Homeಮುಖಪುಟಬಿಹಾರ ಜಾತಿ ಸಮೀಕ್ಷೆಯ ದತ್ತಾಂಶವು ಸಾರ್ವಜನಿಕರಿಗೆ ಏಕೆ ಲಭ್ಯವಿಲ್ಲ? ಸುಪ್ರೀಂಕೋರ್ಟ್ ಪ್ರಶ್ನೆ

ಬಿಹಾರ ಜಾತಿ ಸಮೀಕ್ಷೆಯ ದತ್ತಾಂಶವು ಸಾರ್ವಜನಿಕರಿಗೆ ಏಕೆ ಲಭ್ಯವಿಲ್ಲ? ಸುಪ್ರೀಂಕೋರ್ಟ್ ಪ್ರಶ್ನೆ

- Advertisement -
- Advertisement -

ಬಿಹಾರ ಜಾತಿ ಸಮೀಕ್ಷೆಯ ದತ್ತಾಂಶವು ಸಾರ್ವಜನಿಕರಿಗೆ ಲಭ್ಯವಿಲ್ಲ? ಸಮೀಕ್ಷೆಯ ಅಂಕಿಅಂಶಗಳು ಸಾರ್ವಜನಿಕರಿಗೆ ಲಭ್ಯವಾಗದಿರುವುದು ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಸುಪ್ರೀಂಕೋರ್ಟ್ ಮಂಗಳವಾರ ಹೇಳಿದೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠವು, ಯಾರಾದರೂ ಪ್ರತ್ಯೇಕ ನಿರ್ಣಯಗಳ ಬಗ್ಗೆ ಪ್ರಶ್ನಿಸಬೇಕಿದ್ದರೆ ಅವರು ಆ ಮಾಹಿತಿಯನ್ನು ಹೊಂದಿರಬೇಕಾಗುತ್ತದೆ ಎಂದು ಹೇಳಿದ್ದಾರೆ.

ಜಾತಿಗಣತಿ ಸಮೀಕ್ಷೆಯನ್ನು ಬಿಡುಗಡೆಗೊಳಿಸಲಾಗಿದೆ ಮತ್ತು ಮೀಸಲಾತಿಯನ್ನು 50% ರಿಂದ 70% ಕ್ಕೆ ಹೆಚ್ಚಿಸಲಾಗಿದೆ, ಇದು ಸವಾಲಿನ ವಿಷಯವಾಗಿದೆ ಎಂದು ಅರ್ಜಿದಾರರ ಪರ ವಕೀಲ ರಾಮಚಂದ್ರನ್ ಕೋರ್ಟ್‌ನಲ್ಲಿ ಹೇಳಿದ್ದಾರೆ.

ಜನಗಣತಿಯ ವರದಿಗಿಂತ ಹೆಚ್ಚಾಗಿ ನಾವು ಕಾಳಜಿ ವಹಿಸಿದ ವಿಷಯದ ಬಗ್ಗೆ ನೀವು ಮಾತನಾಡುತ್ತಿದ್ದೀರಿ,  ಸಮೀಕ್ಷೆಯ ಕುರಿತು ಮಾಹಿತಿ ಸಾಮಾನ್ಯವಾಗಿ ಸಾರ್ವಜನಿಕರಿಗೆ ಲಭ್ಯವಾಗದಿದ್ದರೆ ಇದು ಬಹಳಷ್ಟು ಸಮಸ್ಯೆಗಳಿಗೆ ಕಾರಣವಾಗುತ್ತದೆ. ನೀವು ಜನಗಣತಿ ಮಾಡಲು ಅರ್ಹರಾಗಿದ್ದರೆ, ಆದರ ಮಾಹಿತಿ ಸಾರ್ವಜನಿಕ ಲಭ್ಯತೆಯನ್ನು ಎಷ್ಟರ ಮಟ್ಟಿಗೆ ತಡೆಹಿಡಿಯಬಹುದು ಎಂದು ಪೀಠ ಕೇಳಿದೆ.

ಬಿಹಾರ ಸರ್ಕಾರದ ಪರ ಹಾಜರಾದ ಹಿರಿಯ ವಕೀಲ ಶ್ಯಾಮ್ ದಿವಾನ್, ಸಮೀಕ್ಷೆಯು ಸಾರ್ವಜನಿಕ ಡೊಮೇನ್‌ನಲ್ಲಿ ಲಭ್ಯವಿದೆ ಎಂದು ಹೇಳಿದರು. ಅದು ಸಂಪೂರ್ಣವಾಗಿ ಲಭ್ಯವಿದ್ದರೆ ಅದು ಬೇರೆ ವಿಷಯ ಎಂದು ಪೀಠ ಹೇಳಿದೆ. ಮಾಹಿತಿಯು ಸಾಮಾನ್ಯವಾಗಿ ಲಭ್ಯವಾಗುವಂತೆ ಮಾಡಬೇಕು ಏಕೆಂದರೆ ಜನರು ನಿರ್ದಿಷ್ಟ ವಿಚಾರವನ್ನು ಪ್ರಶ್ನಿಸಲು ಬಯಸಿದಾಗ ಅವರ ಬಳಿ ಆ ದಾಖಲೆ ಇರಬೇಕಾಗುತ್ತದೆ ಎಂದು ಕೋರ್ಟ್‌ ಹೇಳಿದೆ.

ಈ ವೇಳೆ ಕೇಂದ್ರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಇದು ಸಂವಿಧಾನದ ಪ್ರಕಾರ ಜನಗಣತಿ ಅಲ್ಲ ಎಂದು ಕೋರ್ಟ್‌ನಲ್ಲಿ ಹೇಳಿದ್ದಾರೆ. ಈ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್, ಅದಕ್ಕಾಗಿಯೇ ಜಾತಿ ಸಮೀಕ್ಷೆ ಕಾನೂನುಬಾಹಿರವಾಗಿದೆ, ರಾಜ್ಯವು ಅದನ್ನು ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಬಿಹಾರ ಸರ್ಕಾರದ ನಡೆಸಲು ಉದ್ದೇಶಿಸಿದ್ದ ಜಾತಿ ಗಣತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಈ ಮೊದಲು ಸುಪ್ರೀಂಕೋರ್ಟ್ ತಿರಸ್ಕರಿಸಿತ್ತು, ಈ ಮೂಲಕ ಸಮೀಕ್ಷೆಗೆ ಇದ್ದ ತೊಂದರೆ ನಿವಾರಣೆಯಾಗಿತ್ತು.

ಅ.2ರಂದು ಬಿಹಾರ ಸರಕಾರ ದೇಶದಲ್ಲಿ ಮೊದಲ ಬಾರಿಗೆ ಜಾತಿಗಣತಿಯ ವರದಿಯನ್ನು ಬಿಡುಗಡೆಗೊಳಿಸಿದೆ. ಈ ಮೂಲಕ ದೇಶದಲ್ಲಿ ಜಾತಿ ಆಧಾರಿತ ಸಮೀಕ್ಷೆಯ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಬಿಹಾರ ಪಾತ್ರವಾಗಿದೆ.

ರಾಜ್ಯದಲ್ಲಿ 36%ದಷ್ಟು ಅತಿಹೆಚ್ಚು ಹಿಂದುಳಿದಿರುವ ಮತ್ತು 27% ಹಿಂದುಳಿದ ವರ್ಗದ ಜನರಿದ್ದಾರೆ. 19.7% ಪರಿಶಿಷ್ಟ ಜಾತಿಯ ಜನ ಮತ್ತು 1.7%  ಪರಿಶಿಷ್ಟ ಪಂಗಡಗಳ ಜನರಿದ್ದಾರೆ. ಸಾಮಾನ್ಯ ವರ್ಗದ ಜನಸಂಖ್ಯೆಯು  15.5% ದಷ್ಟಿದೆ. ರಾಜ್ಯದ ಒಟ್ಟು ಜನಸಂಖ್ಯೆ 13.1 ಕೋಟಿಗೂ ಹೆಚ್ಚು ಎಂದು ಜಾತಿಗಣತಿಯಲ್ಲಿ ಬಹಿರಂಗವಾಗಿದೆ.

ಉಪಮುಖ್ಯಮಂತ್ರಿ ತೇಜಸ್ವಿ ಯಾದವ್‌ ಅವರ ಯಾದವ್ ಸಮುದಾಯವು ಅತಿಹೆಚ್ಚು ಅಂದರೆ ಒಬಿಸಿ ವರ್ಗಗಳಲ್ಲಿ 14.27 ಶೇಕಡಾ ಜನಸಂಖ್ಯೆಯನ್ನು ಹೊಂದಿದೆ. ಬ್ರಾಹ್ಮಣರು ಶೇಕಡಾ 3.66 ರಷ್ಟಿದ್ದಾರೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಸಮುದಾಯಕ್ಕೆ ಸೇರಿದ ಕುರ್ಮಿಗಳು ಜನಸಂಖ್ಯೆ ಶೇಕಡಾ 2.87ರಷ್ಟಿದ್ದಾರೆ. ಮುಸಾಹರ್‌ಗಳು ಶೇಕಡಾ 3 ರಷ್ಟಿದ್ದಾರೆ. ಈ ಜಾತಿಗಣತಿಯ ವರದಿಯು ರಾಜ್ಯದಲ್ಲಿ ಭಾರೀ ರಾಜಕೀಯ ಚರ್ಚೆಗೆ ಕಾರಣವಾಗಲಿದೆ. ಒಬಿಸಿಗಳಿಗೆ ಕೋಟಾಗಳನ್ನು ಹೆಚ್ಚಿಸುವ ಬೇಡಿಕೆ ಕೂಡ ಹೆಚ್ಚಾಗಳಿದೆ. ಈಗ ರಾಜ್ಯದಲ್ಲಿ ಒಬಿಸಿಗಳಿಗೆ 27% ಮೀಸಲಾತಿ ಇದೆ. 2024ರ ಲೋಕಸಭಾ ಚುನಾವಣೆಗೆ ತಿಂಗಳುಗಳ ಮೊದಲು ಬಿಡುಗಡೆಯಾದ ಈ ಅಂಕಿಅಂಶಗಳ ಪ್ರಕಾರ ಒಬಿಸಿಗಳು ರಾಜ್ಯದಲ್ಲಿ ಶೇಕಡಾ 63.1ರಷ್ಟಿದ್ದಾರೆ.

ಇದನ್ನು ಓದಿ: ನೂತನ ಕ್ರಿಮಿನಲ್ ಕಾನೂನುಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...