Homeಮುಖಪುಟಅನುಕೂಲಕರ ಆದೇಶ ಪಡೆಯಲು ನ್ಯಾಯಾಧೀಶರನ್ನು ಸಂಪರ್ಕಿಸಿದ ಆರೋಪ: ತನಿಖೆಗೆ ಆದೇಶಿಸಿದ ಸುಪ್ರೀಂ ಕೋರ್ಟ್

ಅನುಕೂಲಕರ ಆದೇಶ ಪಡೆಯಲು ನ್ಯಾಯಾಧೀಶರನ್ನು ಸಂಪರ್ಕಿಸಿದ ಆರೋಪ: ತನಿಖೆಗೆ ಆದೇಶಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ದಿವಾಳಿತನ ಪ್ರಕರಣದಲ್ಲಿ ಅನುಕೂಲಕರ ಆದೇಶವನ್ನು ಪಡೆಯಲು ಉನ್ನತ ನ್ಯಾಯಾಂಗದ ಸದಸ್ಯರೊಬ್ಬರು ಚೆನ್ನೈನಲ್ಲಿರುವ ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿಯ (ಎನ್‌ಸಿಎಲ್‌ಎಟಿ) ನ್ಯಾಯಮೂರ್ತಿ ಶರದ್ ಕುಮಾರ್ ಶರ್ಮಾ ಅವರನ್ನು ಸಂಪರ್ಕಿಸಿದ್ದಾರೆ ಎಂಬ ಆರೋಪದ ಕುರಿತು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ ಎಂದು ಬಾರ್ & ಬೆಂಚ್ ಬುಧವಾರ (ಆ.27) ವರದಿ ಮಾಡಿದೆ.

ತನಿಖೆಯನ್ನು ಸುಪ್ರೀಂ ಕೋರ್ಟ್‌ನ ಪ್ರಧಾನ ಕಾರ್ಯದರ್ಶಿ ನಡೆಸಲಿದ್ದು, ಆ ಕರೆಯನ್ನು ನಿಜವಾಗಿಯೂ ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಮಾಡಿದ್ದಾರೆಯೇ. ಮಾಡಿದ್ದರೆ, ಕರೆ ಮಾಡಿದವರು ಯಾರು ಎಂದು ಪರಿಶೀಲನೆ ನಡೆಸಲಿದ್ದಾರೆ ಎಂದು ವರದಿ ಹೇಳಿದೆ.

ಈ ದೇಶದ ಉನ್ನತ ನ್ಯಾಯಾಂಗದ ಅತ್ಯಂತ ಗೌರವಾನ್ವಿತ ಸದಸ್ಯರಲ್ಲಿ ಒಬ್ಬರು” ನಮ್ಮ ತೀರ್ಪಿನ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿ ನ್ಯಾ. ಶರ್ಮಾ ಅವರು ಈ ತಿಂಗಳ ಆರಂಭದಲ್ಲಿ ಪ್ರಕರಣದಿಂದ ಹಿಂದೆ ಸರಿದಿದ್ದರು.

“ನಮ್ಮಲ್ಲಿ ಒಬ್ಬರಾದ (ನ್ಯಾಯಾಂಗ) ಸದಸ್ಯರನ್ನು, ಈ ದೇಶದ ಉನ್ನತ ನ್ಯಾಯಾಂಗದ ಅತ್ಯಂತ ಗೌರವಾನ್ವಿತ ಸದಸ್ಯರಲ್ಲಿ ಒಬ್ಬರು, ನಿರ್ದಿಷ್ಟ ಪಕ್ಷದ ಪರವಾಗಿ ಆದೇಶ ನೀಡಲು ಕೋರಿ ಸಂಪರ್ಕಿಸಿರುವುದು ತಿಳಿದು ನ್ಯಾಯಮಂಡಳಿಗೆ ಬೇಸರವಾಗಿದೆ” ಎಂದು ಆಗಸ್ಟ್ 13ರಂದು ನ್ಯಾ. ಶರ್ಮಾ ಹೇಳಿದ್ದರು. ಆದ್ದರಿಂದ, ನಾನು ಈ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿಯುತ್ತೇನೆ ಎಂದಿದ್ದರು.

ನ್ಯಾ. ಶರ್ಮಾ ಅವರು ವಿಚಾರಣೆಯಿಂದ ಹಿಂದೆ ಸರಿದ ಪ್ರಕರಣ ಹೈದರಾಬಾದ್ ಮೂಲದ ರಿಯಲ್ ಎಸ್ಟೇಟ್ ಕಂಪನಿಯಾದ ಕೆಎಲ್‌ಎಸ್‌ಆರ್ ಇನ್ಫ್ರಾಟೆಕ್ ಲಿಮಿಟೆಡ್ ವಿರುದ್ಧದ ದಿವಾಳಿತನ ಪ್ರಕ್ರಿಯೆಗೆ ಸಂಬಂಧಿಸಿದೆ.

ಕಂಪನಿಯು 2023ರಲ್ಲಿ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಯ(ಎನ್‌ಸಿಎಲ್‌ಟಿ) ಹೈದರಾಬಾದ್ ಪೀಠದ ಆದೇಶವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿತ್ತು. ಹೈದರಾಬಾದ್ ಪೀಠದ ಆದೇಶ ಸಾಲದಾತ ಎಎಸ್ ಮೆಟ್ ಕಾರ್ಪ್ ಪ್ರೈವೇಟ್ ಲಿಮಿಟೆಡ್‌ ಕಂಪನಿಯು ಕೆಎಲ್‌ಎಸ್‌ಆರ್ ಇನ್ಫ್ರಾಟೆಕ್ ಲಿಮಿಟೆಡ್ ವಿರುದ್ದ ಕಾರ್ಪೊರೇಟ್ ದಿವಾಳಿತನ ಪರಿಹಾರ ಪ್ರಕ್ರಿಯೆಯನ್ನು ಪ್ರಾರಂಭಿಸಲು ಅವಕಾಶ ನೀಡಿತ್ತು.

ಈ ಅರ್ಜಿಯನ್ನು ಚೆನ್ನೈನಲ್ಲಿರುವ ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿಯಲ್ಲಿ (ಎನ್‌ಸಿಎಲ್‌ಎಟಿ) ಇಬ್ಬರು ಸದಸ್ಯರ ಕೋರಂ ಮುಂದೆ ಪಟ್ಟಿ ಮಾಡಲಾಗಿತ್ತು. ಈ ನಡುವೆ ನ್ಯಾ. ಶರ್ಮಾ ಅವರು ವಿಚಾರಣೆಯಿಂದ ಹಿಂದೆ ಸರಿದ ಕಾರಣ, ಹೊಸ ಕೋರಂ ಸ್ಥಾಪನೆಗಾಗಿ ಪ್ರಕರಣವನ್ನು ನ್ಯಾಯಮಂಡಳಿಯ ಅಧ್ಯಕ್ಷರ ಮುಂದೆ ಇಡುವ ಸಾಧ್ಯತೆ ಇದೆ.

ತೀರ್ಪಿನ ಮೇಲೆ ಪ್ರಭಾವ ಬೀರುವ ಪ್ರಯತ್ನಗಳನ್ನು ಉಲ್ಲೇಖಿಸಿ ನ್ಯಾ. ಶರ್ಮಾ ಅವರು ಇತರ ಪ್ರಕರಣಗಳ ವಿಚಾರಣೆಯಿಂದಲೂ ಕೂಡ ಹಿಂದೆ ಸರಿದಿದ್ದಾರೆ ಎಂದು ವರದಿಗಳು ಹೇಳಿವೆ.

ಜೂನ್ 11ರಂದು, ಶ್ರೀ ರಾಮಲಿಂಗ ಮಿಲ್ಸ್ ಮತ್ತು ಸಂಬಂಧಿತ ಕಂಪನಿಗಳಿಗೆ ಸಂಬಂಧಿಸಿದ ಮೇಲ್ಮನವಿಗಳನ್ನು ವಿಚಾರಣೆ ನಡೆಸುತ್ತಿದ್ದಾಗ, ಪ್ರತಿವಾದಿಯೊಬ್ಬರು ತಮ್ಮ ಪರವಾಗಿ ತೀರ್ಪು ಪಡೆಯಲು ಪ್ರಯತ್ನಿಸಿದ್ದಾರೆ ಎಂದು ನ್ಯಾ. ಶರ್ಮಾ ಹೇಳಿಕೊಂಡಿದ್ದರು ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ನವೆಂಬರ್ 2024ರಲ್ಲಿ, ಜೆಪ್ಪಿಯಾರ್ ಸಿಮೆಂಟ್ಸ್‌ಗೆ ಸಂಬಂಧಿಸಿದ ಪ್ರಕರಣದಲ್ಲಿ ಶರ್ಮಾ ಅವರು, ಪ್ರಕರಣದ ಆದೇಶವನ್ನು ಕಾಯ್ದಿರಿಸುವಂತೆ ಕೋರಿ ನನ್ನನ್ನು ಸಂಪರ್ಕಿಸಲಾಗಿದೆ ಎಂದು ಹೇಳಿದ್ದರು ಮತ್ತು ಪ್ರಕರಣದಿಂದ ಹಿಂದೆ ಸರಿದಿದ್ದರು.

ನ್ಯಾಯಮೂರ್ತಿಗಳಾದ ಅಲೋಕ್ ಆರಾಧೆ, ವಿಪುಲ್ ಪಂಚೋಲಿ ಸುಪ್ರೀಂ ಕೋರ್ಟ್‌ ಪದೋನ್ನತಿಗೆ ಕೇಂದ್ರ ಅನುಮೋದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...