Homeಮುಖಪುಟ'ಮತಗಳ್ಳತನ' ಕುರಿತ ರಾಹುಲ್ ಗಾಂಧಿಯ ಆರೋಪಗಳ ಎಸ್‌ಐಟಿ ತನಿಖೆ ಕೋರಿದ್ದ ಅರ್ಜಿ ವಜಾ

‘ಮತಗಳ್ಳತನ’ ಕುರಿತ ರಾಹುಲ್ ಗಾಂಧಿಯ ಆರೋಪಗಳ ಎಸ್‌ಐಟಿ ತನಿಖೆ ಕೋರಿದ್ದ ಅರ್ಜಿ ವಜಾ

- Advertisement -
- Advertisement -

2024ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದ ‘ಮತಗಳ್ಳತನ’ ನಡೆದಿದೆ ಎಂಬ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆರೋಪಗಳ ಕುರಿತು ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ತನಿಖೆ ಮಾಡಿಸುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಅ.13) ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠವು ಅರ್ಜಿದಾರರಿಗೆ ಈ ವಿಷಯವನ್ನು ಭಾರತೀಯ ಚುನಾವಣಾ ಆಯೋಗದ ಮುಂದೆ ಪ್ರಸ್ತಾಪಿಸುವಂತೆ ಹೇಳಿತು. ಅರ್ಜಿದಾರರ ಪರ ವಕೀಲರು, ಭಾರತೀಯ ಚುನಾವಣಾ ಆಯೋಗಕ್ಕೆ ಈಗಾಗಲೇ ಅರ್ಜಿ ಸಲ್ಲಿಸಲಾಗಿದೆ. ಆದರೆ, ಅದು ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತಿಳಿಸಿದರು ಎಂದು ಲೈವ್ ಲಾ ವರದಿ ಮಾಡಿದೆ.

ಆದಾಗ್ಯೂ, ಅರ್ಜಿ ವಿಚಾರಣೆ ನಡೆಸಲು ನಿರಾಕರಿಸಿದ ಪೀಠ, ಅರ್ಜಿದಾರರು ಈ ವಿಷಯವನ್ನು ಚುನಾವಣಾ ಆಯೋಗದ ಮುಂದೆ ಮುಂದುವರಿಸಬಹುದು ಎಂದು ಹೇಳಿತು ಮತ್ತು ಅದನ್ನು ವಿಲೇವಾರಿ ಮಾಡಿತು. ಈ ವೇಳೆ, ಅರ್ಜಿದಾರರ ಪರ ವಕೀಲರು, ಈ ವಿಷಯವನ್ನು ನಿರ್ಧರಿಸಲು ಚುನಾವಣಾ ಆಯೋಗಕ್ಕೆ ಸಮಯ ಮಿತಿಯನ್ನು ನಿಗದಿಪಡಿಸುವಂತೆ ಕೋರಿದರು. ಆದರೆ, ಪೀಠವು ಅಂತಹ ಯಾವುದೇ ನಿರ್ದೇಶನವನ್ನು ನೀಡಲು ನಿರಾಕರಿಸಿತು ಎಂದು ಲೈವ್ ಲಾ ವರದಿ ವಿವರಿಸಿದೆ.

ರೋಹಿತ್ ಪಾಂಡೆ ಎಂಬವರು ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ, ನ್ಯಾಯಾಲಯದ ನಿರ್ದೇಶನಗಳನ್ನು ಪಾಲಿಸುವವರೆಗೆ ಮತ್ತು ಮತದಾರರ ಪಟ್ಟಿಗಳ ಸ್ವತಂತ್ರ ಪರಿಶೀಲನೆ ಪೂರ್ಣಗೊಳ್ಳುವವರೆಗೆ ಯಾವುದೇ ರೀತಿಯ ಪರಿಷ್ಕರಣೆ ಅಥವಾ ಅಂತಿಮಗೊಳಿಸುವಿಕೆ ಮಾಡಬಾರದು ಎಂದು ನಿರ್ದೇಶಿಸಲು ಕೋರಲಾಗಿತ್ತು.

ಮತದಾರರ ಪಟ್ಟಿಯ ತಯಾರಿಕೆ, ನಿರ್ವಹಣೆ ಮತ್ತು ಪ್ರಕಟಣೆಯಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ಸಮಗ್ರತೆಯನ್ನು ಖಚಿತಪಡಿಸಿಕೊಳ್ಳಲು ಭಾರತೀಯ ಚುನಾವಣಾ ಆಯೋಗವು ಬದ್ಧ ಮಾರ್ಗಸೂಚಿಗಳನ್ನು ರೂಪಿಸಿ ಹೊರಡಿಸಬೇಕೆಂದು ಅರ್ಜಿದಾರರು ಕೋರಿದ್ದರು. ಇದರಲ್ಲಿ ನಕಲಿ ಅಥವಾ ಕಾಲ್ಪನಿಕ ನಮೂದುಗಳನ್ನು ಪತ್ತೆಹಚ್ಚುವ ಮತ್ತು ತಡೆಗಟ್ಟುವ ಕಾರ್ಯವಿಧಾನಗಳು ಸೇರಿವೆ.

ಅರ್ಥಪೂರ್ಣ ಪರಿಶೀಲನೆ ಮತ್ತು ಸಾರ್ವಜನಿಕ ಪರಿಶೀಲನೆಗೆ ಅನುವು ಮಾಡಿಕೊಡಲು ಮತದಾರರ ಪಟ್ಟಿಯನ್ನು ಸುಲಭವಾಗಿ ಪ್ರವೇಶಿಸಬಹುದಾದ, ಮೆಶಿನ್ ರೇಡೆಬಲ್ ಮತ್ತು ಆಪ್ಟಿಕಲ್ ಕ್ಯಾರೆಕ್ಟರ್ ರೆಕಗ್ನಿಶನ್ (ಒಸಿಆರ್) ಫಾರ್ಮೆಟ್‌ನಲ್ಲಿ ಪ್ರಕಟಿಸಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಕೋರಲಾಗಿತ್ತು.

ಮತಗಳ್ಳತನದ ಬಗ್ಗೆ ಜುಲೈ 24ರಂದು ಸಂಸತ್ ಮುಂದೆ ಮೊದಲ ಹೇಳಿಕೆ ಕೊಟ್ಟಿದ್ದ ರಾಹುಲ್ ಗಾಂಧಿ, ಆಗಸ್ಟ್ 7ರಂದು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ತನ್ನ ಆರೋಪದ ಕುರಿತು ದಾಖಲೆ ಬಿಡುಗಡೆ ಮಾಡಿದ್ದರು.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 2024ರ ಲೋಕಸಭೆ ಚುನಾವಣೆಯ ವೇಳೆ ಬರೋಬ್ಬರಿ 1 ಲಕ್ಷಕ್ಕೂ (1,00, 250) ಹೆಚ್ಚು ಮತಗಳ್ಳತನ ನಡೆದಿದೆ ಎಂದಿದ್ದರು.

“ಆದಾಯ ನಿಂತು ಹೋಗಿದೆ”: ಕೇಂದ್ರ ಸಚಿವ ಸ್ಥಾನ ತೊರೆದು ನಟನೆಯಲ್ಲಿ ಮುಂದುವರಿಯುವ ಇಂಗಿತ ವ್ಯಕ್ತಪಡಿಸಿದ ಸುರೇಶ್ ಗೋಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...