Homeಮುಖಪುಟಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ವಿವಾದ: ಅಲಹಾಬಾದ್ ಹೈಕೋರ್ಟ್‌ ಆದೇಶಕ್ಕೆ ತಡೆಗೆ ಸುಪ್ರೀಂ ನಕಾರ

ಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ವಿವಾದ: ಅಲಹಾಬಾದ್ ಹೈಕೋರ್ಟ್‌ ಆದೇಶಕ್ಕೆ ತಡೆಗೆ ಸುಪ್ರೀಂ ನಕಾರ

- Advertisement -
- Advertisement -

ಮಥುರಾ ನ್ಯಾಯಾಲಯದಲ್ಲಿ ಬಾಕಿ ಇರುವ ಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ವಿವಾದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಎಲ್ಲಾ ವಿಷಯಗಳನ್ನು ತನಗೆ ವರ್ಗಾಯಿಸುವಂತೆ ಸೂಚಿಸಿದ ಅಲಹಾಬಾದ್ ಹೈಕೋರ್ಟ್‌ನ ಆದೇಶಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ ಶುಕ್ರವಾರ ನಿರಾಕರಿಸಿದೆ.

ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸುಧಾಂಶು ಧುಲಿಯಾ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರನ್ನೊಳಗೊಂಡ ಪೀಠ, ಎರಡೂ ಕಡೆಯ ವಾದವನ್ನು ಆಲಿಸದೆ ಹೈಕೋರ್ಟ್ ಈ ಆದೇಶದಲ್ಲಿ ಹಸ್ತಕ್ಷೇಪ ಮಾಡುವುದು ನ್ಯಾಯಸಮ್ಮತವಲ್ಲ ಎಂದು ಹೇಳಿದೆ. ಈ ವಿಷಯದಲ್ಲಿ ಹೈಕೋರ್ಟ್‌ನಲ್ಲಿ 18 ಅರ್ಜಿಗಳು ಬಾಕಿ ಉಳಿದಿವೆ ಎಂದು ಸುಪ್ರೀಂಕೋರ್ಟ್ ಗಮನಿಸಿದೆ.

ಮುಸ್ಲಿಂ ಪರ ವಕೀಲ ಫುಜೈಲ್ ಅಹ್ಮದ್ ಅಯೂಬ್ಬಿ, ಹಿರಿಯ ವಕೀಲ ಹುಝೆಫಾ ಅಹ್ಮದಿ ಅವರು ಪ್ರಕರಣದ ವರ್ಗಾವಣೆಗೆ ವಿರೋಧಿಸಿದ್ದಾರೆ. ವರ್ಗಾವಣೆಗೆ ಯಾವುದೇ ಕಾರಣವಿಲ್ಲ. 1968ರಲ್ಲಿ ರಾಜಿ ಮಾಡಿಕೊಂಡ 49 ವರ್ಷಗಳ ನಂತರ ಫಿರ್ಯಾದುದಾರರು ಮೊಕದ್ದಮೆಯನ್ನು ಸಲ್ಲಿಸಿದ್ದಾರೆ ಎಂದು ಹೇಳಿದ್ದರು.

ಮುಸ್ಲಿಂ ಪರ ಮತ್ತೊಬ್ಬ ವಕೀಲರು, ಹೈಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆಗೆ ತಡೆ ನೀಡುವಂತೆ ಪೀಠವನ್ನು ಕೋರಿದ್ದಾರೆ. ಎರಡೂ ಕಡೆಯ ವಾದವನ್ನು ಆಲಿಸದೆ ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂದು ಪೀಠ ಹೇಳಿದೆ.

ಶಾಹಿ ಮಸೀದಿ ಈದ್ಗಾ ಮ್ಯಾನೇಜ್‌ಮೆಂಟ್ ಟ್ರಸ್ಟ್ ಕಮಿಟಿಯನ್ನು ಪ್ರತಿನಿಧಿಸುವ ವಕೀಲರು, ಮಥುರಾದಿಂದ ಅಲಹಾಬಾದ್ ಹೈಕೋರ್ಟ್‌ 600 ಕಿಲೋಮೀಟರ್‌ಗಿಂತ ಹೆಚ್ಚು ದೂರವಿರುವುದರಿಂದ  ಮಥುರಾಗೆ ಪ್ರಯಾಣಿಸಲು ಕಕ್ಷಿದಾರರಿಗೆ ಆರ್ಥಿಕ ಸಂಪನ್ಮೂಲವಿಲ್ಲ ಮತ್ತು ದಾವೆಗಳನ್ನು ದೆಹಲಿಗೆ ವರ್ಗಾಯಿಸಲು ನ್ಯಾಯಾಲಯವನ್ನು ಕೋರಿದರು.

ದೆಹಲಿಯ ನ್ಯಾಯಾಲಯಕ್ಕೆ ಈಗಾಗಲೇ ಹೆಚ್ಚಿನ ಹೊರೆ ಇರುವುದರಿಂದ ಈ ವಾದವನ್ನು ಒಪ್ಪಿಕೊಳ್ಳುವುದು ತುಂಬಾ ಕಷ್ಟ ಎಂದು ಪೀಠವು ಉತ್ತರಿಸಿದೆ.

ನೀವು ದೆಹಲಿಗೆ ಬರಬಹುದು ಆದರೆ ಅಲಹಾಬಾದ್‌ಗೆ ಹೋಗಲಿಕ್ಕೆ ಆಗಲ್ಲ ಎಂಬುದು ನಮಗೆ ಸ್ವೀಕಾರಾರ್ಹವಲ್ಲ ಎಂದು ಪೀಠವು ಹೇಳಿತು. ಈ ವಿಷಯವನ್ನು ಆಲಿಸಬೇಕು ಮತ್ತು ಹೈಕೋರ್ಟ್ ನೀಡಿದ ಆದೇಶವನ್ನು ಪರೀಕ್ಷಿಸಬೇಕು ಎಂದು ಹೇಳಿದ ಪೀಠವು ಈ ಕುರಿತು ಸಂಕ್ಷಿಪ್ತ ಸಾರಾಂಶವನ್ನು ಸಲ್ಲಿಸಲು ಎರಡೂ ಕಡೆಯವರನ್ನು ಕೇಳಿದೆ ಮತ್ತು ಜ.9ರಂದು ವಿಚಾರಣೆಯನ್ನು ನಿಗದಿಪಡಿಸಿದೆ.

ಮಥುರಾ ನ್ಯಾಯಾಲಯದ ಮುಂದೆ ಬಾಕಿ ಇರುವ ಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ವಿವಾದಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳನ್ನು ವರ್ಗಾಯಿಸಿಕೊಂಡು ಆದೇಶಿಸಿದ ಅಲಹಬಾದ್‌ ಹೈಕೋರ್ಟ್‌ನ ಮೇ 26ರ ಆದೇಶವನ್ನು ಮ್ಯಾನೇಜ್‌ಮೆಂಟ್ ಟ್ರಸ್ಟ್ ಶಾಹಿ ಮಸೀದಿ ಈದ್ಗಾ ಸಮಿತಿಯು ಪ್ರಶ್ನಿಸಿದೆ.

ಶ್ರೀಕೃಷ್ಣ ಜನ್ಮಭೂಮಿ ಟ್ರಸ್ಟ್‌ನ 13.37 ಎಕರೆ ಜಾಗದಲ್ಲಿ ಶಾಹಿ ಮಸೀದಿ ಈದ್ಗಾವನ್ನು ನಿರ್ಮಿಸಲಾಗಿದೆ ಎಂದು ಹಿಂದೂ ಕಡೆಯವರು ಹೇಳಿಕೊಂಡಿದ್ದರು. ಈದ್ಗಾವನ್ನು ಸ್ಥಳಾಂತರಿಸುವಂತೆ ಕೋರ್ಟ್‌ಗೆ ಆಗ್ರಹಿಸಿದ್ದರು.

ಇದನ್ನು ಓದಿ: ಉತ್ತರಪ್ರದೇಶ: ಮುಸ್ಲಿಂ ಬಾಲಕನಿಗೆ ಕಪಾಳಮೋಕ್ಷ ಪ್ರಕರಣ; ಸರಕಾರಕ್ಕೆ ಸುಪ್ರೀಂಕೋರ್ಟ್ ತರಾಟೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...