Homeಮುಖಪುಟಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ವಿವಾದ: ಅಲಹಾಬಾದ್ ಹೈಕೋರ್ಟ್‌ ಆದೇಶಕ್ಕೆ ತಡೆಗೆ ಸುಪ್ರೀಂ ನಕಾರ

ಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ವಿವಾದ: ಅಲಹಾಬಾದ್ ಹೈಕೋರ್ಟ್‌ ಆದೇಶಕ್ಕೆ ತಡೆಗೆ ಸುಪ್ರೀಂ ನಕಾರ

- Advertisement -
- Advertisement -

ಮಥುರಾ ನ್ಯಾಯಾಲಯದಲ್ಲಿ ಬಾಕಿ ಇರುವ ಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ವಿವಾದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಎಲ್ಲಾ ವಿಷಯಗಳನ್ನು ತನಗೆ ವರ್ಗಾಯಿಸುವಂತೆ ಸೂಚಿಸಿದ ಅಲಹಾಬಾದ್ ಹೈಕೋರ್ಟ್‌ನ ಆದೇಶಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ ಶುಕ್ರವಾರ ನಿರಾಕರಿಸಿದೆ.

ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸುಧಾಂಶು ಧುಲಿಯಾ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರನ್ನೊಳಗೊಂಡ ಪೀಠ, ಎರಡೂ ಕಡೆಯ ವಾದವನ್ನು ಆಲಿಸದೆ ಹೈಕೋರ್ಟ್ ಈ ಆದೇಶದಲ್ಲಿ ಹಸ್ತಕ್ಷೇಪ ಮಾಡುವುದು ನ್ಯಾಯಸಮ್ಮತವಲ್ಲ ಎಂದು ಹೇಳಿದೆ. ಈ ವಿಷಯದಲ್ಲಿ ಹೈಕೋರ್ಟ್‌ನಲ್ಲಿ 18 ಅರ್ಜಿಗಳು ಬಾಕಿ ಉಳಿದಿವೆ ಎಂದು ಸುಪ್ರೀಂಕೋರ್ಟ್ ಗಮನಿಸಿದೆ.

ಮುಸ್ಲಿಂ ಪರ ವಕೀಲ ಫುಜೈಲ್ ಅಹ್ಮದ್ ಅಯೂಬ್ಬಿ, ಹಿರಿಯ ವಕೀಲ ಹುಝೆಫಾ ಅಹ್ಮದಿ ಅವರು ಪ್ರಕರಣದ ವರ್ಗಾವಣೆಗೆ ವಿರೋಧಿಸಿದ್ದಾರೆ. ವರ್ಗಾವಣೆಗೆ ಯಾವುದೇ ಕಾರಣವಿಲ್ಲ. 1968ರಲ್ಲಿ ರಾಜಿ ಮಾಡಿಕೊಂಡ 49 ವರ್ಷಗಳ ನಂತರ ಫಿರ್ಯಾದುದಾರರು ಮೊಕದ್ದಮೆಯನ್ನು ಸಲ್ಲಿಸಿದ್ದಾರೆ ಎಂದು ಹೇಳಿದ್ದರು.

ಮುಸ್ಲಿಂ ಪರ ಮತ್ತೊಬ್ಬ ವಕೀಲರು, ಹೈಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆಗೆ ತಡೆ ನೀಡುವಂತೆ ಪೀಠವನ್ನು ಕೋರಿದ್ದಾರೆ. ಎರಡೂ ಕಡೆಯ ವಾದವನ್ನು ಆಲಿಸದೆ ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂದು ಪೀಠ ಹೇಳಿದೆ.

ಶಾಹಿ ಮಸೀದಿ ಈದ್ಗಾ ಮ್ಯಾನೇಜ್‌ಮೆಂಟ್ ಟ್ರಸ್ಟ್ ಕಮಿಟಿಯನ್ನು ಪ್ರತಿನಿಧಿಸುವ ವಕೀಲರು, ಮಥುರಾದಿಂದ ಅಲಹಾಬಾದ್ ಹೈಕೋರ್ಟ್‌ 600 ಕಿಲೋಮೀಟರ್‌ಗಿಂತ ಹೆಚ್ಚು ದೂರವಿರುವುದರಿಂದ  ಮಥುರಾಗೆ ಪ್ರಯಾಣಿಸಲು ಕಕ್ಷಿದಾರರಿಗೆ ಆರ್ಥಿಕ ಸಂಪನ್ಮೂಲವಿಲ್ಲ ಮತ್ತು ದಾವೆಗಳನ್ನು ದೆಹಲಿಗೆ ವರ್ಗಾಯಿಸಲು ನ್ಯಾಯಾಲಯವನ್ನು ಕೋರಿದರು.

ದೆಹಲಿಯ ನ್ಯಾಯಾಲಯಕ್ಕೆ ಈಗಾಗಲೇ ಹೆಚ್ಚಿನ ಹೊರೆ ಇರುವುದರಿಂದ ಈ ವಾದವನ್ನು ಒಪ್ಪಿಕೊಳ್ಳುವುದು ತುಂಬಾ ಕಷ್ಟ ಎಂದು ಪೀಠವು ಉತ್ತರಿಸಿದೆ.

ನೀವು ದೆಹಲಿಗೆ ಬರಬಹುದು ಆದರೆ ಅಲಹಾಬಾದ್‌ಗೆ ಹೋಗಲಿಕ್ಕೆ ಆಗಲ್ಲ ಎಂಬುದು ನಮಗೆ ಸ್ವೀಕಾರಾರ್ಹವಲ್ಲ ಎಂದು ಪೀಠವು ಹೇಳಿತು. ಈ ವಿಷಯವನ್ನು ಆಲಿಸಬೇಕು ಮತ್ತು ಹೈಕೋರ್ಟ್ ನೀಡಿದ ಆದೇಶವನ್ನು ಪರೀಕ್ಷಿಸಬೇಕು ಎಂದು ಹೇಳಿದ ಪೀಠವು ಈ ಕುರಿತು ಸಂಕ್ಷಿಪ್ತ ಸಾರಾಂಶವನ್ನು ಸಲ್ಲಿಸಲು ಎರಡೂ ಕಡೆಯವರನ್ನು ಕೇಳಿದೆ ಮತ್ತು ಜ.9ರಂದು ವಿಚಾರಣೆಯನ್ನು ನಿಗದಿಪಡಿಸಿದೆ.

ಮಥುರಾ ನ್ಯಾಯಾಲಯದ ಮುಂದೆ ಬಾಕಿ ಇರುವ ಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ವಿವಾದಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳನ್ನು ವರ್ಗಾಯಿಸಿಕೊಂಡು ಆದೇಶಿಸಿದ ಅಲಹಬಾದ್‌ ಹೈಕೋರ್ಟ್‌ನ ಮೇ 26ರ ಆದೇಶವನ್ನು ಮ್ಯಾನೇಜ್‌ಮೆಂಟ್ ಟ್ರಸ್ಟ್ ಶಾಹಿ ಮಸೀದಿ ಈದ್ಗಾ ಸಮಿತಿಯು ಪ್ರಶ್ನಿಸಿದೆ.

ಶ್ರೀಕೃಷ್ಣ ಜನ್ಮಭೂಮಿ ಟ್ರಸ್ಟ್‌ನ 13.37 ಎಕರೆ ಜಾಗದಲ್ಲಿ ಶಾಹಿ ಮಸೀದಿ ಈದ್ಗಾವನ್ನು ನಿರ್ಮಿಸಲಾಗಿದೆ ಎಂದು ಹಿಂದೂ ಕಡೆಯವರು ಹೇಳಿಕೊಂಡಿದ್ದರು. ಈದ್ಗಾವನ್ನು ಸ್ಥಳಾಂತರಿಸುವಂತೆ ಕೋರ್ಟ್‌ಗೆ ಆಗ್ರಹಿಸಿದ್ದರು.

ಇದನ್ನು ಓದಿ: ಉತ್ತರಪ್ರದೇಶ: ಮುಸ್ಲಿಂ ಬಾಲಕನಿಗೆ ಕಪಾಳಮೋಕ್ಷ ಪ್ರಕರಣ; ಸರಕಾರಕ್ಕೆ ಸುಪ್ರೀಂಕೋರ್ಟ್ ತರಾಟೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...