Homeಮುಖಪುಟಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ವಿವಾದ: ಅಲಹಾಬಾದ್ ಹೈಕೋರ್ಟ್‌ ಆದೇಶಕ್ಕೆ ತಡೆಗೆ ಸುಪ್ರೀಂ ನಕಾರ

ಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ವಿವಾದ: ಅಲಹಾಬಾದ್ ಹೈಕೋರ್ಟ್‌ ಆದೇಶಕ್ಕೆ ತಡೆಗೆ ಸುಪ್ರೀಂ ನಕಾರ

- Advertisement -
- Advertisement -

ಮಥುರಾ ನ್ಯಾಯಾಲಯದಲ್ಲಿ ಬಾಕಿ ಇರುವ ಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ವಿವಾದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಎಲ್ಲಾ ವಿಷಯಗಳನ್ನು ತನಗೆ ವರ್ಗಾಯಿಸುವಂತೆ ಸೂಚಿಸಿದ ಅಲಹಾಬಾದ್ ಹೈಕೋರ್ಟ್‌ನ ಆದೇಶಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ ಶುಕ್ರವಾರ ನಿರಾಕರಿಸಿದೆ.

ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸುಧಾಂಶು ಧುಲಿಯಾ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರನ್ನೊಳಗೊಂಡ ಪೀಠ, ಎರಡೂ ಕಡೆಯ ವಾದವನ್ನು ಆಲಿಸದೆ ಹೈಕೋರ್ಟ್ ಈ ಆದೇಶದಲ್ಲಿ ಹಸ್ತಕ್ಷೇಪ ಮಾಡುವುದು ನ್ಯಾಯಸಮ್ಮತವಲ್ಲ ಎಂದು ಹೇಳಿದೆ. ಈ ವಿಷಯದಲ್ಲಿ ಹೈಕೋರ್ಟ್‌ನಲ್ಲಿ 18 ಅರ್ಜಿಗಳು ಬಾಕಿ ಉಳಿದಿವೆ ಎಂದು ಸುಪ್ರೀಂಕೋರ್ಟ್ ಗಮನಿಸಿದೆ.

ಮುಸ್ಲಿಂ ಪರ ವಕೀಲ ಫುಜೈಲ್ ಅಹ್ಮದ್ ಅಯೂಬ್ಬಿ, ಹಿರಿಯ ವಕೀಲ ಹುಝೆಫಾ ಅಹ್ಮದಿ ಅವರು ಪ್ರಕರಣದ ವರ್ಗಾವಣೆಗೆ ವಿರೋಧಿಸಿದ್ದಾರೆ. ವರ್ಗಾವಣೆಗೆ ಯಾವುದೇ ಕಾರಣವಿಲ್ಲ. 1968ರಲ್ಲಿ ರಾಜಿ ಮಾಡಿಕೊಂಡ 49 ವರ್ಷಗಳ ನಂತರ ಫಿರ್ಯಾದುದಾರರು ಮೊಕದ್ದಮೆಯನ್ನು ಸಲ್ಲಿಸಿದ್ದಾರೆ ಎಂದು ಹೇಳಿದ್ದರು.

ಮುಸ್ಲಿಂ ಪರ ಮತ್ತೊಬ್ಬ ವಕೀಲರು, ಹೈಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆಗೆ ತಡೆ ನೀಡುವಂತೆ ಪೀಠವನ್ನು ಕೋರಿದ್ದಾರೆ. ಎರಡೂ ಕಡೆಯ ವಾದವನ್ನು ಆಲಿಸದೆ ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂದು ಪೀಠ ಹೇಳಿದೆ.

ಶಾಹಿ ಮಸೀದಿ ಈದ್ಗಾ ಮ್ಯಾನೇಜ್‌ಮೆಂಟ್ ಟ್ರಸ್ಟ್ ಕಮಿಟಿಯನ್ನು ಪ್ರತಿನಿಧಿಸುವ ವಕೀಲರು, ಮಥುರಾದಿಂದ ಅಲಹಾಬಾದ್ ಹೈಕೋರ್ಟ್‌ 600 ಕಿಲೋಮೀಟರ್‌ಗಿಂತ ಹೆಚ್ಚು ದೂರವಿರುವುದರಿಂದ  ಮಥುರಾಗೆ ಪ್ರಯಾಣಿಸಲು ಕಕ್ಷಿದಾರರಿಗೆ ಆರ್ಥಿಕ ಸಂಪನ್ಮೂಲವಿಲ್ಲ ಮತ್ತು ದಾವೆಗಳನ್ನು ದೆಹಲಿಗೆ ವರ್ಗಾಯಿಸಲು ನ್ಯಾಯಾಲಯವನ್ನು ಕೋರಿದರು.

ದೆಹಲಿಯ ನ್ಯಾಯಾಲಯಕ್ಕೆ ಈಗಾಗಲೇ ಹೆಚ್ಚಿನ ಹೊರೆ ಇರುವುದರಿಂದ ಈ ವಾದವನ್ನು ಒಪ್ಪಿಕೊಳ್ಳುವುದು ತುಂಬಾ ಕಷ್ಟ ಎಂದು ಪೀಠವು ಉತ್ತರಿಸಿದೆ.

ನೀವು ದೆಹಲಿಗೆ ಬರಬಹುದು ಆದರೆ ಅಲಹಾಬಾದ್‌ಗೆ ಹೋಗಲಿಕ್ಕೆ ಆಗಲ್ಲ ಎಂಬುದು ನಮಗೆ ಸ್ವೀಕಾರಾರ್ಹವಲ್ಲ ಎಂದು ಪೀಠವು ಹೇಳಿತು. ಈ ವಿಷಯವನ್ನು ಆಲಿಸಬೇಕು ಮತ್ತು ಹೈಕೋರ್ಟ್ ನೀಡಿದ ಆದೇಶವನ್ನು ಪರೀಕ್ಷಿಸಬೇಕು ಎಂದು ಹೇಳಿದ ಪೀಠವು ಈ ಕುರಿತು ಸಂಕ್ಷಿಪ್ತ ಸಾರಾಂಶವನ್ನು ಸಲ್ಲಿಸಲು ಎರಡೂ ಕಡೆಯವರನ್ನು ಕೇಳಿದೆ ಮತ್ತು ಜ.9ರಂದು ವಿಚಾರಣೆಯನ್ನು ನಿಗದಿಪಡಿಸಿದೆ.

ಮಥುರಾ ನ್ಯಾಯಾಲಯದ ಮುಂದೆ ಬಾಕಿ ಇರುವ ಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ವಿವಾದಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳನ್ನು ವರ್ಗಾಯಿಸಿಕೊಂಡು ಆದೇಶಿಸಿದ ಅಲಹಬಾದ್‌ ಹೈಕೋರ್ಟ್‌ನ ಮೇ 26ರ ಆದೇಶವನ್ನು ಮ್ಯಾನೇಜ್‌ಮೆಂಟ್ ಟ್ರಸ್ಟ್ ಶಾಹಿ ಮಸೀದಿ ಈದ್ಗಾ ಸಮಿತಿಯು ಪ್ರಶ್ನಿಸಿದೆ.

ಶ್ರೀಕೃಷ್ಣ ಜನ್ಮಭೂಮಿ ಟ್ರಸ್ಟ್‌ನ 13.37 ಎಕರೆ ಜಾಗದಲ್ಲಿ ಶಾಹಿ ಮಸೀದಿ ಈದ್ಗಾವನ್ನು ನಿರ್ಮಿಸಲಾಗಿದೆ ಎಂದು ಹಿಂದೂ ಕಡೆಯವರು ಹೇಳಿಕೊಂಡಿದ್ದರು. ಈದ್ಗಾವನ್ನು ಸ್ಥಳಾಂತರಿಸುವಂತೆ ಕೋರ್ಟ್‌ಗೆ ಆಗ್ರಹಿಸಿದ್ದರು.

ಇದನ್ನು ಓದಿ: ಉತ್ತರಪ್ರದೇಶ: ಮುಸ್ಲಿಂ ಬಾಲಕನಿಗೆ ಕಪಾಳಮೋಕ್ಷ ಪ್ರಕರಣ; ಸರಕಾರಕ್ಕೆ ಸುಪ್ರೀಂಕೋರ್ಟ್ ತರಾಟೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...