Homeಕರೋನಾ ತಲ್ಲಣಬಕ್ರೀದ್ ಹಬ್ಬಕ್ಕೆ ಅಂಗಡಿ ತೆರೆಯಲು ಕೇರಳ ಸರ್ಕಾರದ ಅನುಮತಿ: ಸುಪ್ರೀಂಕೋರ್ಟ್ ತರಾಟೆ

ಬಕ್ರೀದ್ ಹಬ್ಬಕ್ಕೆ ಅಂಗಡಿ ತೆರೆಯಲು ಕೇರಳ ಸರ್ಕಾರದ ಅನುಮತಿ: ಸುಪ್ರೀಂಕೋರ್ಟ್ ತರಾಟೆ

- Advertisement -
- Advertisement -

ಕೊರೊನಾ ಪಾಸಿಟಿವಿಟಿ ದರ ಹೆಚ್ಚಿರುವ ಪ್ರದೇಶಗಳಲ್ಲಿಯೂ ಸಹ, ಬಕ್ರೀದ್ ಹಬ್ಬದ ಆಚರಣೆಗಾಗಿ ಕೊವೀಡ್ ನಿಯಮಗಳನ್ನು ಸಡಿಲಗೊಳಿಸಿರುವ ಕೇರಳ ಸರ್ಕಾರದ ನಿರ್ಧಾರವನ್ನು ಸುಪ್ರೀಂಕೋರ್ಟ್ ಮಂಗಳವಾರ ಪ್ರಶ್ನಿಸಿದೆ.

ನ್ಯಾಯಮೂರ್ತಿ ಆರ್.ಎಫ್.ನಾರಿಮನ್ ನೇತೃತ್ವದ ನ್ಯಾಯಪೀಠವು, “ಭಾರತದ ನಾಗರಿಕರ ಆರೋಗ್ಯ ಮತ್ತು ಜೀವಿಸುವ ಹಕ್ಕು ಅತ್ಯುನ್ನತವಾದದ್ದು. ಧಾರ್ಮಿಕ ಆಚರಣೆಗಳಾಗಿರಲಿ, ಬೇರೆ ಇತರ ಭಾವನಾತ್ಮಕ ವಿಚಾರಗಳೇ ಆಗಿರಲಿ ಅವು ಈ ಮೂಲಭೂತ ಮೂಲಭೂತ ಹಕ್ಕಿಗೆ ಅಧೀನವಾಗಿವೆ. ಯಾವುದೇ ರೀತಿಯ, ಧಾರ್ಮಿಕ ಅಥವಾ ಇತರ ಒತ್ತಡದ ಗುಂಪುಗಳು ಬೇರೆ ಯಾವುದೇ ರೀತಿಯಲ್ಲಿ ಜೀವಿಸುವ ಹಕ್ಕಿನಲ್ಲಿ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ” ಎಂದು ಹೇಳಿದೆ.

ಉತ್ತರ ಪ್ರದೇಶ ಸರ್ಕಾರ ಅನುಮತಿ ನೀಡಿದ್ದ ಕನ್ವರ್ ಯಾತ್ರೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿರುವ ಆದೇಶಗಳನ್ನು ಪಾಲಿಸುವಂತೆ ನ್ಯಾಯಾಲಯ ‌ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಇದನ್ನೂ ಓದಿ: ಹಳ್ಳಿಗಳ ಕನ್ನಡ ಹೆಸರು ಮಲಯಾಳೀಕರಣ: ವಿವಾದದ ಬಗ್ಗೆ ಕೇರಳ ಸಿಎಂ ಪ್ರತಿಕ್ರಿಯೆ ಹೀಗಿದೆ!

ಕನ್ವರ್ ಯಾತ್ರೆಯನ್ನು ಅನುಮತಿಸುವ ಯುಪಿ ನಿರ್ಧಾರದ ಕುರಿತು ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದ ಬಳಿಕ  ಕೊರೊನಾ ಮೂರನೇ ಅಲೆ ಆತಂಕದ ನಡುವೆ ಕನ್ವರ್ ಯಾತ್ರೆಗೆ ಅವಕಾಶ ನೀಡುವುದನ್ನು ಸಹ ಮರುಪರಿಶೀಲಿಸುವಂತೆ ನ್ಯಾಯಮೂರ್ತಿ ನಾರಿಮನ್ ಈ ಹಿಂದೆ ಉತ್ತರ ಪ್ರದೇಶ ರಾಜ್ಯಕ್ಕೆ ನಿರ್ದೇಶನ ನೀಡಿದ್ದರು.

ಬಕ್ರೀದ್ ಹಬ್ಬಕ್ಕಾಗಿ ಕೇರಳದಲ್ಲಿ ಭಾನುವಾರದಿಂದ ಮೂರು ದಿನಗಳವರೆಗೆ ಲಾಕ್ ಡೌನ್ ಸಡಿಲಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು.

ಸೋಮವಾರ, ರಾಜ್ಯ ಸರ್ಕಾರವು ನ್ಯಾಯಾಲಯದಲ್ಲಿ ತನ್ನ ಪ್ರತಿಕ್ರಿಯೆಯನ್ನು ಸಲ್ಲಿಸಿದ್ದು, ಕೋವಿಡ್ ನಿರ್ಬಂಧಗಳು ಜನರನ್ನು ಬಹಳಷ್ಟು ಸಂಕಷ್ಟಕ್ಕೆ ತಳ್ಳಿತ್ತು, ಬಕ್ರೀದ್ ಹಬ್ಬದ ಸಮಯದಲ್ಲಿ ಈ ವಸ್ತುಗಳು ಮಾರಾಟವಾಗಿ ಕೊಂಚ ಮಟ್ಟಿಗೆ ತಮ್ಮ ಸಂಕಷ್ಟ ನಿವಾರಣೆಯಾಗಬಹುದು ಎಂದು ಜನರು ಭಾವಿಸಿದ್ದಾರೆ ಎಂದು ತಿಳಿಸಿತ್ತು.

ನ್ಯಾಯಪೀಠವು ಕೇರಳ ಸರ್ಕಾರದ ಈ ನಿರ್ಧಾರವನ್ನು “ಆತಂಕಕಾರಿ” ಎಂದು ಹೇಳಿದೆ. ಅಗತ್ಯ ವಸ್ತುಗಳಲ್ಲದೇ, ಎಲ್ಲಾ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ, ಇದು ತೀವ್ರವಾಗಿ ಸೋಂಕು ಹರಡಲು ಕಾರಣವಾಗುತ್ತದೆ ಎಂದು ನ್ಯಾಯಮೂರ್ತಿ ನಾರಿಮನ್ ಹೇಳಿದ್ದಾರೆ.

ಸಾಧ್ಯವಾದಷ್ಟು, ಕನಿಷ್ಠ ಒಂದು ಡೋಸ್‌ ಲಸಿಕೆ ಪಡೆದವರು ಮಾತ್ರ ಅಂಗಡಿಗಳಿಗೆ ಭೇಟಿ ನೀಡಬೇಕು ಎಂದು ರಾಜ್ಯ ಸರ್ಕಾರ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿತ್ತು. ಆದರೂ ಅದರ ಪಾಲನೆ ಬಗ್ಗೆ ಯಾವುದೇ ವಿಶ್ವಾಸವಿಲ್ಲ ಎಂದು ನ್ಯಾಯಪೀಠ ಹೇಳಿದೆ.


ಇದನ್ನೂ ಓದಿ: ಕೇರಳ: ಮಹಿಳೆಯರ ಸುರಕ್ಷತೆಗಾಗಿ ಪಿಂಕ್ ಪ್ರೊಟೆಕ್ಷನ್ ಯೋಜನೆ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...