Homeಮುಖಪುಟಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ವಿವಾದ: ಅಲಹಾಬಾದ್ ಹೈಕೋರ್ಟ್‌ ಆದೇಶಕ್ಕೆ ತಡೆಗೆ ಸುಪ್ರೀಂ ನಕಾರ

ಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ವಿವಾದ: ಅಲಹಾಬಾದ್ ಹೈಕೋರ್ಟ್‌ ಆದೇಶಕ್ಕೆ ತಡೆಗೆ ಸುಪ್ರೀಂ ನಕಾರ

- Advertisement -
- Advertisement -

ಮಥುರಾ ನ್ಯಾಯಾಲಯದಲ್ಲಿ ಬಾಕಿ ಇರುವ ಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ವಿವಾದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಎಲ್ಲಾ ವಿಷಯಗಳನ್ನು ತನಗೆ ವರ್ಗಾಯಿಸುವಂತೆ ಸೂಚಿಸಿದ ಅಲಹಾಬಾದ್ ಹೈಕೋರ್ಟ್‌ನ ಆದೇಶಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ ಶುಕ್ರವಾರ ನಿರಾಕರಿಸಿದೆ.

ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸುಧಾಂಶು ಧುಲಿಯಾ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರನ್ನೊಳಗೊಂಡ ಪೀಠ, ಎರಡೂ ಕಡೆಯ ವಾದವನ್ನು ಆಲಿಸದೆ ಹೈಕೋರ್ಟ್ ಈ ಆದೇಶದಲ್ಲಿ ಹಸ್ತಕ್ಷೇಪ ಮಾಡುವುದು ನ್ಯಾಯಸಮ್ಮತವಲ್ಲ ಎಂದು ಹೇಳಿದೆ. ಈ ವಿಷಯದಲ್ಲಿ ಹೈಕೋರ್ಟ್‌ನಲ್ಲಿ 18 ಅರ್ಜಿಗಳು ಬಾಕಿ ಉಳಿದಿವೆ ಎಂದು ಸುಪ್ರೀಂಕೋರ್ಟ್ ಗಮನಿಸಿದೆ.

ಮುಸ್ಲಿಂ ಪರ ವಕೀಲ ಫುಜೈಲ್ ಅಹ್ಮದ್ ಅಯೂಬ್ಬಿ, ಹಿರಿಯ ವಕೀಲ ಹುಝೆಫಾ ಅಹ್ಮದಿ ಅವರು ಪ್ರಕರಣದ ವರ್ಗಾವಣೆಗೆ ವಿರೋಧಿಸಿದ್ದಾರೆ. ವರ್ಗಾವಣೆಗೆ ಯಾವುದೇ ಕಾರಣವಿಲ್ಲ. 1968ರಲ್ಲಿ ರಾಜಿ ಮಾಡಿಕೊಂಡ 49 ವರ್ಷಗಳ ನಂತರ ಫಿರ್ಯಾದುದಾರರು ಮೊಕದ್ದಮೆಯನ್ನು ಸಲ್ಲಿಸಿದ್ದಾರೆ ಎಂದು ಹೇಳಿದ್ದರು.

ಮುಸ್ಲಿಂ ಪರ ಮತ್ತೊಬ್ಬ ವಕೀಲರು, ಹೈಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆಗೆ ತಡೆ ನೀಡುವಂತೆ ಪೀಠವನ್ನು ಕೋರಿದ್ದಾರೆ. ಎರಡೂ ಕಡೆಯ ವಾದವನ್ನು ಆಲಿಸದೆ ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂದು ಪೀಠ ಹೇಳಿದೆ.

ಶಾಹಿ ಮಸೀದಿ ಈದ್ಗಾ ಮ್ಯಾನೇಜ್‌ಮೆಂಟ್ ಟ್ರಸ್ಟ್ ಕಮಿಟಿಯನ್ನು ಪ್ರತಿನಿಧಿಸುವ ವಕೀಲರು, ಮಥುರಾದಿಂದ ಅಲಹಾಬಾದ್ ಹೈಕೋರ್ಟ್‌ 600 ಕಿಲೋಮೀಟರ್‌ಗಿಂತ ಹೆಚ್ಚು ದೂರವಿರುವುದರಿಂದ  ಮಥುರಾಗೆ ಪ್ರಯಾಣಿಸಲು ಕಕ್ಷಿದಾರರಿಗೆ ಆರ್ಥಿಕ ಸಂಪನ್ಮೂಲವಿಲ್ಲ ಮತ್ತು ದಾವೆಗಳನ್ನು ದೆಹಲಿಗೆ ವರ್ಗಾಯಿಸಲು ನ್ಯಾಯಾಲಯವನ್ನು ಕೋರಿದರು.

ದೆಹಲಿಯ ನ್ಯಾಯಾಲಯಕ್ಕೆ ಈಗಾಗಲೇ ಹೆಚ್ಚಿನ ಹೊರೆ ಇರುವುದರಿಂದ ಈ ವಾದವನ್ನು ಒಪ್ಪಿಕೊಳ್ಳುವುದು ತುಂಬಾ ಕಷ್ಟ ಎಂದು ಪೀಠವು ಉತ್ತರಿಸಿದೆ.

ನೀವು ದೆಹಲಿಗೆ ಬರಬಹುದು ಆದರೆ ಅಲಹಾಬಾದ್‌ಗೆ ಹೋಗಲಿಕ್ಕೆ ಆಗಲ್ಲ ಎಂಬುದು ನಮಗೆ ಸ್ವೀಕಾರಾರ್ಹವಲ್ಲ ಎಂದು ಪೀಠವು ಹೇಳಿತು. ಈ ವಿಷಯವನ್ನು ಆಲಿಸಬೇಕು ಮತ್ತು ಹೈಕೋರ್ಟ್ ನೀಡಿದ ಆದೇಶವನ್ನು ಪರೀಕ್ಷಿಸಬೇಕು ಎಂದು ಹೇಳಿದ ಪೀಠವು ಈ ಕುರಿತು ಸಂಕ್ಷಿಪ್ತ ಸಾರಾಂಶವನ್ನು ಸಲ್ಲಿಸಲು ಎರಡೂ ಕಡೆಯವರನ್ನು ಕೇಳಿದೆ ಮತ್ತು ಜ.9ರಂದು ವಿಚಾರಣೆಯನ್ನು ನಿಗದಿಪಡಿಸಿದೆ.

ಮಥುರಾ ನ್ಯಾಯಾಲಯದ ಮುಂದೆ ಬಾಕಿ ಇರುವ ಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ವಿವಾದಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳನ್ನು ವರ್ಗಾಯಿಸಿಕೊಂಡು ಆದೇಶಿಸಿದ ಅಲಹಬಾದ್‌ ಹೈಕೋರ್ಟ್‌ನ ಮೇ 26ರ ಆದೇಶವನ್ನು ಮ್ಯಾನೇಜ್‌ಮೆಂಟ್ ಟ್ರಸ್ಟ್ ಶಾಹಿ ಮಸೀದಿ ಈದ್ಗಾ ಸಮಿತಿಯು ಪ್ರಶ್ನಿಸಿದೆ.

ಶ್ರೀಕೃಷ್ಣ ಜನ್ಮಭೂಮಿ ಟ್ರಸ್ಟ್‌ನ 13.37 ಎಕರೆ ಜಾಗದಲ್ಲಿ ಶಾಹಿ ಮಸೀದಿ ಈದ್ಗಾವನ್ನು ನಿರ್ಮಿಸಲಾಗಿದೆ ಎಂದು ಹಿಂದೂ ಕಡೆಯವರು ಹೇಳಿಕೊಂಡಿದ್ದರು. ಈದ್ಗಾವನ್ನು ಸ್ಥಳಾಂತರಿಸುವಂತೆ ಕೋರ್ಟ್‌ಗೆ ಆಗ್ರಹಿಸಿದ್ದರು.

ಇದನ್ನು ಓದಿ: ಉತ್ತರಪ್ರದೇಶ: ಮುಸ್ಲಿಂ ಬಾಲಕನಿಗೆ ಕಪಾಳಮೋಕ್ಷ ಪ್ರಕರಣ; ಸರಕಾರಕ್ಕೆ ಸುಪ್ರೀಂಕೋರ್ಟ್ ತರಾಟೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...

ಇರಾಕ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ಅಮೆರಿಕದ ಪತ್ರಕರ್ತೆ ಬಿಡುಗಡೆ

ಇರಾಕಿನ ರಾಜಧಾನಿ ಬಾಗ್ದಾದ್‌ನಲ್ಲಿ ಒಂದು ವಾರದ ಹಿಂದೆ ಅಪಹರಿಸಲ್ಪಟ್ಟಿದ್ದ ಅಮೆರಿಕದ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ತಿಳಿಸಿದ್ದಾರೆ. ಮಾರ್ಚ್ 31ರಂದು ಶೆಲ್ಲಿ...

ಅಸ್ಸಾಂನ ನಾಗಾಂವ್‌ನಲ್ಲಿ ದರೋಡೆ ಶಂಕೆಯ ಮೇಲೆ ಗುಂಪು ದಾಳಿ: ಮೂವರು ಮುಸ್ಲಿಂ ಪುರುಷರು ಸಾವು

ದರೋಡೆಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಿ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ನಡೆದ ಗುಂಪು ದಾಳಿಯಲ್ಲಿ ಮೂವರು ಮುಸ್ಲಿಂ ಪುರುಷರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸೈಫುಲ್ಲಾ, ಅಜೀಬುರ್ ಅಲಿಯಾಸ್ ಖೈರುಲ್ ಮತ್ತು ಇನಾಮುಲ್...

ಏ.10ರಂದು ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್ ಶಾಂತಿ ಮಾತುಕತೆ : 10 ಷರತ್ತುಗಳನ್ನು ಮುಂದಿಟ್ಟ ಇರಾನ್

ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಇಸ್ಲಾಮಾಬಾದ್‌ನಲ್ಲಿ ಶಾಂತಿ ಮಾತುಕತೆ ಆಯೋಜಿಸಲಾಗಿದೆ. ಅಮೆರಿಕ ಮತ್ತು ಇರಾನ್ ನಿಯೋಗಗಳ ನಡುವಿನ ಈ ಮಹತ್ವದ ಮಾತುಕತೆಯು 2026ರ ಏಪ್ರಿಲ್ 10ರಂದು (ಶುಕ್ರವಾರ) ಇಸ್ಲಾಮಾಬಾದ್‌ನಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ...

ಕದನ ವಿರಾಮ | ಟ್ರಂಪ್ ನಿರ್ಧಾರಕ್ಕೆ ಇಸ್ರೇಲ್ ಬೆಂಬಲ; ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದ ನೆತನ್ಯಾಹು!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಎರಡು ವಾರಗಳ ಕದನ ವಿರಾಮಕ್ಕೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಬೆಂಬಲ ಸೂಚಿಸಿದ್ದಾರೆ. ಆದರೆ, ಈ ಕದನ ವಿರಾಮವು ಕೇವಲ ಇರಾನ್‌ಗೆ ಮಾತ್ರ ಸೀಮಿತವಾಗಿದ್ದು, ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇರಾನ್ ತಕ್ಷಣವೇ ಹಾರ್ಮುಝ್...

ಹಾರ್ಮುಝ್ ಜಲಸಂಧಿಯ ಮೂಲಕ ಎರಡು ವಾರಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ : ಇರಾನ್ ಭರವಸೆ

ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿರುವ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮದ ಹಿನ್ನೆಲೆ, ಹಾರ್ಮುಝ್ ಜಲಸಂಧಿ  ಮೂಲಕ ಹಡಗುಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ ನೀಡುವುದಾಗಿ ಇರಾನ್ ಭರವಸೆ ನೀಡಿದೆ. ವಿಶ್ವದ ಒಟ್ಟು ಪೆಟ್ರೋಲಿಯಂ ರಫ್ತಿನ...