Homeಮುಖಪುಟಪೊಲೀಸ್ ಕಿರುಕುಳದ ಆರೋಪ ಮಾಡಿದ ಪತ್ರಕರ್ತರು: ಮಧ್ಯಂತರ ರಕ್ಷಣೆ ನೀಡಲು ಸುಪ್ರೀಂ ಕೋರ್ಟ್ ನಕಾರ

ಪೊಲೀಸ್ ಕಿರುಕುಳದ ಆರೋಪ ಮಾಡಿದ ಪತ್ರಕರ್ತರು: ಮಧ್ಯಂತರ ರಕ್ಷಣೆ ನೀಡಲು ಸುಪ್ರೀಂ ಕೋರ್ಟ್ ನಕಾರ

- Advertisement -
- Advertisement -

ಭಿಂಡ್ ಪೊಲೀಸರಿಂದ ಕಸ್ಟಡಿ ಹಿಂಸಾಚಾರ, ಜಾತಿ ಆಧಾರಿತ ನಿಂದನೆ ಮತ್ತು ಜೀವ ಬೆದರಿಕೆ ಆರೋಪ ಮಾಡಿರುವ ಮಧ್ಯಪ್ರದೇಶ ಮೂಲದ ಇಬ್ಬರು ಪತ್ರಕರ್ತರ ಪರವಾಗಿ ಯಾವುದೇ ಮಧ್ಯಂತರ ಆದೇಶ ಹೊರಡಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠವು, ಶಶಿಕಾಂತ್ ಜಾತವ್ ಮತ್ತು ಅಮರಕಾಂತ್ ಸಿಂಗ್ ಚೌಹಾಣ್ ಎಂಬ ಇಬ್ಬರು ಪತ್ರಕರ್ತರಿಗೆ ಸಂಬಂಧಿಸಿದ ಪ್ರಕರಣದ ನಿಖರ ಸ್ವರೂಪದ ಬಗ್ಗೆ ಅರಿವು ಮೂಡಿಸದ ಹೊರತು, ಬಂಧನದಿಂದ ರಕ್ಷಣೆ ನೀಡುವ ಮಧ್ಯಂತರ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ ಎಂದು ಹೇಳಿರುವುದಾಗಿ ವರದಿ ತಿಳಿಸಿದೆ.

ಅರ್ಜಿದಾರರು ಈಗಾಗಲೇ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ ಎಂಬುವುದನ್ನು ತಿಳಿಸಬೇಕಿತ್ತು ಎಂದು ನ್ಯಾಯಾಲಯ ಹೇಳಿದೆ. ಇದಕ್ಕೆ ಪ್ರತಿಕ್ರಿಯಿಸಿದ ಅರ್ಜಿದಾರರ ಪರ ವಕೀಲೆ ವಾರಿಷಾ ಫರಾಸತ್, ವರದಿಯ ಪ್ರಕಾರ, ಇದು ಮಧ್ಯಪ್ರದೇಶದ ಪ್ರಕರಣ ಆಗಿರುವುದರಿಂದ ದೆಹಲಿ ಹೈಕೋರ್ಟ್ ಈ ವಿಷಯವನ್ನು ಕೈಗೆತ್ತಿಕೊಳ್ಳಲು ಅಧಿಕಾರ ವ್ಯಾಪ್ತಿಯನ್ನು ಹೊಂದಿಲ್ಲ ಎಂದು ಹೇಳಿದ್ದಾರೆ.

ಅರ್ಜಿದಾರರಿಗೆ ಮಧ್ಯಪ್ರದೇಶ ಹೈಕೋರ್ಟ್‌ಗೆ ಹೋಗಲು ತಡೆಯಾಗಿರುವುದು ಏನು? ಎಂದು ನ್ಯಾಯಾಲಯ ಪ್ರಶ್ನಿಸಿದೆ ಮತ್ತು ಆರೋಪಗಳನ್ನು ಹೊರಿಸಲಾಗಿರುವ ಭಿಂಡ್ ಎಸ್‌ಪಿ ಅಜಿತ್ ಯಾದವ್ ಅವರನ್ನು ಅರ್ಜಿಯಲ್ಲಿ ಪಕ್ಷವಾಗಿ ಸೇರಿಸಲಾಗಿಲ್ಲ ಎಂದಿದೆ.

ನಂತರ ನ್ಯಾಯಾಲಯ ಮಧ್ಯ ಪ್ರದೇಶ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ, ಪ್ರಕರಣದ ಮುಂದಿನ ವಿಚಾರಣೆಯನ್ನು ಜೂನ್ 9ಕ್ಕೆ ನಿಗದಿ ಮಾಡಿದೆ.

ಸ್ವರಾಜ್ ಎಕ್ಸ್‌ಪ್ರೆಸ್‌ನ ಅಮರ್‌ಕಾಂತ್ ಸಿಂಗ್ ಚೌಹಾಣ್ ಮತ್ತು ದೈನಿಕ್ ಬೆಜೋರ್ ರತ್ನದ ಶಶಿಕಾಂತ್ ಜಾತವ್ ಅವರು ಮೇ 1ರಂದು ತಮ್ಮನ್ನು ಅಪಹರಿಸಿ, ಕಸ್ಟಡಿಯಲ್ಲಿ ಹಲ್ಲೆ ನಡೆಸಿ, ಭಿಂಡ್‌ನ ಪೊಲೀಸ್ ಠಾಣೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಅಸಿತ್ ಯಾದವ್ ಮತ್ತು ಅವರ ಸಹೋದ್ಯೋಗಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ನ್ಯಾಯಾಲಯದ ಮೊರೆ ಹೋಗಿದ್ದರು.

ತಮ್ಮ ವರದಿಗಳ ಮೂಲಕ ಭ್ರಷ್ಟಾಚಾರವನ್ನು ಬಹಿರಂಗಪಡಿಸಿದ್ದಕ್ಕಾಗಿ ತಮ್ಮನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಪತ್ರಕರ್ತರು ಆರೋಪಿಸಿದ್ದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ತಮ್ಮ ರಿಟ್ ಅರ್ಜಿಯಲ್ಲಿ, ಚೌಹಾಣ್ ಮತ್ತು ಜಾತವ್ ಅವರು ಮಧ್ಯಪ್ರದೇಶ ಪೊಲೀಸರು ತಮ್ಮ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ನಿರ್ದೇಶನ ನೀಡಲು ಸುಪ್ರೀಂ ಕೋರ್ಟ್‌ ಅನ್ನು ಕೋರಿದ್ದರು. ಆದರೆ, ನ್ಯಾಯಾಲಯ ರಕ್ಷಣೆ ಒದಗಿಸಲು ನಿರಾಕರಿಸಿದೆ.

ಆದಾಗ್ಯೂ, ಜೀವಕ್ಕೆ ಬೆದರಿಕೆ ಇದ್ದರೆ ಅರ್ಜಿದಾರರ ರಕ್ಷಣೆಗೆ ಬರುವುದಾಗಿ ನ್ಯಾಯಾಲಯ ಭರವಸೆ ನೀಡಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ಮೇ 19ರಂದು, ಪೊಲೀಸರಿಂದ ಕಿರುಕುಳ ಅನುಭವಿಸಿದ ನಂತರ ಇಬ್ಬರು ಪತ್ರಕರ್ತರು ದೆಹಲಿಗೆ ಪಲಾಯನ ಮಾಡಿದ್ದರು. ನಂತರ ಅವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ಭಾರತೀಯ ಪತ್ರಿಕಾ ಮಂಡಳಿಗೆ ಸಹ ದೂರು ನೀಡಿದ್ದರು ಎಂದು ವರದಿಗಳು ಹೇಳಿವೆ.

ಪೊಲೀಸ್ ವರಿಷ್ಠಾಧಿಕಾರಿಯ ಕೊಠಡಿಯಲ್ಲಿ 5ಕ್ಕೂ ಹೆಚ್ಚು ಪತ್ರಕರ್ತರು ಇದ್ದರು. ಅವರು ನಾವು ತಲುಪುವ ಮೊದಲು ದೈಹಿಕ ಕಿರುಕುಳಕ್ಕೆ ಒಳಗಾಗಿದ್ದರು ಎಂದು ಪತ್ರಕರ್ತರು ಆರೋಪಿಸಿದ್ದಾರೆ.

ಸ್ಥಳೀಯ ಪೊಲೀಸರೊಂದಿಗೆ ಸೇರಿ ಚಂಬಲ್ ನದಿಯಲ್ಲಿ ನಡೆಸುತ್ತಿರುವ ಮರಳು ಮಾಫಿಯಾ ವರದಿಗಳು ಪ್ರಕಟಿಸಿದ ಬಗ್ಗೆ ಎಸ್‌ಪಿ ಅಸಿತ್ ಯಾದವ್ ಅವರಿಗೆ ಅಸಮಾಧಾನ ಇತ್ತು ಎಂದು ಚೌಹಾಣ್ ಮತ್ತು ಗೋಯಲ್ ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಹಲ್ಲೆಗೆ ಸಂಬಂಧಿಸಿದ ಎಲ್ಲಾ ಆರೋಪಗಳನ್ನು ಕೈಬಿಡುವಂತೆ ಯಾದವ್ ಮತ್ತು ಇತರ ಪೊಲೀಸ್ ಅಧಿಕಾರಿಗಳು ತಮ್ಮ ಮೇಲೆ ಒತ್ತಡ ಹೇರಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಯಾದವ್ ಎಲ್ಲಾ ಆರೋಪಗಳನ್ನು ಸುಳ್ಳು ಎಂದು ತಳ್ಳಿಹಾಕಿದ್ದು, “ಅವರು ಪತ್ರಕರ್ತರಲ್ಲ, ಅವರು ಬ್ಲ್ಯಾಕ್‌ಮೇಲರ್‌ಗಳು” ಎಂದು ಮೇ ತಿಂಗಳಲ್ಲಿ ನ್ಯೂಸ್‌ಲಾಂಡ್ರಿಗೆ ತಿಳಿಸಿದ್ದರು ಎನ್ನಲಾಗಿದೆ.

ಮೇ 28ರಂದು, ದೆಹಲಿ ಹೈಕೋರ್ಟ್ ಚೌಹಾಣ್ ಅವರಿಗೆ ಎರಡು ತಿಂಗಳ ಕಾಲ ರಕ್ಷಣೆ ನೀಡುವಂತೆ ದೆಹಲಿ ಪೊಲೀಸರಿಗೆ ಆದೇಶಿಸಿತ್ತು. ಈ ರಕ್ಷಣೆ ಇನ್ನೂ ಜಾರಿಯಲ್ಲಿದೆ ಎಂದು ಲೈವ್ ಲಾ ವರದಿ ಮಾಡಿದೆ.

“ಈ ಮಧ್ಯೆ, ನ್ಯಾಯವ್ಯಾಪ್ತಿಯ [ಮಧ್ಯಪ್ರದೇಶ] ಹೈಕೋರ್ಟ್ ಅನ್ನು ಸಂಪರ್ಕಿಸಿ ಮತ್ತು ಅಲ್ಲಿ ನೀವು ಪರಿಹಾರ ಪಡೆಯಿರಿ” ಎಂದು ನ್ಯಾಯಾಲಯವು ಚೌಹಾಣ್ ಅವರಿಗೆ ಮೌಖಿಕವಾಗಿ ನಿರ್ದೇಶಿಸಿತ್ತು.

ಜಾತವ್ ಕೂಡ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಈ ವಿಷಯವನ್ನು ಇನ್ನೂ ಕೈಗೆತ್ತಿಕೊಂಡಿಲ್ಲ. ಪ್ರಕರಣವನ್ನು ಜುಲೈ 14 ರಂದು ವಿಚಾರಣೆ ನಡೆಸಲು ಮರು ಅಧಿಸೂಚನೆ ಹೊರಡಿಸಲಾಗಿದೆ.

ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಅವಕಾಶ ಮಾಡಿಕೊಟ್ಟ ಬಿಜೆಪಿ ಮಾಜಿ ಪದಾಧಿಕಾರಿ, ಪ್ರಿಯಕರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...