೆ ಸರಿದಿದ್ದರು.

“ನಮ್ಮಲ್ಲಿ ಒಬ್ಬರಾದ (ನ್ಯಾಯಾಂಗ) ಸದಸ್ಯರನ್ನು, ಈ ದೇಶದ ಉನ್ನತ ನ್ಯಾಯಾಂಗದ ಅತ್ಯಂತ ಗೌರವಾನ್ವಿತ ಸದಸ್ಯರಲ್ಲಿ ಒಬ್ಬರು, ನಿರ್ದಿಷ್ಟ ಪಕ್ಷದ ಪರವಾಗಿ ಆದೇಶ ನೀಡಲು ಕೋರಿ ಸಂಪರ್ಕಿಸಿರುವುದು ತಿಳಿದು ನ್ಯಾಯಮಂಡಳಿಗೆ ಬೇಸರವಾಗಿದೆ” ಎಂದು ಆಗಸ್ಟ್ 13ರಂದು ನ್ಯಾ. ಶರ್ಮಾ ಹೇಳಿದ್ದರು. ಆದ್ದರಿಂದ, ನಾನು ಈ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿಯುತ್ತೇನೆ ಎಂದಿದ್ದರು.

ನ್ಯಾ. ಶರ್ಮಾ ಅವರು ವಿಚಾರಣೆಯಿಂದ ಹಿಂದೆ ಸರಿದ ಪ್ರಕರಣ ಹೈದರಾಬಾದ್ ಮೂಲದ ರಿಯಲ್ ಎಸ್ಟೇಟ್ ಕಂಪನಿಯಾದ ಕೆಎಲ್‌ಎಸ್‌ಆರ್ ಇನ್ಫ್ರಾಟೆಕ್ ಲಿಮಿಟೆಡ್ ವಿರುದ್ಧದ ದಿವಾಳಿತನ ಪ್ರಕ್ರಿಯೆಗೆ ಸಂಬಂಧಿಸಿದೆ.

ಕಂಪನಿಯು 2023ರಲ್ಲಿ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಯ(ಎನ್‌ಸಿಎಲ್‌ಟಿ) ಹೈದರಾಬಾದ್ ಪೀಠದ ಆದೇಶವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿತ್ತು. ಹೈದರಾಬಾದ್ ಪೀಠದ ಆದೇಶ ಸಾಲದಾತ ಎಎಸ್ ಮೆಟ್ ಕಾರ್ಪ್ ಪ್ರೈವೇಟ್ ಲಿಮಿಟೆಡ್‌ ಕಂಪನಿಯು ಕೆಎಲ್‌ಎಸ್‌ಆರ್ ಇನ್ಫ್ರಾಟೆಕ್ ಲಿಮಿಟೆಡ್ ವಿರುದ್ದ ಕಾರ್ಪೊರೇಟ್ ದಿವಾಳಿತನ ಪರಿಹಾರ ಪ್ರಕ್ರಿಯೆಯನ್ನು ಪ್ರಾರಂಭಿಸಲು ಅವಕಾಶ ನೀಡಿತ್ತು.

ಈ ಅರ್ಜಿಯನ್ನು ಚೆನ್ನೈನಲ್ಲಿರುವ ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿಯಲ್ಲಿ (ಎನ್‌ಸಿಎಲ್‌ಎಟಿ) ಇಬ್ಬರು ಸದಸ್ಯರ ಕೋರಂ ಮುಂದೆ ಪಟ್ಟಿ ಮಾಡಲಾಗಿತ್ತು. ಈ ನಡುವೆ ನ್ಯಾ. ಶರ್ಮಾ ಅವರು ವಿಚಾರಣೆಯಿಂದ ಹಿಂದೆ ಸರಿದ ಕಾರಣ, ಹೊಸ ಕೋರಂ ಸ್ಥಾಪನೆಗಾಗಿ ಪ್ರಕರಣವನ್ನು ನ್ಯಾಯಮಂಡಳಿಯ ಅಧ್ಯಕ್ಷರ ಮುಂದೆ ಇಡುವ ಸಾಧ್ಯತೆ ಇದೆ.

ತೀರ್ಪಿನ ಮೇಲೆ ಪ್ರಭಾವ ಬೀರುವ ಪ್ರಯತ್ನಗಳನ್ನು ಉಲ್ಲೇಖಿಸಿ ನ್ಯಾ. ಶರ್ಮಾ ಅವರು ಇತರ ಪ್ರಕರಣಗಳ ವಿಚಾರಣೆಯಿಂದಲೂ ಕೂಡ ಹಿಂದೆ ಸರಿದಿದ್ದಾರೆ ಎಂದು ವರದಿಗಳು ಹೇಳಿವೆ.

ಜೂನ್ 11ರಂದು, ಶ್ರೀ ರಾಮಲಿಂಗ ಮಿಲ್ಸ್ ಮತ್ತು ಸಂಬಂಧಿತ ಕಂಪನಿಗಳಿಗೆ ಸಂಬಂಧಿಸಿದ ಮೇಲ್ಮನವಿಗಳನ್ನು ವಿಚಾರಣೆ ನಡೆಸುತ್ತಿದ್ದಾಗ, ಪ್ರತಿವಾದಿಯೊಬ್ಬರು ತಮ್ಮ ಪರವಾಗಿ ತೀರ್ಪು ಪಡೆಯಲು ಪ್ರಯತ್ನಿಸಿದ್ದಾರೆ ಎಂದು ನ್ಯಾ. ಶರ್ಮಾ ಹೇಳಿಕೊಂಡಿದ್ದರು ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ನವೆಂಬರ್ 2024ರಲ್ಲಿ, ಜೆಪ್ಪಿಯಾರ್ ಸಿಮೆಂಟ್ಸ್‌ಗೆ ಸಂಬಂಧಿಸಿದ ಪ್ರಕರಣದಲ್ಲಿ ಶರ್ಮಾ ಅವರು, ಪ್ರಕರಣದ ಆದೇಶವನ್ನು ಕಾಯ್ದಿರಿಸುವಂತೆ ಕೋರಿ ನನ್ನನ್ನು ಸಂಪರ್ಕಿಸಲಾಗಿದೆ ಎಂದು ಹೇಳಿದ್ದರು ಮತ್ತು ಪ್ರಕರಣದಿಂದ ಹಿಂದೆ ಸರಿದಿದ್ದರು.

ನ್ಯಾಯಮೂರ್ತಿಗಳಾದ ಅಲೋಕ್ ಆರಾಧೆ, ವಿಪುಲ್ ಪಂಚೋಲಿ ಸುಪ್ರೀಂ ಕೋರ್ಟ್‌ ಪದೋನ್ನತಿಗೆ ಕೇಂದ್ರ ಅನುಮೋದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...