Homeಮುಖಪುಟಬಿಹಾರ ಜಾತಿ ಸಮೀಕ್ಷೆಯ ದತ್ತಾಂಶವು ಸಾರ್ವಜನಿಕರಿಗೆ ಏಕೆ ಲಭ್ಯವಿಲ್ಲ? ಸುಪ್ರೀಂಕೋರ್ಟ್ ಪ್ರಶ್ನೆ

ಬಿಹಾರ ಜಾತಿ ಸಮೀಕ್ಷೆಯ ದತ್ತಾಂಶವು ಸಾರ್ವಜನಿಕರಿಗೆ ಏಕೆ ಲಭ್ಯವಿಲ್ಲ? ಸುಪ್ರೀಂಕೋರ್ಟ್ ಪ್ರಶ್ನೆ

- Advertisement -
- Advertisement -

ಬಿಹಾರ ಜಾತಿ ಸಮೀಕ್ಷೆಯ ದತ್ತಾಂಶವು ಸಾರ್ವಜನಿಕರಿಗೆ ಲಭ್ಯವಿಲ್ಲ? ಸಮೀಕ್ಷೆಯ ಅಂಕಿಅಂಶಗಳು ಸಾರ್ವಜನಿಕರಿಗೆ ಲಭ್ಯವಾಗದಿರುವುದು ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಸುಪ್ರೀಂಕೋರ್ಟ್ ಮಂಗಳವಾರ ಹೇಳಿದೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠವು, ಯಾರಾದರೂ ಪ್ರತ್ಯೇಕ ನಿರ್ಣಯಗಳ ಬಗ್ಗೆ ಪ್ರಶ್ನಿಸಬೇಕಿದ್ದರೆ ಅವರು ಆ ಮಾಹಿತಿಯನ್ನು ಹೊಂದಿರಬೇಕಾಗುತ್ತದೆ ಎಂದು ಹೇಳಿದ್ದಾರೆ.

ಜಾತಿಗಣತಿ ಸಮೀಕ್ಷೆಯನ್ನು ಬಿಡುಗಡೆಗೊಳಿಸಲಾಗಿದೆ ಮತ್ತು ಮೀಸಲಾತಿಯನ್ನು 50% ರಿಂದ 70% ಕ್ಕೆ ಹೆಚ್ಚಿಸಲಾಗಿದೆ, ಇದು ಸವಾಲಿನ ವಿಷಯವಾಗಿದೆ ಎಂದು ಅರ್ಜಿದಾರರ ಪರ ವಕೀಲ ರಾಮಚಂದ್ರನ್ ಕೋರ್ಟ್‌ನಲ್ಲಿ ಹೇಳಿದ್ದಾರೆ.

ಜನಗಣತಿಯ ವರದಿಗಿಂತ ಹೆಚ್ಚಾಗಿ ನಾವು ಕಾಳಜಿ ವಹಿಸಿದ ವಿಷಯದ ಬಗ್ಗೆ ನೀವು ಮಾತನಾಡುತ್ತಿದ್ದೀರಿ,  ಸಮೀಕ್ಷೆಯ ಕುರಿತು ಮಾಹಿತಿ ಸಾಮಾನ್ಯವಾಗಿ ಸಾರ್ವಜನಿಕರಿಗೆ ಲಭ್ಯವಾಗದಿದ್ದರೆ ಇದು ಬಹಳಷ್ಟು ಸಮಸ್ಯೆಗಳಿಗೆ ಕಾರಣವಾಗುತ್ತದೆ. ನೀವು ಜನಗಣತಿ ಮಾಡಲು ಅರ್ಹರಾಗಿದ್ದರೆ, ಆದರ ಮಾಹಿತಿ ಸಾರ್ವಜನಿಕ ಲಭ್ಯತೆಯನ್ನು ಎಷ್ಟರ ಮಟ್ಟಿಗೆ ತಡೆಹಿಡಿಯಬಹುದು ಎಂದು ಪೀಠ ಕೇಳಿದೆ.

ಬಿಹಾರ ಸರ್ಕಾರದ ಪರ ಹಾಜರಾದ ಹಿರಿಯ ವಕೀಲ ಶ್ಯಾಮ್ ದಿವಾನ್, ಸಮೀಕ್ಷೆಯು ಸಾರ್ವಜನಿಕ ಡೊಮೇನ್‌ನಲ್ಲಿ ಲಭ್ಯವಿದೆ ಎಂದು ಹೇಳಿದರು. ಅದು ಸಂಪೂರ್ಣವಾಗಿ ಲಭ್ಯವಿದ್ದರೆ ಅದು ಬೇರೆ ವಿಷಯ ಎಂದು ಪೀಠ ಹೇಳಿದೆ. ಮಾಹಿತಿಯು ಸಾಮಾನ್ಯವಾಗಿ ಲಭ್ಯವಾಗುವಂತೆ ಮಾಡಬೇಕು ಏಕೆಂದರೆ ಜನರು ನಿರ್ದಿಷ್ಟ ವಿಚಾರವನ್ನು ಪ್ರಶ್ನಿಸಲು ಬಯಸಿದಾಗ ಅವರ ಬಳಿ ಆ ದಾಖಲೆ ಇರಬೇಕಾಗುತ್ತದೆ ಎಂದು ಕೋರ್ಟ್‌ ಹೇಳಿದೆ.

ಈ ವೇಳೆ ಕೇಂದ್ರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಇದು ಸಂವಿಧಾನದ ಪ್ರಕಾರ ಜನಗಣತಿ ಅಲ್ಲ ಎಂದು ಕೋರ್ಟ್‌ನಲ್ಲಿ ಹೇಳಿದ್ದಾರೆ. ಈ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್, ಅದಕ್ಕಾಗಿಯೇ ಜಾತಿ ಸಮೀಕ್ಷೆ ಕಾನೂನುಬಾಹಿರವಾಗಿದೆ, ರಾಜ್ಯವು ಅದನ್ನು ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಬಿಹಾರ ಸರ್ಕಾರದ ನಡೆಸಲು ಉದ್ದೇಶಿಸಿದ್ದ ಜಾತಿ ಗಣತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಈ ಮೊದಲು ಸುಪ್ರೀಂಕೋರ್ಟ್ ತಿರಸ್ಕರಿಸಿತ್ತು, ಈ ಮೂಲಕ ಸಮೀಕ್ಷೆಗೆ ಇದ್ದ ತೊಂದರೆ ನಿವಾರಣೆಯಾಗಿತ್ತು.

ಅ.2ರಂದು ಬಿಹಾರ ಸರಕಾರ ದೇಶದಲ್ಲಿ ಮೊದಲ ಬಾರಿಗೆ ಜಾತಿಗಣತಿಯ ವರದಿಯನ್ನು ಬಿಡುಗಡೆಗೊಳಿಸಿದೆ. ಈ ಮೂಲಕ ದೇಶದಲ್ಲಿ ಜಾತಿ ಆಧಾರಿತ ಸಮೀಕ್ಷೆಯ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಬಿಹಾರ ಪಾತ್ರವಾಗಿದೆ.

ರಾಜ್ಯದಲ್ಲಿ 36%ದಷ್ಟು ಅತಿಹೆಚ್ಚು ಹಿಂದುಳಿದಿರುವ ಮತ್ತು 27% ಹಿಂದುಳಿದ ವರ್ಗದ ಜನರಿದ್ದಾರೆ. 19.7% ಪರಿಶಿಷ್ಟ ಜಾತಿಯ ಜನ ಮತ್ತು 1.7%  ಪರಿಶಿಷ್ಟ ಪಂಗಡಗಳ ಜನರಿದ್ದಾರೆ. ಸಾಮಾನ್ಯ ವರ್ಗದ ಜನಸಂಖ್ಯೆಯು  15.5% ದಷ್ಟಿದೆ. ರಾಜ್ಯದ ಒಟ್ಟು ಜನಸಂಖ್ಯೆ 13.1 ಕೋಟಿಗೂ ಹೆಚ್ಚು ಎಂದು ಜಾತಿಗಣತಿಯಲ್ಲಿ ಬಹಿರಂಗವಾಗಿದೆ.

ಉಪಮುಖ್ಯಮಂತ್ರಿ ತೇಜಸ್ವಿ ಯಾದವ್‌ ಅವರ ಯಾದವ್ ಸಮುದಾಯವು ಅತಿಹೆಚ್ಚು ಅಂದರೆ ಒಬಿಸಿ ವರ್ಗಗಳಲ್ಲಿ 14.27 ಶೇಕಡಾ ಜನಸಂಖ್ಯೆಯನ್ನು ಹೊಂದಿದೆ. ಬ್ರಾಹ್ಮಣರು ಶೇಕಡಾ 3.66 ರಷ್ಟಿದ್ದಾರೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಸಮುದಾಯಕ್ಕೆ ಸೇರಿದ ಕುರ್ಮಿಗಳು ಜನಸಂಖ್ಯೆ ಶೇಕಡಾ 2.87ರಷ್ಟಿದ್ದಾರೆ. ಮುಸಾಹರ್‌ಗಳು ಶೇಕಡಾ 3 ರಷ್ಟಿದ್ದಾರೆ. ಈ ಜಾತಿಗಣತಿಯ ವರದಿಯು ರಾಜ್ಯದಲ್ಲಿ ಭಾರೀ ರಾಜಕೀಯ ಚರ್ಚೆಗೆ ಕಾರಣವಾಗಲಿದೆ. ಒಬಿಸಿಗಳಿಗೆ ಕೋಟಾಗಳನ್ನು ಹೆಚ್ಚಿಸುವ ಬೇಡಿಕೆ ಕೂಡ ಹೆಚ್ಚಾಗಳಿದೆ. ಈಗ ರಾಜ್ಯದಲ್ಲಿ ಒಬಿಸಿಗಳಿಗೆ 27% ಮೀಸಲಾತಿ ಇದೆ. 2024ರ ಲೋಕಸಭಾ ಚುನಾವಣೆಗೆ ತಿಂಗಳುಗಳ ಮೊದಲು ಬಿಡುಗಡೆಯಾದ ಈ ಅಂಕಿಅಂಶಗಳ ಪ್ರಕಾರ ಒಬಿಸಿಗಳು ರಾಜ್ಯದಲ್ಲಿ ಶೇಕಡಾ 63.1ರಷ್ಟಿದ್ದಾರೆ.

ಇದನ್ನು ಓದಿ: ನೂತನ ಕ್ರಿಮಿನಲ್ ಕಾನೂನುಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...