Homeಮುಖಪುಟಮೋದಿ ಕುರಿತ ಟೀಕೆ: ಪವನ್ ಖೇರಾ ವಿರುದ್ಧದ ಕ್ರಿಮಿನಲ್ ಮೊಕದ್ದಮೆ ರದ್ಧತಿಗೆ ಸುಪ್ರೀಂ ನಕಾರ

ಮೋದಿ ಕುರಿತ ಟೀಕೆ: ಪವನ್ ಖೇರಾ ವಿರುದ್ಧದ ಕ್ರಿಮಿನಲ್ ಮೊಕದ್ದಮೆ ರದ್ಧತಿಗೆ ಸುಪ್ರೀಂ ನಕಾರ

- Advertisement -
- Advertisement -

ಪ್ರಧಾನಿ ಮೋದಿ ಬಗ್ಗೆ ಮಾತನಾಡುವಾಗ  ‘ನರೇಂದ್ರ ಗೌತಮ್ ದಾಸ್ ಮೋದಿ’ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ವಕ್ತಾರ ಪವನ್ ಖೇರಾ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಸಂದೀಪ್ ಮೆಹ್ತಾ ಅವರು ಖೇರಾ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಲು ನಿರಾಕರಿಸಿದ ಅಲಹಾಬಾದ್ ಉಚ್ಚ ನ್ಯಾಯಾಲಯದ ಆದೇಶದ ವಿರುದ್ಧ  ವಿಚಾರಣೆ ನಡೆಸುತ್ತಿದ್ದು, ಈ ಕುರಿತ ಮನವಿಯನ್ನು ತಿರಸ್ಕರಿಸಿದೆ.

ಫೆಬ್ರವರಿ 17, 2023ರಂದು, ಅದಾನಿ-ಹಿಂಡೆನ್‌ಬರ್ಗ್ ಸಂಬಂಧದ ಕುರಿತು ಪತ್ರಿಕಾಗೋಷ್ಠಿಯಲ್ಲಿ ಖೇರಾ ಮೋದಿಯವರ ಹೆಸರನ್ನು ಉಲ್ಲೇಖಿಸಿದ್ದರು . ನರಸಿಂಹರಾವ್ ಅವರು ಜಂಟಿ ಸಂಸದೀಯ ಸಮಿತಿ ರಚಿಸಬಹುದಾದರೆ, ಅಟಲ್ ಬಿಹಾರಿ ವಾಜಪೇಯಿ ಅವರು ಜಂಟಿ ಸಂಸದೀಯ ಸಮಿತಿ ರಚಿಸಬಹುದಾದರೆ, ನರೇಂದ್ರ ಗೌತಮ್ ದಾಸ್… ಕ್ಷಮಿಸಿ ದಾಮೋದರದಾಸ್… ಮೋದಿಗೆ ಯಾವ ಸಮಸ್ಯೆ ಇದೆ?  ಎಂದು ಕೇಳಿದ್ದರು.

ಪ್ರಧಾನಿಯವರ ತಂದೆಯ ಹೆಸರನ್ನು ತಪ್ಪಾಗಿ ಹೇಳಿ ಅವಹೇಳನ ಮಾಡಲಾಗಿದೆ ಎಂಬ ಆರೋಪದ ಮೇಲೆ ಉತ್ತರಪ್ರದೇಶ, ಅಸ್ಸಾಂನಲ್ಲಿ ಪವನ್ ಖೇರಾ ವಿರುದ್ಧ ಪ್ರಕರಣ ದಾಖಲಾಗಿತ್ತು. ಆ ಬಳಿಕ ಅಸ್ಸಾಂ ಪೊಲೀಸರು ಅವರನ್ನು ಬಂಧಿಸಿದ್ದರು.

ಪವನ್ ಖೇರಾ ಪರ ವಕೀಲರು, ಇದು ಬಾಯ್ತಪ್ಪಿನಿಂದ ಉಚ್ಚರಿಸಲಾಗಿದೆ. ಅವರು ಕ್ಷಮೆಯಾಚಿಸಿದ್ದರು ಎಂದು ಕೋರ್ಟ್‌ ಗಮನಕ್ಕೆ ತಂದಿದ್ದರು. ಫೆ.23ರಂದು ಅವರನ್ನು ಬಂಧಿಸಿದ ನಂತರ ಸುಪ್ರೀಂಕೋರ್ಟ್ ಅದೇ ದಿನ ಖೇರಾಗೆ ತಾತ್ಕಾಲಿಕವಾಗಿ ಬಂಧನದಿಂದ ರಕ್ಷಣೆ ನೀಡಿತ್ತು. ಮುಂದಿನ ವಿಚಾರಣೆಯ ದಿನಾಂಕದವರೆಗೆ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ಸೂಚಿಸಿತ್ತು. ಬಳಿಕ ಅವರ ಮಧ್ಯಂತರ ಜಾಮೀನು ಅವಧಿಯನ್ನು ಮಾ.17ರವರೆಗೆ ವಿಸ್ತರಿಸಲಾಗಿತ್ತು.

ಲೈವ್‌ ಲಾ ಪ್ರಕಾರ, ಖೇರಾ ವಿರುದ್ಧ ಸೆಕ್ಷನ್ 153A (ಕೋಮು ದ್ವೇಷವನ್ನು ಉತ್ತೇಜಿಸುವುದು), 153B,  500 (ಮಾನನಷ್ಟ), 504 (ಶಾಂತಿ ಭಂಗಕ್ಕೆ ಪ್ರಚೋದಿಸುವ ಉದ್ದೇಶದಿಂದ ಅವಮಾನ) ಮತ್ತು ಭಾರತೀಯ ದಂಡ ಸಂಹಿತೆಯ ಇತರ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಅಕ್ಟೋಬರ್‌ನಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಪರವಾಗಿ ಹಾಜರಾದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಖೇರಾ ಬಾಯ್ತಪ್ಪಿನಿಂದ ಕಾಮೆಂಟ್ ಮಾಡಿದ್ದಾರೆ ಮತ್ತು ಅವರು ತ್ವರಿತ ಕ್ಷಮೆಯಾಚನೆಯನ್ನು ಮಾಡಿದ್ದಾರೆ. ಖೇರಾ ವಿರುದ್ಧ ಮಾನಹಾನಿ, ವಿವಿಧ ಗುಂಪುಗಳ ನಡುವೆ ದ್ವೇಷ ಮತ್ತು ದ್ವೇಷವನ್ನು ಉತ್ತೇಜಿಸುವ, ಸಾರ್ವಜನಿಕ ಶಾಂತಿಯನ್ನು ಕದಡುವ ಆರೋಪಗಳನ್ನು ಹೊರಿಸಿ ಪ್ರಕರಣ ದಾಖಲಿಸಿರುವುದು ಸರಿಯಲ್ಲ ಎಂದು ಹೇಳಿದ್ದರು.

ಇದಕ್ಕೂ ಮೊದಲು ಖೇರಾ ಅವರು ತಮ್ಮ ವಿರುದ್ಧ ಸಲ್ಲಿಸಲಾದ ಸಮನ್ಸ್ ಆದೇಶ ಮತ್ತು ಆರೋಪಪಟ್ಟಿಯನ್ನು ರದ್ದುಗೊಳಿಸುವಂತೆ ಕೋರಿ ಅಲಹಾಬಾದ್ ಹೈಕೋರ್ಟ್‌ ಮೊರೆ ಹೋಗಿದ್ದರು. ಅವರು ತಮ್ಮ ಮಾತಿಗೆ ಬೇಷರತ್ ಕ್ಷಮೆಯಾಚಿಸಿರುವುದಾಗಿಯೂ ಹೇಳಿದ್ದರು. ಆದರೆ ಹೈಕೋರ್ಟ್‌ ಪ್ರಕರಣದ ರದ್ಧತಿಗೆ ನಿರಾಕರಿಸಿತ್ತು.

ಇದನ್ನು ಓದಿ: ಕಚ್ಚಾ ತೈಲ ಬೆಲೆಯಲ್ಲಿ ಇಳಿಕೆಯಾದರೂ, ಪೆಟ್ರೋಲ್‌ ಬೆಲೆ ಕಡಿತಗೊಳಿಸಿಲ್ಲ: ಕೇಂದ್ರದ ವಿರುದ್ಧ ಖರ್ಗೆ ವಾಗ್ಧಾಳಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...